Advertisement
ಸುದ್ದಿಗಳು

#GaneshFestival | ಹಲಾಲ್ ಮುಕ್ತ ಗಣೇಶೋತ್ಸವ ಆಚರಿಸಿ | ಹಿಂದೂ ಜನಜಾಗೃತಿ ಸಮಿತಿ ಕರೆ |

Share

ಗಣೇಶ ಚತುರ್ಥಿಯ ನಿಮಿತ್ತ ಗಣೇಶೋತ್ಸವ ಆಚರಣೆಯ ಸಂದರ್ಭದಲ್ಲಿ ಹಲಾಲ್ ರಹಿತ ಉತ್ಪನ್ನಗಳನ್ನು ಉಪಯೋಗಿಸಿ ‘ಹಲಾಲ್` ಉತ್ಪನ್ನಗಳನ್ನು ಬಹಿಷ್ಕರಿಸುವಂತೆ ಹಿಂದೂ ಜನಜಾಗೃತಿ ಸಮಿತಿಯಿಂದ ಭಾನುವಾರ ಬೆಂಗಳೂರಿನ  ವಿವಿಧೆಡೆಗಳಲ್ಲಿ ಗಣೇಶೋತ್ಸವ ಮಂಡಳಿಗಳು, ಅಂಗಡಿಗಳು ಹಾಗೂ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲಾಯಿತು.

ಈ ಸಂದರ್ಭದಲ್ಲಿ ಹಿಂದೂ ಜನಜಾಗೃತಿ ಸಮಿತಿಯ  ಮೋಹನ್ ಗೌಡ, ಮಹಾಲಕ್ಷ್ಮಿ ಲೇಔಟ್ ಹಿಂದೂ ಮಹಾಗಣಪತಿ ಗಣೇಶೋತ್ಸವ ಮಂಡಳಿ ಅಧ್ಯಕ್ಷ  ಮಲ್ಲೇಶ್, ಸದಸ್ಯರಾದ  ಚೇತನ್,  ರವಿ ಅ,  ಮಂಜು, ಸಂದೀಪ್,
ನವೀನ್, ಯಶವತಪುರ ಶ್ರೀ ಮಹಾಗಣಪತಿ ಸೇವಾ ಸಮಿತಿ ಅಧ್ಯಕ್ಷ  ಮೋನಪ್ಪ ಗೌಡ, ಸದಸ್ಯ  ಗಿರೀಶ್ ಪೂಜಾರಿ, ಹಿಂದೂ ಯುವಕರ ಸಂಘ ಗಣೇಶೋತ್ಸವ ಮಂಡಳಿ ಸದಸ್ಯರು ಹಾಗೂ ಮತ್ತಿತರರು ಉಪಸ್ಥಿತರಿದ್ದರು.

ರಾಜ್ಯದಲ್ಲಿ ಬಾಗಲಕೋಟೆ, ಶಿವಮೊಗ್ಗ, ದಕ್ಷಿಣ ಕನ್ನಡ ಜಿಲ್ಲೆಗಳು, ಅದೇ ರೀತಿ ಗೋವಾ, ಮಹಾರಾಷ್ಟ್ರ, ದೆಹಲಿ, ಉತ್ತರ ಪ್ರದೇಶ, ಬಿಹಾರ ಸೇರಿದಂತೆ ದೇಶಾದ್ಯಂತ ಹಲವು ಕಡೆಗಳಲ್ಲಿ ಮನವಿ ನೀಡಲಾಗಿದ್ದು, ಈ ಬಾರಿ ‘ಹಲಾಲ್ ಮುಕ್ತ ಗಣೇಶೋತ್ಸವ` ಆಚರಿಸುವಂತೆ ಹಿಂದೂ ಜನಜಾಗೃತಿ ಸಮಿತಿ ಕರೆ ನೀಡಿದೆ.

ಅಭಿಯಾನದ ವೇಳೆ ಹಿಂದೂ ಜನಜಾಗೃತಿ ಸಮಿತಿಯ ರಾಜ್ಯ ವಕ್ತಾರ  ಮೋಹನ್ ಗೌಡ ಮಾತನಾಡಿ, ‘ಗಣೇಶೋತ್ಸವ ಆಚರಣೆಯ ಸಮಯದಲ್ಲಿ ಶ್ರೀ ಗಣೇಶನ ಪೂಜಾ ಸಾಮಗ್ರಿಗಳು ಮತ್ತು ಪ್ರಸಾದವು ’ಹಲಾಲ್ ಪ್ರಮಾಣೀಕೃತ’ ಆಗಿಲ್ಲವಲ್ಲ ಎಂಬುದನ್ನು ಖಚಿತಪಡಿಸಿಕೊಳ್ಳಬೇಕು. ಮೂಲತಃ ಮಾಂಸಾಹಾರಕ್ಕೆ ಮಾತ್ರ ಸೀಮಿತವಾಗಿದ್ದ `ಹಲಾಲ್’ ಎಂಬ ಮೂಲ ಇಸ್ಲಾಮಿಕ್ ಪರಿಕಲ್ಪನೆಯು ಇಂದು ಆಹಾರ ಧಾನ್ಯಗಳು, ಸಿಹಿತಿಂಡಿಗಳು, ಸೌಂದರ್ಯವರ್ಧಕಗಳು, ಸಸ್ಯಾಹಾರಿ ಆಹಾರಗಳು, ಔಷಧಗಳು, ಪ್ರವಾಸೋದ್ಯಮ, ಆಸ್ಪತ್ರೆಗಳು, ಕಟ್ಟಡಗಳು, ರೆಸ್ಟೋರೆಂಟ್‌ಗಳು, ವೆಬ್‌ಸೈಟ್‌ಗಳು ಹೀಗೆ ಪ್ರತಿಯೊಂದು ಕ್ಷೇತ್ರದಲ್ಲೂ ಕಾಲಿಟ್ಟಿದೆ. ಹಾಗಾಗಿ ಈ ಬಾರಿ ಗಣೇಶೋತ್ಸವದಲ್ಲಿ ಗಣೇಶ ಭಕ್ತರಿಗೆ ‘ಹಲಾಲ್ ಪ್ರಮಾಣ ಪತ್ರ’ದ ಬಗ್ಗೆ ಮಾಹಿತಿ ನೀಡುವ ಕರಪತ್ರ ಹಂಚುವುದು, ಹಲಾಲ್ ಪ್ರಮಾಣಪತ್ರದ ಬಗ್ಗೆ ವಿರೋಧವನ್ನು ನೊಂದಾಯಿಸಲು ‘ಆನ್ ಲೈನ್ ಅರ್ಜಿ ಸಹಿ’ ವ್ಯವಸ್ಥೆ ಕಲ್ಪಿಸಿ, ಗಣೇಶ ಭಕ್ತರಿಗೆ ಸಹಿ ಮಾಡಲು ಜನಜಾಗೃತಿ ಮೂಡಿಸುವುದು ಈ ರೀತಿಯಾಗಿ ’ಹಲಾಲ್ ಮುಕ್ತ ಗಣೇಶೋತ್ಸವ’ ಆಚರಿಸಿರಿ` ಎಂದು ಕರೆ ನೀಡಿದರು.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 28-07-2026 | ಮುಂದಿನ 10 ದಿನ ಸಾಮಾನ್ಯ ಮಳೆ – ಆಗಸ್ಟ್ ಆರಂಭದಲ್ಲಿ ದಕ್ಷಿಣ ಒಳನಾಡಿನಲ್ಲಿ ಮಳೆ ಚುರುಕು ಸಾಧ್ಯತೆ

ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಸಾಮಾನ್ಯ ಮಳೆ ಮುಂದುವರಿಯುವ ನಿರೀಕ್ಷೆಯಿದ್ದು,…

14 hours ago

200 ಹಸುಗಳಿಂದ ₹2 ಕೋಟಿ ವಾರ್ಷಿಕ ಆದಾಯ…! ಗಮನ ಸೆಳೆದ ಉತ್ತರ ಪ್ರದೇಶದ ಮಾದರಿ

ಉತ್ತರ ಪ್ರದೇಶದಲ್ಲಿ 200 ಹಸುಗಳನ್ನು ಆಧರಿಸಿದ ಸಮಗ್ರ ಗೋ ಆರ್ಥಿಕತೆ ಮಾದರಿಯಲ್ಲಿ ಗೋಮಯದಿಂದ…

15 hours ago

ರಬ್ಬರ್ ತೋಟ ಹಸಿರಾಗಿರಬಹುದು… ಆದರೆ ಕಾಡಿಗೆ ಪರ್ಯಾಯವಲ್ಲ…! ಮಲೇಷ್ಯಾ ಅಧ್ಯಯನ ವರದಿ

ರಬ್ಬರ್ ತೋಟಗಳು ಹಸಿರಾಗಿದ್ದರೂ ಅವು ನೈಸರ್ಗಿಕ ಮಳೆಕಾಡಿನ ಜೀವವೈವಿಧ್ಯವನ್ನು ಉಳಿಸಿಕೊಳ್ಳಲು ಸಾಧ್ಯವಿಲ್ಲ ಎಂದು…

19 hours ago

ಅಡುಗೆ ಎಣ್ಣೆ ಆಮದು 7% ಏರಿಕೆ – ಭಾರತ ಇನ್ನೂ ಆಮದು ಅವಲಂಬಿತ

ಭಾರತದ ಅಡುಗೆ ಎಣ್ಣೆ ಆಮದು ಎಂಟು ತಿಂಗಳಲ್ಲಿ ಶೇ.7ರಷ್ಟು ಏರಿಕೆಯಾಗಿದೆ. ಜೂನ್‌ನಲ್ಲಿ ಆಮದು…

19 hours ago

ಕೇರಳದಲ್ಲಿ ಪ್ರತಿವರ್ಷ ₹1,200 ಕೋಟಿ ಮೌಲ್ಯದ ಹಲಸು ವ್ಯರ್ಥ..! ಮೌಲ್ಯವರ್ಧನೆಗೆ ಸರ್ಕಾರ ಮುಂದಾಗಲಿ ಎಂಬ ಒತ್ತಾಯ

ಕೇರಳದಲ್ಲಿ ಉತ್ಪಾದನೆಯಾಗುವ ಬಹುತೇಕ ಹಲಸು ಬಳಕೆಯಾಗದೆ ವ್ಯರ್ಥವಾಗುತ್ತಿದ್ದು, ವರ್ಷಕ್ಕೆ ಸುಮಾರು ₹1,200 ಕೋಟಿ…

20 hours ago

ಅವೈಜ್ಞಾನಿಕ ಮಳೆ ವರದಿ ಶೈಕ್ಷಣಿಕ ವಲಯಕ್ಕೆ ತೊಂದರೆ – ಹವಾಮಾನ ಮುನ್ಸೂಚನೆ ಕುರಿತು ಎಸ್.ಎಲ್. ಭೋಜೆಗೌಡ ಕಳವಳ

ಅವೈಜ್ಞಾನಿಕ ಮಳೆ ಮುನ್ಸೂಚನೆಗಳ ಆಧಾರದ ಮೇಲೆ ಪದೇ ಪದೇ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸುವುದು…

1 day ago