ಎಲ್ಲೆಲ್ಲೂ ಯುಗಾದಿ ಹಬ್ಬದ ಸಂಭ್ರಮ | ವರ್ಷದ ಆದಿ ಪರ್ವವಾದ ಯುಗಾದಿಯಂದು ಚಂದ್ರ ದರ್ಶನ | ಏನಿದರ ಮಹತ್ವ?

April 8, 2024
11:40 PM

ಹಿಂದೂ ಧರ್ಮದ (Hindu Religion) ಬಹುತೇಕ ಆಚರಣೆಗಳು ಪ್ರಕೃತಿಯೊಂದಿಗೆ ಸಂಬಂಧ ಹೊಂದಿವೆ. ಅದೇ ರೀತಿ ಯುಗಾದಿ ಹಬ್ಬ (Ugadi Festival) ಸಹ ಪ್ರಕೃತಿ ವಸಂತ ಕಾಲದ ಉತ್ತುಂಗದಲ್ಲಿದ್ದಾಗ ಆಚರಿಸುವ ವಿಶೇಷ ಹಬ್ಬವಾಗಿದೆ. ಈ ಸಮಯದಲ್ಲಿ ಪ್ರಕೃತಿಯೇ ಹಸಿರು, ಹೂವಿನ ತಳಿರು ತೋರಣ ಕಟ್ಟಿ ಸಂಭ್ರಮಿಸುತ್ತಿರುತ್ತದೆ. ಈ ಹಬ್ಬದಂದು ಸಂಜೆ ಚಂದ್ರನ (Moon) ದರ್ಶನಕ್ಕೆ ಸಹ ವಿಶೇಷ ಮಹತ್ವವಿದೆ.

ಗಣಪತಿ ತನ್ನ ವಾಹನ ಇಲಿಯನ್ನೇರಿ ಹೋಗುತ್ತಿದ್ದಾಗ ಆಯತಪ್ಪಿ ಬೀಳುತ್ತಾನೆ. ಇದನ್ನು ಕಂಡು ಆಕಾಶದಲ್ಲಿದ್ದ ಚಂದ್ರ ನಗುತ್ತಾನೆ. ಇದನ್ನು ನೋಡಿದ ಗಣೇಶ, ಚೌತಿಯ ದಿನ ಚಂದ್ರನನ್ನು ನೋಡಿದರೆ ಅಪವಾದ ಬರಲಿ ಎಂದು ಶಾಪ ನೀಡುತ್ತಾನೆ ಎಂಬುದು ಎಲ್ಲರಿಗೂ ಗೊತ್ತಿದೆ. ಈ ಶಾಪ ವಿಮೋಚನೆಗೆ ಯುಗಾದಿ ಚಂದ್ರನ ದರ್ಶನ ಮಾಡಬೇಕು ಎಂಬ ನಂಬಿಕೆ ಇದೆ.
ಚಂದ್ರ ಶುದ್ಧತೆ, ಬುದ್ಧಿವಂತಿಕೆಯ ಸಂಕೇತ : ಹಿಂದೂ ಧರ್ಮದ ಪ್ರಕಾರ, ಚಂದ್ರ ನವಗ್ರಹಗಳಲ್ಲಿ ಒಬ್ಬ, ಶುದ್ಧತೆ, ಬುದ್ಧಿವಂತಿಕೆ ಹಾಗೂ ಉತ್ತಮ ನಡವಳಿಕೆಯ ಸಂಕೇತವಾಗಿ ಆತನನ್ನು ಬಿಂಬಿಸಲಾಗುತ್ತದೆ. ಅಂತಹ ಚಂದ್ರನನ್ನು ವರ್ಷದ ಆದಿ ಪರ್ವವಾದ ಯುಗಾದಿಯಂದು ದರ್ಶನ ಪಡೆದರೆ, ಇಡೀ ವರ್ಷವೆಲ್ಲಾ ಸುಖ-ಸಂತೋಷದಿಂದ ಇರುತ್ತಾರೆ ಎಂಬ ನಂಬಿಕೆ ಇದೆ. ಇದೇ ನಂಬಿಕೆಯಿಂದ ಹಿಂದಿನಿಂದಲೂ ಯುಗಾದಿ ಚಂದ್ರನನ್ನು ನೋಡುವುದು ವಾಡಿಕೆಯಾಗಿದೆ. ಯುಗಾದಿಯ ಹಿಂದಿನ ದಿನ ಅಮಾವಾಸ್ಯೆಯಲ್ಲಿ ಬರುವುದರಿಂದ ಮರು ದಿನ ಚಂದ್ರನ ದರ್ಶನಕ್ಕೆ ಪುಣ್ಯ ಮಾಡಿರಬೇಕು

ಚಂದ್ರ ದರ್ಶನದಿಂದ ಮಳೆ-ಬೆಳೆ ಲೆಕ್ಕಾಚಾರ: ಯುಗಾದಿ ದಿನದಂದು ಕಾಣಿಸುವ ಚಂದ್ರನನ್ನು ಆಧರಿಸಿ ಹಿಂದೆ ಆ ವರ್ಷದ ಮಳೆ-ಬೆಳೆ, ರೋಗ-ರುಜಿನಗಳು, ಏಳು-ಬೀಳುಗಳ ಬಗ್ಗೆ ಚಿಂತನೆ ಮಾಡುತ್ತಿದ್ದರು. ಯುಗಾದಿಯಂದು ಚಂದ್ರನು ಅತ್ಯಂತ ಚಿಕ್ಕದಾಗಿ ಸಣ್ಣ ಗೆರೆಯ ರೀತಿಯಲ್ಲಿ ಕಾಣ ಸಿಗುತ್ತಾನೆ. ಇದನ್ನು ಆಧರಿಸಿ ವರ್ಷದ ಭವಿಷ್ಯವನ್ನು ನಿರ್ಧರಿಸುತ್ತಿದ್ದರು. ಅದಕ್ಕೆಂದೇ ಹೊಸ ವರ್ಷದ ಪಂಚಾಂಗವನ್ನು ಪಠಿಸಿ, ಅನಂತರ ಚಂದ್ರ ದರ್ಶನವನ್ನು ಮಾಡಲಾಗುತ್ತದೆ.

– ಅಂತರ್ಜಾಲ ಮಾಹಿತಿ

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಆಮದು ಕಳಪೆ ಅಡಿಕೆ ಮಿಶ್ರಣದ ಎಚ್ಚರಿಕೆ- ಬೆಳೆಗಾರರಿಗೆ ಕ್ಯಾಂಪ್ಕೊ ಮನವಿ
July 21, 2026
11:55 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 21-07-2026 | ಕರಾವಳಿ-ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಕೆ, ಭಾರೀ ಮಳೆ ಸಾಧ್ಯತೆ ಕಡಿಮೆ
July 21, 2026
4:32 PM
by: ಸಾಯಿಶೇಖರ್ ಕರಿಕಳ
ಅಡಿಕೆ ರೋಗ ಸಂಕಷ್ಟಕ್ಕೆ ಸಂಸತ್ತಿನಲ್ಲಿ ಧ್ವನಿ : ನಿಯಮ 377ರಡಿ ಕ್ಯಾ. ಬ್ರಿಜೇಶ್ ಚೌಟ ಒತ್ತಾಯ
July 20, 2026
10:59 PM
by: ದ ರೂರಲ್ ಮಿರರ್.ಕಾಂ
ದೇಶಾದ್ಯಂತ ಮುಂಗಾರು ಅಬ್ಬರ : ಹಲವು ರಾಜ್ಯಗಳಿಗೆ ಭಾರೀ ಮಳೆ ಎಚ್ಚರಿಕೆ, ಹಿಮಾಲಯ ತಪ್ಪಲಿನಲ್ಲಿ ರೆಡ್ ಅಲರ್ಟ್
July 20, 2026
10:18 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror