ರೈತರನ್ನ ಸಂಕಷ್ಟಕ್ಕೆ ತಳ್ಳಿದ ಕೇಂದ್ರ ಸರ್ಕಾರ ನೀತಿ | ಈರುಳ್ಳಿ ದರ ನಿಯಂತ್ರಣ ನೀತಿಯಿಂದ ಮಾರ್ಕೆಟ್‌ನಲ್ಲೇ ಕೊಳೆಯುತ್ತಿದೆ ಲೋಡ್‌ಗಟ್ಟಲೆ ಈರುಳ್ಳಿ

February 2, 2024
1:39 PM
ಈರುಳ್ಳಿ ಬೆಳೆದ ರೈತರಿಗೆ ಈಗ ಧಾರಣೆಯ ಸಂಕಷ್ಟ ಇದೆ.

ಕಳೆದ ಕೆಲ ದಿನಗಳಿಂದ ಈರುಳ್ಳಿ ದರ(Onion Price) ಅತ್ತ ಆರಕ್ಕೂ ಏರದೇ ಇತ್ತ ಮೂರಕ್ಕೂ ಇಳಿಯದೆ ಗ್ರಾಹಕರ(customer) ಪಾಲಿಗೆ ಕೊಂಚ ತೃಪ್ತಿದಾಯಕವಾಗಿತ್ತು. ಆದರೆ ರೈತರು(Farmer) ದರ ಏರಬಹುದು ಅನ್ನುವ ನಿರೀಕ್ಷೆಯಲ್ಲಿದ್ರು.  ರೈತರ ಪಾಲಿಗೆ ಈಗ ಮತ್ತೆ ನಿರಾಸೆಯಾಗಿದೆ. ಈರುಳ್ಳಿ ದರ ಕುಸಿತಗೊಂಡಿದ್ದು ಗ್ರಾಹಕರಿಗೆ ಖುಷಿಯಾದರೆ ರೈತರಿಗೆ ಕಣ್ಣೀರು ತರಿಸ್ತಿದೆ.  ಮಳೆ‌ ಇಲ್ಲದೆ ಬಿತ್ತನೆ ಮಾಡಲಾಗದೇ ಸಂಕಷ್ಟ ಅನುಭವಿಸಿದ್ದ ಅನ್ನದಾತರಿಗೆ ಈಗ‌ ಮತ್ತೆ ಗಾಯದ ಮೇಲೆ‌ ಬರೆ ಎಳೆದಂತಾಗಿದೆ.

Advertisement
Advertisement

ಬೆಂಗಳೂರಿನ(Bengaluru) ಎಪಿಎಂಸಿ ಮಾರುಕಟ್ಟೆಯಲ್ಲಿ(APMC Market) ಕಣ್ಣು ಹಾಯಿಸಿದ ಕಡೆಯಲ್ಲ ಬರೀ ಈರುಳ್ಳಿ ಮೂಟೆಗಳ ರಾಶಿ. ಈರುಳ್ಳಿ ಲೋಡ್‌ ಜೊತೆಗೆ ಮಾರ್ಕೆಟ್‌ಗೆ ಎಂಟ್ರಿ ಕೊಡ್ತಿರೋ ಲಾರಿಗಳು. ಮಾರಾಟ ಆಗದೇ ಈರುಳ್ಳಿ ಉಳಿಯಲು ಕಾರಣ ಕೇಂದ್ರ ಸರ್ಕಾರದ ನಿರ್ಧಾರ. ಈರುಳ್ಳಿ ದರ ನಿಯಂತ್ರಣಕ್ಕೆ ಕೇಂದ್ರ ಸರ್ಕಾರ(Central Govt) ಕಳೆದ ಅಕ್ಟೋಬರ್‌ನಲ್ಲಿ ಈರುಳ್ಳಿ ರಫ್ತು(Onion Export)ಮಾಡೋದನ್ನ ನಿಷೇಧ ಮಾಡಿತ್ತು. ಆ ಬಳಿಕ ಈರುಳ್ಳಿ ಕೊರತೆ ಕಾರಣಕ್ಕೆ ದರ ನಿಯಂತ್ರಣಕ್ಕೆ ರಫ್ತು ನಿಷೇಧವನ್ನು ಮಾರ್ಚ್ 31ರ ವರೆಗೂ ವಿಸ್ತರಿಸಿತ್ತು. ಇದೀಗ ನಿರೀಕ್ಷೆಗಿಂತ ಅಧಿಕ ಇಳುವರಿ ಈರುಳ್ಳಿ ಬಂದಿದೆ. ಕೊಳ್ಳುವರಿಲ್ಲದೇ ದರ ಇಳಿಕೆಯಾಗಿದೆ. ಅನ್ನದಾತರಿಗೆ ಗಾಯದ ಮೇಲೆ ಬರೆ ಬಿದ್ದಂತಾಗಿದೆ.

ಬೆಂಗಳೂರು ಎಪಿಎಂಸಿ ಮಾರುಕಟ್ಟೆಯಲ್ಲಿ ದಿನದ ಬೇಡಿಕೆ ಸರಾಸರಿ 30 ರಿಂದ 40 ಸಾವಿರ ಮೂಟೆ‌ಯಿದೆ. ಆದರೆ ಕಳೆದ ಎರಡು ವಾರದಿಂದ ಬೇಡಿಕೆಗಿಂತ ಹೆಚ್ಚಿನ ಈರುಳ್ಳಿ ಮಾರ್ಕೆಟ್ ಗೆ ಬರ್ತಿದ್ದು, 50 ರಿಂದ 70 ಸಾವಿರ ಮೂಟೆ ಈರುಳ್ಳಿ ಬರ್ತಿದೆ. ಕಳೆದ ಶನಿವಾರ 80 ಸಾವಿರ ಮೂಟೆ ಈರುಳ್ಳಿ ಬಂದಿತ್ತು. ಇದರಿಂದ ಬೆಲೆ ಕಮ್ಮಿಯಾಗ್ತಿದೆ ಅಂತಾರೆ ವರ್ತಕರು.

ರಾಜ್ಯದ 13 ಜಿಲ್ಲೆಗಳಲ್ಲಿ ಒಟ್ಟು 30 ಲಕ್ಷದಷ್ಟು ಈರುಳ್ಳಿ ಬೆಳೆಗಾರರಿದ್ದಾರೆ, ಗದಗ, ಹುಬ್ಬಳ್ಳಿ ಧಾರವಾಡ, ಬಾಗಲಕೋಟೆಯಲ್ಲಿ ಅಧಿಕವಾಗಿ ಈರುಳ್ಳಿ ಬೆಳೆಯಲಾಗುತ್ತೆ. ಆದರೆ ರೈತರ ಶ್ರಮಕ್ಕೆ ತಕ್ಕ ಬೆಲೆ ಸಿಗುತ್ತಿಲ್ಲ. ಕ್ವಿಂಟಲ್‌ಗೆ ₹800 ರಿಂದ ₹1200 ಆಗಿದೆ. ರಫ್ತು ನಿಷೇಧ ತೆರವು ಮಾಡಿ ಅಂತ ರೈತರು ಆಗ್ರಹಿಸ್ತಿದ್ದಾರೆ. ಇನ್ನೂ ಮಹಾರಾಷ್ಟ್ರದ ನಾಸಿಕ್‌ನಿಂದಲೂ ಈರುಳ್ಳಿ ಬರ್ತಿರೋದು ಸಂಕಷ್ಟ ಎದುರಾಗಿದೆ. ಈರುಳ್ಳಿ ದರ ಕುಸಿತ ಗ್ರಾಹಕರಿಗೆ ಖುಷಿಯಾಗಿದ್ದರೆ ರೈತರಿಗೆ ಕಣ್ಣೀರು ತರಿಸ್ತಿದೆ. ಆದರೆ ಮಾರುಕಟ್ಟೆಯಲ್ಲಿ ಇಬ್ಬರ ಹಿತವೂ ಮುಖ್ಯ ಅನ್ನೋದು ಸತ್ಯ.

– ಅಂತರ್ಜಾಲ ಮಾಹಿತಿ

Advertisement

Onion prices have fallen, while the consumers are happy, the farmers are in tears. The rice farmers who had suffered because they could not sow without rain, now it is as if the wound has been drawn again.

Advertisement

Advertisement

Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಕೃಷಿ ಉತ್ಪನ್ನಗಳ ಮೌಲವರ್ಧನೆಗೆ ಪ್ರೋತ್ಸಾಹ | ಕೃಷಿ ಉದ್ಯಮಿಗಳಾಗುವಂತೆ ಉತ್ತೇಜನ
July 26, 2025
10:25 PM
by: The Rural Mirror ಸುದ್ದಿಜಾಲ
ದಾವಣಗೆರೆ ಜಿಲ್ಲೆಗೆ ಮುಂದಿನ 2050 ಮೆಟ್ರಿಕ್ ಟನ್ ಯೂರಿಯಾ ಗೊಬ್ಬರ ಪೂರೈಕೆಗೆ ಸಿದ್ಧತೆ
July 26, 2025
10:13 PM
by: The Rural Mirror ಸುದ್ದಿಜಾಲ
ಬಳ್ಳಾರಿಯಲ್ಲಿ ತಾಳೆ ಬೆಳೆ ಕುರಿತ ತರಬೇತಿ ಕಾರ್ಯಕ್ರಮ
July 26, 2025
10:05 PM
by: The Rural Mirror ಸುದ್ದಿಜಾಲ
ಹಾವೇರಿ ಜಿಲ್ಲೆಯಲ್ಲಿ ಹೆಚ್ಚುವರಿ ಯೂರಿಯಾ ರಸಗೊಬ್ಬರ ಪೂರೈಸುವಂತೆ  ಬೇಡಿಕೆ
July 26, 2025
9:12 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror

Join Our Group