Advertisement
MIRROR FOCUS

ಕೇಂದ್ರ, ರಾಜ್ಯ ಸರ್ಕಾರಗಳ ನಡೆ ಮಲೆನಾಡಿಗರ ನಿದ್ದೆಗೆಡಿಸಿದೆ | ಇಲ್ಲಿನ ಎಂಪಿ, ಎಂಎಲ್‌ಎಗಳು ಒಗ್ಗಟ್ಟಾಗಿ ಹೋರಾಡಲಿ | ಅನಿಲ್ ಹೊಸಕೊಪ್ಪ ಒತ್ತಾಯ

Share

ಅರಣ್ಯ ಕಾಯ್ದೆಯಿಂದ(Forest Act) ಮಲೆನಾಡು(Malenadu) ಮತ್ತು ಕರಾವಳಿಯ(Coastal) ಕೃಷಿಕರು(Farmers) ಭಯದಲ್ಲಿ ಬದುಕು ಸಾಗಿಸುತ್ತಿದ್ದರು. ಇತ್ತೀಚಿಗೆ ಸದನದಲ್ಲಿ ಅರಣ್ಯವಾಸಿಗಳ ಬಗ್ಗೆ ತೆಗೆದುಕೊಂಡ ನಿರ್ಣಯದಿಂದ ಸ್ವಲ್ಪ ಮಟ್ಟಿಗೆ ನಿಟ್ಟುಸಿರು ಬಿಟ್ಟಿದ್ದರು. ಆದರೆ ಅತಿಯಾದ ಮಳೆಯಿಂದ ಆಗುವ ಅನಾಹುತಗಳಾಗುವುದಕ್ಕೆ ಮಲೆನಾಡಿಗರೇ ಕಾರಣ ಎಂದು ರಾಜ್ಯ ಸರ್ಕಾರದ ಸಚಿವರು ಮತ್ತು ಅಧಿಕಾರಿಗಳು ಹೇಳಿಕೆ ನೀಡಿದ್ದರು. ಇದರ ಜೊತೆಗೆ ಕೇಂದ್ರ ಸರ್ಕಾರ ಪಶ್ಚಿಮ ಘಟ್ಟವನ್ನು  ಸೂಕ್ಷ್ಮ ಅರಣ್ಯ ಪ್ರದೇಶ ಎಂದು ಘೋಷಿಸಲು ಕರಡು ಪ್ರತಿ ಸಿದ್ದಪಡಿಸಿದ್ದು ಮತ್ತೆ ಮಲೆನಾಡಿಗರನ್ನು ಅತಂಕಕ್ಕೆ ಸಿಲುಕಿಸಿದೆ ಎಂದು ಮಲೆನಾಡು ಮತ್ತು ಕರಾವಳಿ ಜನಪರ ಒಕ್ಕೂಟದ ರಾಜ್ಯ ಸಂಚಾಲಕ ಅನಿಲ್ ಹೊಸಕೊಪ್ಪ ಆಕ್ರೋಶ ವ್ಯಕ್ತಪಡಿಸಿದರು.

ಅತಿಯಾದ ಮಳೆಯಿಂದ ಆಗುವ ಪ್ರಕೃತಿ ವಿಕೋಪಕ್ಕೆ ಮಲೆನಾಡಿನ ಜನರು ನೇರ ಹೊಣೆಯಲ್ಲ. ಜನರ ಜೀವನಕ್ಕಾಗಿ ಅರಣ್ಯ ಬದಿ ಒತ್ತುವರಿ ಆಗಿದೆ. ಆದರೆ ಅದರಿಂದ ಭೂಕುಸಿತ ಉಂಟಾಗಿಲ್ಲ. ಇದಕ್ಕೆ ಕಾರಣ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ನಿರ್ಮಿಸಿದ ಅವೈಜ್ಞಾನಿಕವಾಗಿ ರಾಷ್ಟ್ರೀಯ ಹೆದ್ದಾರಿಗಳು, ಅಣೆಕಟ್ಟುಗಳು, ಸೇತುವೆಗಳಿಂದ ಈ ರೀತಿಯ ಭೂಕುಸಿತ ಸಂಭವಿಸಿದೆ. ಅದು ಬಿಟ್ಟು ಯಾವುದೇ ಕೃಷಿ ಚಟುವಟಿಕೆಗಳಿಂದ ಅಲ್ಲ. ಮೊದಲು ಅವೈಜ್ಞಾನಿಕ ರಾಷ್ಟ್ರೀಯ ಹೆದ್ದಾರಿ, ಅಣೆಕಟ್ಟುಗಳನ್ನ, ರಸ್ತೆ ಬದಿಯಲ್ಲಿರುವ ಪೈಪ್‍ಲೈನ್‍ಗಳನ್ನೂ ತೆರವು ಮಾಡಿ. ಅವುಗಳನ್ನು ತೆರವು ಮಾಡಿಲು ನಿಮ್ಮಿಂದ ಸಾಧ್ಯವೇ?’ ಎಂದು ಪ್ರಶ್ನಿಸಿದರು.

ಎಲ್ಲಾ ಕೇಂದ್ರ ಮತ್ತು ರಾಜ್ಯ ಸರ್ಕಾರದ ಸಚಿವರು ನಮ್ಮ ಮಲೆನಾಡಿಗೆ ಬಂದು ಎರಡು ದಿನ ವಾಸ್ತವ ಹೂಡಿ ಸ್ಥಳೀಯರೊಂದಿಗೆ ಚರ್ಚಿಸಿ ಆಮೇಲೆ ಅವರ ಕೆಲಸ ಆರಂಭಿಸಲಿ. ಪರಿಸರ ಕಾಳಜಿ ನಮಗೂ ಇದೆ. ಎಲ್ಲವನ್ನು ನಾವು ತಿರಸ್ಕರಿಸುವುದಿಲ್ಲ. ಬದುಕಿಗೋಸ್ಕರ ಕೃಷಿ ಮಾಡಿದವರಿಗೆ ಸರ್ಕಾರ ಸಹಾಯ ಮಾಡಲಿ. ಇತ್ತೀಚಿಗೆ ವಿಧಾನ ಸಭೆಯಲ್ಲಿ ಪಾರಂಪರಿಕ ಅರಣ್ಯ ಹಕ್ಕು ಬಗ್ಗೆ ಚರ್ಚಿಸಿ ಕೆಲವು ನಿಯಮಗಳನ್ನು ಸಡಿಲಗೋಳಿಸಿ ಅರಣ್ಯ ವಾಸಿಗಳಿಗೆ ಹಕ್ಕುಪತ್ರ ನೀಡಲು ನಿರ್ಣಯಾ ಮಾಡಿ ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿರುವುದು ಮತ್ತು ಕೇಂದ್ರ ಸರ್ಕಾರ ಕಸ್ತೂರಿ ರಂಗನ್ ವರದಿ ಜಾರಿ ಮಾಡುವ ಬಗ್ಗೆ ರಾಜ್ಯ ಸರ್ಕಾರ ಸಮ್ಮತಿ ಸೂಚಿಸದೇ ಇರುವು ಸ್ವಾಗತ’ ಎಂದು ಮಲೆನಾಡು ಮತ್ತು ಕರಾವಳಿ ಜನಪರ ಒಕ್ಕೂಟದ ರಾಜ್ಯ ಸಂಚಾಲಕ ಅನಿಲ್ ಹೊಸಕೊಪ್ಪ ಹೇಳಿದರು.

ರಾಜ್ಯ ಸರ್ಕಾರದಷ್ಟೇ ಜವಾಬ್ದಾರಿ ಕೇಂದ್ರ ಸರ್ಕಾರಕ್ಕೆ ಇದೆ. ಆದರಿಂದ ಈ ನಿರ್ಣಯವನ್ನು ನಮ್ಮ ಮಲೆನಾಡಿನ 5 ಜನ ಸಂಸದರು ಬೆಂಬಲಿಸಿ ಮಲೆನಾಡಿಗರ ಬದುಕು ಉಳಿಸಿಕೊಡಬೇಕು. ಇದುವರೆಗೂ ನಮ್ಮ ಯಾವ ಸಂಸದರು ಅರಣ್ಯ ಹಕ್ಕಿನ ಬಗ್ಗೆ ಸಂಸತ್ತಿನಲ್ಲಿ ಧ್ವನಿ ಎತ್ತಿಲ್ಲ. ನಮ್ಮ ಸಂಸದರಾದ ಕೋಟಾ ಶ್ರೀನಿವಾಸ್ ಪೂಜಾರಿಯವರು ಮಲೆನಾಡಿನ ಸಮಸ್ಯೆಗಳ ಬಗ್ಗೆ ಸಂಸತ್ತಿನಲ್ಲಿ ಮಾತನಾಡಿ ಮಲೆನಾಡಿಗರಿಗೆ ನ್ಯಾಯ ದೊರಕಿಸಿ ಕೋಡಬೇಕು’ ಎಂದು ಒತ್ತಾಯಿಸಿದರು.
ಸಭೆಯಲ್ಲಿ ಮೂಲ ಅರಣ್ಯ ಕಾಯ್ದೆಯನ್ನು ತಿದ್ದುಪಡಿ ಮಾಡಲು ಕೇಂದ್ರ ಹಾಗು ರಾಜ್ಯ ಸರ್ಕಾರಕ್ಕೆ ಒತ್ತಡ ತರುವ ವಿಚಾರದ ಬಗ್ಗೆ ಚರ್ಚಿಸಲಾಯಿತು.

ಸಭೆಯಲ್ಲಿ ಪದಾಧಿಕಾರಿಗಳಾದ ಕಣದಮನೆ ಜಗದೀಶ್, ತ್ರಿಮೂರ್ತಿ, ಕಾಳ್ಯ ಸಂತೋಷ್, ಮಂಜುನಾಥ್ ಮೂಡ್ಲು, ಗುತ್ತುಳಿಕೆ ಕೇಶವ, ರಾಜ್‍ಕುಮಾರ್ ಹೆಗ್ಡೆ, ಅವಿನಾಶ್, ಪ್ರಶಾಂತ್ ಬಂಡ್ಲಪುರ, ಆದೇಶ, ಚೇತನ್ ಹಿಂಬ್ರವಳ್ಳಿ, ಶುಭಕೃತ್ ಹೆಗ್ಡೆ, ಶಶಿಕ್ ಹೊಸಕೋಪ್ಪ , ಸುಬ್ರಮಣ್ಯ ಹರವರಿ ಉಪಸ್ಥಿತರಿದ್ದರು.

The farmers in the hill country and along the coast are fearful due to the forest act. State government ministers and officials have blamed the hill farmers for the disasters caused by heavy rain. Furthermore, the central government is considering declaring the Western Ghats as a sensitive forest area, causing even more fear among the hill dwellers.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಮುಂದಿನ 5 ದಿನ ತಾಪಮಾನ ಏರಿಕೆ ಎಚ್ಚರಿಕೆ ! ಉತ್ತರ-ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಬಿಸಿಗಾಳಿ ತೀವ್ರ

ಮುಂದಿನ ಐದು ದಿನಗಳಲ್ಲಿ ಉತ್ತರ ಹಾಗೂ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ತಾಪಮಾನ ಹೆಚ್ಚಾಗಲಿದೆ…

10 hours ago

ಹವಾಮಾನ ವರದಿ | 14-04-2026 | ಕರ್ನಾಟಕದಲ್ಲಿ ಉರಿಬಿಸಿಲು…! ಆದರೆ ಮಳೆಯೂ ಬರುತ್ತಿದೆ ! ಯಾವಾಗ ಗೊತ್ತಾ? – ಸದ್ಯ ರೈತರಿಗೆ ಸಲಹೆ ಏನು..?

ರಾಜ್ಯದಲ್ಲಿ ಬಿಸಿಲಿನ ತೀವ್ರತೆ ಮುಂದುವರಿದಿದ್ದು, ಏಪ್ರಿಲ್ 18ರಿಂದ ಮಳೆ ಆರಂಭವಾಗುವ ಸಾಧ್ಯತೆ ಇದೆ.…

14 hours ago

ಇರಾನ್-ಇಸ್ರೇಲ್ ಯುದ್ಧದ ಪರಿಣಾಮ – ಮಾವಿನ ರಫ್ತು ಕುಸಿತ, ರೈತರಿಗೆ ಹೊಡೆತ | ಅಲ್ಫೋನ್ಸೊ ಬೆಲೆ ಅರ್ಧಕ್ಕೆ ಇಳಿಕೆ

ಇರಾನ್-ಇಸ್ರೇಲ್ ಯುದ್ಧದಿಂದ ಮಾವಿನ ರಫ್ತು ಕುಸಿತಗೊಂಡು ಬೆಲೆ ತೀವ್ರವಾಗಿ ಇಳಿಕೆಯಾಗಿದೆ. ರೈತರು ನಷ್ಟದಲ್ಲಿ…

20 hours ago

ಬೇಸಿಗೆಯ ತಾಪಕ್ಕೆ ತುತ್ತಾದ ವನ್ಯಜೀವಿಗಳಿಗೆ ನೀರಿನ ಜೀವಧಾರೆ | ಕೋಲಾರ ಬಲಮಂದೆ ಗ್ರಾಮ ಪಂಚಾಯಿತಿ ಮಾದರಿ ಕಾರ್ಯ

ಬೇಸಿಗೆಯಲ್ಲಿ ವನ್ಯಜೀವಿಗಳಿಗೆ ನೀರಿನ ವ್ಯವಸ್ಥೆ ಮಾಡಿ ಬಲಮಂದೆ ಗ್ರಾಮ ಪಂಚಾಯಿತಿ ಮಾದರಿಯಾಗಿದೆ. ಟ್ಯಾಂಕರ್,…

21 hours ago

ಉತ್ತರ ಕರ್ನಾಟಕದಲ್ಲಿ ಬಿಸಿಗಾಳಿ ಅಲರ್ಟ್ | ಎಪ್ರಿಲ್ 15 -17 ರವರೆಗೆ ಆರೆಂಜ್ ಅಲರ್ಟ್ ಘೋಷಣೆ

ಉತ್ತರ ಕರ್ನಾಟಕದ ಐದು ಜಿಲ್ಲೆಗಳಲ್ಲಿ ಏಪ್ರಿಲ್ 15ರಿಂದ 17ರವರೆಗೆ ಬಿಸಿಗಾಳಿ ತೀವ್ರವಾಗುವ ಸಾಧ್ಯತೆ…

1 day ago

ಧಾರವಾಡ ಕೃಷಿ ವಿಶ್ವವಿದ್ಯಾಲಯದಲ್ಲಿ ಸ್ವಯಂಚಾಲಿತ ಹವಾಮಾನ ಕೇಂದ್ರ ಆರಂಭ

ಧಾರವಾಡ ಕೃಷಿ ವಿಶ್ವವಿದ್ಯಾಲಯದಲ್ಲಿ ಸ್ವಯಂಚಾಲಿತ ಹವಾಮಾನ ಕೇಂದ್ರ ಆರಂಭವಾಗಿದೆ. ಇದು ರೈತರಿಗೆ ನಿಖರ…

1 day ago