Advertisement
ಸುದ್ದಿಗಳು

#GaneshFestival | ಹಲಾಲ್ ಮುಕ್ತ ಗಣೇಶೋತ್ಸವ ಆಚರಿಸಿ | ಹಿಂದೂ ಜನಜಾಗೃತಿ ಸಮಿತಿ ಕರೆ |

Share

ಗಣೇಶ ಚತುರ್ಥಿಯ ನಿಮಿತ್ತ ಗಣೇಶೋತ್ಸವ ಆಚರಣೆಯ ಸಂದರ್ಭದಲ್ಲಿ ಹಲಾಲ್ ರಹಿತ ಉತ್ಪನ್ನಗಳನ್ನು ಉಪಯೋಗಿಸಿ ‘ಹಲಾಲ್` ಉತ್ಪನ್ನಗಳನ್ನು ಬಹಿಷ್ಕರಿಸುವಂತೆ ಹಿಂದೂ ಜನಜಾಗೃತಿ ಸಮಿತಿಯಿಂದ ಭಾನುವಾರ ಬೆಂಗಳೂರಿನ  ವಿವಿಧೆಡೆಗಳಲ್ಲಿ ಗಣೇಶೋತ್ಸವ ಮಂಡಳಿಗಳು, ಅಂಗಡಿಗಳು ಹಾಗೂ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲಾಯಿತು.

ಈ ಸಂದರ್ಭದಲ್ಲಿ ಹಿಂದೂ ಜನಜಾಗೃತಿ ಸಮಿತಿಯ  ಮೋಹನ್ ಗೌಡ, ಮಹಾಲಕ್ಷ್ಮಿ ಲೇಔಟ್ ಹಿಂದೂ ಮಹಾಗಣಪತಿ ಗಣೇಶೋತ್ಸವ ಮಂಡಳಿ ಅಧ್ಯಕ್ಷ  ಮಲ್ಲೇಶ್, ಸದಸ್ಯರಾದ  ಚೇತನ್,  ರವಿ ಅ,  ಮಂಜು, ಸಂದೀಪ್,
ನವೀನ್, ಯಶವತಪುರ ಶ್ರೀ ಮಹಾಗಣಪತಿ ಸೇವಾ ಸಮಿತಿ ಅಧ್ಯಕ್ಷ  ಮೋನಪ್ಪ ಗೌಡ, ಸದಸ್ಯ  ಗಿರೀಶ್ ಪೂಜಾರಿ, ಹಿಂದೂ ಯುವಕರ ಸಂಘ ಗಣೇಶೋತ್ಸವ ಮಂಡಳಿ ಸದಸ್ಯರು ಹಾಗೂ ಮತ್ತಿತರರು ಉಪಸ್ಥಿತರಿದ್ದರು.

ರಾಜ್ಯದಲ್ಲಿ ಬಾಗಲಕೋಟೆ, ಶಿವಮೊಗ್ಗ, ದಕ್ಷಿಣ ಕನ್ನಡ ಜಿಲ್ಲೆಗಳು, ಅದೇ ರೀತಿ ಗೋವಾ, ಮಹಾರಾಷ್ಟ್ರ, ದೆಹಲಿ, ಉತ್ತರ ಪ್ರದೇಶ, ಬಿಹಾರ ಸೇರಿದಂತೆ ದೇಶಾದ್ಯಂತ ಹಲವು ಕಡೆಗಳಲ್ಲಿ ಮನವಿ ನೀಡಲಾಗಿದ್ದು, ಈ ಬಾರಿ ‘ಹಲಾಲ್ ಮುಕ್ತ ಗಣೇಶೋತ್ಸವ` ಆಚರಿಸುವಂತೆ ಹಿಂದೂ ಜನಜಾಗೃತಿ ಸಮಿತಿ ಕರೆ ನೀಡಿದೆ.

ಅಭಿಯಾನದ ವೇಳೆ ಹಿಂದೂ ಜನಜಾಗೃತಿ ಸಮಿತಿಯ ರಾಜ್ಯ ವಕ್ತಾರ  ಮೋಹನ್ ಗೌಡ ಮಾತನಾಡಿ, ‘ಗಣೇಶೋತ್ಸವ ಆಚರಣೆಯ ಸಮಯದಲ್ಲಿ ಶ್ರೀ ಗಣೇಶನ ಪೂಜಾ ಸಾಮಗ್ರಿಗಳು ಮತ್ತು ಪ್ರಸಾದವು ’ಹಲಾಲ್ ಪ್ರಮಾಣೀಕೃತ’ ಆಗಿಲ್ಲವಲ್ಲ ಎಂಬುದನ್ನು ಖಚಿತಪಡಿಸಿಕೊಳ್ಳಬೇಕು. ಮೂಲತಃ ಮಾಂಸಾಹಾರಕ್ಕೆ ಮಾತ್ರ ಸೀಮಿತವಾಗಿದ್ದ `ಹಲಾಲ್’ ಎಂಬ ಮೂಲ ಇಸ್ಲಾಮಿಕ್ ಪರಿಕಲ್ಪನೆಯು ಇಂದು ಆಹಾರ ಧಾನ್ಯಗಳು, ಸಿಹಿತಿಂಡಿಗಳು, ಸೌಂದರ್ಯವರ್ಧಕಗಳು, ಸಸ್ಯಾಹಾರಿ ಆಹಾರಗಳು, ಔಷಧಗಳು, ಪ್ರವಾಸೋದ್ಯಮ, ಆಸ್ಪತ್ರೆಗಳು, ಕಟ್ಟಡಗಳು, ರೆಸ್ಟೋರೆಂಟ್‌ಗಳು, ವೆಬ್‌ಸೈಟ್‌ಗಳು ಹೀಗೆ ಪ್ರತಿಯೊಂದು ಕ್ಷೇತ್ರದಲ್ಲೂ ಕಾಲಿಟ್ಟಿದೆ. ಹಾಗಾಗಿ ಈ ಬಾರಿ ಗಣೇಶೋತ್ಸವದಲ್ಲಿ ಗಣೇಶ ಭಕ್ತರಿಗೆ ‘ಹಲಾಲ್ ಪ್ರಮಾಣ ಪತ್ರ’ದ ಬಗ್ಗೆ ಮಾಹಿತಿ ನೀಡುವ ಕರಪತ್ರ ಹಂಚುವುದು, ಹಲಾಲ್ ಪ್ರಮಾಣಪತ್ರದ ಬಗ್ಗೆ ವಿರೋಧವನ್ನು ನೊಂದಾಯಿಸಲು ‘ಆನ್ ಲೈನ್ ಅರ್ಜಿ ಸಹಿ’ ವ್ಯವಸ್ಥೆ ಕಲ್ಪಿಸಿ, ಗಣೇಶ ಭಕ್ತರಿಗೆ ಸಹಿ ಮಾಡಲು ಜನಜಾಗೃತಿ ಮೂಡಿಸುವುದು ಈ ರೀತಿಯಾಗಿ ’ಹಲಾಲ್ ಮುಕ್ತ ಗಣೇಶೋತ್ಸವ’ ಆಚರಿಸಿರಿ` ಎಂದು ಕರೆ ನೀಡಿದರು.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 06-09-2026 | ಕರ್ನಾಟಕದಲ್ಲಿ ಮಳೆ ಇಳಿಮುಖದ ಲಕ್ಷಣ

ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಸಾಧ್ಯತೆ ಇಳಿಮುಖವಾಗುತ್ತಿದ್ದು, ಕರಾವಳಿ–ಮಲೆನಾಡಿನಲ್ಲಿ ಸೆ.8ರಿಂದ 10ರವರೆಗೆ ಅಲ್ಲಲ್ಲಿ…

5 hours ago

ಭಾರತದ ಹಸಿರು ಯೋಜನೆಗಳಿಗೆ ಜಪಾನ್‌ನ ಕಾರ್ಬನ್ ಕ್ರೆಡಿಟ್ ಅವಕಾಶ – ರೈತರೂ ಪಡೆಯಬಹುದೇ ಇದರ ಲಾಭ?

ಭಾರತ–ಜಪಾನ್ JCM ಮೂಲಕ ಭಾರತದಲ್ಲಿ ಕಡಿಮೆ-ಇಂಗಾಲ ಯೋಜನೆಗಳಿಗೆ ಜಪಾನ್ ಹೂಡಿಕೆ ಮತ್ತು ತಂತ್ರಜ್ಞಾನ…

8 hours ago

ಹಿಮಾಲಯದಲ್ಲಿ ಮತ್ತೊಂದು ಅಪಾಯದ ಎಚ್ಚರಿಕೆ..!

ಸಿಕ್ಕಿಂನಲ್ಲಿ 40 ಹೆಚ್ಚಿನ ಅಪಾಯದ ಹಿಮನದಿ ಸರೋವರಗಳನ್ನು ಗುರುತಿಸಲಾಗಿದ್ದು, 16 ಸರೋವರಗಳು ಅತ್ಯಂತ…

9 hours ago

ಎಲ್ ನಿನೊ ಮತ್ತಷ್ಟು ಬಲಗೊಳ್ಳುವ ಮುನ್ಸೂಚನೆ..!

2026ರ ಆಗಸ್ಟ್ ವೇಳೆಗೆ ಎಲ್ ನಿನೊ ಆರಂಭವಾಗಿದ್ದು , ವರ್ಷಾಂತ್ಯದ ವೇಳೆಗೆ ಅತ್ಯಂತ…

10 hours ago

ಈಶಾನ್ಯದಿಂದ ಜಾರ್ಖಂಡ್‌ವರೆಗೆ ರಬ್ಬರ್‌ ಕೃಷಿಯ ವಿಸ್ತರಣೆ | ಹೊಸ ಪ್ರದೇಶಗಳಲ್ಲಿ ರಬ್ಬರ್‌ ಕೃಷಿ ವಿಸ್ತರಣೆ – ಅಪಾಯವೇ..? ಅವಕಾಶವೇ..?

ನಾಗಾಲ್ಯಾಂಡ್‌ನಲ್ಲಿ ರಬ್ಬರ್‌ ಕೃಷಿ ಸುಮಾರು 29,794 ಹೆಕ್ಟೇರ್‌ಗೆ ವಿಸ್ತರಿಸಿರುವ ಬೆನ್ನಲ್ಲೇ ಜಾರ್ಖಂಡ್‌ನಲ್ಲಿ ಸೂಕ್ತ…

22 hours ago

ದಾವಣಗೆರೆಯಲ್ಲಿ ಮಳೆ ಕೊರತೆ – ಮೆಕ್ಕೆಜೋಳ, ರಾಗಿ ಬೆಳೆ ಶೇ.50 ಹಾನಿ ಭೀತಿ

ದಾವಣಗೆರೆ ಜಿಲ್ಲೆಯಲ್ಲಿ 15 ದಿನಗಳಿಂದ ಮಳೆ ಕೊರತೆಯಾಗಿದ್ದು, ಮುಂದಿನ ಕೆಲ ದಿನಗಳಲ್ಲೂ ಮಳೆಯಾಗದಿದ್ದರೆ…

1 day ago