MIRROR FOCUS

ವಿಜಯದಶಮಿಯಂದು ಕೊಲ್ಲೂರಿನ ಮೂಕಾಂಬಿಕಾ ದೇವಸ್ಥಾನದಲ್ಲಿ ಮಕ್ಕಳಿಗೆ ಅಕ್ಷರಾಭ್ಯಾಸದ ವಿಶೇಷತೆ |

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನದಲ್ಲಿ ವಿಜಯದಶಮಿಯಂದು ಬೆಳಿಗ್ಗೆ 4 ಗಂಟೆಗೆ ಬ್ರಾಹ್ಮೀ ಮುಹೂರ್ತದಲ್ಲಿ ಚಿಕ್ಕ್ಕಮಕ್ಕಳಿಗೆ ಅಕ್ಷರಾಭ್ಯಾಸ ನಡೆಯುತ್ತದೆ. ಸಾವಿರಾರು ಮಂದಿ ಈ ಕಾರ್ಯಕ್ರಮದಲ್ಲಿ ಭಾಗಿಯಾಗುತ್ತಾರೆ.ಕರ್ನಾಟಕ ಮಾತ್ರವಲ್ಲ ಕೇರಳ ಸೇರಿದಂತೆ ದೂರದ ಊರುಗಳಿಂದಲೂ ಈ ಕ್ಷೇತ್ರದಲ್ಲಿ ಅಕ್ಷರಾಭ್ಯಾಸವನ್ನು ಮಾಡಿಸಲಾಗುತ್ತದೆ.

Advertisement

ಲಕ್ಷ್ಮೀ, ಸರಸ್ವತಿ ಹಾಗೂ ಪಾರ್ವತಿಯ ಐಕ್ಯ ಸ್ವರೂಪಿಣಿಯಾಗಿ ನೆಲೆನಿಂತ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನದಲ್ಲಿ ವಿದ್ಯಾರಂಭ ಮಾಡಿಸಿದರೆ ಮಕ್ಕಳು ಭವಿಷ್ಯದಲ್ಲಿ ಉತ್ತಮವಾಗಿ ವಿದ್ಯೆ ಕಲಿಯುತ್ತಾರೆ ಎನ್ನುವ ನಂಬಿಕೆ ಭಕ್ತರಲ್ಲಿದೆ. ವಿಜಯದಶಮಿಯ ಶುಭ ಮುಹೂರ್ತದಲ್ಲಿ ಪುರೋಹಿತರ ಮಾರ್ಗದರ್ಶನದ ಮೇರೆಗೆ ಪಾಲಕರು ತಮ್ಮ ಮಕ್ಕಳ ಕೈ ಹಿಡಿದು ಅಕ್ಕಿತುಂಬಿದ ಬಟ್ಟಲಿನಲ್ಲಿ ಓಂಕಾರದಿಂದ ಮೊದಲ್ಗೊಂಡು ದೇವಿಯ ಸ್ತೋತ್ರ ಹಾಗೂ ವರ್ಣ ಮಾಲೆಗ ಮತ್ತು ಸಂಖ್ಯೆಗಳನ್ನು  ಬರೆಯಿಸಿ ಅಕ್ಷರಾಭ್ಯಾಸಕ್ಕೆ ಮುನ್ನುಡಿ ಬರೆದರು.

ನಂತರ ಪೋಷಕರು ತಮ್ಮ ಮಕ್ಕಳ ನಾಲಗೆಯ ಮೇಲೆ ಉಂಗುರದಿಂದ ಓಂಕಾರವನ್ನು ಬರೆದು ಶ್ರೀದೇವಿಯ ಆಶೀರ್ವಾದವನ್ನು ಬೇಡಿದರು.  ಬಳಿಕ ದೇವಸ್ಥಾನದ ಮುಂಬಾಗದಲ್ಲಿರುವ ಧ್ವಜಕಟ್ಟೆಯಲ್ಲಿ ದೇವಿಗೆ ಪ್ರಾರ್ಥನೆ ಸಲ್ಲಿಸುವ ಮೂಲಕ ವಿದ್ಯಾರಂಭದ ವಿಧಿವಿಧಾನಗಳು ಸಾಂಗವಾಗಿ ಮುಗಿದವು.  ರಾಜ್ಯ ಹಾಗೂ ನೆರೆಯ ಕೇರಳ ಹಾಗೂ ತಮಿಳುನಾಡು ರಾಜ್ಯದ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ದೇವಿಯ ದರ್ಶನ ಪಡೆದು ಪುನೀತರಾದರು.

On Vijayadashami, children at Kollur Sri Mookambika Temple in Bynduru Taluk of Udupi District participate in the ritual of Aksharabhyas. Thousands of people, including those from distant places like Kerala, attend this program. This event promotes literacy not only within Karnataka but also across borders.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ನಕಲಿ, ಕಳಪೆ ಗುಣಮಟ್ಟದ ರಸಗೊಬ್ಬರ ಪೂರೈಕೆ | ಕಠಿಣ ಕ್ರಮಕ್ಕೆ  ರಾಜ್ಯ ಸರ್ಕಾರಕ್ಕೆ ಕೇಂದ್ರದಿಂದ ನಿರ್ದೇಶನ

ನಕಲಿ ಮತ್ತು ಕಳಪೆ ಗುಣಮಟ್ಟದ ರಸಗೊಬ್ಬರಗಳ ಪೂರೈಕೆ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ…

6 hours ago

ಮಂಡ್ಯದಲ್ಲಿ  ಸ್ವಸಹಾಯ ಸಂಘದ ಮಹಿಳೆಯರಿಗೆ ಮೇಕೆ, ಕುರಿ, ಕೋಳಿ ಸಾಕಾಣಿಕೆ ಅವಕಾಶ

ಸಹಾಯ ಸಂಘದ ಮಹಿಳೆಯರಿಗೆ ಮೇಕೆ, ಕುರಿ, ಕೋಳಿ ಸಾಕಾಣಿಕೆಯಂತಹ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಲು ಅವಕಾಶವಿದೆ…

6 hours ago

ಇಂಧನ ಆಮದು ದೇಶಗಳ ಗುಂಪು ವಿಸ್ತರಿಸಿದ ಭಾರತ – 2 ಲಕ್ಷ ಚ.ಕಿ.ಮೀ. ಪ್ರದೇಶದಲ್ಲಿ ಹೈಡ್ರೋಕಾರ್ಬನ್ ಪರಿಶೋಧನೆ

ವಿಶ್ವದ ಹಲವು ಭಾಗಗಳಲ್ಲಿನ ಭೌಗೋಳಿಕ ರಾಜಕೀಯ ಪರಿಸ್ಥಿತಿಗಳ ಹೊರತಾಗಿಯೂ ಭಾರತವು ಇಂಧನ ಲಭ್ಯತೆ,…

6 hours ago

ಮುಳ್ಳಯ್ಯನಗಿರಿಗೆ 600 ವಾಹನಗಳಿಗೆ ಪ್ರವೇಶ | ವಾಹನಗಳ ದಟ್ಟಣೆ ನಿಯಂತ್ರಿಸಲು ಕ್ರಮ

ಚಿಕ್ಕಮಗಳೂರು ಜಿಲ್ಲೆಯ ಮುಳ್ಳಯ್ಯನಗಿರಿ ಭಾಗದಲ್ಲಿ ವಾಹನಗಳ ದಟ್ಟಣೆ ನಿಯಂತ್ರಿಸಲು ಜಿಲ್ಲಾಡಳಿತ ವಾಹನಗಳಿಗೆ ಎರಡು…

6 hours ago

ಯಾದಗಿರಿಯಲ್ಲಿ ಹೆಸರು ಬೆಳೆಗೆ ಹಳದಿ ನಂಜಾಣು ರೋಗ ಬಾಧೆ

ಯಾದಗಿರಿಯಲ್ಲಿ ಹೆಸರು ಬೆಳೆಗೆ ಹಳದಿ ನಂಜಾಣು ರೋಗದ ಭಾದೆ ಕಾಣಿಸಿಕೊಂಡಿದ್ದು, ಇದರ ತಡೆಗೆ…

7 hours ago

ಕರಾವಳಿ ಸೇರಿದಂತೆ ರಾಜ್ಯದ ಹಲವೆಡೆ ಧಾರಾಕಾರ ಮಳೆ | ಮಳೆಗೆ ಎಲ್ಲೆಲ್ಲಿ ಏನೇನಾಯ್ತು…? |

ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ ವ್ಯಾಪಕ ಮಳೆಯಾಗಿದೆ. ದಕ್ಷಿಣಕನ್ನಡ ಜಿಲ್ಲೆಯ ಮುಲ್ಕಿಯಲ್ಲಿ 30…

7 hours ago