Advertisement
ಪ್ರಮುಖ

#CauveryWater | ಕಾವೇರಿ ನೀರು ಬಿಡುಗಡೆ ವಿವಾದ | ಪಟ್ಟು ಬಿಡದ ತಮಿಳುನಾಡು | ಕಾವೇರಿ ಸಭೆಯಲ್ಲಿ ಕರ್ನಾಟಕದ ಪ್ರತಿ ಬಾಣ |

Share

ಇನ್ನೊಬ್ಬರು ಹಾಳಾದರೂ ತೊಂದರೆ ಇಲ್ಲ.. ನಾವು ಚೆನ್ನಾಗಿರಬೇಕು ಅನ್ನುವ ಜಾಯಮಾನ, ತಮಿಳುನಾಡು  ಸರ್ಕಾರದ್ದುt. ನಮ್ಮ ರಾಜ್ಯದ ರೈತರೇ ನೀರಿಲ್ಲದೆ ಪರಿತಪಿಸುವಂತಾಗಿದೆ. ಅಂತದ್ದರಲ್ಲಿ ತಮಿಳುನಾಡು ಸರ್ಕಾರ ಕಾವೇರಿ ನೀರು ಬಿಟ್ಟೇ ತೀರಬೇಕು ಎಂದು ಒತ್ತಾಯಿಸುತ್ತಲೇ ಇದೆ. ತಮಿಳುನಾಡಿಗೆ ಕಾವೇರಿ ನೀರು ಬಿಡುಗಡೆ ಮಾಡುವ ವಿಚಾರಕ್ಕೆ ಸಂಬಂಧಿಸಿದಂತೆ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದಲ್ಲಿ ಸಭೆ ನಡೆಯುತ್ತಿದ್ದು, ತಮಿಳುನಾಡು ಪ್ರತಿನಿಧಿಗಳು ನೀರನ್ನು ಬಿಡುಗಡೆ ಮಾಡಲೇಬೇಕೆಂದು ಪಟ್ಟು ಹಿಡಿದಿದ್ದಾರೆ. ಇತ್ತ ಕರ್ನಾಟಕದ ಸರ್ಕಾರ ವಾಸ್ತವ ಪರಿಸ್ಥಿತಿಯನ್ನುತಿಳಿಸಿದ್ದು, ಪ್ರತಿದಿನ 5 ಸಾವಿರ ಕ್ಯೂಸೆಕ್ ನೀರನ್ನು ಬಿಡಲು ಸಾಧ್ಯವಿಲ್ಲ ಎಂದು ತಿಳಿಸಿದೆ ಎನ್ನಲಾಗಿದೆ.

50 ಟಿಎಂಸಿ ನೀರಿಗೆ ಪಟ್ಟು: ದೆಹಲಿಯಲ್ಲಿ ಕಾವೇರಿ ನೀರು ನಿರ್ವಹಣಾ ಅಧಿಕಾರ ಸಭೆಯಲ್ಲಿ, ತಮಿಳುನಾಡು, ಕರ್ನಾಟಕ, ಕೇರಳ, ಪುದುಚೇರಿ ರಾಜ್ಯಗಳ ಪ್ರತಿನಿಧಿಗಳು ಭಾಗವಹಿಸಿದ್ದಾರೆ. ಈ ಸಭೆಯಲ್ಲಿ ತಮಿಳುನಾಡು ಪ್ರತಿನಿಧಿಗಳು, ಜೂನ್​ 1ರಿಂದ ಜೂನ್​ 1ರಿಂದ ಆಗಸ್ಟ್​ 27ರವರೆಗೆ 80.17 ಟಿಎಂಸಿ ನೀರನ್ನು ಬಿಡುಗಡೆ ಮಾಡಬೇಕಿತ್ತು. ಆದರೆ ಇದುವರೆಗೆ 30.17 ಟಿಎಂಸಿ ನೀರನ್ನು ಮಾತ್ರ ಬಿಡುಗಡೆ ಮಾಡಿದೆ. ಮುಂದಿನ 10 ದಿನಗಳಲ್ಲಿ ಬಾಕಿ ಉಳಿಸಿಕೊಂಡಿರುವ 50.10 ಟಿಎಂಸಿ ನೀರನ್ನು ಬಿಡುಗಡೆ ಮಾಡಬೇಕೆಂದು ಸಭೆಯಲ್ಲಿ ಒತ್ತಾಯಿಸಿದ್ದಾರೆ.

5000 ನೀರು ಹರಿಸಲು ಕಾವೇರಿ ನೀರು ನಿಯಂತ್ರಣ ಸಮಿತಿ ಸೂಚನೆ: ತಮಿಳುನಾಡು ಸರ್ಕಾರದ ಪರವಾಗಿ ಜಲಸಂಪನ್ಮೂಲ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಸಂದೀಪ್ ಸಕ್ಸೇನಾ ಹಾಗೂ ಇತರೆ ಅಧಿಕಾರಿಗಳು ಭಾಗವಹಿಸಿದ್ದಾರೆ. ಸೋಮವಾರ ನಡೆಸಿದ ಸಭೆಯಲ್ಲಿ ಕಾವೇರಿ ನೀರು ನಿಯಂತ್ರಣ ಸಮಿತಿ ಮುಂದಿನ 15 ದಿನಗಳ ಕಾಲ 5 ಸಾವಿರ ಕ್ಯೂಸೆಕ್ ನೀರನ್ನು ತಮಿಳುನಾಡಿಗೆ ಬಿಡುಗಡೆ ಮಾಡಬೇಕೆಂದು ತಿಳಿಸಿತ್ತು. ಆದರೆ ಕರ್ನಾಟಕ ಸರ್ಕಾರದ ಪ್ರತಿನಿಧಿಗಳು CWRC ಸೂಚನೆಯ ವಿರುದ್ಧವಾಗಿ ಇಂದು ಕಾವೇರಿ ನೀರು ನಿಯಂತ್ರಣ ಪ್ರಾಧಿಕಾರದಲ್ಲಿ ಪ್ರಶ್ನಿಸಿತ್ತು. ಪ್ರತಿದಿನ 5 ಸಾವಿರ ಕ್ಯೂಸೆಕ್ ನೀರಿನ ಬದಲು 3000 ಕ್ಯೂಸೆಕ್ ಬಿಡುತ್ತೇವೆ ಎಂದು ತಿಳಿಸಿತ್ತು ಎನ್ನಲಾಗಿದೆ.

ರಾಜ್ಯದಲ್ಲಿ ಮುಂಗಾರು ಮಳೆ ಶೇ. 47ರಷ್ಟು ಕೊರೆತೆಯಾಗಿದೆ. ಜಲಾಶಯಗಳು ಬರ್ತಿಯಾಗಿಲ್ಲ. ಒಂದು ವೇಳೆ ನೀರು ಬಿಟ್ಟರೆ ಬೆಂಗಳೂರು ಸೇರಿ ಕರ್ನಾಟಕದ ಹಲವು ಭಾಗಗಳಿಗೆ ಕುಡಿಯುವ ನೀರು ಕೊರತೆಯಾಗಲಿದೆ ಎಂದು ಕರ್ನಾಟಕ ಸಭೆಯಲ್ಲಿ ತಿಳಿಸಿದೆ. ತಮಿಳುನಾಡಿಗೆ ಹದಿನೈದು ದಿನಗಳ ಕಾಲ 5 ಸಾವಿರ ಘನ ಅಡಿ ನೀರು ಹರಿಸಲು ಕಾವೇರಿ ನಿರ್ವಹಣಾ ಪ್ರಾಧಿಕಾರ ಆದೇಶಿಸಿರುವ ಬಗ್ಗೆ ಮಾತನಾಡಿದ ಎಎನ್‌ಐ ಸುದ್ದಿಸಂಸ್ಥೆಯೊಂದಿಗೆ ಮಾತನಾಡಿದ ಎಂಬಿ ಪಾಟೀಲ್, ನಮ್ಮಲ್ಲಿ ನೀರಿಲ್ಲ, ಕಾವೇರಿ ನಿರ್ವಹಣಾ ಪ್ರಾಧಿಕಾರದ ಆದೇಶವನ್ನು ಜಾರಿಗೊಳಿಸುವುದು ಕಷ್ಟ, ಅಲ್ಲದೆ ಕುಡಿಯುವ ನೀರಿನ ಸಮಸ್ಯೆ ಉಂಟಾಗುತ್ತದೆ ಎಂದು ತಿಳಿಸಿದ್ದಾರೆ. ಒಂದು ವೇಳೆ ಬಿಡಲೇ ಬೇಕೆಂದು ಸೂಚಿಸಿದರೆ ಕಾನೂನು ಮೊರೆ ಹೋಗುತ್ತೇವೆ ಎಂದು ತಿಳಿಸಿದ್ದಾರೆ.

Source: Digital Media 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹವಾಮಾನ ವರದಿ | 20.09.2026 |ಕರ್ನಾಟಕದಲ್ಲಿ ಸೆ.25ರವರೆಗೆ ಮಳೆಯ ಲಕ್ಷಣ: ಬಂಗಾಳಕೊಲ್ಲಿಯಲ್ಲಿ ಚಂಡಮಾರುತದ ಸಾಧ್ಯತೆ

ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮುಂದಿನ ಕೆಲವು ದಿನಗಳ ಕಾಲ ಉ ತ್ತಮ ಮಳೆಯ…

9 hours ago

ಕರ್ನಾಟಕದಲ್ಲಿ ಮತ್ತೆ ಮಳೆ ಅಬ್ಬರ: ಸೆ.22ರಿಂದ ಇನ್ನಷ್ಟು ಚುರುಕು, 7 ದಿನಗಳ ಎಚ್ಚರಿಕೆ

ಕರ್ನಾಟಕದಲ್ಲಿ ಮಳೆಯ ಚಟುವಟಿಕೆ ಮತ್ತೆ ಹೆಚ್ಚಾಗುವ ಸೂಚನೆ ದೊರೆತಿದ್ದು, ಮುಂದಿನ ಏಳು ದಿನಗಳ…

14 hours ago

ತೆಂಗಿನಕಾಯಿ ರಫ್ತಿನಲ್ಲಿ ಭಾರತ ಶೇ.62ರಷ್ಟು ಏರಿಕೆ

ಭಾರತದ ತೆಂಗಿನಕಾಯಿ ರಫ್ತು ಮೌಲ್ಯ ಒಂದೇ ವರ್ಷದಲ್ಲಿ ಶೇ.62ರಷ್ಟು ಏರಿಕೆಯಾಗಿ ₹7,038 ಕೋಟಿಗೆ…

2 days ago

ಸಮುದ್ರ ಮಾರ್ಗದಲ್ಲಿ ಅಡಿಕೆ ಸಾಗಾಟ : ಒಡಿಶಾದ ಬಾಲಸೋರ್‌ನಲ್ಲಿ ₹2 ಕೋಟಿಗೂ ಅಧಿಕ ಅಡಿಕೆ ವಶ- ಅಡಿಕೆ ಜಾಲದ ಹಿಂದೆ ಬಿದ್ದಿರುವ ಪೊಲೀಸರು

ಒಡಿಶಾದ ಬಾಲಸೋರ್‌ನಲ್ಲಿ ಸಮುದ್ರ ಮಾರ್ಗದ ಮೂಲಕ ಅಡಿಕೆ ಸಾಗಾಟದ ಹಲವು ಪ್ರಕರಣಗಳು ಪತ್ತೆಯಾಗಿದ್ದು,…

2 days ago

ಹವಾಮಾನ ವರದಿ | 19-09-2026 | ಸೆ.22 ರಿಂದ ಮಳೆ ಹೆಚ್ಚಳದ ಸೂಚನೆ – ಬಂಗಾಳಕೊಲ್ಲಿಯ ವಾಯುಭಾರ ಕುಸಿತದ ಪರಿಣಾಮ

ಕರ್ನಾಟಕದ ಹಲವು ಭಾಗಗಳಲ್ಲಿ ಮಳೆ ಮುಂದುವರಿಯುವ ಸೂಚನೆ ಇದ್ದು, ಸೆ.22ರಿಂದ ಕರಾವಳಿ–ಮಲೆನಾಡಿನಲ್ಲಿ ಮಳೆ…

2 days ago

ಗೋಮಯದಿಂದ ಗಣೇಶನ ಮೂರ್ತಿ – ದೇಶದಾದ್ಯಂತ ಸಾವಿರಾರು ಪರಿಸರ ಸ್ನೇಹಿ ಗಣೇಶ ಮೂರ್ತಿಗಳ ವಿತರಣೆ

ತಂದೆಯ ನೆನಪಿಗಾಗಿ ಇಂದೋರ್‌ನ ವ್ಯಕ್ತಿಯೊಬ್ಬರು ಗೋಮಯದಿಂದ ಪರಿಸರ ಸ್ನೇಹಿ ಗಣೇಶ ಮೂರ್ತಿಗಳನ್ನು ತಯಾರಿಸಿ…

2 days ago