Advertisement
MIRROR FOCUS

ಎಲ್ಲೆಲ್ಲೂ ಯುಗಾದಿ ಹಬ್ಬದ ಸಂಭ್ರಮ | ವರ್ಷದ ಆದಿ ಪರ್ವವಾದ ಯುಗಾದಿಯಂದು ಚಂದ್ರ ದರ್ಶನ | ಏನಿದರ ಮಹತ್ವ?

Share

ಹಿಂದೂ ಧರ್ಮದ (Hindu Religion) ಬಹುತೇಕ ಆಚರಣೆಗಳು ಪ್ರಕೃತಿಯೊಂದಿಗೆ ಸಂಬಂಧ ಹೊಂದಿವೆ. ಅದೇ ರೀತಿ ಯುಗಾದಿ ಹಬ್ಬ (Ugadi Festival) ಸಹ ಪ್ರಕೃತಿ ವಸಂತ ಕಾಲದ ಉತ್ತುಂಗದಲ್ಲಿದ್ದಾಗ ಆಚರಿಸುವ ವಿಶೇಷ ಹಬ್ಬವಾಗಿದೆ. ಈ ಸಮಯದಲ್ಲಿ ಪ್ರಕೃತಿಯೇ ಹಸಿರು, ಹೂವಿನ ತಳಿರು ತೋರಣ ಕಟ್ಟಿ ಸಂಭ್ರಮಿಸುತ್ತಿರುತ್ತದೆ. ಈ ಹಬ್ಬದಂದು ಸಂಜೆ ಚಂದ್ರನ (Moon) ದರ್ಶನಕ್ಕೆ ಸಹ ವಿಶೇಷ ಮಹತ್ವವಿದೆ.

ಗಣಪತಿ ತನ್ನ ವಾಹನ ಇಲಿಯನ್ನೇರಿ ಹೋಗುತ್ತಿದ್ದಾಗ ಆಯತಪ್ಪಿ ಬೀಳುತ್ತಾನೆ. ಇದನ್ನು ಕಂಡು ಆಕಾಶದಲ್ಲಿದ್ದ ಚಂದ್ರ ನಗುತ್ತಾನೆ. ಇದನ್ನು ನೋಡಿದ ಗಣೇಶ, ಚೌತಿಯ ದಿನ ಚಂದ್ರನನ್ನು ನೋಡಿದರೆ ಅಪವಾದ ಬರಲಿ ಎಂದು ಶಾಪ ನೀಡುತ್ತಾನೆ ಎಂಬುದು ಎಲ್ಲರಿಗೂ ಗೊತ್ತಿದೆ. ಈ ಶಾಪ ವಿಮೋಚನೆಗೆ ಯುಗಾದಿ ಚಂದ್ರನ ದರ್ಶನ ಮಾಡಬೇಕು ಎಂಬ ನಂಬಿಕೆ ಇದೆ.
ಚಂದ್ರ ಶುದ್ಧತೆ, ಬುದ್ಧಿವಂತಿಕೆಯ ಸಂಕೇತ : ಹಿಂದೂ ಧರ್ಮದ ಪ್ರಕಾರ, ಚಂದ್ರ ನವಗ್ರಹಗಳಲ್ಲಿ ಒಬ್ಬ, ಶುದ್ಧತೆ, ಬುದ್ಧಿವಂತಿಕೆ ಹಾಗೂ ಉತ್ತಮ ನಡವಳಿಕೆಯ ಸಂಕೇತವಾಗಿ ಆತನನ್ನು ಬಿಂಬಿಸಲಾಗುತ್ತದೆ. ಅಂತಹ ಚಂದ್ರನನ್ನು ವರ್ಷದ ಆದಿ ಪರ್ವವಾದ ಯುಗಾದಿಯಂದು ದರ್ಶನ ಪಡೆದರೆ, ಇಡೀ ವರ್ಷವೆಲ್ಲಾ ಸುಖ-ಸಂತೋಷದಿಂದ ಇರುತ್ತಾರೆ ಎಂಬ ನಂಬಿಕೆ ಇದೆ. ಇದೇ ನಂಬಿಕೆಯಿಂದ ಹಿಂದಿನಿಂದಲೂ ಯುಗಾದಿ ಚಂದ್ರನನ್ನು ನೋಡುವುದು ವಾಡಿಕೆಯಾಗಿದೆ. ಯುಗಾದಿಯ ಹಿಂದಿನ ದಿನ ಅಮಾವಾಸ್ಯೆಯಲ್ಲಿ ಬರುವುದರಿಂದ ಮರು ದಿನ ಚಂದ್ರನ ದರ್ಶನಕ್ಕೆ ಪುಣ್ಯ ಮಾಡಿರಬೇಕು

ಚಂದ್ರ ದರ್ಶನದಿಂದ ಮಳೆ-ಬೆಳೆ ಲೆಕ್ಕಾಚಾರ: ಯುಗಾದಿ ದಿನದಂದು ಕಾಣಿಸುವ ಚಂದ್ರನನ್ನು ಆಧರಿಸಿ ಹಿಂದೆ ಆ ವರ್ಷದ ಮಳೆ-ಬೆಳೆ, ರೋಗ-ರುಜಿನಗಳು, ಏಳು-ಬೀಳುಗಳ ಬಗ್ಗೆ ಚಿಂತನೆ ಮಾಡುತ್ತಿದ್ದರು. ಯುಗಾದಿಯಂದು ಚಂದ್ರನು ಅತ್ಯಂತ ಚಿಕ್ಕದಾಗಿ ಸಣ್ಣ ಗೆರೆಯ ರೀತಿಯಲ್ಲಿ ಕಾಣ ಸಿಗುತ್ತಾನೆ. ಇದನ್ನು ಆಧರಿಸಿ ವರ್ಷದ ಭವಿಷ್ಯವನ್ನು ನಿರ್ಧರಿಸುತ್ತಿದ್ದರು. ಅದಕ್ಕೆಂದೇ ಹೊಸ ವರ್ಷದ ಪಂಚಾಂಗವನ್ನು ಪಠಿಸಿ, ಅನಂತರ ಚಂದ್ರ ದರ್ಶನವನ್ನು ಮಾಡಲಾಗುತ್ತದೆ.

– ಅಂತರ್ಜಾಲ ಮಾಹಿತಿ

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹವಾಮಾನ ವರದಿ | 05-03-2026 | ಕರ್ನಾಟಕದಲ್ಲಿ ಬಿಸಿಲಿನ ಅಬ್ಬರ ಶುರು..! ಇನ್ನು 10 ದಿನ ಮಳೆಯ ಲಕ್ಷಣ ಇಲ್ಲ

ಕರ್ನಾಟಕದಲ್ಲಿ ಮುಂದಿನ ಕೆಲವು ದಿನಗಳವರೆಗೆ ಒಣ ಹವಾಮಾನ ಮುಂದುವರಿಯುವ ಸಾಧ್ಯತೆ ಇದೆ. ಗುಜರಾತ್…

14 hours ago

ಅಡಿಕೆ ಮಾರುಕಟ್ಟೆ | ಕೆಲವು ಮಾರುಕಟ್ಟೆಗಳಲ್ಲಿ ಏರಿಕೆ, ಕೆಲವು ಸ್ಥಿರ – ಸಿಂಗಲ್‌ ಚೋಲ್‌ ಗೆ ಬೇಡಿಕೆ..! | ರಬ್ಬರ್ ದರದಲ್ಲಿ ಸ್ವಲ್ಪ ಕುಸಿತ

ಇಂದಿನ ಅಡಿಕೆ ಮಾರುಕಟ್ಟೆಯಲ್ಲಿ ಪಿಂಗಾರ, ಮಾಸ್‌, ಟಿಎಸ್‌ಎಸ್‌, ತುಮ್ಕೋಸ್‌, ಮ್ಯಾಮ್ಕೋಸ್ ಹಾಗೂ ಕ್ಯಾಂಪ್ಕೊ…

15 hours ago

ಕಾಡಾನೆ ನಿಯಂತ್ರಣಕ್ಕೆ ರಾಜ್ಯದ ಕ್ರಮ : ಎಲಿಫೆಂಟ್ ಟಾಸ್ಕ್ ಫೋರ್ಸ್ ರಚನೆ

ಕಾಡಾನೆ ಹಾವಳಿ ನಿಯಂತ್ರಣಕ್ಕಾಗಿ ಕರ್ನಾಟಕ ಸರ್ಕಾರ 28 ಸಿಬ್ಬಂದಿಯ ಎಲಿಫೆಂಟ್ ಟಾಸ್ಕ್ ಫೋರ್ಸ್…

16 hours ago

ಕಾಡಾನೆ ಹಾವಳಿ ತಡೆಗೆ ಸರ್ಕಾರದ ಕ್ರಮ : ಕೊಪ್ಪ ಅರಣ್ಯ ವಿಭಾಗಕ್ಕೆ ₹12.77 ಕೋಟಿ, ರೈಲ್ವೆ ಬ್ಯಾರಿಕೇಡ್ ಅಳವಡಿಕೆ

ಕೊಪ್ಪ ಅರಣ್ಯ ವಿಭಾಗದಲ್ಲಿ ಕಾಡಾನೆಗಳು ನಾಡಿಗೆ ಪ್ರವೇಶಿಸದಂತೆ ತಡೆಯಲು ರೈಲ್ವೆ ಬ್ಯಾರಿಕೇಡ್ ಅಳವಡಿಕೆಗೆ…

17 hours ago

ಭವಿಷ್ಯದ ಬಾಳೆ ಬೆಳೆ ಉಳಿಸುವ ಗುಟ್ಟು ಕಾಡು ಬಾಳೆ ಜಾತಿಯಲ್ಲಿ!

ಅರಣ್ಯದಲ್ಲಿ ಬೆಳೆಯುವ "ಸಿಕ್ಕಿಂ ಬಾಳೆ" ಜಾತಿಯಲ್ಲಿ ಹವಾಮಾನ ಬದಲಾವಣೆಯನ್ನು ತಾಳುವ ಜಿನೀಯ ಗುಣಗಳು…

1 day ago

ಕೃಷಿ ಮಾರುಕಟ್ಟೆ ವರದಿ | ಅಡಿಕೆ ಮಾರುಕಟ್ಟೆಯಲ್ಲಿ ಮಿಶ್ರ ಫಲ…!

ಕರ್ನಾಟಕದ ಪ್ರಮುಖ ಮಾರುಕಟ್ಟೆಗಳಲ್ಲಿ ಅಡಿಕೆ ಏರಿಳಿತ ಕಂಡುಬಂದಿದೆ. ಮಲೆನಾಡು ಮಾರುಕಟ್ಟೆಗಳಲ್ಲಿ ಸ್ವಲ್ಪ ಏರಿಕೆ…

2 days ago