MIRROR FOCUS

ವಿಜಯದಶಮಿಯಂದು ಕೊಲ್ಲೂರಿನ ಮೂಕಾಂಬಿಕಾ ದೇವಸ್ಥಾನದಲ್ಲಿ ಮಕ್ಕಳಿಗೆ ಅಕ್ಷರಾಭ್ಯಾಸದ ವಿಶೇಷತೆ |

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನದಲ್ಲಿ ವಿಜಯದಶಮಿಯಂದು ಬೆಳಿಗ್ಗೆ 4 ಗಂಟೆಗೆ ಬ್ರಾಹ್ಮೀ ಮುಹೂರ್ತದಲ್ಲಿ ಚಿಕ್ಕ್ಕಮಕ್ಕಳಿಗೆ ಅಕ್ಷರಾಭ್ಯಾಸ ನಡೆಯುತ್ತದೆ. ಸಾವಿರಾರು ಮಂದಿ ಈ ಕಾರ್ಯಕ್ರಮದಲ್ಲಿ ಭಾಗಿಯಾಗುತ್ತಾರೆ.ಕರ್ನಾಟಕ ಮಾತ್ರವಲ್ಲ ಕೇರಳ ಸೇರಿದಂತೆ ದೂರದ ಊರುಗಳಿಂದಲೂ ಈ ಕ್ಷೇತ್ರದಲ್ಲಿ ಅಕ್ಷರಾಭ್ಯಾಸವನ್ನು ಮಾಡಿಸಲಾಗುತ್ತದೆ.

Advertisement

ಲಕ್ಷ್ಮೀ, ಸರಸ್ವತಿ ಹಾಗೂ ಪಾರ್ವತಿಯ ಐಕ್ಯ ಸ್ವರೂಪಿಣಿಯಾಗಿ ನೆಲೆನಿಂತ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನದಲ್ಲಿ ವಿದ್ಯಾರಂಭ ಮಾಡಿಸಿದರೆ ಮಕ್ಕಳು ಭವಿಷ್ಯದಲ್ಲಿ ಉತ್ತಮವಾಗಿ ವಿದ್ಯೆ ಕಲಿಯುತ್ತಾರೆ ಎನ್ನುವ ನಂಬಿಕೆ ಭಕ್ತರಲ್ಲಿದೆ. ವಿಜಯದಶಮಿಯ ಶುಭ ಮುಹೂರ್ತದಲ್ಲಿ ಪುರೋಹಿತರ ಮಾರ್ಗದರ್ಶನದ ಮೇರೆಗೆ ಪಾಲಕರು ತಮ್ಮ ಮಕ್ಕಳ ಕೈ ಹಿಡಿದು ಅಕ್ಕಿತುಂಬಿದ ಬಟ್ಟಲಿನಲ್ಲಿ ಓಂಕಾರದಿಂದ ಮೊದಲ್ಗೊಂಡು ದೇವಿಯ ಸ್ತೋತ್ರ ಹಾಗೂ ವರ್ಣ ಮಾಲೆಗ ಮತ್ತು ಸಂಖ್ಯೆಗಳನ್ನು  ಬರೆಯಿಸಿ ಅಕ್ಷರಾಭ್ಯಾಸಕ್ಕೆ ಮುನ್ನುಡಿ ಬರೆದರು.

ನಂತರ ಪೋಷಕರು ತಮ್ಮ ಮಕ್ಕಳ ನಾಲಗೆಯ ಮೇಲೆ ಉಂಗುರದಿಂದ ಓಂಕಾರವನ್ನು ಬರೆದು ಶ್ರೀದೇವಿಯ ಆಶೀರ್ವಾದವನ್ನು ಬೇಡಿದರು.  ಬಳಿಕ ದೇವಸ್ಥಾನದ ಮುಂಬಾಗದಲ್ಲಿರುವ ಧ್ವಜಕಟ್ಟೆಯಲ್ಲಿ ದೇವಿಗೆ ಪ್ರಾರ್ಥನೆ ಸಲ್ಲಿಸುವ ಮೂಲಕ ವಿದ್ಯಾರಂಭದ ವಿಧಿವಿಧಾನಗಳು ಸಾಂಗವಾಗಿ ಮುಗಿದವು.  ರಾಜ್ಯ ಹಾಗೂ ನೆರೆಯ ಕೇರಳ ಹಾಗೂ ತಮಿಳುನಾಡು ರಾಜ್ಯದ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ದೇವಿಯ ದರ್ಶನ ಪಡೆದು ಪುನೀತರಾದರು.

On Vijayadashami, children at Kollur Sri Mookambika Temple in Bynduru Taluk of Udupi District participate in the ritual of Aksharabhyas. Thousands of people, including those from distant places like Kerala, attend this program. This event promotes literacy not only within Karnataka but also across borders.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಬೆಳಗಾವಿಯಲ್ಲಿ 3 ದಿನಗಳ ಮಾವು, ಜೇನು ಮೇಳ | ರೈತರಿಂದ ಪ್ರದರ್ಶನ, ಗ್ರಾಹಕರಿಗೆ ನೇರ ಮಾರಾಟ

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಮತ್ತು ತೋಟಗಾರಿಕೆ ಇಲಾಖೆಯಿಂದ ಬೆಳಗಾವಿಯ ಹೋಮ್ ಪಾರ್ಕ್ ನಲ್ಲಿ…

11 hours ago

ದೇಶಾದ್ಯಂತ 47 ಸ್ಥಳಗಳಲ್ಲಿ ಉದ್ಯೋಗ ಮೇಳ | 51000 ನವ ಉದ್ಯೋಗಿಗಳಿಗೆ ನೇಮಕಾತಿ ಪತ್ರ ವಿತರಣೆ

ದೇಶಾದ್ಯಂತ ಒಂದೇ ದಿನ 47 ಸ್ಥಳಗಳಲ್ಲಿ ಉದ್ಯೋಗ ಮೇಳವನ್ನು ಹಮ್ಮಿಕೊಳ್ಳಲಾಗಿದ್ದು ಬೆಂಗಳೂರಿನ ಎನ್‌ಎಸಿಐಎ…

12 hours ago

ಹವಾಮಾನ ವರದಿ | 26-04-2025 | ಸಂಜೆ ಗುಡುಗು ಸಹಿತ ಮಳೆ ಸಾಧ್ಯತೆ |

ಅಲ್ಲಲ್ಲಿ ಸಂಜೆಯ ವೇಳೆಗೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.

19 hours ago

ಚಿಕ್ಕಬಳ್ಳಾಪುರ ಜಿಲ್ಲೆ ಜಂಗಮಕೋಟೆ ಬಳಿ ಕೈಗಾರಿಕಾ ಪ್ರದೇಶ ನಿರ್ಮಾಣಕ್ಕಾಗಿ 2863 ಎಕರೆ ಭೂಮಿ

ಚಿಕ್ಕಬಳ್ಳಾಪುರ ಜಿಲ್ಲೆ ಶಿಡ್ಲಘಟ್ಟ ತಾಲ್ಲೂಕಿನ ಜಂಗಮಕೋಟೆ ಬಳಿ ಕೈಗಾರಿಕಾ ಪ್ರದೇಶ ನಿರ್ಮಾಣಕ್ಕಾಗಿ ೨…

24 hours ago

ಹೊಸರುಚಿ | ಹಲಸಿನ ಕಾಯಿ ಪೂರಿ

ಹಲಸಿನ ಕಾಯಿ ಪೂರಿಗೆ ಬೇಕಾಗುವ ಸಾಮಗ್ರಿಗಳು: ಹಲಸಿನ ಕಾಯಿ 1/2 ಕಪ್, ಗೋಧಿ ಹುಡಿ.1…

1 day ago

ಪಡಿತರ ಚೀಟಿದಾರರ ಇ-ಕೆವೈಸಿ ಮರುಸಂಗ್ರಹಿಸುವ ಕೊನೆಯ ಅವಕಾಶ

ಸರಕಾರದ ಸೂಚನೆಯಂತೆ ನ್ಯಾಯಬೆಲೆ ಅಂಗಡಿಗಳಲ್ಲಿ ಇ- ಕೆವೈಸಿ ಮಾಡಲಾದ ಪಡಿತರ ಚೀಟಿ ಫಲಾನುಭವಿಗಳನ್ನು…

1 day ago