Advertisement
MIRROR FOCUS

ವಿಜಯದಶಮಿಯಂದು ಕೊಲ್ಲೂರಿನ ಮೂಕಾಂಬಿಕಾ ದೇವಸ್ಥಾನದಲ್ಲಿ ಮಕ್ಕಳಿಗೆ ಅಕ್ಷರಾಭ್ಯಾಸದ ವಿಶೇಷತೆ |

Share

ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನದಲ್ಲಿ ವಿಜಯದಶಮಿಯಂದು ಬೆಳಿಗ್ಗೆ 4 ಗಂಟೆಗೆ ಬ್ರಾಹ್ಮೀ ಮುಹೂರ್ತದಲ್ಲಿ ಚಿಕ್ಕ್ಕಮಕ್ಕಳಿಗೆ ಅಕ್ಷರಾಭ್ಯಾಸ ನಡೆಯುತ್ತದೆ. ಸಾವಿರಾರು ಮಂದಿ ಈ ಕಾರ್ಯಕ್ರಮದಲ್ಲಿ ಭಾಗಿಯಾಗುತ್ತಾರೆ.ಕರ್ನಾಟಕ ಮಾತ್ರವಲ್ಲ ಕೇರಳ ಸೇರಿದಂತೆ ದೂರದ ಊರುಗಳಿಂದಲೂ ಈ ಕ್ಷೇತ್ರದಲ್ಲಿ ಅಕ್ಷರಾಭ್ಯಾಸವನ್ನು ಮಾಡಿಸಲಾಗುತ್ತದೆ.

ಲಕ್ಷ್ಮೀ, ಸರಸ್ವತಿ ಹಾಗೂ ಪಾರ್ವತಿಯ ಐಕ್ಯ ಸ್ವರೂಪಿಣಿಯಾಗಿ ನೆಲೆನಿಂತ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನದಲ್ಲಿ ವಿದ್ಯಾರಂಭ ಮಾಡಿಸಿದರೆ ಮಕ್ಕಳು ಭವಿಷ್ಯದಲ್ಲಿ ಉತ್ತಮವಾಗಿ ವಿದ್ಯೆ ಕಲಿಯುತ್ತಾರೆ ಎನ್ನುವ ನಂಬಿಕೆ ಭಕ್ತರಲ್ಲಿದೆ. ವಿಜಯದಶಮಿಯ ಶುಭ ಮುಹೂರ್ತದಲ್ಲಿ ಪುರೋಹಿತರ ಮಾರ್ಗದರ್ಶನದ ಮೇರೆಗೆ ಪಾಲಕರು ತಮ್ಮ ಮಕ್ಕಳ ಕೈ ಹಿಡಿದು ಅಕ್ಕಿತುಂಬಿದ ಬಟ್ಟಲಿನಲ್ಲಿ ಓಂಕಾರದಿಂದ ಮೊದಲ್ಗೊಂಡು ದೇವಿಯ ಸ್ತೋತ್ರ ಹಾಗೂ ವರ್ಣ ಮಾಲೆಗ ಮತ್ತು ಸಂಖ್ಯೆಗಳನ್ನು  ಬರೆಯಿಸಿ ಅಕ್ಷರಾಭ್ಯಾಸಕ್ಕೆ ಮುನ್ನುಡಿ ಬರೆದರು.

ನಂತರ ಪೋಷಕರು ತಮ್ಮ ಮಕ್ಕಳ ನಾಲಗೆಯ ಮೇಲೆ ಉಂಗುರದಿಂದ ಓಂಕಾರವನ್ನು ಬರೆದು ಶ್ರೀದೇವಿಯ ಆಶೀರ್ವಾದವನ್ನು ಬೇಡಿದರು.  ಬಳಿಕ ದೇವಸ್ಥಾನದ ಮುಂಬಾಗದಲ್ಲಿರುವ ಧ್ವಜಕಟ್ಟೆಯಲ್ಲಿ ದೇವಿಗೆ ಪ್ರಾರ್ಥನೆ ಸಲ್ಲಿಸುವ ಮೂಲಕ ವಿದ್ಯಾರಂಭದ ವಿಧಿವಿಧಾನಗಳು ಸಾಂಗವಾಗಿ ಮುಗಿದವು.  ರಾಜ್ಯ ಹಾಗೂ ನೆರೆಯ ಕೇರಳ ಹಾಗೂ ತಮಿಳುನಾಡು ರಾಜ್ಯದ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ದೇವಿಯ ದರ್ಶನ ಪಡೆದು ಪುನೀತರಾದರು.

On Vijayadashami, children at Kollur Sri Mookambika Temple in Bynduru Taluk of Udupi District participate in the ritual of Aksharabhyas. Thousands of people, including those from distant places like Kerala, attend this program. This event promotes literacy not only within Karnataka but also across borders.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಅಡಿಕೆ ರೋಗ ನಿಯಂತ್ರಣಕ್ಕೆ ಕೇಂದ್ರದ ಬೆಂಬಲ – ಕ್ಯಾ. ಚೌಟಗೆ ಸಚಿವ ಶಿವರಾಜ್‌ ಸಿಂಗ್‌ ಚೌಹಾಣ್ ಭರವಸೆ

ಕರಾವಳಿ ಮತ್ತು ಮಲೆನಾಡಿನ ಅಡಿಕೆ ತೋಟಗಳಲ್ಲಿ ಕಾಣಿಸಿಕೊಳ್ಳುತ್ತಿರುವ ಎಲೆಚುಕ್ಕೆ, ಹಳದಿ ಎಲೆ ಹಾಗೂ…

4 hours ago

ಹವಾಮಾನ ವರದಿ | 23-08-2026 | ಆಗಸ್ಟ್ 25 ರವರೆಗೆ ಮಳೆ – ಕರಾವಳಿ-ಮಲೆನಾಡಿನಲ್ಲಿ ಉತ್ತಮ ಮಳೆ ಸಾಧ್ಯತೆ

ಕರ್ನಾಟಕದಲ್ಲಿ ಮುಂಗಾರು ಮತ್ತೆ ಚುರುಕಾಗಿದ್ದು, ಕರಾವಳಿ ಮತ್ತು ಮಲೆನಾಡಿನಲ್ಲಿ ಆಗಸ್ಟ್ 25ರವರೆಗೆ ಮಳೆ…

8 hours ago

ಅಳಿವಿನಂಚಿನಲ್ಲಿದ್ದ ಪೆರಿಯಾರ್ ಹಸುವಿಗೆ ರಾಷ್ಟ್ರೀಯ ತಳಿ ಮಾನ್ಯತೆ – ಕೇರಳದ ಎರಡನೇ ದೇಶಿ ಗೋತಳಿ

ಅಳಿವಿನಂಚಿನಲ್ಲಿದ್ದ ಕೇರಳದ ಪೆರಿಯಾರ್ ಕುಳ್ಳನ್ ಹಸುವಿಗೆ ಭಾರತೀಯ ಕೃಷಿ ಸಂಶೋಧನಾ ಮಂಡಳಿಯ ರಾಷ್ಟ್ರೀಯ…

9 hours ago

ಪಿಒಪಿ ಗಣಪತಿಗೆ ಬ್ರೇಕ್..? ಕರಾವಳಿಯ 90–95% ಪರಿಸರ ಸ್ನೇಹಿ ಮಾದರಿ ರಾಜ್ಯಕ್ಕೆ ಪಾಠ

ರಾಜ್ಯದ ಗ್ರಾಮೀಣ ಪ್ರದೇಶಗಳಲ್ಲಿ ಪರಿಸರ ಸ್ನೇಹಿ ಗಣಪತಿ ಮೂರ್ತಿಗಳನ್ನೇ ಪ್ರತಿಷ್ಠಾಪಿಸಿ ಗಣೇಶೋತ್ಸವ ಆಚರಿಸುವಂತೆ…

11 hours ago

ಪಶ್ಚಿಮ ಘಟ್ಟ ಸಂರಕ್ಷಣೆ ಹೆಸರಿನಲ್ಲಿ ಕೃಷಿಕರಿಗೆ ನಿರ್ಬಂಧ ಬೇಡ – ಕಸ್ತೂರಿ ರಂಗನ್ ವರದಿ ಸಂಪೂರ್ಣ ತಿರಸ್ಕರಿಸಲು ಆಗ್ರಹ

ಪಶ್ಚಿಮ ಘಟ್ಟ ಸಂರಕ್ಷಣೆಯ ಹೆಸರಿನಲ್ಲಿ ಕೃಷಿಕರ ಜೀವನೋಪಾಯಕ್ಕೆ ನಿರ್ಬಂಧ ಹೇರಬಾರದು, ಕಸ್ತೂರಿ ರಂಗನ್…

12 hours ago

ಮುಂಗಾರು ಬೇಗನೆ ವಿದಾಯ ಹೇಳುತ್ತಿದೆಯೇ..? ಸೆಪ್ಟೆಂಬರ್‌ನಲ್ಲಿ ಮಳೆ ಕಡಿಮೆಯಾಗುವ ಮುನ್ಸೂಚನೆ..?

ಸೆಪ್ಟೆಂಬರ್ 5–10ರ ನಂತರ ದೇಶದ ಹಲವು ಭಾಗಗಳಲ್ಲಿ ಮುಂಗಾರು ಮಳೆ ಗಣನೀಯವಾಗಿ ಕಡಿಮೆಯಾಗುವ…

1 day ago