Advertisement
ಸುದ್ದಿಗಳು

ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಶತಮಾನೋತ್ಸವ | ಹೊಸ ಕಾರ್ಯಕರ್ತರ ಸೇರ್ಪಡೆಗೆ ಸಂಪರ್ಕ ಅಭಿಯಾನ

Share

ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಶತಮಾನೋತ್ಸವ ಹಿನ್ನಲೆ ವರ್ಷವಿಡೀ ಹಲವು ರಚನಾತ್ಮಕ ಕಾರ್ಯಕ್ರಮಗಳ ಆಯೋಜನೆಗೆ ಸಿದ್ದತೆ ನಡೆದಿದ್ದು, ಬರುವ ವಿಜಯದಶಮಿಯಂದು ಸಂಘದ ಸಂಸ್ಥಾಪನಾ ದಿನಾಚರಣೆ ನಡೆಯಲಿದೆ ಎಂದು ಆರ್‌ಎಸ್‌ಎಸ್‌ನ ಸರಕಾರ್ಯವಾಹ ದತ್ತಾತ್ರೇಯ ಹೊಸಬಾಳೆ ತಿಳಿಸಿದರು.………ಮುಂದೆ ಓದಿ……..

ಬೆಂಗಳೂರಿನಲ್ಲಿ ಆಯೋಜಿಸಲಾಗಿರುವ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಅಖಿಲ ಭಾರತ ಪ್ರತಿನಿಧಿ ಸಭಾ ಕುರಿತು ಸುದ್ದಿಗೋಷ್ಟಿಯಲ್ಲಿ ಅವರು, ಹೊಸ ಕಾರ್ಯಕರ್ತರ ಸೇರ್ಪಡೆಗೆ ಸಂಪರ್ಕ ಅಭಿಯಾನ, ಸಾಮಾಜಿಕ ಸೇವಾ ಕಾರ್ಯಗಳ ಹೆಚ್ಚಳಕ್ಕೆ ವಿವಿಧ ಕಾರ್ಯಯೋಜನೆಗಳನ್ನು ರೂಪಿಸಲಾಗಿದೆ ಎಂದು ತಿಳಿಸಿದರು.  ಸಾಮಾಜಿಕ-ಸದ್ಭಾವದ ಆಲೋಚನೆಗಳ ಜೊತೆಗೆ ಸಾಮಾಜಿಕ ಸಾಮರಸ್ಯದ ಚಿಂತನೆಗಳನ್ನೂ ಸಂಘವು ಗೌರವಿಸುತ್ತದೆ. ಶತಮಾನೋತ್ಸವ ವರ್ಷದಲ್ಲಿ ದೇಶದ ಕೋಟ್ಯಂತರ ಮನೆ ಮನೆಗಳಿಗೆ ಔಟ್‌ರಿಚ್‌ ಕಾರ್ಯಕ್ರಮ ನಡೆಯಲಿದೆ. ಬೆಂಗಳೂರಿನಲ್ಲಿ 4 ವರ್ಷಗಳ ಬಳಿಕ ನಡೆದ ಅಖಿಲ ಭಾರತ ಪ್ರತಿನಿಧಿ ಸಭಾ ಹಲವು ಮುಖ್ಯ ವಿಷಯಗಳ ಬಗ್ಗೆ ಚರ್ಚಿಸಿ ಮಹತ್ವದ ನಿರ್ಧಾರಗಳನ್ನು ಕೈಗೊಂಡಿದೆ ಎಂದರು. ರಾಷ್ಟ್ರ ನಿರ್ಮಾಣ ಮತ್ತು ವ್ಯಕ್ತಿತ್ವ ನಿರ್ಮಾಣಕ್ಕೆ ಹೆಚ್ಚಿನ ಆದ್ಯತೆ ನೀಡಲಾಗಿದ್ದು, 1 ಲಕ್ಷ ಸ್ಥಳಗಳಲ್ಲಿ ವಿಜಯದಶಮಿ ಉತ್ಸವ, ಪಂಚ ಪರಿವರ್ತನಾ ಕಾರ್ಯಕ್ರಮ, ಹಿಂದು ಸಮ್ಮೇಳನಗಳನ್ನು ಗ್ರಾಮ ಹಾಗೂ ಪಟ್ಟಣ ಪ್ರದೇಶಗಳಲ್ಲಿ ಆಯೋಜನೆ, ನಗರಗಳಲ್ಲಿ ಸಾಮಾಜಿಕ ಸದ್ಭಾವನಾ ಬೈಠಕ್‌ಗಳು ಹಾಗೂ ಜಿಲ್ಲಾ ಕೇಂದ್ರಗಳಲ್ಲಿ ರಾಷ್ಟ್ರೀಯ ವಿಚಾರಧಾರೆ, ಹಿಂದುತ್ವ ಸಿದ್ದಾಂತ, ಒಂದು ರಾಷ್ಟ್ರ-ಒಂದು ಸಂಸ್ಕೃತಿ ಬಗ್ಗೆ ಚರ್ಚೆ ಹಾಗೂ ವಿಮರ್ಶೆಗಳನ್ನು ಆಯೋಜಿಸಲು ತೀರ್ಮಾನಿಸಲಾಗಿದೆ ಎಂದರು. ರಾಷ್ಟ್ರಹಿತದ ಚಿಂತನೆಗಳನ್ನು ಜಾಗೃತಗೊಳಿಸುವ ಸಂಕಲ್ಪದೊಂದಿಗೆ ಗ್ರಾಮೀಣ ಪ್ರದೇಶಗಳಲ್ಲಿ ಸಂಘದ ಚಟುವಟಿಕೆಗಳನ್ನು ವಿಸ್ತಾರಗೊಳಿಸಲು ಕ್ರಮ ಕೈಗೊಳ್ಳಲಾಗಿದೆ. ಕಾಲೇಜು ವಿದ್ಯಾರ್ಥಿಗಳೊಂದಿಗೆ ಸಂವಾದ ಕಾರ್ಯಕ್ರಮ ಆಯೋಜನೆ ಮಾಡಿ ಹೊಸ ತಲೆಮಾರಿನ ಮಕ್ಕಳನ್ನು ದೇಶಸೇವೆಗೆ ಅಣಿಗೊಳಿಸಲು ಮಹತ್ವದ ಸಂಕಲ್ಪ ಕೈಗೊಳ್ಳಲಾಗಿದ ಎಂದು ತಿಳಿಸಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಸಮಯ ತಪ್ಪಿ ತಿಂದ ಆಹಾರವೇ ವಿಷವಾಗಬಹುದು – ರಾಘವೇಶ್ವರ ಶ್ರೀ

ಹಿತವಾದ ಆಹಾರವನ್ನು ಮಿತ ಪ್ರಮಾಣದಲ್ಲಿ ಮತ್ತು ಸಕಾಲದಲ್ಲಿ ಸೇವಿಸುವುದು ಆರೋಗ್ಯಕರ ಜೀವನದ ಮೂಲಮಂತ್ರ…

7 hours ago

ಭಾರೀ ಮಳೆ ಹಿನ್ನೆಲೆ – ಆಗಸ್ಟ್‌ 1ರಂದು ದಕ್ಷಿಣ ಕನ್ನಡದಲ್ಲಿ ಶಾಲೆ-ಕಾಲೇಜುಗಳಿಗೆ ರಜೆ

ಭಾರಿ ಮಳೆಯ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಅಂಗನವಾಡಿ, ಶಾಲೆ, ಪಿಯು, ಐಟಿಐ…

8 hours ago

ಹವಾಮಾನ ವರದಿ | 31-06-2026 | ಆಗಸ್ಟ್ 4ಕ್ಕೆ ಇನ್ನೊಂದು ವಾಯುಭಾರ ಕುಸಿತ ಸಾಧ್ಯತೆ..?

ಕರಾವಳಿ ಹಾಗೂ ಮಲೆನಾಡಿನಲ್ಲಿ ಆಗಸ್ಟ್ 1ರವರೆಗೆ ಬಿಟ್ಟು ಬಿಟ್ಟು ಉತ್ತಮ ಮಳೆಯ ಮುನ್ಸೂಚನೆ…

10 hours ago

ಸುಳ್ಯ ಸುತ್ತಮುತ್ತ ಭಾರೀ ಮಳೆ – ಬಾಳುಗೋಡಿನಲ್ಲಿ ಈ ವರ್ಷದ ಮೊದಲ ಸೇತುವೆ ಮುಳುಗಡೆ, ಹೊಳೆ-ತೋಡುಗಳು ತುಂಬಿ ಹರಿವು

ಸುಳ್ಯ ತಾಲೂಕಿನ ಬಾಳುಗೋಡು, ಹರಿಹರ, ಬಳ್ಪ, ಗುತ್ತಿಗಾರು, ಸುಬ್ರಹ್ಮಣ್ಯ ಸೇರಿದಂತೆ ಹಲವು ಗ್ರಾಮಗಳಲ್ಲಿ…

10 hours ago

ಹಲಸಿನ ಬೀಜದಿಂದ ಖನಿಜಾಂಶ ಸಮೃದ್ಧ ಆಹಾರ – ಬಾಂಗ್ಲಾದೇಶದ ವಿಜ್ಞಾನಿಗಳಿಂದ ಹೊಸ ತಂತ್ರಜ್ಞಾನಕ್ಕೆ ಪೇಟೆಂಟ್

ಬಾಂಗ್ಲಾದೇಶದ ವಿಜ್ಞಾನಿಗಳು ಹಲಸಿನ ಬೀಜದಿಂದ ಖನಿಜಾಂಶ ಸಮೃದ್ಧ ಆಹಾರ ತಯಾರಿಸುವ ತಂತ್ರಜ್ಞಾನಕ್ಕೆ ಪೇಟೆಂಟ್…

18 hours ago