Advertisement
MIRROR FOCUS

ಎಲ್ಲೆಲ್ಲೂ ಯುಗಾದಿ ಹಬ್ಬದ ಸಂಭ್ರಮ | ವರ್ಷದ ಆದಿ ಪರ್ವವಾದ ಯುಗಾದಿಯಂದು ಚಂದ್ರ ದರ್ಶನ | ಏನಿದರ ಮಹತ್ವ?

Share

ಹಿಂದೂ ಧರ್ಮದ (Hindu Religion) ಬಹುತೇಕ ಆಚರಣೆಗಳು ಪ್ರಕೃತಿಯೊಂದಿಗೆ ಸಂಬಂಧ ಹೊಂದಿವೆ. ಅದೇ ರೀತಿ ಯುಗಾದಿ ಹಬ್ಬ (Ugadi Festival) ಸಹ ಪ್ರಕೃತಿ ವಸಂತ ಕಾಲದ ಉತ್ತುಂಗದಲ್ಲಿದ್ದಾಗ ಆಚರಿಸುವ ವಿಶೇಷ ಹಬ್ಬವಾಗಿದೆ. ಈ ಸಮಯದಲ್ಲಿ ಪ್ರಕೃತಿಯೇ ಹಸಿರು, ಹೂವಿನ ತಳಿರು ತೋರಣ ಕಟ್ಟಿ ಸಂಭ್ರಮಿಸುತ್ತಿರುತ್ತದೆ. ಈ ಹಬ್ಬದಂದು ಸಂಜೆ ಚಂದ್ರನ (Moon) ದರ್ಶನಕ್ಕೆ ಸಹ ವಿಶೇಷ ಮಹತ್ವವಿದೆ.

Advertisement
ಗಣಪತಿ ತನ್ನ ವಾಹನ ಇಲಿಯನ್ನೇರಿ ಹೋಗುತ್ತಿದ್ದಾಗ ಆಯತಪ್ಪಿ ಬೀಳುತ್ತಾನೆ. ಇದನ್ನು ಕಂಡು ಆಕಾಶದಲ್ಲಿದ್ದ ಚಂದ್ರ ನಗುತ್ತಾನೆ. ಇದನ್ನು ನೋಡಿದ ಗಣೇಶ, ಚೌತಿಯ ದಿನ ಚಂದ್ರನನ್ನು ನೋಡಿದರೆ ಅಪವಾದ ಬರಲಿ ಎಂದು ಶಾಪ ನೀಡುತ್ತಾನೆ ಎಂಬುದು ಎಲ್ಲರಿಗೂ ಗೊತ್ತಿದೆ. ಈ ಶಾಪ ವಿಮೋಚನೆಗೆ ಯುಗಾದಿ ಚಂದ್ರನ ದರ್ಶನ ಮಾಡಬೇಕು ಎಂಬ ನಂಬಿಕೆ ಇದೆ.
ಚಂದ್ರ ಶುದ್ಧತೆ, ಬುದ್ಧಿವಂತಿಕೆಯ ಸಂಕೇತ : ಹಿಂದೂ ಧರ್ಮದ ಪ್ರಕಾರ, ಚಂದ್ರ ನವಗ್ರಹಗಳಲ್ಲಿ ಒಬ್ಬ, ಶುದ್ಧತೆ, ಬುದ್ಧಿವಂತಿಕೆ ಹಾಗೂ ಉತ್ತಮ ನಡವಳಿಕೆಯ ಸಂಕೇತವಾಗಿ ಆತನನ್ನು ಬಿಂಬಿಸಲಾಗುತ್ತದೆ. ಅಂತಹ ಚಂದ್ರನನ್ನು ವರ್ಷದ ಆದಿ ಪರ್ವವಾದ ಯುಗಾದಿಯಂದು ದರ್ಶನ ಪಡೆದರೆ, ಇಡೀ ವರ್ಷವೆಲ್ಲಾ ಸುಖ-ಸಂತೋಷದಿಂದ ಇರುತ್ತಾರೆ ಎಂಬ ನಂಬಿಕೆ ಇದೆ. ಇದೇ ನಂಬಿಕೆಯಿಂದ ಹಿಂದಿನಿಂದಲೂ ಯುಗಾದಿ ಚಂದ್ರನನ್ನು ನೋಡುವುದು ವಾಡಿಕೆಯಾಗಿದೆ. ಯುಗಾದಿಯ ಹಿಂದಿನ ದಿನ ಅಮಾವಾಸ್ಯೆಯಲ್ಲಿ ಬರುವುದರಿಂದ ಮರು ದಿನ ಚಂದ್ರನ ದರ್ಶನಕ್ಕೆ ಪುಣ್ಯ ಮಾಡಿರಬೇಕು

ಚಂದ್ರ ದರ್ಶನದಿಂದ ಮಳೆ-ಬೆಳೆ ಲೆಕ್ಕಾಚಾರ: ಯುಗಾದಿ ದಿನದಂದು ಕಾಣಿಸುವ ಚಂದ್ರನನ್ನು ಆಧರಿಸಿ ಹಿಂದೆ ಆ ವರ್ಷದ ಮಳೆ-ಬೆಳೆ, ರೋಗ-ರುಜಿನಗಳು, ಏಳು-ಬೀಳುಗಳ ಬಗ್ಗೆ ಚಿಂತನೆ ಮಾಡುತ್ತಿದ್ದರು. ಯುಗಾದಿಯಂದು ಚಂದ್ರನು ಅತ್ಯಂತ ಚಿಕ್ಕದಾಗಿ ಸಣ್ಣ ಗೆರೆಯ ರೀತಿಯಲ್ಲಿ ಕಾಣ ಸಿಗುತ್ತಾನೆ. ಇದನ್ನು ಆಧರಿಸಿ ವರ್ಷದ ಭವಿಷ್ಯವನ್ನು ನಿರ್ಧರಿಸುತ್ತಿದ್ದರು. ಅದಕ್ಕೆಂದೇ ಹೊಸ ವರ್ಷದ ಪಂಚಾಂಗವನ್ನು ಪಠಿಸಿ, ಅನಂತರ ಚಂದ್ರ ದರ್ಶನವನ್ನು ಮಾಡಲಾಗುತ್ತದೆ.

– ಅಂತರ್ಜಾಲ ಮಾಹಿತಿ

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ವಿದ್ಯುತ್ ದರ ಶಾಕ್..! ಸಣ್ಣ ಕೈಗಾರಿಕೆಗಳಿಗೆ ಭಾರೀ ಹೊರೆ – ಉಮಾ ರೆಡ್ಡಿ ಎಚ್ಚರಿಕೆ

ವಿದ್ಯುತ್ ದರ ಏರಿಕೆ ಮತ್ತು ಹಿಂಬದಿ ಬಿಲ್ಲಿಂಗ್ ಕ್ರಮದಿಂದ ಸಣ್ಣ ಮತ್ತು ಮಧ್ಯಮ…

6 hours ago

ಮುಳಬಾಗಿಲಿನಲ್ಲಿ ಹೋಟೆಲ್ ಮೇಲೆ ದಾಳಿ : 30 ಲೀಟರ್ ಹಳೆಯ ತುಪ್ಪ ಜಪ್ತಿ, ದಂಡ

ಮುಳಬಾಗಿಲಿನ ಹೋಟೆಲ್ ಮೇಲೆ ದಾಳಿ ನಡೆಸಿ 30 ಲೀಟರ್ ಅವಧಿ ಮೀರಿದ ತುಪ್ಪ…

6 hours ago

ರೈತರಿಗೆ ಗುಡ್ ನ್ಯೂಸ್..! ತೊಗರಿ ಖರೀದಿ ಅವಧಿ ಮೇ 15ರವರೆಗೆ ವಿಸ್ತರಣೆ

ತೊಗರಿ ಬೆಳೆಗಾರರ ಹಿತಕ್ಕಾಗಿ ಖರೀದಿ ಅವಧಿಯನ್ನು ಮೇ 15ರವರೆಗೆ ವಿಸ್ತರಿಸಲಾಗಿದೆ. ಇದರಿಂದ ರೈತರಿಗೆ…

6 hours ago

ವಿಜಯಪುರದಲ್ಲಿ ತಾಪಮಾನ ಹೆಚ್ಚಳ : ಜಿಲ್ಲಾಸ್ಪತ್ರೆಯಲ್ಲಿ 10 ಬೆಡ್ AC ವಾರ್ಡ್ ಸಿದ್ಧ

ವಿಜಯಪುರದಲ್ಲಿ ಬಿಸಿಲಿನ ತೀವ್ರತೆ ಹೆಚ್ಚಳ ಹಿನ್ನೆಲೆ ಜಿಲ್ಲಾಸ್ಪತ್ರೆಯಲ್ಲಿ 10 ಬೆಡ್ ವಿಶೇಷ ವಾರ್ಡ್…

6 hours ago

ಹೊಸರುಚಿ | ಗುಜ್ಜೆ ಮಂಚೂರಿ – ಕರಾವಳಿಯ ಸಾಂಪ್ರದಾಯಿಕ ರುಚಿಗೆ ಚೈನೀಸ್ ಟ್ವಿಸ್ಟ್

ಗುಜ್ಜೆ ಬಳಸಿ ತಯಾರಿಸುವ ಮಂಚೂರಿ ರುಚಿಕರ ಫ್ಯೂಷನ್ ತಿನಿಸಾಗಿದೆ. ಮನೆಯಲ್ಲಿ ಸುಲಭವಾಗಿ ಮಾಡುವ…

16 hours ago

ಕಾವೇರಿ ತೀರ ಅಪಾಯ ಎಚ್ಚರಿಕೆ: ಬಲಮುರಿ-ಎಡಮುರಿ ಪ್ರವಾಸಕ್ಕೆ ತಾತ್ಕಾಲಿಕ ನಿಷೇಧ

ಬಲಮುರಿ, ಎಡಮುರಿ ಕಾವೇರಿ ತೀರಗಳಿಗೆ ಪ್ರವಾಸಿಗರ ಪ್ರವೇಶವನ್ನು ತಾತ್ಕಾಲಿಕವಾಗಿ ನಿಷೇಧಿಸಲಾಗಿದೆ. ಮುಳುಗು ಪ್ರಕರಣಗಳು…

1 day ago