#Chandrayana3| ಚಂದ್ರಯಾನ ಯಶಸ್ವಿಯ ನೆನಪಿಗಾಗಿ ಲ್ಯಾಂಡಿಂಗ್ ದಿನವನ್ನು ರಾಷ್ಟ್ರೀಯ ಬಾಹ್ಯಾಕಾಶ ದಿನವಾಗಿ ಆಚರಣೆ | ಕೇಂದ್ರ ಸಚಿವ ಸಂಪುಟ ನಿರ್ಧಾರ |

August 29, 2023
5:59 PM
ಚಂದ್ರಯಾನ್ ಯಶಸ್ಸಿನ ಹಿನ್ನೆಲೆಯಲ್ಲಿ ಆಗಸ್ಟ್ 23 ಅನ್ನು ‘ರಾಷ್ಟ್ರೀಯ ವಿಜ್ಞಾನ ದಿನ’ ಎಂದು ಆಚರಿಸಲು ನಿರ್ಧರಿಸಲಾಗಿದೆ.

ನಮ್ಮ ಹೆಮ್ಮೆಯ ಇಸ್ರೋ #ISRO ವಿಜ್ಞಾನಿಗಳ ತಂಡ ಭಾರತದ ಕನಸನ್ನು ನನಸು ಮಾಡಿದ್ದಾರೆ. ಚಂದ್ರಯಾನ -3 #Chandrayaan-3 ರ ಯಶಸ್ವಿ ಉಡಾವಣೆ ಇಡೀ ವಿಶ್ವವನ್ನೆ ಭಾರತದ ಕಡೆ ಬೆರಗುಗಣ್ಣಿನಿಂದ ನೋಡುವಂತೆ ಮಾಡಿದೆ. ಚಂದ್ರಯಾನ-3 ಮೂಲಕ ಭಾರತ ಮಹತ್ತರ ಸಾಧನೆಯನ್ನು ಮಾಡಿದೆ. ಇಸ್ರೋ ಸಂಸ್ಥೆಗೆ ನಾವು ಅಭಿನಂದನೆ ಸಲ್ಲಿಸುತ್ತೇವೆ. ವಿಜ್ಞಾನಿಗಳ ಈ ಸಾಧನೆ ಎಲ್ಲರಿಗೂ ಪ್ರೇರಣೆ ಆಗಿದೆ. ಪ್ರಧಾನಿ ನರೇಂದ್ರ ಮೋದಿ Narendra Modi ಅವರು ವಿಜ್ಞಾನಕ್ಕೆ ಹೆಚ್ಚಿನ ಪ್ರೋತ್ಸಾಹ ನೀಡಿದ್ದಾರೆ ಎಂದು  ಕೇಂದ್ರ ಸಚಿವ ಅನುರಾಗ್ ಠಾಕೂರ್ ಹೇಳಿದ್ದಾರೆ. ಚಂದ್ರನ ದಕ್ಷಿಣ ಧ್ರುವದಲ್ಲಿ ಚಂದ್ರಯಾನ 3 ಯಶಸ್ವಿಯಾಗಿ ಲ್ಯಾಂಡಿಂಗ್ ಮಾಡಿದ್ದನ್ನು ಗುರುತಿಸುವುದಕ್ಕಾಗಿ ಆಗಸ್ಟ್ 23 ನ್ನು ಕೇಂದ್ರ ಸಚಿವ ಸಂಪುಟ  ‘ರಾಷ್ಟ್ರೀಯ ಬಾಹ್ಯಾಕಾಶ ದಿನ’ #NationalSpaceDay ಎಂದು ಘೋಷಿಸಿದೆ.

ಚಂದ್ರಯಾನ-3 ಮಿಷನ್‌ಗಾಗಿ ಕೆಲಸ ಮಾಡಿದ ಇಸ್ರೋ ವಿಜ್ಞಾನಿಗಳ ಐತಿಹಾಸಿಕ ಯಶಸ್ಸನ್ನು ಸಚಿವ ಸಂಪುಟ ಶ್ಲಾಘಿಸುತ್ತದೆ. ಇದು ಜಾಗತಿಕ ವೇದಿಕೆಯಲ್ಲಿ ನಮ್ಮ ಶಕ್ತಿಯ ಸಂಕೇತವಾಗಿದೆ. ಸಚಿವ  ಸಂಪುಟವು ಆಗಸ್ಟ್ 23 ಅನ್ನು ‘ರಾಷ್ಟ್ರೀಯ ವಿಜ್ಞಾನ ದಿನ’ ಎಂದು ಆಚರಿಸುವ ಕ್ರಮವನ್ನು ಸ್ವಾಗತಿಸುತ್ತದೆ ಎಂದು ಕೇಂದ್ರ ಸಚಿವ ಅನುರಾಗ್ ಠಾಕೂರ್ ಕ್ಯಾಬಿನೆಟ್ ಸಭೆಯ ನಂತರ ನಡೆದ ಸುದ್ದಿಗೋಷ್ಠಿಯಲ್ಲಿ ಹೇಳಿದ್ದಾರೆ. ಆಗಸ್ಟ್ 26 ರಂದು ಬೆಂಗಳೂರಿನ ಇಸ್ರೋ ಕಮಾಂಡ್ ಸೆಂಟರ್‌ಗೆ ಭೇಟಿ ನೀಡಿದ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಈ ಘೋಷಣೆ ಮಾಡಿದ್ದರು.

ಇಂದಿನ ಯುಗದಲ್ಲಿ, ವಿಜ್ಞಾನ ಮತ್ತು ತಂತ್ರಜ್ಞಾನ ಕ್ಷೇತ್ರದಲ್ಲಿ ಮುಂದಿರುವ ದೇಶವು ಇತಿಹಾಸ ಸೃಷ್ಟಿಸುತ್ತದೆ. ನಮ್ಮ ಯುವ ಪೀಳಿಗೆಯನ್ನು ವಿಜ್ಞಾನ ಮತ್ತು ತಂತ್ರಜ್ಞಾನ ಮತ್ತು ಬಾಹ್ಯಾಕಾಶ ಕ್ಷೇತ್ರದಲ್ಲಿ ತೊಡಗಿಸಿಕೊಳ್ಳಲು ಉತ್ತೇಜಿಸಲು, ನಾವು  ನಮ್ಮ ಚಂದ್ರಯಾನ-3 ಲ್ಯಾಂಡರ್ ಚಂದ್ರನನ್ನು ಸ್ಪರ್ಶಿಸಿದ ದಿನವಾದ ಆಗಸ್ಟ್ 23ನ್ನು ರಾಷ್ಟ್ರೀಯ ಬಾಹ್ಯಾಕಾಶ ದಿನವನ್ನಾಗಿ ಆಚರಿಸಲಾಗುವುದು ಎಂದು ಪ್ರಧಾನಿ ಹೇಳಿದ್ದಾರೆ. ಇದನ್ನು ಕೇಂದ್ರ ಸಚಿವ ಸಂಪುಟ ಅನುಮೋದಿಸುತ್ತದೆ ಎಂದಿದ್ದಾರೆ ಠಾಕೂರ್.

Source: Digital Media

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಬೇಸಿಗೆಯಲ್ಲಿ ನಿಮ್ಮ ಕಿಡ್ನಿಯನ್ನು ಕಾಪಾಡಿ..! ಮೂತ್ರಪಿಂಡದ ಕಲ್ಲು ಸಮಸ್ಯೆ ಏಕೆ ಹೆಚ್ಚುತ್ತಿದೆ?
May 23, 2026
7:12 AM
by: ಡಾ.ಆದಿತ್ಯ ಭಟ್‌, ಚಣಿಲ, BHMS
ಮಳೆಗಾಲ ಆರಂಭ- ಜೂನ್‌ 1ರಿಂದ ರಸ್ತೆ, ಗುಡ್ಡ, ಮಣ್ಣು ಅಗೆತ ಕಾಮಗಾರಿಗೆ ನಿರ್ಬಂಧ – ನಗರಪಾಲಿಕೆ ಎಚ್ಚರಿಕೆ
May 23, 2026
6:45 AM
by: ಮಿರರ್‌ ಡೆಸ್ಕ್
ಅಸ್ಸಾಂನಲ್ಲಿ ಭಾರೀ ಅಕ್ರಮ ಅಡಿಕೆ ವಶ : ಡಿಆರ್‌ಐ ದಾಳಿ, 60 ಸಾವಿರ ಕೆಜಿ ವಿದೇಶಿ ಅಡಿಕೆ ಜಪ್ತಿ
May 22, 2026
8:17 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 22-05-2026 | ಕರ್ನಾಟಕದಲ್ಲಿ ಇನ್ನೂ ಎರಡು ದಿನ ಮಳೆ ಸಾಧ್ಯತೆ – ಮೇ 30ರ ಸುಮಾರಿಗೆ ಮುಂಗಾರು ಪ್ರವೇಶ ಸಾಧ್ಯತೆ
May 22, 2026
1:14 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror