ಜನಗಣತಿ 2026 – ಏಪ್ರಿಲ್ 1ರಿಂದ ಸ್ವಯಂ-ಎಣಿಕೆ ಆರಂಭ – ಸಹಕರಿಸಲು ಜಿಲ್ಲಾಧಿಕಾರಿ ಕರೆ

April 2, 2026
6:37 AM
ಏಪ್ರಿಲ್ 1ರಿಂದ 15ರವರೆಗೆ ಸ್ವಯಂ-ಎಣಿಕೆ ಆರಂಭವಾಗಿದೆ. ಏಪ್ರಿಲ್ 16ರಿಂದ ಮನೆಗಳಿಗೆ ಭೇಟಿ ನೀಡಿ ಮಾಹಿತಿ ಪರಿಶೀಲನೆ ನಡೆಯಲಿದೆ.

ರಾಜ್ಯದಲ್ಲಿ ಜನಗಣತಿ ಪ್ರಕ್ರಿಯೆಯ ಭಾಗವಾಗಿ ಮನೆಗಳ ಗಣತಿ ಕಾರ್ಯವು ಏಪ್ರಿಲ್ 16ರಿಂದ ಮೇ 15ರವರೆಗೆ 30 ದಿನಗಳ ಕಾಲ ನಡೆಯಲಿದೆ. ಇದರ ಪೂರ್ವಭಾವಿಯಾಗಿ, ಸಾರ್ವಜನಿಕರು ತಮ್ಮ ಮಾಹಿತಿಯನ್ನು ಸ್ವತಃ ನಮೂದಿಸಲು “ಸ್ವಯಂ-ಎಣಿಕೆ” ವ್ಯವಸ್ಥೆ ಅನ್ನು ಏಪ್ರಿಲ್ 1ರಿಂದ ಏಪ್ರಿಲ್ 15ರವರೆಗೆ ಜಾರಿಗೊಳಿಸಲಾಗಿದೆ. ಸ್ವಯಂ-ಎಣಿಕೆ ಆಯ್ಕೆಯನ್ನು ಬಳಸಿಕೊಂಡು ಜನಗಣತಿಗೆ ಸಹಕರಿಸಬೇಕು ಎಂದು ದ ಕ ಜಿಲ್ಲಾಧಿಕಾರಿಗಳು ಜಿಲ್ಲಾಧಿಕಾರಿಗಳು ಸಾರ್ವಜನಿಕರಿಗೆ ಮನವಿ ಮಾಡಿದ್ದಾರೆ.

ಮನೆ ಪಟ್ಟಿ ಮತ್ತು ಮನೆ ಗಣತಿ (HLO) ಸಮಯದಲ್ಲಿ ವಸತಿ ಸ್ಥಿತಿ, ಲಭ್ಯವಿರುವ ಸೌಲಭ್ಯಗಳು ಹಾಗೂ ಕುಟುಂಬದ ಆಸ್ತಿಗಳ ಕುರಿತ ಮಾಹಿತಿಯನ್ನು ಸಂಗ್ರಹಿಸಲಾಗುತ್ತದೆ.

ಜನಗಣತಿ ಪ್ರಕ್ರಿಯೆಯನ್ನು ಸುಗಮಗೊಳಿಸಲು ಸರ್ಕಾರವು ಆನ್‌ಲೈನ್ ಪೋರ್ಟಲ್‌ನ್ನು ಪರಿಚಯಿಸಿದ್ದು, ಸಾರ್ವಜನಿಕರು ಸುಲಭವಾಗಿ ತಮ್ಮ ಮಾಹಿತಿಯನ್ನು ದಾಖಲಿಸಬಹುದಾಗಿದೆ.

ಸ್ವಯಂ-ಎಣಿಕೆ ಮಾಡುವ ವಿಧಾನ :

  1. ಮೊಬೈಲ್ ಸಂಖ್ಯೆಯೊಂದಿಗೆ ಲಾಗಿನ್ ಆಗಿ
  2. ನಿಮ್ಮ ಸ್ಥಳವನ್ನು ಆಯ್ಕೆಮಾಡಿ
  3. ನಕ್ಷೆಯಲ್ಲಿ ನಿಮ್ಮ ಮನೆಯನ್ನು ಗುರುತಿಸಿ
  4. ಅಗತ್ಯ ಮಾಹಿತಿಯನ್ನು ಭರ್ತಿ ಮಾಡಿ
  5. ಸಲ್ಲಿಸಿ ಮತ್ತು SE ID ಪಡೆಯಿರಿ
  6. ಈ ಐಡಿಯನ್ನು ಸುರಕ್ಷಿತವಾಗಿ ಉಳಿಸಿಕೊಳ್ಳಿ

ಮನೆಗಳಿಗೆ ಭೇಟಿ :  ಏಪ್ರಿಲ್ 16ರಿಂದ ಮೇ 15ರವರೆಗೆ ಗಣತಿದಾರರು ಮನೆಗಳಿಗೆ ಭೇಟಿ ನೀಡಿ, ನೀಡಿದ ಮಾಹಿತಿಯನ್ನು ಪರಿಶೀಲಿಸುತ್ತಾರೆ.
SE ID ಇದ್ದಲ್ಲಿ ಡೇಟಾವನ್ನು ತಕ್ಷಣ ಮೌಲ್ಯೀಕರಿಸಲಾಗುತ್ತದೆ. ಇಲ್ಲದಿದ್ದರೆ ಸ್ಥಳದಲ್ಲೇ ಮಾಹಿತಿ ಸಂಗ್ರಹಿಸಲಾಗುತ್ತದೆ.

ಹೆಚ್ಚಿನ ಮಾಹಿತಿ : ತಾಲ್ಲೂಕು ಕಚೇರಿ, ನಗರ ಸ್ಥಳೀಯ ಸಂಸ್ಥೆ, ಗ್ರಾಮ ಪಂಚಾಯತ್ ಅಥವಾ ಜಿಲ್ಲಾಧಿಕಾರಿ ಕಚೇರಿಯನ್ನು ಸಂಪರ್ಕಿಸಬಹುದು. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ

The Census 2026 process has begun in Karnataka with a self-enumeration option available from April 1 to April 15. House listing and verification will take place from April 16 to May 15. Authorities have urged the public to actively participate using the online system.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಕಸದ ತೆಂಗಿನಕಾಯಿಯೂ ಈಗ ರೈತರ ಸಂಪತ್ತು…! ಭುವನೇಶ್ವರದ ‘ವೇಸ್ಟ್ ಟು ವೆಲ್ತ್’ ಮಾದರಿ
July 14, 2026
7:12 AM
by: ದ ರೂರಲ್ ಮಿರರ್.ಕಾಂ
ರಾಜ್ಯದಲ್ಲಿ ಬರದ ಛಾಯೆ- ರೈತರಿಗೆ ಎಕರೆಗೆ ₹50 ಸಾವಿರ ಪರಿಹಾರ ನೀಡಿ
July 14, 2026
7:01 AM
by: ದ ರೂರಲ್ ಮಿರರ್.ಕಾಂ
ಹುಲಿ-ಚಿರತೆ ಹಾವಳಿ ನಿಯಂತ್ರಣಕ್ಕೆ ಆಗ್ರಹ – ಚಾಮರಾಜನಗರದಲ್ಲಿ ಅರಣ್ಯ ಇಲಾಖೆ ವಿರುದ್ಧ ರೈತ ಸಂಘಟನೆಗಳ ಪ್ರತಿಭಟನೆ
July 14, 2026
6:53 AM
by: ದ ರೂರಲ್ ಮಿರರ್.ಕಾಂ
ಮುಂಗಾರು ದುರ್ಬಲ: ಯಾದಗಿರಿ ರೈತರಿಗೆ ಕೃಷಿ ಇಲಾಖೆಯ ಮಹತ್ವದ ಸಲಹೆ
July 14, 2026
6:47 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror