Advertisement
MIRROR FOCUS

ಭತ್ತ, ರಾಗಿ, ಹತ್ತಿ ಸೇರಿ 22 ಬೆಳೆಗಳಿಗೆ ಕನಿಷ್ಟ ಬೆಂಬಲ ಬೆಲೆ ಹೆಚ್ಚಿಸಿದ ಕೇಂದ್ರ ಸರ್ಕಾರ |

Share

ಎನ್‌ಡಿಎ ಸರ್ಕಾರ(NDA Govt) ರೈತರ(Farmers) ಹಿತ ಕಾಪಾಡಲು ಮೊದಲ ಹೆಜ್ಜೆಯನ್ನಿಟ್ಟಿದೆ. ರೈತರಿಗೆ ಕೇಂದ್ರ ಸರ್ಕಾರ(Central Govt) ಸಿಹಿ ಸುದ್ದಿ ನೀಡಿದೆ. ಮೋದಿ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ಭತ್ತ(Paddy), ರಾಗಿ(Ragi), ತೊಗರಿ(Dal) ಸೇರಿ 22 ಬೆಳೆಗಳಿಗೆ ಕನಿಷ್ಟ ಬೆಂಬಲ ಬೆಲೆಯನ್ನು(Minimum Support Price) ಹೆಚ್ಚಿಸಿದೆ. ಕಳೆದ ವರ್ಷಕ್ಕೆ ಹೋಲಿಕೆ ಮಾಡಿದರೆ ಶೇ.50 ರಷ್ಟು ಎಂಎಸ್‌ಪಿ ಹೆಚ್ಚಿಸಿದೆ.

ಭತ್ತದ ಮೇಲಿನ ಎಂಎಸ್‌ಪಿಯನ್ನು 143 ರೂಪಾಯಿ ಹೆಚ್ಚಿಸಿದ್ದು, ಭತ್ತದ ಕನಿಷ್ಠ ಬೆಲೆ ಈಗ 2,300 ರೂಪಾಯಿ ಆಗಿದೆ. ಅದೇ ರೀತಿ ರಾಗಿಗೆ 268 ರೂ., ಗೋಧಿ 150 ರೂ., ಮೆಕ್ಕೆ ಜೋಳ 128 ರೂ., ಜೋಳ 210 ರೂ., ಸಜ್ಜೆ 150 ರೂ., ತೊಗರಿ 400 ರೂ., ಹೆಸರುಬೇಳೆ 803 ರೂ., ಉದ್ದಿನ ಬೇಳೆ 350 ರೂ., ಕಡಲೆಕಾಯಿ 527 ರೂ., ಸೂರ್ಯಕಾಂತಿ 360 ರೂ., ಸೋಯಾಬೀನ್ 300 ರೂ., ಹತ್ತಿ 400 ರೂ., ಎಳ್ಳಿ 632 ರೂ., ಹುಚ್ಚೆಳ್ಳಿ 983 ರೂ. ಬೆಂಬಲ ಬೆಲೆಯನ್ನು ಕೇಂದ್ರ ಸರ್ಕಾರ ಘೋಷಿಸಿದೆ. ಇದರಿಂದ 2 ಲಕ್ಷ ರೈತರಿಗೆ ಲಾಭವಾಗಲಿದೆ.

ಸರ್ಕಾರಕ್ಕೆ 35,000 ಕೋಟಿ ರೂ. ಹೆಚ್ಚುವರಿ ಹೊರೆ ಆಗಲಿದೆ ಎಂದು ಕೇಂದ್ರ ಸರ್ಕಾರ ತಿಳಿಸಿದೆ. ಸರ್ಕಾರಿ ಗೋದಾಮಿನಲ್ಲಿ ಅಕ್ಕಿಯ ದಾಸ್ತಾನು ಸಾಕಷ್ಟು ಇರುವಾಗಲೇ ಭತ್ತಕ್ಕೆ ಬೆಂಬಲ ಬೆಲೆಯನ್ನು ಪ್ರತಿ ಕ್ವಿಂಟಾಲ್‌ಗೆ 117 ರೂ. ಹೆಚ್ಚಳ ಮಾಡಲಾಗಿದೆ. ಕೇಂದ್ರದಲ್ಲಿ ಮೂರನೇ ಬಾರಿಗೆ ನರೇಂದ್ರ ಮೋದಿ ನೇತೃತ್ವದ ಎನ್‌ಡಿಎ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಪ್ರಕಟಿಸಿದ ಮೊದಲ ನಿರ್ಧಾರ ಇದಾಗಿದೆ. ಬೆಂಬಲ ಬೆಲೆ ಹೆಚ್ಚಳ ಮಾಡಿರುವುದರ ಹಿಂದೆ ಹರಿಯಾಣ, ಮಹಾರಾಷ್ಟ, ಜಾರ್ಖಂಡ್, ದೆಹಲಿ ವಿಧಾನಸಭಾ ಚುನಾವಣೆಗಳ ಲೆಕ್ಕಾಚಾರವೂ ಇದೆ ಎನ್ನಲಾಗಿದೆ.

  • ಅಂತರ್ಜಾಲ ಮಾಹಿತಿ
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಕೃಷಿ ಉತ್ಪನ್ನಕ್ಕೆ ಮೌಲ್ಯವರ್ಧನೆ – ಒಡಿಶಾದಲ್ಲಿ ₹43,437 ಕೋಟಿ ಹೂಡಿಕೆ ಪ್ರಸ್ತಾವನೆ

ಆಹಾರ ಸಂಸ್ಕರಣಾ ವಲಯದಲ್ಲಿ ಒಡಿಶಾ ₹43,437 ಕೋಟಿ ಮೌಲ್ಯದ ಹೂಡಿಕೆ ಪ್ರಸ್ತಾವನೆಗಳನ್ನು ಆಕರ್ಷಿಸಿದ್ದು,…

5 hours ago

ಕರ್ನಾಟಕದ 69.60 ಲಕ್ಷ ಹೆಕ್ಟೇರ್ ಭೂಮಿ ಹಾನಿ – ಕೃಷಿ ಉತ್ಪಾದಕತೆಗೆ ದೊಡ್ಡ ಸವಾಲು

ಕರ್ನಾಟಕದಲ್ಲಿ 69.60 ಲಕ್ಷ ಹೆಕ್ಟೇರ್ ಭೂಮಿ ಭೂಸವಕಳಿ ವ್ಯಾಪ್ತಿಯಲ್ಲಿದೆ ಎಂದು ಕೇಂದ್ರ ಸರ್ಕಾರದ…

5 hours ago

ಮಂಗಳೂರಿನಲ್ಲಿ ರಾಷ್ಟ್ರೀಯ ಕಿರಿಯರ ಚೆಸ್ ಚಾಂಪಿಯನ್‌ಶಿಪ್‌ಗೆ ತೆರೆ – ಮಣಿ ಸರ್ಬರ್‌ತೋ ಚಾಂಪಿಯನ್

ಮಂಗಳೂರಿನಲ್ಲಿ ನಡೆದ ರಾಷ್ಟ್ರೀಯ 11 ವರ್ಷದೊಳಗಿನ ಮುಕ್ತ ಹಾಗೂ ಬಾಲಕಿಯರ ಚೆಸ್ ಚಾಂಪಿಯನ್‌ಶಿಪ್–2026ಕ್ಕೆ…

15 hours ago

ಮ್ಯಾನ್ಮಾರ್‌ನಿಂದ ರೈಲಿನಲ್ಲಿ ಸಾಗಿಸುತ್ತಿದ್ದ 10 ಟನ್ ಅಡಿಕೆ ವಶ

ಮ್ಯಾನ್ಮಾರ್‌ನಿಂದ ಕಳ್ಳಸಾಗಣೆ ಮಾಡಲಾಗಿದ್ದ ಸುಮಾರು 10 ಟನ್ ವಿದೇಶಿ ಅಡಿಕೆಯನ್ನು ಅಸ್ಸಾಂನ ರಂಗಿಯಾ…

15 hours ago

ಹವಾಮಾನ ವರದಿ | 08-08-2026 | ಕರಾವಳಿಯಲ್ಲಿ ಮಳೆ ಇಳಿಕೆ – ರಾಜ್ಯದಲ್ಲಿ ಹೇಗೆ..?

ಆಗಸ್ಟ್‌ 8ರಿಂದ ಕರಾವಳಿ ಹಾಗೂ ಮಲೆನಾಡಿನಲ್ಲಿ ಮಳೆಯ ಪ್ರಮಾಣ ಇಳಿಕೆಯಾಗುವ ಸಾಧ್ಯತೆ ಇದ್ದು,…

23 hours ago

ಸಿರಿಧಾನ್ಯಗಳಿಗೆ ಬೇಡಿಕೆ ಹೆಚ್ಚಿದೆ… ಆದರೆ ರೈತರಿಗೆ ಲಾಭ ಹೆಚ್ಚಿದೆಯೇ?

ಸಿರಿಧಾನ್ಯಗಳ ಬೇಡಿಕೆ ಹೆಚ್ಚಿದರೂ, ರೈತರಿಗೆ ಅದರ ಸಂಪೂರ್ಣ ಆರ್ಥಿಕ ಲಾಭ ಇನ್ನೂ ತಲುಪಿಲ್ಲ…

1 day ago