#Cuavery | ಮುಂದುವರೆದ ತಮಿಳುನಾಡು ಕಾವೇರಿ ನೀರು ಬಿಡುಗಡೆ ಸಂಘರ್ಷ | ಸುಪ್ರೀಂಕೋರ್ಟ್ ಮೆಟ್ಟಿಲೇರಿದ ರೈತ ಸಂಘ

September 5, 2023
1:11 PM
ಜಲಾಶಯದ ನೀರಿನ ಮಟ್ಟ, ರೈತರ ಬೆಳೆಗೆ ನೀರಿಲ್ಲದಿರುವ ವಸ್ತುಸ್ಥಿತಿ ಹಾಗೂ ಕುಡಿಯಲು ಅಗತ್ಯ ಇರುವ ನೀರಿನ ಬಗ್ಗೆ ಅಂಕಿ ಅಂಶಗಳನ್ನು ಅರ್ಜಿಯಲ್ಲಿ ಉಲ್ಲೇಖ ಮಾಡಲಾಗಿದೆ. ಈ ಬಗ್ಗೆ ಕೋರ್ಟ್‍ನಲ್ಲಿ ವಾದ ಮಂಡನೆಗೆ ಎಲ್ಲಾ ರೀತಿಯ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ.

ತಮಿಳುನಾಡು #TamilNadu, ಕರ್ನಾಟಕ #Karnataka ಕಾವೇರಿ ನೀರು ಸಂಘರ್ಷದ ಮುಂದುವರೆದ ಭಾಗವಾಗಿ ರೈತರೇ ಸುಪ್ರೀಂ ಕೋರ್ಟ್‌ ಮೆಟ್ಟಿಲೇರಲು ನಿರ್ಧರಿಸಿದ್ದಾರೆ. ರೈತರ ಸಂಕಷ್ಟದ ನಡುವೆಯೂ ತಮಿಳುನಾಡಿಗೆ ನೀರು ಬಿಡುಗಡೆ ಮಾಡಿರುವ ಹಿನ್ನೆಲೆ ಕೆಆರ್‌ಎಸ್‌ನಲ್ಲಿ ಅಹೋರಾತ್ರಿ ಧರಣಿ ನಡೆಸುತ್ತಿದ್ದ ರೈತ ಸಂಘ ಸುಪ್ರೀಂ ಕೋರ್ಟ್‍ಗೆ ಅರ್ಜಿ ಸಲ್ಲಿಸಲು ಮುಂದಾಗಿದೆ. ಕಾವೇರಿ ನೀರಿಗಾಗಿ ಕಾನೂನು ಹೋರಾಟಕ್ಕೆ ಮುಂದಾಗಿರುವ ರೈತ ಸಂಘದ ಪರವಾಗಿ ಅರ್ಜಿ ಸಲ್ಲಿಸಲು ದೆಹಲಿಗೆ ಶಾಸಕ ದರ್ಶನ್ ಪುಟ್ಟಣ್ಣಯ್ಯ ತೆರಳಿದ್ದಾರೆ.

ಹಿರಿಯ ವಕೀಲ ರವಿವರ್ಮ ಅವರ ಮೂಲಕ ಸುಪ್ರೀಂಗೆ ಇಂದು ಅವರು ಅರ್ಜಿ ಸಲ್ಲಿಸಲಿದ್ದಾರೆ. ಕೋರ್ಟ್‍ಗೆ ಕಾವೇರಿ ಕೊಳ್ಳದ ಸಂಕಷ್ಟದ ಪರಿಸ್ಥಿತಿ ಮನವರಿಕೆ ಮಾಡಲಾಗುತ್ತದೆ. ಪ್ರಸಕ್ತ ಜಲಾಶಯದ ನೀರಿನ ಮಟ್ಟ, ರೈತರ ಬೆಳೆಗೆ ನೀರಿಲ್ಲದಿರುವ ವಸ್ತುಸ್ಥಿತಿ ಹಾಗೂ ಕುಡಿಯಲು ಅಗತ್ಯ ಇರುವ ನೀರಿನ ಬಗ್ಗೆ ಅಂಕಿ ಅಂಶಗಳನ್ನು ಅರ್ಜಿಯಲ್ಲಿ ಉಲ್ಲೇಖ ಮಾಡಲಾಗಿದೆ. ಈ ಬಗ್ಗೆ ಕೋರ್ಟ್‍ನಲ್ಲಿ ವಾದ ಮಂಡನೆಗೆ ಎಲ್ಲಾ ರೀತಿಯ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ.

ಅರ್ಜಿ ಸಲ್ಲಿಕೆಗಾಗಿ ಕಳೆದ 5 ದಿನಗಳಿಂದಲೇ ಪೂರ್ವ ತಯಾರಿ ಮಾಡಲಾಗಿತ್ತು. ಈ ವಿಚಾರವಾಗಿ ಶಾಸಕ ದರ್ಶನ್ ಪುಟ್ಟಣ್ಣಯ್ಯ ವಕೀಲರೊಂದಿಗೆ ಖುದ್ದು ದೆಹಲಿಗೆ ತೆರಳಿದ್ದಾರೆ. ರಾಜ್ಯ ಸರ್ಕಾರಕ್ಕೆ ಒತ್ತಡ ಹಾಕಲು ಅಹೋರಾತ್ರಿ ಧರಣಿ ನಡೆಸುವ ಜೊತೆಗೆ ಕಾನೂನು ಹೋರಾಟವನ್ನು ಈ ಮೂಲಕ ಆರಂಭಿಸಿದ್ದಾರೆ. ಕಾವೇರಿ ನೀರಿಗಾಗಿ ಇಂದು ಸುಪ್ರೀಂ ಕೋರ್ಟ್ ಮೆಟ್ಟಿಲೇರಲಿರುವ ರಾಜ್ಯ ರೈತ ಸಂಘ ಅರ್ಜಿ ಸಲ್ಲಿಕೆಯಾದರೆ ಬುಧವಾರವೇ ಸುಪ್ರೀಂ ಕೋರ್ಟ್ ವಿಚಾರಣೆ ನಡೆಸುವ ಸಾಧ್ಯತೆ ಇದೆ.

Source: News Agencies

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಮಲೆನಾಡು ತಪ್ಪಲಲ್ಲಿ ಧಾರಾಕಾರ ಮಳೆ – ಹಲವು ಕಡೆ ಕೆಲವೇ ಗಂಟೆಯಲ್ಲಿ 100 ಮಿಮೀ ದಾಟಿದ ಮಳೆ
August 25, 2026
1:40 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ |25-08-2026 | ಕರಾವಳಿ, ಮಲೆನಾಡಿನಲ್ಲೂ ಬಿಡುವಿನ ಅವಧಿ ಹೆಚ್ಚಳ -ಕೆಲವೆಡೆ ಉತ್ತಮ ಮಳೆ – ರಾಜ್ಯದಲ್ಲಿ ಮಳೆ ಪರಿಸ್ಥಿತಿ ಹೇಗೆ..?
August 25, 2026
1:04 PM
by: ಸಾಯಿಶೇಖರ್ ಕರಿಕಳ
ಕರಾವಳಿಗೆ ವಾಡಿಕೆ ಮಳೆ, ಮಲೆನಾಡು ದಾಟದ ಮುಂಗಾರು ಮೋಡ..!
August 25, 2026
12:13 PM
by: ದ ರೂರಲ್ ಮಿರರ್.ಕಾಂ
ಬೆಲೆ ಏರಿಕೆಯನ್ನಷ್ಟೇ ನೋಡುವುದಲ್ಲ ; ಮುಂದಿನ ಮಾರುಕಟ್ಟೆಯನ್ನು ನಿರ್ಮಿಸುವ ಕಾಲ
August 25, 2026
10:38 AM
by: ಅರುಣ್‌ ಕುಮಾರ್ ಕಾಂಚೋಡು

You cannot copy content of this page - Copyright -The Rural Mirror