Advertisement
MIRROR FOCUS

ರೈತರನ್ನ ಸಂಕಷ್ಟಕ್ಕೆ ತಳ್ಳಿದ ಕೇಂದ್ರ ಸರ್ಕಾರ ನೀತಿ | ಈರುಳ್ಳಿ ದರ ನಿಯಂತ್ರಣ ನೀತಿಯಿಂದ ಮಾರ್ಕೆಟ್‌ನಲ್ಲೇ ಕೊಳೆಯುತ್ತಿದೆ ಲೋಡ್‌ಗಟ್ಟಲೆ ಈರುಳ್ಳಿ

Share

ಕಳೆದ ಕೆಲ ದಿನಗಳಿಂದ ಈರುಳ್ಳಿ ದರ(Onion Price) ಅತ್ತ ಆರಕ್ಕೂ ಏರದೇ ಇತ್ತ ಮೂರಕ್ಕೂ ಇಳಿಯದೆ ಗ್ರಾಹಕರ(customer) ಪಾಲಿಗೆ ಕೊಂಚ ತೃಪ್ತಿದಾಯಕವಾಗಿತ್ತು. ಆದರೆ ರೈತರು(Farmer) ದರ ಏರಬಹುದು ಅನ್ನುವ ನಿರೀಕ್ಷೆಯಲ್ಲಿದ್ರು.  ರೈತರ ಪಾಲಿಗೆ ಈಗ ಮತ್ತೆ ನಿರಾಸೆಯಾಗಿದೆ. ಈರುಳ್ಳಿ ದರ ಕುಸಿತಗೊಂಡಿದ್ದು ಗ್ರಾಹಕರಿಗೆ ಖುಷಿಯಾದರೆ ರೈತರಿಗೆ ಕಣ್ಣೀರು ತರಿಸ್ತಿದೆ.  ಮಳೆ‌ ಇಲ್ಲದೆ ಬಿತ್ತನೆ ಮಾಡಲಾಗದೇ ಸಂಕಷ್ಟ ಅನುಭವಿಸಿದ್ದ ಅನ್ನದಾತರಿಗೆ ಈಗ‌ ಮತ್ತೆ ಗಾಯದ ಮೇಲೆ‌ ಬರೆ ಎಳೆದಂತಾಗಿದೆ.

ಬೆಂಗಳೂರಿನ(Bengaluru) ಎಪಿಎಂಸಿ ಮಾರುಕಟ್ಟೆಯಲ್ಲಿ(APMC Market) ಕಣ್ಣು ಹಾಯಿಸಿದ ಕಡೆಯಲ್ಲ ಬರೀ ಈರುಳ್ಳಿ ಮೂಟೆಗಳ ರಾಶಿ. ಈರುಳ್ಳಿ ಲೋಡ್‌ ಜೊತೆಗೆ ಮಾರ್ಕೆಟ್‌ಗೆ ಎಂಟ್ರಿ ಕೊಡ್ತಿರೋ ಲಾರಿಗಳು. ಮಾರಾಟ ಆಗದೇ ಈರುಳ್ಳಿ ಉಳಿಯಲು ಕಾರಣ ಕೇಂದ್ರ ಸರ್ಕಾರದ ನಿರ್ಧಾರ. ಈರುಳ್ಳಿ ದರ ನಿಯಂತ್ರಣಕ್ಕೆ ಕೇಂದ್ರ ಸರ್ಕಾರ(Central Govt) ಕಳೆದ ಅಕ್ಟೋಬರ್‌ನಲ್ಲಿ ಈರುಳ್ಳಿ ರಫ್ತು(Onion Export)ಮಾಡೋದನ್ನ ನಿಷೇಧ ಮಾಡಿತ್ತು. ಆ ಬಳಿಕ ಈರುಳ್ಳಿ ಕೊರತೆ ಕಾರಣಕ್ಕೆ ದರ ನಿಯಂತ್ರಣಕ್ಕೆ ರಫ್ತು ನಿಷೇಧವನ್ನು ಮಾರ್ಚ್ 31ರ ವರೆಗೂ ವಿಸ್ತರಿಸಿತ್ತು. ಇದೀಗ ನಿರೀಕ್ಷೆಗಿಂತ ಅಧಿಕ ಇಳುವರಿ ಈರುಳ್ಳಿ ಬಂದಿದೆ. ಕೊಳ್ಳುವರಿಲ್ಲದೇ ದರ ಇಳಿಕೆಯಾಗಿದೆ. ಅನ್ನದಾತರಿಗೆ ಗಾಯದ ಮೇಲೆ ಬರೆ ಬಿದ್ದಂತಾಗಿದೆ.

ಬೆಂಗಳೂರು ಎಪಿಎಂಸಿ ಮಾರುಕಟ್ಟೆಯಲ್ಲಿ ದಿನದ ಬೇಡಿಕೆ ಸರಾಸರಿ 30 ರಿಂದ 40 ಸಾವಿರ ಮೂಟೆ‌ಯಿದೆ. ಆದರೆ ಕಳೆದ ಎರಡು ವಾರದಿಂದ ಬೇಡಿಕೆಗಿಂತ ಹೆಚ್ಚಿನ ಈರುಳ್ಳಿ ಮಾರ್ಕೆಟ್ ಗೆ ಬರ್ತಿದ್ದು, 50 ರಿಂದ 70 ಸಾವಿರ ಮೂಟೆ ಈರುಳ್ಳಿ ಬರ್ತಿದೆ. ಕಳೆದ ಶನಿವಾರ 80 ಸಾವಿರ ಮೂಟೆ ಈರುಳ್ಳಿ ಬಂದಿತ್ತು. ಇದರಿಂದ ಬೆಲೆ ಕಮ್ಮಿಯಾಗ್ತಿದೆ ಅಂತಾರೆ ವರ್ತಕರು.

ರಾಜ್ಯದ 13 ಜಿಲ್ಲೆಗಳಲ್ಲಿ ಒಟ್ಟು 30 ಲಕ್ಷದಷ್ಟು ಈರುಳ್ಳಿ ಬೆಳೆಗಾರರಿದ್ದಾರೆ, ಗದಗ, ಹುಬ್ಬಳ್ಳಿ ಧಾರವಾಡ, ಬಾಗಲಕೋಟೆಯಲ್ಲಿ ಅಧಿಕವಾಗಿ ಈರುಳ್ಳಿ ಬೆಳೆಯಲಾಗುತ್ತೆ. ಆದರೆ ರೈತರ ಶ್ರಮಕ್ಕೆ ತಕ್ಕ ಬೆಲೆ ಸಿಗುತ್ತಿಲ್ಲ. ಕ್ವಿಂಟಲ್‌ಗೆ ₹800 ರಿಂದ ₹1200 ಆಗಿದೆ. ರಫ್ತು ನಿಷೇಧ ತೆರವು ಮಾಡಿ ಅಂತ ರೈತರು ಆಗ್ರಹಿಸ್ತಿದ್ದಾರೆ. ಇನ್ನೂ ಮಹಾರಾಷ್ಟ್ರದ ನಾಸಿಕ್‌ನಿಂದಲೂ ಈರುಳ್ಳಿ ಬರ್ತಿರೋದು ಸಂಕಷ್ಟ ಎದುರಾಗಿದೆ. ಈರುಳ್ಳಿ ದರ ಕುಸಿತ ಗ್ರಾಹಕರಿಗೆ ಖುಷಿಯಾಗಿದ್ದರೆ ರೈತರಿಗೆ ಕಣ್ಣೀರು ತರಿಸ್ತಿದೆ. ಆದರೆ ಮಾರುಕಟ್ಟೆಯಲ್ಲಿ ಇಬ್ಬರ ಹಿತವೂ ಮುಖ್ಯ ಅನ್ನೋದು ಸತ್ಯ.

– ಅಂತರ್ಜಾಲ ಮಾಹಿತಿ

Onion prices have fallen, while the consumers are happy, the farmers are in tears. The rice farmers who had suffered because they could not sow without rain, now it is as if the wound has been drawn again.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

2050 ರ ವೇಳೆಗೆ ಭೂಕುಸಿತದ ಅಪಾಯ ಮತ್ತಷ್ಟು ಹೆಚ್ಚಳ : ಮಳೆ ತೀವ್ರತೆ, ನಗರೀಕರಣವೇ ಪ್ರಮುಖ ಕಾರಣ – ಅಧ್ಯಯನ

2050ರ ವೇಳೆಗೆ ಮಳೆಯ ತೀವ್ರತೆ ಮತ್ತು ನಗರೀಕರಣದ ಪರಿಣಾಮವಾಗಿ ಭಾರತದ ಹಲವು ಗುಡ್ಡ…

18 hours ago

ಅಕಾಲದ ಹಸಿವು, ಅಸಮಯದ ನಿದ್ದೆ ದೇಹದ ಯಂತ್ರ ಕೆಟ್ಟಿರುವ ಸಂಕೇತ : ರಾಘವೇಶ್ವರ ಶ್ರೀ

ಅಕಾಲದ ಹಸಿವು ಮತ್ತು ಅಸಮಯದ ನಿದ್ದೆ ದೇಹದ ಯಂತ್ರದಲ್ಲಿ ಸಮಸ್ಯೆಯ ಸಂಕೇತ ಎಂದು…

19 hours ago

ಮತ್ತೆ ಚುರುಕುಗೊಂಡ ಮಳೆ | ಸುಳ್ಯ ಮಲೆನಾಡು ಭಾಗದಲ್ಲಿ ಬೆಳಗ್ಗಿನಿಂದ ಧಾರಾಕಾರ ಮಳೆ

ಸುಳ್ಯ ತಾಲೂಕಿನ ಮಲೆನಾಡು ಭಾಗದಲ್ಲಿ ಎರಡು ದಿನಗಳ ವಿರಾಮದ ಬಳಿಕ ಮತ್ತೆ ಭಾರೀ…

20 hours ago

ದೇಶದ ಅಡಿಕೆ ಉತ್ಪಾದನೆಯಲ್ಲಿ ಕರ್ನಾಟಕದ ಮೊದಲು – 75.47% ಉತ್ಪಾದನೆ, 71.56% ವಿಸ್ತೀರ್ಣದಲ್ಲಿ ಅಡಿಕೆ ಬೆಳೆ

ದೇಶದ ಅಡಿಕೆ ಉತ್ಪಾದನೆ ಹಾಗೂ ಬೆಳೆ ವಿಸ್ತೀರ್ಣದಲ್ಲಿ ಕರ್ನಾಟಕವೇ ಅಗ್ರಸ್ಥಾನದಲ್ಲಿದೆ ಎಂದು ಕೇಂದ್ರ…

1 day ago

ಕಳಪೆ ವಿದೇಶಿ ಅಡಿಕೆ ಆಮದು ನಿಯಂತ್ರಿಸಿ – ಕೋಟ ಶ್ರೀನಿವಾಸ ಪೂಜಾರಿ ಒತ್ತಾಯ

ವಿದೇಶದಿಂದ ಕಳಪೆ ಅಡಿಕೆ ಆಮದು ನಿಯಂತ್ರಿಸಿ ದೇಶೀಯ ಅಡಿಕೆ ಬೆಳೆಗಾರರನ್ನು ರಕ್ಷಿಸುವಂತೆ ಸಂಸದ…

1 day ago

ಹವಾಮಾನ ವರದಿ | 04-08-2026 | ರಾಜ್ಯದಲ್ಲಿ ಆಗಸ್ಟ್‌ 12 ರವರೆಗೆ ಮಳೆ ಸಾಧ್ಯತೆ – ಮುಂಗಾರು ದುರ್ಬಲವಾಗುವ ಲಕ್ಷಣ

ಕರಾವಳಿ ಜಿಲ್ಲೆಗಳಲ್ಲಿ ಆಗಸ್ಟ್‌ 12ರವರೆಗೆ ಬಿಟ್ಟುಬಿಟ್ಟು ಮಳೆಯಾಗುವ ಸಾಧ್ಯತೆ ಇದೆ. ಜಪಾನ್ ಸಮೀಪದ…

2 days ago