Advertisement
ಸುದ್ದಿಗಳು

ದಕ್ಷಿಣ ಕನ್ನಡದಲ್ಲಿ ಮಳೆ ಪೀಡಿತ ಪ್ರದೇಶದ 11 ಶಾಲೆಗಳ ದುರಸ್ತಿಗೆ ಕೇಂದ್ರ ಸರ್ಕಾರದ ಅನುಮೋದನೆ

Share

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪ್ರಾಕೃತಿಕ ವಿಕೋಪದಿಂದ ಹಾನಿಗೊಂಡಿರುವ 11 ಶಾಲೆಗಳನ್ನು ಕೇಂದ್ರ ಸರ್ಕಾರದ ಸಮಗ್ರ ಶಿಕ್ಷಾ ಯೋಜನೆಯಡಿ 2023-24 ಹಾಗೂ 2024- 25ನೇ ಸಾಲಿನಲ್ಲಿ ದುರಸ್ತಿಗೊಳಿಸುವುದಕ್ಕೆ ಅನುಮೋದನೆ ನೀಡಲಾಗಿದೆ ಎಂದು ಶಿಕ್ಷಣ ಖಾತೆ ರಾಜ್ಯ ಸಚಿವ ಜಯಂತ್ ಚೌಧರಿ ತಿಳಿಸಿದ್ದಾರೆ.

ಲೋಕಸಭೆಯಲ್ಲಿ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ಕೇಳಿದ್ದ ಚುಕ್ಕೆ ಗುರುತಿಲ್ಲದ ಪ್ರಶ್ನೆಗೆ ಲಿಖಿತ ಉತ್ತರ ನೀಡಿರುವ ಸಚಿವರು, ಸಮಗ್ರ ಶಿಕ್ಷಾ ಯೋಜನೆಯಡಿ ರಾಜ್ಯ ಸರ್ಕಾರದ ಶಿಫಾರಸ್ಸಿನ ಮೇಲೆ ಆದ್ಯತೆಯಾಗಿ ಶಾಲೆಗಳನ್ನು ದುರಸ್ತಿಗೊಳಿಸುವ ಕಾರ್ಯ ನಡೆಯುತ್ತಿದೆ. ಪ್ರಬಂಧ್ ಪೋರ್ಟಲ್ ಪ್ರಕಾರ, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸಮಗ್ರ ಶಿಕ್ಷಾ ಯೋಜನೆಯಡಿ ಕಳೆದ ಎರಡು ಸಾಲಿನಲ್ಲಿ 11 ಶಾಲೆಗಳನ್ನು ದೊಡ್ಡ ಮಟ್ಟದಲ್ಲಿ ದುರಸ್ತಿಗೊಳಿಸಲು ಅನುಮೋದನೆ ನೀಡಲಾಗಿದೆ. ಕೇಂದ್ರದ ಈ ಸಮಗ್ರ ಶಿಕ್ಷಾ ಯೋಜನೆಯು ರಿಪೇರಿಗೆ ಕಾಯುತ್ತಿರುವ ಶಾಲೆಗಳನ್ನು ಆದ್ಯತೆ ಮೇರೆಗೆ ದುರಸ್ತಿಗೊಳಿಸುವುದಕ್ಕೆ ರಾಜ್ಯ ಸರ್ಕಾರಗಳಿಗೆ ಹೆಚ್ಚಿನ ಅನುಕೂಲ ಕಲ್ಪಿಸುತ್ತದೆ. ಆ ಮೂಲಕ, ನೈಸರ್ಗಿಕ ವಿಕೋಪದಿಂದ ಹಾನಿಗೊಳಗಾಗುವ ಶಾಲೆಗಳನ್ನು ಯಥಾಸ್ಥಿತಿಗೆ ತರುವುದಕ್ಕೆ ಕೇಂದ್ರ ಸರ್ಕಾರದ ಸೂಕ್ತ ಆರ್ಥಿಕ ನೆರವು ಪಡೆದುಕೊಳ್ಳಬಹುದು ಎಂದು ಅವರು ಹೇಳಿದ್ದಾರೆ.

ಮಳೆ ಪೀಡಿತ ಪ್ರದೇಶಗಳ ಶಾಲೆಗಳನ್ನು ತುರ್ತಾಗಿ ದುರಸ್ತಿಗೊಳಿಸಿ ಅವುಗಳಿಗೆ ಸೂಕ್ತ ಮೂಲಸೌಕರ್ಯ ಮರುಸ್ಥಾಪಿಸುವುದಕ್ಕೆ ಕೇಂದ್ರ ಸರ್ಕಾರದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು ರಾಷ್ಟ್ರೀಯ ವಿಪತ್ತು ನಿರ್ವಹಣಾ ಪ್ರಾಧಿಕಾರ(NDMA)ದ ಸಮನ್ವಯದಲ್ಲಿ ಪ್ರತ್ಯೇಕ ಮಾರ್ಗಸೂಚಿ ಹಾಗೂ ಸಲಹೆಗಳನ್ನು ಬಿಡುಗಡೆಗೊಳಿಸಿದೆ. ಈ ನಡುವೆ ಕೇಂದ್ರ ಸರ್ಕಾರವು ನೈಸರ್ಗಿಕ ವಿಪತ್ತು ನಿರ್ವಹಣಾ ನಿಧಿಯಡಿ ದಕ್ಷಿಣ ಕನ್ನಡದಲ್ಲಿ 2024-25ನೇ ಸಾಲಿನಲ್ಲಿ 240 ಹಾಗೂ ರಾಜ್ಯ ಸರ್ಕಾರದ ನಿಧಿಯಡಿ 312 ಶಾಲಾ ಕಟ್ಟಡಗಳ ದುರಸ್ತಿ ಕಾರ್ಯ ಕೈಗೊಂಡಿರುವುದಾಗಿ ಸಚಿವ ಚೌಧರಿ ವಿವರಿಸಿದರು.

ಸಂಸತ್ತಿನ ಮುಂಗಾರು ಅಧಿವೇಶನ ಇಂದಿನಿಂದ ಆರಂಭವಾಗಿದ್ದು, ಸಂಸದ ಕ್ಯಾ. ಚೌಟ ಅವರು ದಕ್ಷಿಣ ಕನ್ನಡದಲ್ಲಿ ಅತಿವೃಷ್ಟಿಗೆ 290ಕ್ಕೂ ಹೆಚ್ಚು ಸರ್ಕಾರಿ ಶಾಲೆಗಳ ಮೂಲಸೌಕರ್ಯಕ್ಕೆ ಹಾನಿಯಾಗಿದ್ದು, ಅವುಗಳ ದುರಸ್ತಿ ಕಾರ್ಯಕ್ಕೆ ತುರ್ತಾಗಿ ಕೇಂದ್ರ ಸರ್ಕಾರದ ನೆರವು ಕೋರಿದ್ದರು. ದಕ್ಷಿಣ ಕನ್ನಡವು ಸೇರಿದಂತೆ ಕರಾವಳಿ ಭಾಗದಲ್ಲಿ ಮಳೆ ಪೀಡಿತ ಪ್ರದೇಶಗಳಲ್ಲಿ ಹಾನಿಗೊಂಡಿರುವ ಶಾಲೆಗಳ ರಿಪೇರಿ ಹಾಗೂ ಅಗತ್ಯ ಮೂಲಸೌಕರ್ಯ ಒದಗಿಸುವುದಕ್ಕೆ ಏನೆಲ್ಲ ತುರ್ತು ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂಬುದರ ಬಗ್ಗೆ ಚುಕ್ಕೆಗುರತಿಲ್ಲದ ಪ್ರಶ್ನೆಯಡಿ ಮಾಹಿತಿ ಕೋರಿದ್ದರು.

ಈ ಬಗ್ಗೆ ಪ್ರತಿಕ್ರಿಯಿಸಿರುವ ಕ್ಯಾ. ಚೌಟ ಅವರು, ಮಳೆ ಪೀಡಿತ ಪ್ರದೇಶಗಳ ಶಾಲೆಗಳನ್ನು ಸಮಗ್ರ ಶಿಕ್ಷಾ ಯೋಜನೆಯಡಿ ರಿಪೇರಿಗೆ ಆದ್ಯತೆಯಡಿ ಅನುಮೋದನೆ ನೀಡಿರುವುದು ಸ್ವಾಗತಾರ್ಹ ಕ್ರಮ. ಆರಂಭಿಕ ಹಂತದಲ್ಲಿ ಜಿಲ್ಲೆಯ 11 ಶಾಲೆಗಳ ದುರಸ್ತಿಗೆ ಅನುಮೋದನೆ ಸಿಕ್ಕಿದೆ. ಮುಂದೆ ಮಳೆಯಿಂದ ಹಾನಿಗೊಳಗಾಗಿರುವ ದಕ್ಷಿಣ ಕನ್ನಡದ 290 ಶಾಲೆಗಳ ದುರಸ್ತಿ ಕಾರ್ಯಕ್ಕೂ ಕೇಂದ್ರ ಸರ್ಕಾರದಿಂದ ಹೆಚ್ಚಿನ ಆರ್ಥಿಕ ನೆರವು ಪಡೆಯುವುದಕ್ಕೆ ಎಲ್ಲ ರೀತಿಯ ಪ್ರಯತ್ನ ಮಾಡಲಾಗುವುದು ಎಂದು ಭರವಸೆ ನೀಡಿದ್ದಾರೆ.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಬರಪೀಡಿತ ಪ್ರದೇಶಗಳ ರೈತರಿಗೆ ಗುಡ್‌ನ್ಯೂಸ್ ; ಬೆಳೆ ವಿಮೆ ನೋಂದಣಿ ಅವಧಿ ವಿಸ್ತರಣೆ

ಕರ್ನಾಟಕದ ಬರಪೀಡಿತ ಪ್ರದೇಶಗಳಲ್ಲಿ ಬೆಳೆ ವಿಮೆ ನೋಂದಣಿ ಹಾಗೂ ಪ್ರೀಮಿಯಂ ಕಡಿತದ ಅವಧಿಯನ್ನು…

7 hours ago

ರಾಜ್ಯದ 102 ತಾಲೂಕುಗಳಲ್ಲಿ ಬರದ ಛಾಯೆ – ತಿಂಗಳಾಂತ್ಯಕ್ಕೆ ಕೇಂದ್ರಕ್ಕೆ ವರದಿ ಸಲ್ಲಿಕೆ

ಕರ್ನಾಟಕದ 102 ತಾಲೂಕುಗಳಲ್ಲಿ ಬರ ಪರಿಸ್ಥಿತಿ ಉಂಟಾಗಿದ್ದು, ಈ ತಿಂಗಳಾಂತ್ಯಕ್ಕೆ ಕೇಂದ್ರ ಸರ್ಕಾರಕ್ಕೆ…

7 hours ago

ಮಂಗಳೂರಿನ ಅಶ್ಮಿತ್ ಎ.ಜೆ. ಅವರಿಗೆ ‘ಸರಿಗಮಪ 2026’ರ ಕಿರೀಟ

ಮಂಗಳೂರಿನ ಅಶ್ಮಿತ್ ಎ.ಜೆ. ಅವರು ಝೀ ಕನ್ನಡದ ‘ಸರಿಗಮಪ 2026’ರ ವಿಜೇತರಾಗಿ ₹20…

9 hours ago

ಮಲೆನಾಡು ತಪ್ಪಲಲ್ಲಿ ಧಾರಾಕಾರ ಮಳೆ – ಹಲವು ಕಡೆ ಕೆಲವೇ ಗಂಟೆಯಲ್ಲಿ 100 ಮಿಮೀ ದಾಟಿದ ಮಳೆ

ದಕ್ಷಿಣ ಕನ್ನಡದ ಮಲೆನಾಡು ತಪ್ಪಲಿನ ಸುಬ್ರಹ್ಮಣ್ಯ, ಸುಳ್ಯ, ಕಡಬ ಸೇರಿದಂತೆ ಹಲವು ಪ್ರದೇಶಗಳಲ್ಲಿ…

16 hours ago

ಹವಾಮಾನ ವರದಿ |25-08-2026 | ಕರಾವಳಿ, ಮಲೆನಾಡಿನಲ್ಲೂ ಬಿಡುವಿನ ಅವಧಿ ಹೆಚ್ಚಳ -ಕೆಲವೆಡೆ ಉತ್ತಮ ಮಳೆ – ರಾಜ್ಯದಲ್ಲಿ ಮಳೆ ಪರಿಸ್ಥಿತಿ ಹೇಗೆ..?

ಆಗಸ್ಟ್ 26ರಿಂದ ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಪ್ರಮಾಣ ಕಡಿಮೆಯಾಗುವ ಲಕ್ಷಣಗಳಿದ್ದು, ಕರಾವಳಿ…

17 hours ago

ಕರಾವಳಿಗೆ ವಾಡಿಕೆ ಮಳೆ, ಮಲೆನಾಡು ದಾಟದ ಮುಂಗಾರು ಮೋಡ..!

ಎಲ್ ನಿನೋ ಪರಿಣಾಮದಿಂದ ಮಳೆ ಕಡಿಮೆಯಾಗಬಹುದು ಎಂಬ ನಿರೀಕ್ಷೆಯ ನಡುವೆಯೂ ಕರಾವಳಿಯಲ್ಲಿ ಆಗಸ್ಟ್‌ನಲ್ಲಿ…

18 hours ago