Advertisement
ಪ್ರಮುಖ

#CauveryWater | ಕಾವೇರಿ ನೀರು ಬಿಡುಗಡೆ ವಿವಾದ | ಪಟ್ಟು ಬಿಡದ ತಮಿಳುನಾಡು | ಕಾವೇರಿ ಸಭೆಯಲ್ಲಿ ಕರ್ನಾಟಕದ ಪ್ರತಿ ಬಾಣ |

Share

ಇನ್ನೊಬ್ಬರು ಹಾಳಾದರೂ ತೊಂದರೆ ಇಲ್ಲ.. ನಾವು ಚೆನ್ನಾಗಿರಬೇಕು ಅನ್ನುವ ಜಾಯಮಾನ, ತಮಿಳುನಾಡು  ಸರ್ಕಾರದ್ದುt. ನಮ್ಮ ರಾಜ್ಯದ ರೈತರೇ ನೀರಿಲ್ಲದೆ ಪರಿತಪಿಸುವಂತಾಗಿದೆ. ಅಂತದ್ದರಲ್ಲಿ ತಮಿಳುನಾಡು ಸರ್ಕಾರ ಕಾವೇರಿ ನೀರು ಬಿಟ್ಟೇ ತೀರಬೇಕು ಎಂದು ಒತ್ತಾಯಿಸುತ್ತಲೇ ಇದೆ. ತಮಿಳುನಾಡಿಗೆ ಕಾವೇರಿ ನೀರು ಬಿಡುಗಡೆ ಮಾಡುವ ವಿಚಾರಕ್ಕೆ ಸಂಬಂಧಿಸಿದಂತೆ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದಲ್ಲಿ ಸಭೆ ನಡೆಯುತ್ತಿದ್ದು, ತಮಿಳುನಾಡು ಪ್ರತಿನಿಧಿಗಳು ನೀರನ್ನು ಬಿಡುಗಡೆ ಮಾಡಲೇಬೇಕೆಂದು ಪಟ್ಟು ಹಿಡಿದಿದ್ದಾರೆ. ಇತ್ತ ಕರ್ನಾಟಕದ ಸರ್ಕಾರ ವಾಸ್ತವ ಪರಿಸ್ಥಿತಿಯನ್ನುತಿಳಿಸಿದ್ದು, ಪ್ರತಿದಿನ 5 ಸಾವಿರ ಕ್ಯೂಸೆಕ್ ನೀರನ್ನು ಬಿಡಲು ಸಾಧ್ಯವಿಲ್ಲ ಎಂದು ತಿಳಿಸಿದೆ ಎನ್ನಲಾಗಿದೆ.

50 ಟಿಎಂಸಿ ನೀರಿಗೆ ಪಟ್ಟು: ದೆಹಲಿಯಲ್ಲಿ ಕಾವೇರಿ ನೀರು ನಿರ್ವಹಣಾ ಅಧಿಕಾರ ಸಭೆಯಲ್ಲಿ, ತಮಿಳುನಾಡು, ಕರ್ನಾಟಕ, ಕೇರಳ, ಪುದುಚೇರಿ ರಾಜ್ಯಗಳ ಪ್ರತಿನಿಧಿಗಳು ಭಾಗವಹಿಸಿದ್ದಾರೆ. ಈ ಸಭೆಯಲ್ಲಿ ತಮಿಳುನಾಡು ಪ್ರತಿನಿಧಿಗಳು, ಜೂನ್​ 1ರಿಂದ ಜೂನ್​ 1ರಿಂದ ಆಗಸ್ಟ್​ 27ರವರೆಗೆ 80.17 ಟಿಎಂಸಿ ನೀರನ್ನು ಬಿಡುಗಡೆ ಮಾಡಬೇಕಿತ್ತು. ಆದರೆ ಇದುವರೆಗೆ 30.17 ಟಿಎಂಸಿ ನೀರನ್ನು ಮಾತ್ರ ಬಿಡುಗಡೆ ಮಾಡಿದೆ. ಮುಂದಿನ 10 ದಿನಗಳಲ್ಲಿ ಬಾಕಿ ಉಳಿಸಿಕೊಂಡಿರುವ 50.10 ಟಿಎಂಸಿ ನೀರನ್ನು ಬಿಡುಗಡೆ ಮಾಡಬೇಕೆಂದು ಸಭೆಯಲ್ಲಿ ಒತ್ತಾಯಿಸಿದ್ದಾರೆ.

5000 ನೀರು ಹರಿಸಲು ಕಾವೇರಿ ನೀರು ನಿಯಂತ್ರಣ ಸಮಿತಿ ಸೂಚನೆ: ತಮಿಳುನಾಡು ಸರ್ಕಾರದ ಪರವಾಗಿ ಜಲಸಂಪನ್ಮೂಲ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಸಂದೀಪ್ ಸಕ್ಸೇನಾ ಹಾಗೂ ಇತರೆ ಅಧಿಕಾರಿಗಳು ಭಾಗವಹಿಸಿದ್ದಾರೆ. ಸೋಮವಾರ ನಡೆಸಿದ ಸಭೆಯಲ್ಲಿ ಕಾವೇರಿ ನೀರು ನಿಯಂತ್ರಣ ಸಮಿತಿ ಮುಂದಿನ 15 ದಿನಗಳ ಕಾಲ 5 ಸಾವಿರ ಕ್ಯೂಸೆಕ್ ನೀರನ್ನು ತಮಿಳುನಾಡಿಗೆ ಬಿಡುಗಡೆ ಮಾಡಬೇಕೆಂದು ತಿಳಿಸಿತ್ತು. ಆದರೆ ಕರ್ನಾಟಕ ಸರ್ಕಾರದ ಪ್ರತಿನಿಧಿಗಳು CWRC ಸೂಚನೆಯ ವಿರುದ್ಧವಾಗಿ ಇಂದು ಕಾವೇರಿ ನೀರು ನಿಯಂತ್ರಣ ಪ್ರಾಧಿಕಾರದಲ್ಲಿ ಪ್ರಶ್ನಿಸಿತ್ತು. ಪ್ರತಿದಿನ 5 ಸಾವಿರ ಕ್ಯೂಸೆಕ್ ನೀರಿನ ಬದಲು 3000 ಕ್ಯೂಸೆಕ್ ಬಿಡುತ್ತೇವೆ ಎಂದು ತಿಳಿಸಿತ್ತು ಎನ್ನಲಾಗಿದೆ.

ರಾಜ್ಯದಲ್ಲಿ ಮುಂಗಾರು ಮಳೆ ಶೇ. 47ರಷ್ಟು ಕೊರೆತೆಯಾಗಿದೆ. ಜಲಾಶಯಗಳು ಬರ್ತಿಯಾಗಿಲ್ಲ. ಒಂದು ವೇಳೆ ನೀರು ಬಿಟ್ಟರೆ ಬೆಂಗಳೂರು ಸೇರಿ ಕರ್ನಾಟಕದ ಹಲವು ಭಾಗಗಳಿಗೆ ಕುಡಿಯುವ ನೀರು ಕೊರತೆಯಾಗಲಿದೆ ಎಂದು ಕರ್ನಾಟಕ ಸಭೆಯಲ್ಲಿ ತಿಳಿಸಿದೆ. ತಮಿಳುನಾಡಿಗೆ ಹದಿನೈದು ದಿನಗಳ ಕಾಲ 5 ಸಾವಿರ ಘನ ಅಡಿ ನೀರು ಹರಿಸಲು ಕಾವೇರಿ ನಿರ್ವಹಣಾ ಪ್ರಾಧಿಕಾರ ಆದೇಶಿಸಿರುವ ಬಗ್ಗೆ ಮಾತನಾಡಿದ ಎಎನ್‌ಐ ಸುದ್ದಿಸಂಸ್ಥೆಯೊಂದಿಗೆ ಮಾತನಾಡಿದ ಎಂಬಿ ಪಾಟೀಲ್, ನಮ್ಮಲ್ಲಿ ನೀರಿಲ್ಲ, ಕಾವೇರಿ ನಿರ್ವಹಣಾ ಪ್ರಾಧಿಕಾರದ ಆದೇಶವನ್ನು ಜಾರಿಗೊಳಿಸುವುದು ಕಷ್ಟ, ಅಲ್ಲದೆ ಕುಡಿಯುವ ನೀರಿನ ಸಮಸ್ಯೆ ಉಂಟಾಗುತ್ತದೆ ಎಂದು ತಿಳಿಸಿದ್ದಾರೆ. ಒಂದು ವೇಳೆ ಬಿಡಲೇ ಬೇಕೆಂದು ಸೂಚಿಸಿದರೆ ಕಾನೂನು ಮೊರೆ ಹೋಗುತ್ತೇವೆ ಎಂದು ತಿಳಿಸಿದ್ದಾರೆ.

Source: Digital Media 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

“ಜಾಕ್‌ಫ್ರೂಟ್‌ ಹಬ್ಬ”ಕ್ಕೆ ಜನಸಾಗರ – 50 ಕ್ಕೂ ಹೆಚ್ಚು ಹಲಸಿನ ಮೌಲ್ಯವರ್ಧಿತ ಉತ್ಪನ್ನಗಳ ಪ್ರದರ್ಶನ

ಜೋಯಿಡಾದಲ್ಲಿ ನಡೆದ ಹಲಸು ಉತ್ಸವದಲ್ಲಿ 50ಕ್ಕೂ ಹೆಚ್ಚು ಮೌಲ್ಯವರ್ಧಿತ ಹಲಸಿನ ಉತ್ಪನ್ನಗಳು ಪ್ರದರ್ಶನಗೊಂಡು…

13 hours ago

ಕ್ಯಾಂಪ್ಕೋ ಬ್ರಹ್ಮ ವಾರಣಾಶಿ ಸುಬ್ರಾಯ ಭಟ್‌ ಜನ್ಮಶತಮಾನೋತ್ಸವ ವರ್ಷ – ಅಡಿಕೆ ಬೆಳೆಗಾರರ ಬದುಕು ಬದಲಿಸಿದ ಮಹಾನ್ ದಾರ್ಶನಿಕ

ಕ್ಯಾಂಪ್ಕೋ ಸಂಸ್ಥಾಪಕ ವಾರಣಾಶಿ ಸುಬ್ರಾಯ ಭಟ್‌ ಅವರ ಜನ್ಮಕ್ಕೆ 99 ವರ್ಷಗಳು ಪೂರ್ಣಗೊಂಡಿದ್ದು,…

14 hours ago

ಹವಾಮಾನ ವರದಿ | 06-06-2026 | ಮುಂಗಾರು ಬಂದರೂ ಮಳೆ ಇಲ್ಲ! – ಕರ್ನಾಟಕದಲ್ಲಿ ಮುಂದಿನ ವಾರದ ಹವಾಮಾನ ಹೇಗಿರಲಿದೆ?

ರಾಜ್ಯಕ್ಕೆ ಮುಂಗಾರು ಪ್ರವೇಶಿಸಿದರೂ ಅದರ ಬಲ ಇನ್ನೂ ದುರ್ಬಲವಾಗಿದೆ. ಕರಾವಳಿಯಲ್ಲಿ ಜೂನ್ 8ರಿಂದ…

22 hours ago

ಭಾರತದ ಚೆಸ್ ಇತಿಹಾಸದಲ್ಲಿ ಹೊಸ ಅಧ್ಯಾಯ – ನಾರ್ವೆ ಚೆಸ್ ಕಿರೀಟ ಗೆದ್ದ ಮೊದಲ ಭಾರತೀಯ ಪ್ರಜ್ಞಾನಂದ

ನಾರ್ವೆ ಚೆಸ್ 2026 ಟೂರ್ನಿಯನ್ನು ಗೆದ್ದ ಮೊದಲ ಭಾರತೀಯ ಆಟಗಾರ ಎಂಬ ಇತಿಹಾಸವನ್ನು…

1 day ago

ಜೇನುಗೂಡುಗಳ ಕೊರತೆಯಿಂದ ಪರಾಗಸ್ಪರ್ಶ ವ್ಯವಸ್ಥೆ ಮೇಲೆ ಪರಿಣಾಮ ; ಕೃಷಿ ಕ್ಷೇತ್ರದಲ್ಲಿ ಆತಂಕ – ಆಹಾರ ಬೆಳೆ ಉತ್ಪಾದನೆಗೆ ಸಂಕಷ್ಟದ ಎಚ್ಚರಿಕೆ

ಆಸ್ಟ್ರೇಲಿಯಾದಲ್ಲಿ ವರೋವಾ ಮೈಟ್ ಹಾವಳಿಯಿಂದ ಜೇನುನೊಣಗಳ ಸಂಖ್ಯೆ ತೀವ್ರವಾಗಿ ಕುಸಿಯುತ್ತಿದ್ದು, ಆಹಾರ ಬೆಳೆಗಳ…

2 days ago

ಕಾಸರಗೋಡು ಜಿಲ್ಲೆಯಲ್ಲಿ ನಾಳೆ ಶಾಲಾ-ಕಾಲೇಜುಗಳಿಗೆ ರಜೆ – ರೆಡ್ ಅಲರ್ಟ್ ಹಿನ್ನೆಲೆ ಮುನ್ನೆಚ್ಚರಿಕಾ ಕ್ರಮ

ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆಯಲ್ಲಿ ಜೂನ್ 6ರಂದು ಕಾಸರಗೋಡು ಜಿಲ್ಲೆಯ ಎಲ್ಲಾ ಶಿಕ್ಷಣ…

2 days ago