Advertisement
ಸುದ್ದಿಗಳು

#GaneshFestival | ಹಲಾಲ್ ಮುಕ್ತ ಗಣೇಶೋತ್ಸವ ಆಚರಿಸಿ | ಹಿಂದೂ ಜನಜಾಗೃತಿ ಸಮಿತಿ ಕರೆ |

Share

ಗಣೇಶ ಚತುರ್ಥಿಯ ನಿಮಿತ್ತ ಗಣೇಶೋತ್ಸವ ಆಚರಣೆಯ ಸಂದರ್ಭದಲ್ಲಿ ಹಲಾಲ್ ರಹಿತ ಉತ್ಪನ್ನಗಳನ್ನು ಉಪಯೋಗಿಸಿ ‘ಹಲಾಲ್` ಉತ್ಪನ್ನಗಳನ್ನು ಬಹಿಷ್ಕರಿಸುವಂತೆ ಹಿಂದೂ ಜನಜಾಗೃತಿ ಸಮಿತಿಯಿಂದ ಭಾನುವಾರ ಬೆಂಗಳೂರಿನ  ವಿವಿಧೆಡೆಗಳಲ್ಲಿ ಗಣೇಶೋತ್ಸವ ಮಂಡಳಿಗಳು, ಅಂಗಡಿಗಳು ಹಾಗೂ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲಾಯಿತು.

Advertisement

ಈ ಸಂದರ್ಭದಲ್ಲಿ ಹಿಂದೂ ಜನಜಾಗೃತಿ ಸಮಿತಿಯ  ಮೋಹನ್ ಗೌಡ, ಮಹಾಲಕ್ಷ್ಮಿ ಲೇಔಟ್ ಹಿಂದೂ ಮಹಾಗಣಪತಿ ಗಣೇಶೋತ್ಸವ ಮಂಡಳಿ ಅಧ್ಯಕ್ಷ  ಮಲ್ಲೇಶ್, ಸದಸ್ಯರಾದ  ಚೇತನ್,  ರವಿ ಅ,  ಮಂಜು, ಸಂದೀಪ್,
ನವೀನ್, ಯಶವತಪುರ ಶ್ರೀ ಮಹಾಗಣಪತಿ ಸೇವಾ ಸಮಿತಿ ಅಧ್ಯಕ್ಷ  ಮೋನಪ್ಪ ಗೌಡ, ಸದಸ್ಯ  ಗಿರೀಶ್ ಪೂಜಾರಿ, ಹಿಂದೂ ಯುವಕರ ಸಂಘ ಗಣೇಶೋತ್ಸವ ಮಂಡಳಿ ಸದಸ್ಯರು ಹಾಗೂ ಮತ್ತಿತರರು ಉಪಸ್ಥಿತರಿದ್ದರು.

ರಾಜ್ಯದಲ್ಲಿ ಬಾಗಲಕೋಟೆ, ಶಿವಮೊಗ್ಗ, ದಕ್ಷಿಣ ಕನ್ನಡ ಜಿಲ್ಲೆಗಳು, ಅದೇ ರೀತಿ ಗೋವಾ, ಮಹಾರಾಷ್ಟ್ರ, ದೆಹಲಿ, ಉತ್ತರ ಪ್ರದೇಶ, ಬಿಹಾರ ಸೇರಿದಂತೆ ದೇಶಾದ್ಯಂತ ಹಲವು ಕಡೆಗಳಲ್ಲಿ ಮನವಿ ನೀಡಲಾಗಿದ್ದು, ಈ ಬಾರಿ ‘ಹಲಾಲ್ ಮುಕ್ತ ಗಣೇಶೋತ್ಸವ` ಆಚರಿಸುವಂತೆ ಹಿಂದೂ ಜನಜಾಗೃತಿ ಸಮಿತಿ ಕರೆ ನೀಡಿದೆ.

ಅಭಿಯಾನದ ವೇಳೆ ಹಿಂದೂ ಜನಜಾಗೃತಿ ಸಮಿತಿಯ ರಾಜ್ಯ ವಕ್ತಾರ  ಮೋಹನ್ ಗೌಡ ಮಾತನಾಡಿ, ‘ಗಣೇಶೋತ್ಸವ ಆಚರಣೆಯ ಸಮಯದಲ್ಲಿ ಶ್ರೀ ಗಣೇಶನ ಪೂಜಾ ಸಾಮಗ್ರಿಗಳು ಮತ್ತು ಪ್ರಸಾದವು ’ಹಲಾಲ್ ಪ್ರಮಾಣೀಕೃತ’ ಆಗಿಲ್ಲವಲ್ಲ ಎಂಬುದನ್ನು ಖಚಿತಪಡಿಸಿಕೊಳ್ಳಬೇಕು. ಮೂಲತಃ ಮಾಂಸಾಹಾರಕ್ಕೆ ಮಾತ್ರ ಸೀಮಿತವಾಗಿದ್ದ `ಹಲಾಲ್’ ಎಂಬ ಮೂಲ ಇಸ್ಲಾಮಿಕ್ ಪರಿಕಲ್ಪನೆಯು ಇಂದು ಆಹಾರ ಧಾನ್ಯಗಳು, ಸಿಹಿತಿಂಡಿಗಳು, ಸೌಂದರ್ಯವರ್ಧಕಗಳು, ಸಸ್ಯಾಹಾರಿ ಆಹಾರಗಳು, ಔಷಧಗಳು, ಪ್ರವಾಸೋದ್ಯಮ, ಆಸ್ಪತ್ರೆಗಳು, ಕಟ್ಟಡಗಳು, ರೆಸ್ಟೋರೆಂಟ್‌ಗಳು, ವೆಬ್‌ಸೈಟ್‌ಗಳು ಹೀಗೆ ಪ್ರತಿಯೊಂದು ಕ್ಷೇತ್ರದಲ್ಲೂ ಕಾಲಿಟ್ಟಿದೆ. ಹಾಗಾಗಿ ಈ ಬಾರಿ ಗಣೇಶೋತ್ಸವದಲ್ಲಿ ಗಣೇಶ ಭಕ್ತರಿಗೆ ‘ಹಲಾಲ್ ಪ್ರಮಾಣ ಪತ್ರ’ದ ಬಗ್ಗೆ ಮಾಹಿತಿ ನೀಡುವ ಕರಪತ್ರ ಹಂಚುವುದು, ಹಲಾಲ್ ಪ್ರಮಾಣಪತ್ರದ ಬಗ್ಗೆ ವಿರೋಧವನ್ನು ನೊಂದಾಯಿಸಲು ‘ಆನ್ ಲೈನ್ ಅರ್ಜಿ ಸಹಿ’ ವ್ಯವಸ್ಥೆ ಕಲ್ಪಿಸಿ, ಗಣೇಶ ಭಕ್ತರಿಗೆ ಸಹಿ ಮಾಡಲು ಜನಜಾಗೃತಿ ಮೂಡಿಸುವುದು ಈ ರೀತಿಯಾಗಿ ’ಹಲಾಲ್ ಮುಕ್ತ ಗಣೇಶೋತ್ಸವ’ ಆಚರಿಸಿರಿ` ಎಂದು ಕರೆ ನೀಡಿದರು.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 21-02-2026 | ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದ ಲಕ್ಷಣ | ಎಲ್ಲೆಲ್ಲಾ ಮಳೆ ಇದೆ…? ಎಷ್ಟು ದಿನ ಮಳೆ ಸಾಧ್ಯತೆ…?

ಕರ್ನಾಟಕದಲ್ಲಿ ಫೆಬ್ರುವರಿ 27ರವರೆಗೆ ಬಿಸಿಲಿನ ಜೊತೆಗೆ ತುಂತುರು ಮತ್ತು ಗುಡುಗು ಮಳೆಯ ಮುನ್ಸೂಚನೆ.…

6 hours ago

ಮಿಶ್ರ ಕೃಷಿಯತ್ತ ಮಲೆನಾಡಿನ ರೈತನ ಹೆಜ್ಜೆ ಅನಿವಾರ್ಯ

ಮಲೆನಾಡಿನಲ್ಲಿ ಅಡಿಕೆ ರೈತರು ಮಿಶ್ರ ಕೃಷಿಯತ್ತ ಮುಖ ಮಾಡುತ್ತಿದ್ದಾರೆ. ಹವಾಮಾನ ಬದಲಾವಣೆ, ಬೆಲೆ…

10 hours ago

ನಂದಿನಿ ಉತ್ಪನ್ನಗಳ ವಿರುದ್ಧದ ವದಂತಿ ನಂಬಬೇಡಿ : ಗ್ರಾಹಕರಿಗೆ ಕೆಎಂಎಫ್ ಮನವಿ

ನಂದಿನಿ ಹಾಲು ಮತ್ತು ಉತ್ಪನ್ನಗಳು ಸೇವನೆಗೆ ಸಂಪೂರ್ಣ ಸುರಕ್ಷಿತವೆಂದು ಕೆಎಂಎಫ್ ಸ್ಪಷ್ಟನೆ ನೀಡಿದೆ.…

10 hours ago

ರೈತರಿಗೆ ಗನ್ ಪರವಾನಗಿ : ಶೀಘ್ರದಲ್ಲೇ ಆನ್ಲೈನ್ ವ್ಯವಸ್ಥೆ ಜಾರಿ – ಜಿಲ್ಲಾಧಿಕಾರಿ ದರ್ಶನ್ ಎಚ್.ವಿ

ರೈತರಿಗೆ ಗನ್ ಪರವಾನಗಿ ಹಾಗೂ ನವೀಕರಣ ಪ್ರಕ್ರಿಯೆಯನ್ನು ಸುಲಭಗೊಳಿಸಲು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ…

10 hours ago

ಮಂಗಳೂರು ಅಡಿಕೆ ಮಾರುಕಟ್ಟೆ ‘ಸೈಕಲಾಜಿಕಲ್ ಬಫರ್’ ಹಂತಕ್ಕೆ…!

ಮಂಗಳೂರಿನ ಅಡಿಕೆ ಮಾರುಕಟ್ಟೆಯು ಪ್ರಸ್ತುತ ಕೇವಲ ಬೆಲೆ ಏರಿಳಿತದ ಕೇಂದ್ರವಾಗಿ ಉಳಿದಿಲ್ಲ; ಬದಲಾಗಿ…

22 hours ago

ಗೇರು ಹಣ್ಣಿನಿಂದ ಆದಾಯಕ್ಕೆ ಹೊಸ ದಾರಿ | ಮಾ.11 ರಂದು ICAR–ಗೇರು ಸಂಶೋಧನಾ ನಿರ್ದೇಶನಾಲಯದಲ್ಲಿ ಉದ್ಯಮ–ವಿಜ್ಞಾನಿಗಳ ಸಂವಾದ

ಪುತ್ತೂರಿನ ICAR–ಗೇರು ಸಂಶೋಧನಾ ನಿರ್ದೇಶನಾಲಯದಲ್ಲಿ ಮಾರ್ಚ್‌ 11ರಂದು ಗೋಡಂಬಿ ಹಣ್ಣಿನ ಮೌಲ್ಯವರ್ಧನೆ ಕುರಿತು…

2 days ago