ಎನ್ಡಿಎ ಸರ್ಕಾರ(NDA Govt) ರೈತರ(Farmers) ಹಿತ ಕಾಪಾಡಲು ಮೊದಲ ಹೆಜ್ಜೆಯನ್ನಿಟ್ಟಿದೆ. ರೈತರಿಗೆ ಕೇಂದ್ರ ಸರ್ಕಾರ(Central Govt) ಸಿಹಿ ಸುದ್ದಿ ನೀಡಿದೆ. ಮೋದಿ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ಭತ್ತ(Paddy), ರಾಗಿ(Ragi), ತೊಗರಿ(Dal) ಸೇರಿ 22 ಬೆಳೆಗಳಿಗೆ ಕನಿಷ್ಟ ಬೆಂಬಲ ಬೆಲೆಯನ್ನು(Minimum Support Price) ಹೆಚ್ಚಿಸಿದೆ. ಕಳೆದ ವರ್ಷಕ್ಕೆ ಹೋಲಿಕೆ ಮಾಡಿದರೆ ಶೇ.50 ರಷ್ಟು ಎಂಎಸ್ಪಿ ಹೆಚ್ಚಿಸಿದೆ.
ಭತ್ತದ ಮೇಲಿನ ಎಂಎಸ್ಪಿಯನ್ನು 143 ರೂಪಾಯಿ ಹೆಚ್ಚಿಸಿದ್ದು, ಭತ್ತದ ಕನಿಷ್ಠ ಬೆಲೆ ಈಗ 2,300 ರೂಪಾಯಿ ಆಗಿದೆ. ಅದೇ ರೀತಿ ರಾಗಿಗೆ 268 ರೂ., ಗೋಧಿ 150 ರೂ., ಮೆಕ್ಕೆ ಜೋಳ 128 ರೂ., ಜೋಳ 210 ರೂ., ಸಜ್ಜೆ 150 ರೂ., ತೊಗರಿ 400 ರೂ., ಹೆಸರುಬೇಳೆ 803 ರೂ., ಉದ್ದಿನ ಬೇಳೆ 350 ರೂ., ಕಡಲೆಕಾಯಿ 527 ರೂ., ಸೂರ್ಯಕಾಂತಿ 360 ರೂ., ಸೋಯಾಬೀನ್ 300 ರೂ., ಹತ್ತಿ 400 ರೂ., ಎಳ್ಳಿ 632 ರೂ., ಹುಚ್ಚೆಳ್ಳಿ 983 ರೂ. ಬೆಂಬಲ ಬೆಲೆಯನ್ನು ಕೇಂದ್ರ ಸರ್ಕಾರ ಘೋಷಿಸಿದೆ. ಇದರಿಂದ 2 ಲಕ್ಷ ರೈತರಿಗೆ ಲಾಭವಾಗಲಿದೆ.
ಸರ್ಕಾರಕ್ಕೆ 35,000 ಕೋಟಿ ರೂ. ಹೆಚ್ಚುವರಿ ಹೊರೆ ಆಗಲಿದೆ ಎಂದು ಕೇಂದ್ರ ಸರ್ಕಾರ ತಿಳಿಸಿದೆ. ಸರ್ಕಾರಿ ಗೋದಾಮಿನಲ್ಲಿ ಅಕ್ಕಿಯ ದಾಸ್ತಾನು ಸಾಕಷ್ಟು ಇರುವಾಗಲೇ ಭತ್ತಕ್ಕೆ ಬೆಂಬಲ ಬೆಲೆಯನ್ನು ಪ್ರತಿ ಕ್ವಿಂಟಾಲ್ಗೆ 117 ರೂ. ಹೆಚ್ಚಳ ಮಾಡಲಾಗಿದೆ. ಕೇಂದ್ರದಲ್ಲಿ ಮೂರನೇ ಬಾರಿಗೆ ನರೇಂದ್ರ ಮೋದಿ ನೇತೃತ್ವದ ಎನ್ಡಿಎ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಪ್ರಕಟಿಸಿದ ಮೊದಲ ನಿರ್ಧಾರ ಇದಾಗಿದೆ. ಬೆಂಬಲ ಬೆಲೆ ಹೆಚ್ಚಳ ಮಾಡಿರುವುದರ ಹಿಂದೆ ಹರಿಯಾಣ, ಮಹಾರಾಷ್ಟ, ಜಾರ್ಖಂಡ್, ದೆಹಲಿ ವಿಧಾನಸಭಾ ಚುನಾವಣೆಗಳ ಲೆಕ್ಕಾಚಾರವೂ ಇದೆ ಎನ್ನಲಾಗಿದೆ.
ಮೇ 15 ರ ಸುಮಾರಿಗೆ ಮುಂಗಾರು ಅಂಡಮಾನ್ ಸಮುದ್ರ ಪ್ರವೇಶಿಸುವ ಸಾಧ್ಯತೆ ಇದೆ.…
ರಾಜ್ಯದ ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಮುಂದುವರಿದಿದೆ. ಮೇ 20-25ರೊಳಗೆ…
ಕರ್ನಾಟಕದಲ್ಲಿ 14.05.2026ರ ಬೆಳಿಗ್ಗೆ 8 ಗಂಟೆವರೆಗಿನ ಹವಾಮಾನ ಮುನ್ಸೂಚನೆಯ ಪ್ರಕಾರ ಕರಾವಳಿ, ಮಲೆನಾಡು…
ರಾಜ್ಯದ ಬಹುತೇಕ ಭಾಗಗಳಲ್ಲಿ ಬಿಸಿಲು ಮುಂದುವರಿದರೂ ಸಂಜೆ, ರಾತ್ರಿ ಗುಡುಗು ಸಹಿತ ಮಳೆಯ…
‘ರೋಸ್ಟೆಡ್ ಅಡಿಕೆ’ ವರ್ಗೀಕರಣ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಅಲಹಾಬಾದ್ ಹೈಕೋರ್ಟ್ ಆದೇಶಕ್ಕೆ ತಾತ್ಕಾಲಿಕ…
ರಾಜ್ಯದ ಕರಾವಳಿ ಹಾಗೂ ಮಲೆನಾಡು ಜಿಲ್ಲೆಗಳಲ್ಲಿ ಸಂಜೆ ಮತ್ತು ರಾತ್ರಿ ಗುಡುಗು ಸಹಿತ…