ದಿನ ಬೆಳಗಾದರೆ ಬೆಂಗಳೂರು(Bengaluru) ಹಾಗೂ ಇತರ ನಗರಗಳು ಸೇರಿದಂತೆ ಕೇಳುವ ಸುದ್ದಿ ನಾಯಿಗಳ ಉಪಟಳ(Dog bite). ಬೀದಿನಾಯಿಗಳ(street dogs) ಅಟ್ಟಹಾಸದಿಂದ ಅದೆಷ್ಟೋ ಮಕ್ಕಳು(Children) ಪ್ರಾಣ ಕಳೆದುಕೊಂಡಿದ್ದಾರೆ. ಈ ಮಧ್ಯೆ ದೇಶಾದ್ಯಂತ ಹೆಚ್ಚುತ್ತಿರುವ ನಾಯಿ ಕಡಿತದ ಪ್ರಕರಣಗಳ ಮಧ್ಯೆ, “ಮನುಷ್ಯನ ಜೀವಕ್ಕೆ ಅಪಾಯ”(Danger to human life) ಎಂದು ಪರಿಗಣಿಸಲಾದ 23 ಕ್ರೂ” ನಾಯಿ ತಳಿಗಳ(Ferocious dog breed) ಆಮದು(Import), ಮಾರಾಟ(selling) ಮತ್ತು ಸಂತಾನೋತ್ಪತ್ತಿಯ(Breeding) ಮೇಲೆ ಕೇಂದ್ರವು(Central Govt) ನಿಷೇಧ(Ban) ಹೇರಿದೆ.
ಮೀನುಗಾರಿಕೆ(Fishing), ಪಶುಸಂಗೋಪನೆ ಮತ್ತು ಹೈನುಗಾರಿಕೆ ಸಚಿವಾಲಯದ(Animal Husbandry and Dairying ministry) ಜಂಟಿ ಕಾರ್ಯದರ್ಶಿ ಡಾ.ಒ.ಪಿ.ಚೌಧರಿ ಅವರು ನಿಷೇಧ ಹೇರಿರುವ ಬಗ್ಗೆ ಖಚಿತಪಡಿಸಿಕೊಳ್ಳಲು ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಮುಖ್ಯ ಕಾರ್ಯದರ್ಶಿಗಳಿಗೆ ಪತ್ರವನ್ನು ಕಳುಹಿಸಿದ್ದಾರೆ.
ನಿಷೇಧಿತ ನಾಯಿ ತಳಿಗಳ ಪಟ್ಟಿ: ಪಿಟ್ಬುಲ್ ಟೆರಿಯರ್, ಟೋಸಾ ಇನು, ಅಮೇರಿಕನ್ ಸ್ಟಾಫರ್ಡ್ಶೈರ್ ಟೆರಿಯರ್, ಫಿಲಾ ಬ್ರೆಸಿಲಿರೊ, ಡೊಗೊ ಅರ್ಜೆಂಟಿನೋ, ಅಮೇರಿಕನ್ ಬುಲ್ಡಾಗ್, ಬೋರ್ಬೋಲ್, ಕಂಗಲ್, ರಷ್ಯನ್ ಶೆಫರ್ಡ್, ಟೊರ್ನ್ಜಾಕ್, ಸರ್ಪ್ಲಾನಿನಾಕ್, ಜಪಾನೀಸ್ ಟೋಸಾ ಮತ್ತು ಅಕಿಟಾ, ಮಾಸ್ಟಿಫ್ಸ್, ರಾಟ್ವೀಲರ್, ಟೆರಿಯರ್ಗಳು ರಿಡ್ಜ್ಬ್ಯಾಕ್, ವುಲ್ಫ್ ಡಾಗ್ಸ್, ಕೆನರಿಯೊ, ಅಕ್ಬಾಶ್ ನಾಯಿ, ಮಾಸ್ಕೋ ಗಾರ್ಡ್ ಡಾಗ್, ಕೇನ್ ಕೊರ್ಸೊ, ಮತ್ತು ಸಾಮಾನ್ಯವಾಗಿ ಬ್ಯಾನ್ ಡಾಗ್ಗೆ ಭಾರತದಲ್ಲಿ ನಿಷೇಧವನ್ನು ವಿಧಿಸಲಾಗಿದೆ.ಮಿಶ್ರತಳಿಗಳು ಸೇರಿದಂತೆ ಮೇಲಿನ ನಾಯಿ ತಳಿಗಳನ್ನು ಆಮದು, ತಳಿ, ಸಾಕುನಾಯಿಗಳಾಗಿ ಮಾರಾಟ ಮಾಡುವುದು ಮತ್ತು ಇತರ ಉದ್ದೇಶಗಳಿಗಾಗಿ ನಿಷೇಧಿಸಲಾಗಿದೆ ಎಂದು ತಜ್ಞರ ಸಮಿತಿಯ ಶಿಫಾರಸುಗಳನ್ನು ಉಲ್ಲೇಖಿಸಿ ಪತ್ರದಲ್ಲಿ ತಿಳಿಸಲಾಗಿದೆ.
ಪಶು ಸಂಗೋಪನಾ ಆಯುಕ್ತರ ಅಧ್ಯಕ್ಷತೆಯಲ್ಲಿ ರಚಿಸಲಾದ ತಜ್ಞರ ಸಮಿತಿಯು ಈ ಮೇಲೆ ಉಲ್ಲೇಖಿಸಿದ ನಾಯಿ ತಳಿಗಳ ಆಮದನ್ನು ನಿಷೇಧಿಸಲು ಶಿಫಾರಸು ಮಾಡಿದೆ. ಶ್ವಾನ ಸಾಕಣೆ ಮತ್ತು ಮಾರುಕಟ್ಟೆ ನಿಯಮಗಳು 2017 ಮತ್ತು ಪೆಟ್ ಶಾಪ್ ನಿಯಮಗಳು 2018ರ ಜಾರಿಗಾಗಿ ಕೇಂದ್ರ ಸರ್ಕಾರವು ಇದೇ ವೇಳೆ ಸೂಚಿಸಿದೆ. ಎಥಿಕಲ್ ಟ್ರೀಟ್ಮೆಂಟ್ ಆಫ್ ಅನಿಮಲ್ಸ್ (PETA) ಇಂಡಿಯಾದಿಂದ ಮನವಿ ಮಾಡಿದ ನಂತರ ಕೇಂದ್ರದ ಈ ಕ್ರಮವು ಬಂದಿದೆ. ಈ ಬಗ್ಗೆ ಪೇಟಾ ದೆಹಲಿ ಹೈಕೋರ್ಟ್ನಲ್ಲಿ ರಿಟ್ ಅರ್ಜಿಯನ್ನೂ ಸಲ್ಲಿಸಿದೆ. ತನ್ನ ಅರ್ಜಿಯಲ್ಲಿ PETA, ಈ ಆದೇಶವು ಮಾನವರು ಮತ್ತು ನಾಯಿಗಳೆರಡಕ್ಕೂ ರಕ್ಷಣೆಯನ್ನು ಒದಗಿಸುವಲ್ಲಿ ಪ್ರಮುಖವಾಗಿದೆ ಎಂದು ತಿಳಿದು ಬಂದಿದೆ.
ಕಳೆದ ಕೆಲವು ತಿಂಗಳು ದೇಶಾದ್ಯಂತ ನಾಯಿ ಕಡಿತದಿಂದ ಹಲವಾರು ಸಾವುಗಳು ಸಂಭವಿಸಿವೆ. ಮಂಗಳವಾರ, ಹಿಮಾಚಲದ ಬಿಲಾಸ್ಪುರ ಪ್ರದೇಶದಲ್ಲಿ ಬೀದಿ ನಾಯಿಯ ದಾಳಿಯಿಂದ 20 ಜನರು ಗಾಯಗೊಂಡಿದ್ದರು. ದೆಹಲಿಯಲ್ಲಿ ಪಿಟ್ಬುಲ್ ದಾಳಿಯಿಂದ ಪುಟ್ಟ ಮಗು 17 ದಿನಗಳ ಕಾಲ ಆಸ್ಪತ್ರೆಗೆ ದಾಖಲಾಗಿದ್ದರು. ಕಳೆದ ವಾರ ಗಾಝಿಯಾಬಾದ್ನಲ್ಲಿ ಪಿಟ್ ಬುಲ್ ದಾಳಿಗೆ 10 ವರ್ಷದ ಇನ್ನೊಂದು ಮಗು ತೀವ್ರವಾಗಿ ಗಾಯಗೊಂಡಿತ್ತು.
Source : ANI
ದಕ್ಷಿಣ ಕನ್ನಡದ ಸುಳ್ಯ, ಸುಬ್ರಹ್ಮಣ್ಯ, ಬೆಳ್ತಂಗಡಿ, ಧರ್ಮಸ್ಥಳ ಸುತ್ತಮುತ್ತ ಭಾಗಗಳ ಒಂದೆರಡು ಕಡೆ…
ಹೆಚ್ಚಿನ ಭಾಗಗಳಲ್ಲಿ ಸಂಜೆ, ರಾತ್ರಿ ಮೋಡದ ವಾತಾವರಣದ ಮುನ್ಸೂಚೆನೆ ಇದ್ದು, ಘಟ್ಟದ ಕೆಳಗಿನ…
ಕೊಡಗು ಜಿಲ್ಲೆಯ ಕಕ್ಕಬೆಯ ಕುಂಜಿಲ ಪ್ರದೇಶದಲ್ಲಿ ಮಳೆಯಾಗಿದೆ.
ಅಧಿಕ ತಾಪಮಾನದೊಂದಿಗೆ ಮೋಡದ ವಾತಾವರಣದ ಮುನ್ಸೂಚನೆ ಇದೆ. ಸಂಜೆ, ರಾತ್ರಿಯ ವೇಳೆ ಘಟ್ಟದ…
ಕಾಲ್ತುಳಿತ ಪ್ರಕರಣಗಳಲ್ಲಿ ಸಾಮಾನ್ಯವಾಗಿ ಅಮಾಯಕರೇ ಸಾಯುತ್ತಾರೆ. ಅವರಿಗೆ ಯಾರು ಎಲ್ಲಿಂದ ಯಾಕೆ ತಳ್ಳುತ್ತಿದ್ದಾರೆಂದೇ…
ಅಡಿಕೆಯ ಮೈಟ್ ಬಗ್ಗೆ ಸಿಪಿಸಿಆರ್ಐ ನಿರ್ದೇಶಕರು ಮಾಹಿತಿ ಪ್ರಕಟಿಸಿದ್ದಾರೆ. ಈ ಬಾರಿ ಕೆಲವು…