ಸುದ್ದಿಗಳು

ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಶತಮಾನೋತ್ಸವ | ಹೊಸ ಕಾರ್ಯಕರ್ತರ ಸೇರ್ಪಡೆಗೆ ಸಂಪರ್ಕ ಅಭಿಯಾನ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಶತಮಾನೋತ್ಸವ ಹಿನ್ನಲೆ ವರ್ಷವಿಡೀ ಹಲವು ರಚನಾತ್ಮಕ ಕಾರ್ಯಕ್ರಮಗಳ ಆಯೋಜನೆಗೆ ಸಿದ್ದತೆ ನಡೆದಿದ್ದು, ಬರುವ ವಿಜಯದಶಮಿಯಂದು ಸಂಘದ ಸಂಸ್ಥಾಪನಾ ದಿನಾಚರಣೆ ನಡೆಯಲಿದೆ ಎಂದು ಆರ್‌ಎಸ್‌ಎಸ್‌ನ ಸರಕಾರ್ಯವಾಹ ದತ್ತಾತ್ರೇಯ ಹೊಸಬಾಳೆ ತಿಳಿಸಿದರು.………ಮುಂದೆ ಓದಿ……..

Advertisement

ಬೆಂಗಳೂರಿನಲ್ಲಿ ಆಯೋಜಿಸಲಾಗಿರುವ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಅಖಿಲ ಭಾರತ ಪ್ರತಿನಿಧಿ ಸಭಾ ಕುರಿತು ಸುದ್ದಿಗೋಷ್ಟಿಯಲ್ಲಿ ಅವರು, ಹೊಸ ಕಾರ್ಯಕರ್ತರ ಸೇರ್ಪಡೆಗೆ ಸಂಪರ್ಕ ಅಭಿಯಾನ, ಸಾಮಾಜಿಕ ಸೇವಾ ಕಾರ್ಯಗಳ ಹೆಚ್ಚಳಕ್ಕೆ ವಿವಿಧ ಕಾರ್ಯಯೋಜನೆಗಳನ್ನು ರೂಪಿಸಲಾಗಿದೆ ಎಂದು ತಿಳಿಸಿದರು.  ಸಾಮಾಜಿಕ-ಸದ್ಭಾವದ ಆಲೋಚನೆಗಳ ಜೊತೆಗೆ ಸಾಮಾಜಿಕ ಸಾಮರಸ್ಯದ ಚಿಂತನೆಗಳನ್ನೂ ಸಂಘವು ಗೌರವಿಸುತ್ತದೆ. ಶತಮಾನೋತ್ಸವ ವರ್ಷದಲ್ಲಿ ದೇಶದ ಕೋಟ್ಯಂತರ ಮನೆ ಮನೆಗಳಿಗೆ ಔಟ್‌ರಿಚ್‌ ಕಾರ್ಯಕ್ರಮ ನಡೆಯಲಿದೆ. ಬೆಂಗಳೂರಿನಲ್ಲಿ 4 ವರ್ಷಗಳ ಬಳಿಕ ನಡೆದ ಅಖಿಲ ಭಾರತ ಪ್ರತಿನಿಧಿ ಸಭಾ ಹಲವು ಮುಖ್ಯ ವಿಷಯಗಳ ಬಗ್ಗೆ ಚರ್ಚಿಸಿ ಮಹತ್ವದ ನಿರ್ಧಾರಗಳನ್ನು ಕೈಗೊಂಡಿದೆ ಎಂದರು. ರಾಷ್ಟ್ರ ನಿರ್ಮಾಣ ಮತ್ತು ವ್ಯಕ್ತಿತ್ವ ನಿರ್ಮಾಣಕ್ಕೆ ಹೆಚ್ಚಿನ ಆದ್ಯತೆ ನೀಡಲಾಗಿದ್ದು, 1 ಲಕ್ಷ ಸ್ಥಳಗಳಲ್ಲಿ ವಿಜಯದಶಮಿ ಉತ್ಸವ, ಪಂಚ ಪರಿವರ್ತನಾ ಕಾರ್ಯಕ್ರಮ, ಹಿಂದು ಸಮ್ಮೇಳನಗಳನ್ನು ಗ್ರಾಮ ಹಾಗೂ ಪಟ್ಟಣ ಪ್ರದೇಶಗಳಲ್ಲಿ ಆಯೋಜನೆ, ನಗರಗಳಲ್ಲಿ ಸಾಮಾಜಿಕ ಸದ್ಭಾವನಾ ಬೈಠಕ್‌ಗಳು ಹಾಗೂ ಜಿಲ್ಲಾ ಕೇಂದ್ರಗಳಲ್ಲಿ ರಾಷ್ಟ್ರೀಯ ವಿಚಾರಧಾರೆ, ಹಿಂದುತ್ವ ಸಿದ್ದಾಂತ, ಒಂದು ರಾಷ್ಟ್ರ-ಒಂದು ಸಂಸ್ಕೃತಿ ಬಗ್ಗೆ ಚರ್ಚೆ ಹಾಗೂ ವಿಮರ್ಶೆಗಳನ್ನು ಆಯೋಜಿಸಲು ತೀರ್ಮಾನಿಸಲಾಗಿದೆ ಎಂದರು. ರಾಷ್ಟ್ರಹಿತದ ಚಿಂತನೆಗಳನ್ನು ಜಾಗೃತಗೊಳಿಸುವ ಸಂಕಲ್ಪದೊಂದಿಗೆ ಗ್ರಾಮೀಣ ಪ್ರದೇಶಗಳಲ್ಲಿ ಸಂಘದ ಚಟುವಟಿಕೆಗಳನ್ನು ವಿಸ್ತಾರಗೊಳಿಸಲು ಕ್ರಮ ಕೈಗೊಳ್ಳಲಾಗಿದೆ. ಕಾಲೇಜು ವಿದ್ಯಾರ್ಥಿಗಳೊಂದಿಗೆ ಸಂವಾದ ಕಾರ್ಯಕ್ರಮ ಆಯೋಜನೆ ಮಾಡಿ ಹೊಸ ತಲೆಮಾರಿನ ಮಕ್ಕಳನ್ನು ದೇಶಸೇವೆಗೆ ಅಣಿಗೊಳಿಸಲು ಮಹತ್ವದ ಸಂಕಲ್ಪ ಕೈಗೊಳ್ಳಲಾಗಿದ ಎಂದು ತಿಳಿಸಿದರು.

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹವಾಮಾನ ವರದಿ | 26-03-2025 | ಇಂದೂ ಕೆಲವು ಕಡೆ ಗಾಳಿ ಸಹಿತ ಮಳೆ ಸಾಧ್ಯತೆ | ಮಾ.27 ರಿಂದ ಮಳೆ ಕಡಿಮೆ |

ಕಾಸರಗೋಡು, ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳ ಬಹುತೇಕ ಭಾಗಗಳಲ್ಲಿ…

12 hours ago

ಸಾಕೆನ್ನಿಸದಷ್ಟು ಎತ್ತರದ ಅಪೇಕ್ಷೆಗಳು, ಜೀವನವೇ ಸಾಕೆನ್ನಿಸುವ ಸಾವುಗಳು

ವಾಸ್ತವಿಕವಾಗಿ ಈ ಪ್ರಪಂಚದಲ್ಲಿ ಯಾರೂ ಏಕಾಂಗಿಗಳಲ್ಲ. ನಮಗೆ ಯಾವುದೇ ಸ್ವಂತ ನಿರ್ಧಾರಗಳ ಸಮರ್ಪಕತೆಯನ್ನು…

16 hours ago

ಕಂದಕ ಬದು ನಿರ್ಮಾಣ ಕುರಿತ ಕಾರ್ಯಾಗಾರ | ಬದು ನಿರ್ಮಾಣದಿಂದ ಮಳೆ ನೀರು ಪೋಲು ನಿಯಂತ್ರಣ |

ಜಲಸಂರಕ್ಷಣೆಗೆ ವಿವಿಧ ಪ್ರಯತ್ನ ನಡೆಯುತ್ತಿದೆ. ತಾಪಮಾನ ಏರಿಕೆಯಾದಂತೆ ಅಂತರ್ಜಲಮಟ್ಟವೂ ಕುಸಿತವಾಗುತ್ತಿದೆ. ಇಂತಹ ಸಮಯದಲ್ಲಿ…

18 hours ago

ಹಾಸನ ಜಿಲ್ಲೆಯಲ್ಲಿ ಆತಂಕ ಸೃಷ್ಟಿಸಿದ್ದ ಕಾಡಾನೆ | ಸೆರೆ ಹಿಡಿದ ಇಲಾಖೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅಭಿನಂದನೆ

ಹಾಸನ ಜಿಲ್ಲೆಯ ಅರಣ್ಯದಂಚಿನ ಗ್ರಾಮಗಳ ಜನರಿಗೆ ಆತಂಕ ಸೃಷ್ಟಿಸಿದ್ದ ಎರಡು ಕಾಡಾನೆಗಳನ್ನು ಸೆರೆಹಿಡಿದು…

18 hours ago

ಕೋಲಾರ ತಾಲೂಕಿನ ಅಬ್ಬಣಿ ಕಿರು ಅರಣ್ಯ ಪ್ರದೇಶದಲ್ಲಿ ಒತ್ತುವರಿ ತೆರವು  ಕಾರ್ಯಾಚರಣೆ

ಕೋಲಾರ ತಾಲೂಕಿನ ಅಬ್ಬಣಿ ಕಿರು ಅರಣ್ಯ ಪ್ರದೇಶದಲ್ಲಿ ಅರಣ್ಯ ಇಲಾಖೆ ಒತ್ತುವರಿ ತೆರವು …

18 hours ago

ಕೃಷಿ ವಿಜ್ಞಾನ ಕೇಂದ್ರದಲ್ಲಿ  ಸಸ್ಯ ತಳಿಗಳ ಸಂರಕ್ಷಣೆ ತರಬೇತಿ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ಹಾಡೋನಹಳ್ಳಿಯ ಜಿಲ್ಲಾ ಕೃಷಿ ವಿಜ್ಞಾನ ಕೇಂದ್ರದಲ್ಲಿ…

19 hours ago