Advertisement
MIRROR FOCUS

ಎಲ್ಲೆಲ್ಲೂ ಯುಗಾದಿ ಹಬ್ಬದ ಸಂಭ್ರಮ | ವರ್ಷದ ಆದಿ ಪರ್ವವಾದ ಯುಗಾದಿಯಂದು ಚಂದ್ರ ದರ್ಶನ | ಏನಿದರ ಮಹತ್ವ?

Share

ಹಿಂದೂ ಧರ್ಮದ (Hindu Religion) ಬಹುತೇಕ ಆಚರಣೆಗಳು ಪ್ರಕೃತಿಯೊಂದಿಗೆ ಸಂಬಂಧ ಹೊಂದಿವೆ. ಅದೇ ರೀತಿ ಯುಗಾದಿ ಹಬ್ಬ (Ugadi Festival) ಸಹ ಪ್ರಕೃತಿ ವಸಂತ ಕಾಲದ ಉತ್ತುಂಗದಲ್ಲಿದ್ದಾಗ ಆಚರಿಸುವ ವಿಶೇಷ ಹಬ್ಬವಾಗಿದೆ. ಈ ಸಮಯದಲ್ಲಿ ಪ್ರಕೃತಿಯೇ ಹಸಿರು, ಹೂವಿನ ತಳಿರು ತೋರಣ ಕಟ್ಟಿ ಸಂಭ್ರಮಿಸುತ್ತಿರುತ್ತದೆ. ಈ ಹಬ್ಬದಂದು ಸಂಜೆ ಚಂದ್ರನ (Moon) ದರ್ಶನಕ್ಕೆ ಸಹ ವಿಶೇಷ ಮಹತ್ವವಿದೆ.

ಗಣಪತಿ ತನ್ನ ವಾಹನ ಇಲಿಯನ್ನೇರಿ ಹೋಗುತ್ತಿದ್ದಾಗ ಆಯತಪ್ಪಿ ಬೀಳುತ್ತಾನೆ. ಇದನ್ನು ಕಂಡು ಆಕಾಶದಲ್ಲಿದ್ದ ಚಂದ್ರ ನಗುತ್ತಾನೆ. ಇದನ್ನು ನೋಡಿದ ಗಣೇಶ, ಚೌತಿಯ ದಿನ ಚಂದ್ರನನ್ನು ನೋಡಿದರೆ ಅಪವಾದ ಬರಲಿ ಎಂದು ಶಾಪ ನೀಡುತ್ತಾನೆ ಎಂಬುದು ಎಲ್ಲರಿಗೂ ಗೊತ್ತಿದೆ. ಈ ಶಾಪ ವಿಮೋಚನೆಗೆ ಯುಗಾದಿ ಚಂದ್ರನ ದರ್ಶನ ಮಾಡಬೇಕು ಎಂಬ ನಂಬಿಕೆ ಇದೆ.
ಚಂದ್ರ ಶುದ್ಧತೆ, ಬುದ್ಧಿವಂತಿಕೆಯ ಸಂಕೇತ : ಹಿಂದೂ ಧರ್ಮದ ಪ್ರಕಾರ, ಚಂದ್ರ ನವಗ್ರಹಗಳಲ್ಲಿ ಒಬ್ಬ, ಶುದ್ಧತೆ, ಬುದ್ಧಿವಂತಿಕೆ ಹಾಗೂ ಉತ್ತಮ ನಡವಳಿಕೆಯ ಸಂಕೇತವಾಗಿ ಆತನನ್ನು ಬಿಂಬಿಸಲಾಗುತ್ತದೆ. ಅಂತಹ ಚಂದ್ರನನ್ನು ವರ್ಷದ ಆದಿ ಪರ್ವವಾದ ಯುಗಾದಿಯಂದು ದರ್ಶನ ಪಡೆದರೆ, ಇಡೀ ವರ್ಷವೆಲ್ಲಾ ಸುಖ-ಸಂತೋಷದಿಂದ ಇರುತ್ತಾರೆ ಎಂಬ ನಂಬಿಕೆ ಇದೆ. ಇದೇ ನಂಬಿಕೆಯಿಂದ ಹಿಂದಿನಿಂದಲೂ ಯುಗಾದಿ ಚಂದ್ರನನ್ನು ನೋಡುವುದು ವಾಡಿಕೆಯಾಗಿದೆ. ಯುಗಾದಿಯ ಹಿಂದಿನ ದಿನ ಅಮಾವಾಸ್ಯೆಯಲ್ಲಿ ಬರುವುದರಿಂದ ಮರು ದಿನ ಚಂದ್ರನ ದರ್ಶನಕ್ಕೆ ಪುಣ್ಯ ಮಾಡಿರಬೇಕು

ಚಂದ್ರ ದರ್ಶನದಿಂದ ಮಳೆ-ಬೆಳೆ ಲೆಕ್ಕಾಚಾರ: ಯುಗಾದಿ ದಿನದಂದು ಕಾಣಿಸುವ ಚಂದ್ರನನ್ನು ಆಧರಿಸಿ ಹಿಂದೆ ಆ ವರ್ಷದ ಮಳೆ-ಬೆಳೆ, ರೋಗ-ರುಜಿನಗಳು, ಏಳು-ಬೀಳುಗಳ ಬಗ್ಗೆ ಚಿಂತನೆ ಮಾಡುತ್ತಿದ್ದರು. ಯುಗಾದಿಯಂದು ಚಂದ್ರನು ಅತ್ಯಂತ ಚಿಕ್ಕದಾಗಿ ಸಣ್ಣ ಗೆರೆಯ ರೀತಿಯಲ್ಲಿ ಕಾಣ ಸಿಗುತ್ತಾನೆ. ಇದನ್ನು ಆಧರಿಸಿ ವರ್ಷದ ಭವಿಷ್ಯವನ್ನು ನಿರ್ಧರಿಸುತ್ತಿದ್ದರು. ಅದಕ್ಕೆಂದೇ ಹೊಸ ವರ್ಷದ ಪಂಚಾಂಗವನ್ನು ಪಠಿಸಿ, ಅನಂತರ ಚಂದ್ರ ದರ್ಶನವನ್ನು ಮಾಡಲಾಗುತ್ತದೆ.

– ಅಂತರ್ಜಾಲ ಮಾಹಿತಿ

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹವಾಮಾನ ವರದಿ | 18-08-2026 | ಕರಾವಳಿಯಲ್ಲಿ ಮುಂದಿನ 10 ದಿನ ಮಳೆ ಸಾಧ್ಯತೆ – ಮಲೆನಾಡಿನಲ್ಲಿ ಆಗಸ್ಟ್ 21 ರಿಂದ ಇಳಿಕೆ

ಕರಾವಳಿ ಕರ್ನಾಟಕದಲ್ಲಿ ಮುಂದಿನ 10 ದಿನಗಳವರೆಗೂ ಮೋಡ–ಮಳೆಯ ವಾತಾವರಣ ಮುಂದುವರಿಯುವ ಸಾಧ್ಯತೆ ಇದೆ.…

4 hours ago

ಬೆಳಗಾವಿಯಲ್ಲಿ ಮಳೆ ಕೊರತೆಯ ಆತಂಕ ದೂರ ; ಜುಲೈ ಮಳೆಯಿಂದ ಕೃಷಿ ಚಟುವಟಿಕೆಗೆ ಚುರುಕು

ಜೂನ್‌ನಲ್ಲಿ ಶೇ.29ರಷ್ಟು ಮಳೆ ಕೊರತೆ ಎದುರಿಸಿದ್ದ ಬೆಳಗಾವಿ ಜಿಲ್ಲೆಯಲ್ಲಿ ಜುಲೈನಲ್ಲಿ ಉತ್ತಮ ಮಳೆಯಾಗಿದ್ದು,…

13 hours ago

‘ಉಚಿತ ಎಲೆಕ್ಟ್ರಿಕ್ ಸ್ಟೌ ವಿತರಣೆ’ ನಕಲಿ ಸುದ್ದಿ : ಸಾರ್ವಜನಿಕರಿಗೆ ಕೇಂದ್ರ ಸಚಿವರಿಂದ ಮಾಹಿತಿ

ಕೇಂದ್ರ ಸರ್ಕಾರದಿಂದ ಉಚಿತ ಎಲೆಕ್ಟ್ರಿಕ್ ಸ್ಟೌ ವಿತರಣೆ ಎಂಬ ಹೆಸರಿನಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ…

13 hours ago

ಆಗಸ್ಟ್ 28 ರೊಳಗೆ ಸರ್ಕಾರಿ ಶಾಲಾ ಮಕ್ಕಳಿಗೆ ಶೂ, ಸಾಕ್ಸ್ ವಿತರಣೆ: ಸಚಿವ ಮಧು ಬಂಗಾರಪ್ಪ

ಸರ್ಕಾರಿ ಶಾಲೆಗಳಲ್ಲಿ ಬಾಕಿ ಇರುವ ಮಕ್ಕಳಿಗೆ ಆಗಸ್ಟ್ 28ರೊಳಗೆ ಶೂ ಮತ್ತು ಸಾಕ್ಸ್…

13 hours ago

ರಾಜ್ಯಾದ್ಯಂತ ಆಹಾರ ಸುರಕ್ಷತೆ ಪರಿಶೀಲನೆಗೆ ದಾಳಿ ಮುಂದುವರಿಕೆ : ಉಲ್ಲಂಘನೆಗೆ ಕ್ಷಮೆಯಿಲ್ಲ ಎಂದ ಆರೋಗ್ಯ ಸಚಿವ

ರಾಜ್ಯಾದ್ಯಂತ ಪಿಜಿ, ಹಾಸ್ಟೆಲ್‌, ಕ್ಯಾಟರಿಂಗ್ ಹಾಗೂ ಹೋಟೆಲ್‌ಗಳಲ್ಲಿ ಆಹಾರ ಸುರಕ್ಷತಾ ತಪಾಸಣೆ ಮುಂದುವರಿಯಲಿದೆ…

13 hours ago

ಗೋ ಸಂರಕ್ಷಣೆಗೆ Gen Z – 10 ಸಾವಿರ ‘ಗೋ ಮಿತ್ರ’ರಿಗೆ ತರಬೇತಿ – ಗ್ರಾಮೀಣ ಆರ್ಥಿಕತೆಗೆ ಹೊಸ ಮಾದರಿಯೇ?

ಉತ್ತರ ಪ್ರದೇಶದಲ್ಲಿ ಸುಮಾರು 10 ಸಾವಿರ ‘ಗೋ ಮಿತ್ರ’ರಿಗೆ ತರಬೇತಿ ನೀಡಿ ಗೋ…

24 hours ago