Advertisement
MIRROR FOCUS

#Chandrayana3| ಚಂದ್ರಯಾನ ಯಶಸ್ವಿಯ ನೆನಪಿಗಾಗಿ ಲ್ಯಾಂಡಿಂಗ್ ದಿನವನ್ನು ರಾಷ್ಟ್ರೀಯ ಬಾಹ್ಯಾಕಾಶ ದಿನವಾಗಿ ಆಚರಣೆ | ಕೇಂದ್ರ ಸಚಿವ ಸಂಪುಟ ನಿರ್ಧಾರ |

Share

ನಮ್ಮ ಹೆಮ್ಮೆಯ ಇಸ್ರೋ #ISRO ವಿಜ್ಞಾನಿಗಳ ತಂಡ ಭಾರತದ ಕನಸನ್ನು ನನಸು ಮಾಡಿದ್ದಾರೆ. ಚಂದ್ರಯಾನ -3 #Chandrayaan-3 ರ ಯಶಸ್ವಿ ಉಡಾವಣೆ ಇಡೀ ವಿಶ್ವವನ್ನೆ ಭಾರತದ ಕಡೆ ಬೆರಗುಗಣ್ಣಿನಿಂದ ನೋಡುವಂತೆ ಮಾಡಿದೆ. ಚಂದ್ರಯಾನ-3 ಮೂಲಕ ಭಾರತ ಮಹತ್ತರ ಸಾಧನೆಯನ್ನು ಮಾಡಿದೆ. ಇಸ್ರೋ ಸಂಸ್ಥೆಗೆ ನಾವು ಅಭಿನಂದನೆ ಸಲ್ಲಿಸುತ್ತೇವೆ. ವಿಜ್ಞಾನಿಗಳ ಈ ಸಾಧನೆ ಎಲ್ಲರಿಗೂ ಪ್ರೇರಣೆ ಆಗಿದೆ. ಪ್ರಧಾನಿ ನರೇಂದ್ರ ಮೋದಿ Narendra Modi ಅವರು ವಿಜ್ಞಾನಕ್ಕೆ ಹೆಚ್ಚಿನ ಪ್ರೋತ್ಸಾಹ ನೀಡಿದ್ದಾರೆ ಎಂದು  ಕೇಂದ್ರ ಸಚಿವ ಅನುರಾಗ್ ಠಾಕೂರ್ ಹೇಳಿದ್ದಾರೆ. ಚಂದ್ರನ ದಕ್ಷಿಣ ಧ್ರುವದಲ್ಲಿ ಚಂದ್ರಯಾನ 3 ಯಶಸ್ವಿಯಾಗಿ ಲ್ಯಾಂಡಿಂಗ್ ಮಾಡಿದ್ದನ್ನು ಗುರುತಿಸುವುದಕ್ಕಾಗಿ ಆಗಸ್ಟ್ 23 ನ್ನು ಕೇಂದ್ರ ಸಚಿವ ಸಂಪುಟ  ‘ರಾಷ್ಟ್ರೀಯ ಬಾಹ್ಯಾಕಾಶ ದಿನ’ #NationalSpaceDay ಎಂದು ಘೋಷಿಸಿದೆ.

ಚಂದ್ರಯಾನ-3 ಮಿಷನ್‌ಗಾಗಿ ಕೆಲಸ ಮಾಡಿದ ಇಸ್ರೋ ವಿಜ್ಞಾನಿಗಳ ಐತಿಹಾಸಿಕ ಯಶಸ್ಸನ್ನು ಸಚಿವ ಸಂಪುಟ ಶ್ಲಾಘಿಸುತ್ತದೆ. ಇದು ಜಾಗತಿಕ ವೇದಿಕೆಯಲ್ಲಿ ನಮ್ಮ ಶಕ್ತಿಯ ಸಂಕೇತವಾಗಿದೆ. ಸಚಿವ  ಸಂಪುಟವು ಆಗಸ್ಟ್ 23 ಅನ್ನು ‘ರಾಷ್ಟ್ರೀಯ ವಿಜ್ಞಾನ ದಿನ’ ಎಂದು ಆಚರಿಸುವ ಕ್ರಮವನ್ನು ಸ್ವಾಗತಿಸುತ್ತದೆ ಎಂದು ಕೇಂದ್ರ ಸಚಿವ ಅನುರಾಗ್ ಠಾಕೂರ್ ಕ್ಯಾಬಿನೆಟ್ ಸಭೆಯ ನಂತರ ನಡೆದ ಸುದ್ದಿಗೋಷ್ಠಿಯಲ್ಲಿ ಹೇಳಿದ್ದಾರೆ. ಆಗಸ್ಟ್ 26 ರಂದು ಬೆಂಗಳೂರಿನ ಇಸ್ರೋ ಕಮಾಂಡ್ ಸೆಂಟರ್‌ಗೆ ಭೇಟಿ ನೀಡಿದ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಈ ಘೋಷಣೆ ಮಾಡಿದ್ದರು.

ಇಂದಿನ ಯುಗದಲ್ಲಿ, ವಿಜ್ಞಾನ ಮತ್ತು ತಂತ್ರಜ್ಞಾನ ಕ್ಷೇತ್ರದಲ್ಲಿ ಮುಂದಿರುವ ದೇಶವು ಇತಿಹಾಸ ಸೃಷ್ಟಿಸುತ್ತದೆ. ನಮ್ಮ ಯುವ ಪೀಳಿಗೆಯನ್ನು ವಿಜ್ಞಾನ ಮತ್ತು ತಂತ್ರಜ್ಞಾನ ಮತ್ತು ಬಾಹ್ಯಾಕಾಶ ಕ್ಷೇತ್ರದಲ್ಲಿ ತೊಡಗಿಸಿಕೊಳ್ಳಲು ಉತ್ತೇಜಿಸಲು, ನಾವು  ನಮ್ಮ ಚಂದ್ರಯಾನ-3 ಲ್ಯಾಂಡರ್ ಚಂದ್ರನನ್ನು ಸ್ಪರ್ಶಿಸಿದ ದಿನವಾದ ಆಗಸ್ಟ್ 23ನ್ನು ರಾಷ್ಟ್ರೀಯ ಬಾಹ್ಯಾಕಾಶ ದಿನವನ್ನಾಗಿ ಆಚರಿಸಲಾಗುವುದು ಎಂದು ಪ್ರಧಾನಿ ಹೇಳಿದ್ದಾರೆ. ಇದನ್ನು ಕೇಂದ್ರ ಸಚಿವ ಸಂಪುಟ ಅನುಮೋದಿಸುತ್ತದೆ ಎಂದಿದ್ದಾರೆ ಠಾಕೂರ್.

Source: Digital Media

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹವಾಮಾನ ವರದಿ | 29-07-2026 | ಆ.2 ರಿಂದ ಮಳೆಯ ಸ್ಥಿತಿ ಏನಾಗಬಹುದು..?

ಕರಾವಳಿ, ಮಲೆನಾಡು ಹಾಗೂ ಉತ್ತರ ಒಳನಾಡಿನಲ್ಲಿ ಇನ್ನೂ ಬಿಟ್ಟುಬಿಟ್ಟು ಮಳೆ ಮುಂದುವರಿಯಲಿದೆ. ಆದರೆ…

8 hours ago

ಆಸ್ಪತ್ರೆಗಳಲ್ಲಿ ಬಳಕೆಯಾಗದ ಔಷಧ ಮರುಬಳಕೆ – ಹಣವೂ ಉಳಿಯುತ್ತದೆ, ಪರಿಸರವೂ ಕಾಪಾಡುತ್ತದೆ..!

ಆಸ್ಪತ್ರೆಗಳಲ್ಲಿ ಬಳಕೆಯಾಗದೆ ಉಳಿಯುವ ಔಷಧಗಳನ್ನು ಸುರಕ್ಷಿತವಾಗಿ ಮರುಬಳಕೆ ಮಾಡಿದರೆ ಆರೋಗ್ಯ ಕ್ಷೇತ್ರದ ವೆಚ್ಚ…

15 hours ago

ಮಲೆನಾಡಿನಿಂದ ಬಯಲುನಾಡಿನತ್ತ ಅಡಿಕೆ ಬೆಳೆ ವಿಸ್ತರಣೆ : ರಾಣೆಬೆನ್ನೂರಿನಲ್ಲಿ ಹೆಚ್ಚಿದ ರೈತರ ಆಸಕ್ತಿ

ಹಾವೇರಿ ಜಿಲ್ಲೆಯ ರಾಣೆಬೆನ್ನೂರು ಭಾಗದಲ್ಲಿ ಅಡಿಕೆ ಬೆಳೆ ವೇಗವಾಗಿ ವಿಸ್ತರಿಸುತ್ತಿದ್ದು, ಉತ್ತಮ ಆದಾಯದ…

15 hours ago

ಕೊಂಬೆಯಲ್ಲ, ಕಾಂಡದಲ್ಲೇ ಗೊಂಚಲು ಗೊಂಚಲಾಗಿ ಹಣ್ಣು! ಪಶ್ಚಿಮ ಘಟ್ಟದ ಅಪರೂಪದ ‘ಕೋಳಿಜುಟ್ಟು’ ಹಣ್ಣಿನ ಕಥೆ

ಪಶ್ಚಿಮ ಘಟ್ಟದ ಅಪರೂಪದ ಕೋಳಿಜುಟ್ಟು ಕಾಡು ಹಣ್ಣು ಇದೀಗ ರೈತರ ತೋಟಗಳಲ್ಲೂ ಫಲ…

22 hours ago

ಕಾಡು ಹಣ್ಣು…. ಕೋಳಿ ಜುಟ್ಟು ಹಣ್ಣು…!

ಪಶ್ಚಿಮ ಘಟ್ಟದ ಅಪರೂಪದ ಕೋಳಿಜುಟ್ಟು ಹಣ್ಣು ಕಾಂಡದ ಮೇಲೆಯೇ ಗೊಂಚಲು ಗೊಂಚಲಾಗಿ ಬೆಳೆಯುವ…

24 hours ago

ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ; ಒಡಿಶಾದಲ್ಲಿ ಭಾರಿ ಮಳೆ, ಹಲವು ಜಿಲ್ಲೆಗಳಲ್ಲಿ ರೆಡ್ ಅಲರ್ಟ್

ಬಂಗಾಳ ಕೊಲ್ಲಿಯ ವಾಯುಭಾರ ಕುಸಿತದ ಪರಿಣಾಮ ಒಡಿಶಾದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ…

1 day ago