ತಮಿಳುನಾಡು #TamilNadu, ಕರ್ನಾಟಕ #Karnataka ಕಾವೇರಿ ನೀರು ಸಂಘರ್ಷದ ಮುಂದುವರೆದ ಭಾಗವಾಗಿ ರೈತರೇ ಸುಪ್ರೀಂ ಕೋರ್ಟ್ ಮೆಟ್ಟಿಲೇರಲು ನಿರ್ಧರಿಸಿದ್ದಾರೆ. ರೈತರ ಸಂಕಷ್ಟದ ನಡುವೆಯೂ ತಮಿಳುನಾಡಿಗೆ ನೀರು ಬಿಡುಗಡೆ ಮಾಡಿರುವ ಹಿನ್ನೆಲೆ ಕೆಆರ್ಎಸ್ನಲ್ಲಿ ಅಹೋರಾತ್ರಿ ಧರಣಿ ನಡೆಸುತ್ತಿದ್ದ ರೈತ ಸಂಘ ಸುಪ್ರೀಂ ಕೋರ್ಟ್ಗೆ ಅರ್ಜಿ ಸಲ್ಲಿಸಲು ಮುಂದಾಗಿದೆ. ಕಾವೇರಿ ನೀರಿಗಾಗಿ ಕಾನೂನು ಹೋರಾಟಕ್ಕೆ ಮುಂದಾಗಿರುವ ರೈತ ಸಂಘದ ಪರವಾಗಿ ಅರ್ಜಿ ಸಲ್ಲಿಸಲು ದೆಹಲಿಗೆ ಶಾಸಕ ದರ್ಶನ್ ಪುಟ್ಟಣ್ಣಯ್ಯ ತೆರಳಿದ್ದಾರೆ.
ಹಿರಿಯ ವಕೀಲ ರವಿವರ್ಮ ಅವರ ಮೂಲಕ ಸುಪ್ರೀಂಗೆ ಇಂದು ಅವರು ಅರ್ಜಿ ಸಲ್ಲಿಸಲಿದ್ದಾರೆ. ಕೋರ್ಟ್ಗೆ ಕಾವೇರಿ ಕೊಳ್ಳದ ಸಂಕಷ್ಟದ ಪರಿಸ್ಥಿತಿ ಮನವರಿಕೆ ಮಾಡಲಾಗುತ್ತದೆ. ಪ್ರಸಕ್ತ ಜಲಾಶಯದ ನೀರಿನ ಮಟ್ಟ, ರೈತರ ಬೆಳೆಗೆ ನೀರಿಲ್ಲದಿರುವ ವಸ್ತುಸ್ಥಿತಿ ಹಾಗೂ ಕುಡಿಯಲು ಅಗತ್ಯ ಇರುವ ನೀರಿನ ಬಗ್ಗೆ ಅಂಕಿ ಅಂಶಗಳನ್ನು ಅರ್ಜಿಯಲ್ಲಿ ಉಲ್ಲೇಖ ಮಾಡಲಾಗಿದೆ. ಈ ಬಗ್ಗೆ ಕೋರ್ಟ್ನಲ್ಲಿ ವಾದ ಮಂಡನೆಗೆ ಎಲ್ಲಾ ರೀತಿಯ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ.
ಅರ್ಜಿ ಸಲ್ಲಿಕೆಗಾಗಿ ಕಳೆದ 5 ದಿನಗಳಿಂದಲೇ ಪೂರ್ವ ತಯಾರಿ ಮಾಡಲಾಗಿತ್ತು. ಈ ವಿಚಾರವಾಗಿ ಶಾಸಕ ದರ್ಶನ್ ಪುಟ್ಟಣ್ಣಯ್ಯ ವಕೀಲರೊಂದಿಗೆ ಖುದ್ದು ದೆಹಲಿಗೆ ತೆರಳಿದ್ದಾರೆ. ರಾಜ್ಯ ಸರ್ಕಾರಕ್ಕೆ ಒತ್ತಡ ಹಾಕಲು ಅಹೋರಾತ್ರಿ ಧರಣಿ ನಡೆಸುವ ಜೊತೆಗೆ ಕಾನೂನು ಹೋರಾಟವನ್ನು ಈ ಮೂಲಕ ಆರಂಭಿಸಿದ್ದಾರೆ. ಕಾವೇರಿ ನೀರಿಗಾಗಿ ಇಂದು ಸುಪ್ರೀಂ ಕೋರ್ಟ್ ಮೆಟ್ಟಿಲೇರಲಿರುವ ರಾಜ್ಯ ರೈತ ಸಂಘ ಅರ್ಜಿ ಸಲ್ಲಿಕೆಯಾದರೆ ಬುಧವಾರವೇ ಸುಪ್ರೀಂ ಕೋರ್ಟ್ ವಿಚಾರಣೆ ನಡೆಸುವ ಸಾಧ್ಯತೆ ಇದೆ.
Source: News Agencies
ಗುಟ್ಕಾ–ಪಾನ್ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…
ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…
ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…
ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…
ಕೈಗಾರಿಕಾ ಕೋಳಿ ಸಾಕಾಣಿಕೆ ಆಹಾರ ವಿಷಬಾಧೆಗೆ ಕಾರಣವಾಗುವ ಕ್ಯಾಂಪಿಲೋಬ್ಯಾಕ್ಟರ್ ಬ್ಯಾಕ್ಟೀರಿಯಾದ ಹರಡುವಿಕೆಯನ್ನು ವೇಗಗೊಳಿಸುತ್ತಿದೆ…
ದೇಶದ 651 ಕೃಷಿ ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ದುರ್ಬಲವೆಂದು…