MIRROR FOCUS

ರಾಜ್ಯದ ಸಾರಿಗೆ ಅಭಿವೃದ್ಧಿಗೆ ಕೇಂದ್ರದಿಂದ ಕೊಡುಗೆ : ಮೈಸೂರಿಗೆ ಮೆಟ್ರೋ ವಿಸ್ತರಣೆ, ರಾಜ್ಯಕ್ಕೆ 1200 ಎಲೆಕ್ಟ್ರಿಕ್ ಬಸ್: ಮೋದಿ ಭರವಸೆ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ರಾಜ್ಯಗಳು ಅಭಿವೃದ್ಧಿಯಾದರೆ ದೇಶ ಉದ್ಧಾರವಾದಂತೆ. ಈ ನಿಟ್ಟಿನಲ್ಲಿ ಕರ್ನಾಟಕ ರಾಜ್ಯಕ್ಕೆ ಕೇಂದ್ರ ಸರ್ಕಾರ ಅನೇಕ ಯೋಜನೆಗಳನ್ನು ನೀಡುತ್ತಲೇ ಬಂದಿದೆ. ಇದೀಗ  ಕರ್ನಾಟಕದ ಸಾರಿಗೆ ಸಂಪರ್ಕ ವ್ಯವಸ್ಥೆಯನ್ನು ಅಭಿವೃದ್ಧಿಪಡಿಸಲಾಗುತ್ತಿದ್ದು ಮಾಲಿನ್ಯ ನಿಯಂತ್ರಣಕ್ಕಾಗಿ 1200 ಎಲೆಕ್ಟ್ರಿಕ್ ಬಸ್‍ಗಳನ್ನು ಕೇಂದ್ರ ಸರ್ಕಾರ ನೀಡುತ್ತಿದೆ. ಅದಕ್ಕಾಗಿ ರಾಜ್ಯ ಸರ್ಕಾರಕ್ಕೆ 500 ಕೋಟಿ ರೂ. ಅನುದಾನ ನೀಡಲಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ(PM Narendra Modi) ಹೇಳಿದ್ದಾರೆ.

Advertisement
Advertisement

ಉತ್ತರ ಪ್ರದೇಶದಲ್ಲಿ ಪ್ರಾದೇಶಿಕ ಕ್ಷಿಪ್ರ ಸಾರಿಗೆ ವ್ಯವಸ್ಥೆ (Regional Rapid Transit System) ಕಾರಿಡಾರ್‌ನ ದೆಹಲಿ-ಗಾಜಿಯಾಬಾದ್ – ಮೀರತ್ ರೈಲುಗಳ ವಿಭಾಗವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಈ ವೇಳೆ ಬೆಂಗಳೂರಿನಲ್ಲೂ (Bengaluru) ಎರಡು ಮೆಟ್ರೋ ಲೇನ್‍ಗಳನ್ನು ಉದ್ಘಾಟಿಸಲಾಗುತ್ತಿದೆ. ಇದರಿಂದ ಜನರಿಗೆ ಅನುಕೂಲವಾಗಲಿದೆ ಎಂದು ಅವರು ಹೇಳಿದ್ದಾರೆ.

ಮೆಟ್ರೋದಲ್ಲಿ (Metro) ನಿತ್ಯ 80 ಲಕ್ಷಕ್ಕೂ ಅಧಿಕ ಜನರು ಪ್ರಯಾಣ ಮಾಡುತ್ತಿದ್ದಾರೆ. ಉತ್ತರ ಪ್ರದೇಶದಂತೆ ಕರ್ನಾಟಕದಲ್ಲೂ ಮೆಟ್ರೋ ವಿಸ್ತರಣೆ ಮಾಡುತ್ತೇವೆ. ಬೆಂಗಳೂರಲ್ಲಿ ಮೆಟ್ರೋ ವಿಸ್ತರಣೆ ಮಾಡಲಾಗುತ್ತದೆ. ಅಲ್ಲದೇ ಮೈಸೂರಿನಲ್ಲೂ (Mysuru) ಮೆಟ್ರೋ ಸಾರಿಗೆ ಆರಂಭಿಸುತ್ತೇವೆ ಎಂದು ಅವರು ಭರವಸೆ ನೀಡಿದ್ದಾರೆ. ನನ್ನ ಬಾಲ್ಯವನ್ನು ರೈಲ್ವೆ ಪ್ಲಾಟ್ ಫಾರಂನಲ್ಲೇ ಕಳೆದೆ, ಇಂದು ರೈಲ್ವೆ ವ್ಯವಸ್ಥೆಯಲ್ಲಿನ ಬದಲಾವಣೆ ಹೆಚ್ಚು ಖುಷಿ ಕೊಟ್ಟಿದೆ. ರೈಲ್ವೆಯಲ್ಲಿ ಹೆಣ್ಣು ಮಕ್ಕಳಿಗೆ ಆದ್ಯತೆ ನೀಡಲಾಗಿದೆ. ಇದು ನಾರಿ ಶಕ್ತಿ ಅಭಿವೃದ್ಧಿಯ ಪ್ರತೀಕವಾಗಿದೆ. ನಮೋ ಭಾರತ್ ರೈಲಿನಲ್ಲಿ ಆಧುನಿಕತೆ, ವೇಗ ಮತ್ತು ಅತ್ಯುತ್ತಮ ಸೌಲಭ್ಯಗಳಿದೆ. ಭಾರತದ ಹೊಸ ಸಂಕಲ್ಪವನ್ನು ಈ ರೈಲು ತೋರಿಸುತ್ತಿದೆ ಎಂದಿದ್ದಾರೆ.

ನಮೋ ಭಾರತ್ (Namo Bharat) ರೈಲು ಭಾರತದಲ್ಲೇ ತಯಾರಾಗಿದೆ. ಇದು ವಿಮಾನಕ್ಕಿಂತ ಕಡಿಮೆ ಸದ್ದು ಮಾಡುವ ರೈಲಾಗಿದೆ. ಅತ್ಯುತ್ತಮ ಪ್ರಯಾಣದ ಅನುಭವವನ್ನು ನೀಡಲಿದೆ. ಈ ರೈಲಿನ ವ್ಯವಸ್ಥೆಯಿಂದ ಭಾರತದ ಆರ್ಥಿಕತೆ ಹೆಚ್ಚಲಿದೆ. ಇಂದು ಉದ್ಘಾಟನೆಯಾಗಿರುವ ಯೋಜನೆ ಒಂದು ಆರಂಭವಾಗಿದೆ ಅಷ್ಟೇ. ಇದೇ ರೀತಿ ಬೇರೆ ಬೇರೆ ರಾಜ್ಯಗಳಲ್ಲೂ ಈ ಯೋಜನೆ ಜಾರಿಗೆ ತರಲಾಗುತ್ತದೆ ಎಂದು ಅವರು ತಿಳಿಸಿದರು.

ಭಾರತೀಯ ರೈಲ್ವೆಯ ಕಾಯಕಲ್ಪ ಮಾಡಲಾಗುತ್ತಿದೆ. ರೈಲ್ವೆ ಸಂಪರ್ಕ ವಿಸ್ತರಣೆಯಿಂದ ಉದ್ಯೋಗ ಸೃಷ್ಟಿಯಾಗಲಿದೆ. ನನಗೆ ಸಣ್ಣ ಕನಸು ಕಾಣುವ ಹವ್ಯಾಸ ಇಲ್ಲ, ಕುಂಟುತ್ತಾ ನಡೆಯುವ ರೂಢಿಯೂ ಇಲ್ಲ. ನಾವು ಯಾವ ದೇಶಕ್ಕಿಂತ ಹಿಂದೆ ಉಳಿಯುವುದಿಲ್ಲ, ಭಾರತೀಯ ರೈಲ್ವೆ 100% ವಿದ್ಯುಧೀಕರಣ ದೂರ ಇಲ್ಲ ಎಂದಿದ್ದಾರೆ. ಕರ್ನಾಟಕದಲ್ಲಿ ಸಾರಿಗೆ ಸಂಪರ್ಕ ವ್ಯವಸ್ಥೆಯನ್ನು ಅಭಿವೃದ್ಧಿಪಡಿಸಲಾಗುತ್ತಿದ್ದು ಮಾಲಿನ್ಯ ನಿಯಂತ್ರಣಕ್ಕಾಗಿ 1200 ಎಲೆಕ್ಟ್ರಿಕ್ ಬಸ್‍ಗಳನ್ನು ಕೇಂದ್ರ ಸರ್ಕಾರ ನೀಡುತ್ತಿದೆ. ಅದಕ್ಕಾಗಿ ರಾಜ್ಯ ಸರ್ಕಾರಕ್ಕೆ 500 ಕೋಟಿ ರೂ. ಅನುದಾನ ನೀಡಲಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

ಉತ್ತರ ಪ್ರದೇಶದಲ್ಲಿ ಪ್ರಾದೇಶಿಕ ಕ್ಷಿಪ್ರ ಸಾರಿಗೆ ವ್ಯವಸ್ಥೆ (Regional Rapid Transit System) ಕಾರಿಡಾರ್‌ನ ದೆಹಲಿ-ಗಾಜಿಯಾಬಾದ್ – ಮೀರತ್ ರೈಲುಗಳ ವಿಭಾಗವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಈ ವೇಳೆ ಬೆಂಗಳೂರಿನಲ್ಲೂ (Bengaluru) ಎರಡು ಮೆಟ್ರೋ ಲೇನ್‍ಗಳನ್ನು ಉದ್ಘಾಟಿಸಲಾಗುತ್ತಿದೆ. ಇದರಿಂದ ಜನರಿಗೆ ಅನುಕೂಲವಾಗಲಿದೆ ಎಂದು ಅವರು ಹೇಳಿದ್ದಾರೆ.

Advertisement

ಮೆಟ್ರೋದಲ್ಲಿ (Metro) ನಿತ್ಯ 80 ಲಕ್ಷಕ್ಕೂ ಅಧಿಕ ಜನರು ಪ್ರಯಾಣ ಮಾಡುತ್ತಿದ್ದಾರೆ. ಉತ್ತರ ಪ್ರದೇಶದಂತೆ ಕರ್ನಾಟಕದಲ್ಲೂ ಮೆಟ್ರೋ ವಿಸ್ತರಣೆ ಮಾಡುತ್ತೇವೆ. ಬೆಂಗಳೂರಲ್ಲಿ ಮೆಟ್ರೋ ವಿಸ್ತರಣೆ ಮಾಡಲಾಗುತ್ತದೆ. ಅಲ್ಲದೇ ಮೈಸೂರಿನಲ್ಲೂ (Mysuru) ಮೆಟ್ರೋ ಸಾರಿಗೆ ಆರಂಭಿಸುತ್ತೇವೆ ಎಂದು ಅವರು ಭರವಸೆ ನೀಡಿದ್ದಾರೆ. ನನ್ನ ಬಾಲ್ಯವನ್ನು ರೈಲ್ವೆ ಪ್ಲಾಟ್ ಫಾರಂನಲ್ಲೇ ಕಳೆದೆ, ಇಂದು ರೈಲ್ವೆ ವ್ಯವಸ್ಥೆಯಲ್ಲಿನ ಬದಲಾವಣೆ ಹೆಚ್ಚು ಖುಷಿ ಕೊಟ್ಟಿದೆ. ರೈಲ್ವೆಯಲ್ಲಿ ಹೆಣ್ಣು ಮಕ್ಕಳಿಗೆ ಆದ್ಯತೆ ನೀಡಲಾಗಿದೆ. ಇದು ನಾರಿ ಶಕ್ತಿ ಅಭಿವೃದ್ಧಿಯ ಪ್ರತೀಕವಾಗಿದೆ. ನಮೋ ಭಾರತ್ ರೈಲಿನಲ್ಲಿ ಆಧುನಿಕತೆ, ವೇಗ ಮತ್ತು ಅತ್ಯುತ್ತಮ ಸೌಲಭ್ಯಗಳಿದೆ. ಭಾರತದ ಹೊಸ ಸಂಕಲ್ಪವನ್ನು ಈ ರೈಲು ತೋರಿಸುತ್ತಿದೆ ಎಂದಿದ್ದಾರೆ.

ನಮೋ ಭಾರತ್ (Namo Bharat) ರೈಲು ಭಾರತದಲ್ಲೇ ತಯಾರಾಗಿದೆ. ಇದು ವಿಮಾನಕ್ಕಿಂತ ಕಡಿಮೆ ಸದ್ದು ಮಾಡುವ ರೈಲಾಗಿದೆ. ಅತ್ಯುತ್ತಮ ಪ್ರಯಾಣದ ಅನುಭವವನ್ನು ನೀಡಲಿದೆ. ಈ ರೈಲಿನ ವ್ಯವಸ್ಥೆಯಿಂದ ಭಾರತದ ಆರ್ಥಿಕತೆ ಹೆಚ್ಚಲಿದೆ. ಇಂದು ಉದ್ಘಾಟನೆಯಾಗಿರುವ ಯೋಜನೆ ಒಂದು ಆರಂಭವಾಗಿದೆ ಅಷ್ಟೇ. ಇದೇ ರೀತಿ ಬೇರೆ ಬೇರೆ ರಾಜ್ಯಗಳಲ್ಲೂ ಈ ಯೋಜನೆ ಜಾರಿಗೆ ತರಲಾಗುತ್ತದೆ ಎಂದು ಅವರು ತಿಳಿಸಿದರು.

ಭಾರತೀಯ ರೈಲ್ವೆಯ ಕಾಯಕಲ್ಪ ಮಾಡಲಾಗುತ್ತಿದೆ. ರೈಲ್ವೆ ಸಂಪರ್ಕ ವಿಸ್ತರಣೆಯಿಂದ ಉದ್ಯೋಗ ಸೃಷ್ಟಿಯಾಗಲಿದೆ. ನನಗೆ ಸಣ್ಣ ಕನಸು ಕಾಣುವ ಹವ್ಯಾಸ ಇಲ್ಲ, ಕುಂಟುತ್ತಾ ನಡೆಯುವ ರೂಢಿಯೂ ಇಲ್ಲ. ನಾವು ಯಾವ ದೇಶಕ್ಕಿಂತ ಹಿಂದೆ ಉಳಿಯುವುದಿಲ್ಲ, ಭಾರತೀಯ ರೈಲ್ವೆ 100% ವಿದ್ಯುಧೀಕರಣ ದೂರ ಇಲ್ಲ ಎಂದಿದ್ದಾರೆ. ಈ ಯೋಜನೆಯಲ್ಲಿ ಮಲ್ಟಿ ಮಾಡೇಲ್ ಕನೆಕ್ಟಿವಿಟ್ ಬಗ್ಗೆಯೂ ಗಮನಹರಿಸಲಾಗಿದೆ. ಎಲೆಕ್ಟ್ರಿಕ್ ಬಸ್‍ಗಳ ನೆಟ್‍ವರ್ಕ್ ಮಾಡಲಾಗುತ್ತಿದೆ. ರಾಜ್ಯಗಳಿಗೆ 10,000 ಬಸ್ ಕೊಡಲಾಗುತ್ತಿದೆ. ದೆಹಲಿಗೆ 1300ಕ್ಕೂ ಹೆಚ್ಚು ಬಸ್ ನೀಡುವ ಪ್ರಯತ್ನ ಮಾಡಲಾಗುತ್ತಿದೆ ಎಂದಿದ್ದಾರೆ.

– ಅಂತರ್ಜಾಲ ಮಾಹಿತಿ

The Central Government is providing 1200 electric buses for pollution control while the transport connectivity system of Karnataka is being developed. 500 crores to the state government for that. Prime Minister Narendra Modi has said that the grant has been given. He was speaking while inaugurating the Delhi-Ghaziabad-Meerut section of the Regional Rapid Transit System corridor in Uttar Pradesh. At this time, two metro lanes are being inaugurated in Bengaluru.
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಜೂನ್ 15 ರಂದು ಮಿಥುನ ರಾಶಿಗೆ ಸೂರ್ಯ | 12 ರಾಶಿಗಳ ಫಲಾಫಲ ಹೀಗಿದೆ….

ಹೆಚ್ಚಿನ ವಿವರಗಳನ್ನು ಪಡೆಯಲು ಜ್ಯೋತಿಷ್ಯರೊಂದಿಗೆ ಸಂಪರ್ಕಿಸಬಹುದು. 9535156490

11 hours ago

ಬದುಕು ಪುರಾಣ | ಶ್ರೀಮಂತಿಕೆ ‘ಪಾಸ್ ಬುಕ್ಕಿನಲ್ಲಿ’ ಇರುವುದಲ್ಲ!

ಜಗತ್ತಿನಲ್ಲಿ ಎಲ್ಲವನ್ನೂ ಹಣದಿಂದಲೇ ಖರೀದಿ ಮಾಡಲು ಸಾಧ್ಯವಿಲ್ಲ. ನೀತಿ, ನಡತೆ, ಬದ್ಧತೆಗಳು  ಹಣ ಕೊಟ್ಟರೂ…

11 hours ago

ಜೂನ್ 1 : ಯಕ್ಷಗುರು ಪಾಲೆಚ್ಚಾರು ಗೋವಿಂದ ನಾಯಕರಿಗೆ ‘ಈಶಾವಾಸ್ಯ ಪ್ರಶಸ್ತಿ’ | ಗೋವಿಂದ ಗಾಥೆ’ ಕೃತಿ ಅನಾವರಣ

ಯಕ್ಷಗುರು, ಭಾಗವತ ಶ್ರೀ ಪಾಲೆಚ್ಚಾರು ಗೋವಿಂದ ನಾಯಕ್ ಅವರಿಗೆ ‘ಈಶಾವಾಸ್ಯ ಪ್ರಶಸ್ತಿ ಪುರಸ್ಕಾರ’…

20 hours ago

ಬೆಂಗಳೂರು ನಗರದಲ್ಲಿ ಮೇ ತಿಂಗಳಲ್ಲಿ 315 ಮಿಮೀ ಸಾರ್ವಕಾಲಿಕ ದಾಖಲೆ ಮಳೆ

ಬೆಂಗಳೂರು ನಗರದಲ್ಲಿ ಮೇ ತಿಂಗಳಲ್ಲಿ 315 ಮಿಲಿಮೀಟರ್ ಮಳೆಯಾಗಿದ್ದು, ಇದು ಸಾರ್ವಕಾಲಿಕ ದಾಖಲೆಯಾಗಿದೆ.…

20 hours ago

ಹಾಲು ಉತ್ಪಾದನೆಯಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆ ಮುಂಚೂಣಿ

ಹಾಲು ಉತ್ಪಾದನೆಯಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆ ಮುಂಚೂಣಿಯಲ್ಲಿದ್ದು, ಹಾಲು ಉತ್ಪಾದಕರಿಗೆ ಪ್ರೋತ್ಸಾಹ ಧನದ…

20 hours ago

ಕೇರಳದ ವಯನಾಡು ಭಾಗದಲ್ಲಿ ಧಾರಾಕಾರ ಮಳೆ | ಕಬಿನಿ ಜಲಾಶಯದ ಒಳಹರಿವಿನಲ್ಲಿ ಏರಿಕೆ

ಕೇರಳದ ವಯನಾಡು ಭಾಗದಲ್ಲಿ ಧಾರಾಕಾರ ಮಳೆಯಾಗುತ್ತಿರುವ ಪರಿಣಾಮ ಮೈಸೂರು ಜಿಲ್ಲೆ ಎಚ್.ಡಿ.ಕೋಟೆ ತಾಲೂಕಿನ…

20 hours ago