MIRROR FOCUS

#Chandrayana3| ಚಂದ್ರಯಾನ ಯಶಸ್ವಿಯ ನೆನಪಿಗಾಗಿ ಲ್ಯಾಂಡಿಂಗ್ ದಿನವನ್ನು ರಾಷ್ಟ್ರೀಯ ಬಾಹ್ಯಾಕಾಶ ದಿನವಾಗಿ ಆಚರಣೆ | ಕೇಂದ್ರ ಸಚಿವ ಸಂಪುಟ ನಿರ್ಧಾರ |

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ನಮ್ಮ ಹೆಮ್ಮೆಯ ಇಸ್ರೋ #ISRO ವಿಜ್ಞಾನಿಗಳ ತಂಡ ಭಾರತದ ಕನಸನ್ನು ನನಸು ಮಾಡಿದ್ದಾರೆ. ಚಂದ್ರಯಾನ -3 #Chandrayaan-3 ರ ಯಶಸ್ವಿ ಉಡಾವಣೆ ಇಡೀ ವಿಶ್ವವನ್ನೆ ಭಾರತದ ಕಡೆ ಬೆರಗುಗಣ್ಣಿನಿಂದ ನೋಡುವಂತೆ ಮಾಡಿದೆ. ಚಂದ್ರಯಾನ-3 ಮೂಲಕ ಭಾರತ ಮಹತ್ತರ ಸಾಧನೆಯನ್ನು ಮಾಡಿದೆ. ಇಸ್ರೋ ಸಂಸ್ಥೆಗೆ ನಾವು ಅಭಿನಂದನೆ ಸಲ್ಲಿಸುತ್ತೇವೆ. ವಿಜ್ಞಾನಿಗಳ ಈ ಸಾಧನೆ ಎಲ್ಲರಿಗೂ ಪ್ರೇರಣೆ ಆಗಿದೆ. ಪ್ರಧಾನಿ ನರೇಂದ್ರ ಮೋದಿ Narendra Modi ಅವರು ವಿಜ್ಞಾನಕ್ಕೆ ಹೆಚ್ಚಿನ ಪ್ರೋತ್ಸಾಹ ನೀಡಿದ್ದಾರೆ ಎಂದು  ಕೇಂದ್ರ ಸಚಿವ ಅನುರಾಗ್ ಠಾಕೂರ್ ಹೇಳಿದ್ದಾರೆ. ಚಂದ್ರನ ದಕ್ಷಿಣ ಧ್ರುವದಲ್ಲಿ ಚಂದ್ರಯಾನ 3 ಯಶಸ್ವಿಯಾಗಿ ಲ್ಯಾಂಡಿಂಗ್ ಮಾಡಿದ್ದನ್ನು ಗುರುತಿಸುವುದಕ್ಕಾಗಿ ಆಗಸ್ಟ್ 23 ನ್ನು ಕೇಂದ್ರ ಸಚಿವ ಸಂಪುಟ  ‘ರಾಷ್ಟ್ರೀಯ ಬಾಹ್ಯಾಕಾಶ ದಿನ’ #NationalSpaceDay ಎಂದು ಘೋಷಿಸಿದೆ.

Advertisement
Advertisement

ಚಂದ್ರಯಾನ-3 ಮಿಷನ್‌ಗಾಗಿ ಕೆಲಸ ಮಾಡಿದ ಇಸ್ರೋ ವಿಜ್ಞಾನಿಗಳ ಐತಿಹಾಸಿಕ ಯಶಸ್ಸನ್ನು ಸಚಿವ ಸಂಪುಟ ಶ್ಲಾಘಿಸುತ್ತದೆ. ಇದು ಜಾಗತಿಕ ವೇದಿಕೆಯಲ್ಲಿ ನಮ್ಮ ಶಕ್ತಿಯ ಸಂಕೇತವಾಗಿದೆ. ಸಚಿವ  ಸಂಪುಟವು ಆಗಸ್ಟ್ 23 ಅನ್ನು ‘ರಾಷ್ಟ್ರೀಯ ವಿಜ್ಞಾನ ದಿನ’ ಎಂದು ಆಚರಿಸುವ ಕ್ರಮವನ್ನು ಸ್ವಾಗತಿಸುತ್ತದೆ ಎಂದು ಕೇಂದ್ರ ಸಚಿವ ಅನುರಾಗ್ ಠಾಕೂರ್ ಕ್ಯಾಬಿನೆಟ್ ಸಭೆಯ ನಂತರ ನಡೆದ ಸುದ್ದಿಗೋಷ್ಠಿಯಲ್ಲಿ ಹೇಳಿದ್ದಾರೆ. ಆಗಸ್ಟ್ 26 ರಂದು ಬೆಂಗಳೂರಿನ ಇಸ್ರೋ ಕಮಾಂಡ್ ಸೆಂಟರ್‌ಗೆ ಭೇಟಿ ನೀಡಿದ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಈ ಘೋಷಣೆ ಮಾಡಿದ್ದರು.

ಇಂದಿನ ಯುಗದಲ್ಲಿ, ವಿಜ್ಞಾನ ಮತ್ತು ತಂತ್ರಜ್ಞಾನ ಕ್ಷೇತ್ರದಲ್ಲಿ ಮುಂದಿರುವ ದೇಶವು ಇತಿಹಾಸ ಸೃಷ್ಟಿಸುತ್ತದೆ. ನಮ್ಮ ಯುವ ಪೀಳಿಗೆಯನ್ನು ವಿಜ್ಞಾನ ಮತ್ತು ತಂತ್ರಜ್ಞಾನ ಮತ್ತು ಬಾಹ್ಯಾಕಾಶ ಕ್ಷೇತ್ರದಲ್ಲಿ ತೊಡಗಿಸಿಕೊಳ್ಳಲು ಉತ್ತೇಜಿಸಲು, ನಾವು  ನಮ್ಮ ಚಂದ್ರಯಾನ-3 ಲ್ಯಾಂಡರ್ ಚಂದ್ರನನ್ನು ಸ್ಪರ್ಶಿಸಿದ ದಿನವಾದ ಆಗಸ್ಟ್ 23ನ್ನು ರಾಷ್ಟ್ರೀಯ ಬಾಹ್ಯಾಕಾಶ ದಿನವನ್ನಾಗಿ ಆಚರಿಸಲಾಗುವುದು ಎಂದು ಪ್ರಧಾನಿ ಹೇಳಿದ್ದಾರೆ. ಇದನ್ನು ಕೇಂದ್ರ ಸಚಿವ ಸಂಪುಟ ಅನುಮೋದಿಸುತ್ತದೆ ಎಂದಿದ್ದಾರೆ ಠಾಕೂರ್.

Source: Digital Media

Advertisement
Advertisement
/**/
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ನಿಮ್ಮ ಚಿತ್ರ – ನಮ್ಮ ಬೆಳಕು | ಅನಿರುದ್ಧ ಪಿ |

ಮಕ್ಕಳ ಉತ್ಸಾಹಕ್ಕೆ ಒಂದು ವೇದಿಕೆ. ಕಲೆಯ ಮೂಲಕ ಮಕ್ಕಳ ಮನಸ್ಸನ್ನು ಅರಳಿಸಲು ,…

10 hours ago

ನಿಮ್ಮ ಚಿತ್ರ – ನಮ್ಮ ಬೆಳಕು | ಅನಿರುದ್ಧ ಪಿ |

ಅನಿರುದ್ಧ ಪಿ, 7 ನೇ ತರಗತಿ, ಕುಮಾರಸ್ವಾಮಿ ವಿದ್ಯಾಲಯ, ಕುಕ್ಕೆ ಸುಬ್ರಹ್ಮಣ್ಯ |…

10 hours ago

ಗ್ರಾಮೀಣ ಭಾಗದ ದುರವಸ್ಥೆ ನೋಡಿ…! ನೀರಿನ ಪೈಪಿನ ಸಂಕಷ್ಟ ಜನತೆಗೆ..! ಇಲಾಖೆಗಳು ಎಲ್ಲಿದ್ದಾವೆ..?

ಇಲಾಖೆಗಳ ಬೇಜವಾಬ್ದಾರಿ ಕಾರಣದಿಂದ ಇಂದು ಗ್ರಾಮೀಣ ಭಾಗದ ಜನರು ಸಂಕಷ್ಟ ಪಡುವಂತಾಗಿದೆ. ಇಲಾಖೆಗಳು…

14 hours ago

ಬೆಂಗಳೂರು ಗ್ರಾಮಾಂತರ ಜಿಲ್ಲೆ | ಮತ್ಸ್ಯ ಸಂಪದ ಯೋಜನೆಗೆ ಅರ್ಜಿ ಆಹ್ವಾನ

ಮೀನುಗಾರಿಕೆ ಇಲಾಖೆ ವತಿಯಿಂದ ಮತ್ಸ್ಯ ಸಂಪದ ಯೋಜನೆಯಡಿ ಒಳನಾಡು ಮೀನುಗಾರಿಕೆಗೆ ಸಂಬಂಧಿಸಿದ ಯೋಜನೆಗಳಾದ…

15 hours ago

ಹಿಮಾಚಲ ಪ್ರದೇಶದಲ್ಲಿ12 ಗಂಟೆಗಳಿಂದ ಭಾರೀ ಮಳೆ | ರಾಜ್ಯದಲ್ಲಿ ರೆಡ್ ಅಲರ್ಟ್ |

ಹಿಮಾಚಲ ಪ್ರದೇಶದ ಹಲವಾರು ಭಾಗಗಳಲ್ಲಿ ಈಗಾಗಲೇ ಸುರಿದ ಮಳೆ ಹಾನಿಯನ್ನುಂಟು ಮಾಡಿದೆ. ಹೆಚ್ಚಿನ…

15 hours ago

ಬೈಂದೂರಿನಲ್ಲಿ ಗಮನಸೆಳೆದ ಹಲಸು ಹಾಗೂ ಕೃಷಿ ಮೇಳ | ಕೃಷಿಕ ಉದ್ಯಮಿಯಾದರೆ ಮಾತ್ರ ಕೃಷಿ ಉಳಿವು

ಕೃಷಿಕ ಉದ್ಯಮಿಯಾದರೆ ಮಾತ್ರ ಕೃಷಿ ಉಳಿಯಲು ಸಾಧ್ಯ,ರೈತರು ತಮ್ಮ ಉತ್ಪನ್ನಗಳನ್ನು ಮೌಲ್ಯವರ್ಧನೆ ಮಾಡಿಕೊಂಡು…

20 hours ago