Advertisement
MIRROR FOCUS

ರೈತರನ್ನ ಸಂಕಷ್ಟಕ್ಕೆ ತಳ್ಳಿದ ಕೇಂದ್ರ ಸರ್ಕಾರ ನೀತಿ | ಈರುಳ್ಳಿ ದರ ನಿಯಂತ್ರಣ ನೀತಿಯಿಂದ ಮಾರ್ಕೆಟ್‌ನಲ್ಲೇ ಕೊಳೆಯುತ್ತಿದೆ ಲೋಡ್‌ಗಟ್ಟಲೆ ಈರುಳ್ಳಿ

Share

ಕಳೆದ ಕೆಲ ದಿನಗಳಿಂದ ಈರುಳ್ಳಿ ದರ(Onion Price) ಅತ್ತ ಆರಕ್ಕೂ ಏರದೇ ಇತ್ತ ಮೂರಕ್ಕೂ ಇಳಿಯದೆ ಗ್ರಾಹಕರ(customer) ಪಾಲಿಗೆ ಕೊಂಚ ತೃಪ್ತಿದಾಯಕವಾಗಿತ್ತು. ಆದರೆ ರೈತರು(Farmer) ದರ ಏರಬಹುದು ಅನ್ನುವ ನಿರೀಕ್ಷೆಯಲ್ಲಿದ್ರು.  ರೈತರ ಪಾಲಿಗೆ ಈಗ ಮತ್ತೆ ನಿರಾಸೆಯಾಗಿದೆ. ಈರುಳ್ಳಿ ದರ ಕುಸಿತಗೊಂಡಿದ್ದು ಗ್ರಾಹಕರಿಗೆ ಖುಷಿಯಾದರೆ ರೈತರಿಗೆ ಕಣ್ಣೀರು ತರಿಸ್ತಿದೆ.  ಮಳೆ‌ ಇಲ್ಲದೆ ಬಿತ್ತನೆ ಮಾಡಲಾಗದೇ ಸಂಕಷ್ಟ ಅನುಭವಿಸಿದ್ದ ಅನ್ನದಾತರಿಗೆ ಈಗ‌ ಮತ್ತೆ ಗಾಯದ ಮೇಲೆ‌ ಬರೆ ಎಳೆದಂತಾಗಿದೆ.

ಬೆಂಗಳೂರಿನ(Bengaluru) ಎಪಿಎಂಸಿ ಮಾರುಕಟ್ಟೆಯಲ್ಲಿ(APMC Market) ಕಣ್ಣು ಹಾಯಿಸಿದ ಕಡೆಯಲ್ಲ ಬರೀ ಈರುಳ್ಳಿ ಮೂಟೆಗಳ ರಾಶಿ. ಈರುಳ್ಳಿ ಲೋಡ್‌ ಜೊತೆಗೆ ಮಾರ್ಕೆಟ್‌ಗೆ ಎಂಟ್ರಿ ಕೊಡ್ತಿರೋ ಲಾರಿಗಳು. ಮಾರಾಟ ಆಗದೇ ಈರುಳ್ಳಿ ಉಳಿಯಲು ಕಾರಣ ಕೇಂದ್ರ ಸರ್ಕಾರದ ನಿರ್ಧಾರ. ಈರುಳ್ಳಿ ದರ ನಿಯಂತ್ರಣಕ್ಕೆ ಕೇಂದ್ರ ಸರ್ಕಾರ(Central Govt) ಕಳೆದ ಅಕ್ಟೋಬರ್‌ನಲ್ಲಿ ಈರುಳ್ಳಿ ರಫ್ತು(Onion Export)ಮಾಡೋದನ್ನ ನಿಷೇಧ ಮಾಡಿತ್ತು. ಆ ಬಳಿಕ ಈರುಳ್ಳಿ ಕೊರತೆ ಕಾರಣಕ್ಕೆ ದರ ನಿಯಂತ್ರಣಕ್ಕೆ ರಫ್ತು ನಿಷೇಧವನ್ನು ಮಾರ್ಚ್ 31ರ ವರೆಗೂ ವಿಸ್ತರಿಸಿತ್ತು. ಇದೀಗ ನಿರೀಕ್ಷೆಗಿಂತ ಅಧಿಕ ಇಳುವರಿ ಈರುಳ್ಳಿ ಬಂದಿದೆ. ಕೊಳ್ಳುವರಿಲ್ಲದೇ ದರ ಇಳಿಕೆಯಾಗಿದೆ. ಅನ್ನದಾತರಿಗೆ ಗಾಯದ ಮೇಲೆ ಬರೆ ಬಿದ್ದಂತಾಗಿದೆ.

ಬೆಂಗಳೂರು ಎಪಿಎಂಸಿ ಮಾರುಕಟ್ಟೆಯಲ್ಲಿ ದಿನದ ಬೇಡಿಕೆ ಸರಾಸರಿ 30 ರಿಂದ 40 ಸಾವಿರ ಮೂಟೆ‌ಯಿದೆ. ಆದರೆ ಕಳೆದ ಎರಡು ವಾರದಿಂದ ಬೇಡಿಕೆಗಿಂತ ಹೆಚ್ಚಿನ ಈರುಳ್ಳಿ ಮಾರ್ಕೆಟ್ ಗೆ ಬರ್ತಿದ್ದು, 50 ರಿಂದ 70 ಸಾವಿರ ಮೂಟೆ ಈರುಳ್ಳಿ ಬರ್ತಿದೆ. ಕಳೆದ ಶನಿವಾರ 80 ಸಾವಿರ ಮೂಟೆ ಈರುಳ್ಳಿ ಬಂದಿತ್ತು. ಇದರಿಂದ ಬೆಲೆ ಕಮ್ಮಿಯಾಗ್ತಿದೆ ಅಂತಾರೆ ವರ್ತಕರು.

ರಾಜ್ಯದ 13 ಜಿಲ್ಲೆಗಳಲ್ಲಿ ಒಟ್ಟು 30 ಲಕ್ಷದಷ್ಟು ಈರುಳ್ಳಿ ಬೆಳೆಗಾರರಿದ್ದಾರೆ, ಗದಗ, ಹುಬ್ಬಳ್ಳಿ ಧಾರವಾಡ, ಬಾಗಲಕೋಟೆಯಲ್ಲಿ ಅಧಿಕವಾಗಿ ಈರುಳ್ಳಿ ಬೆಳೆಯಲಾಗುತ್ತೆ. ಆದರೆ ರೈತರ ಶ್ರಮಕ್ಕೆ ತಕ್ಕ ಬೆಲೆ ಸಿಗುತ್ತಿಲ್ಲ. ಕ್ವಿಂಟಲ್‌ಗೆ ₹800 ರಿಂದ ₹1200 ಆಗಿದೆ. ರಫ್ತು ನಿಷೇಧ ತೆರವು ಮಾಡಿ ಅಂತ ರೈತರು ಆಗ್ರಹಿಸ್ತಿದ್ದಾರೆ. ಇನ್ನೂ ಮಹಾರಾಷ್ಟ್ರದ ನಾಸಿಕ್‌ನಿಂದಲೂ ಈರುಳ್ಳಿ ಬರ್ತಿರೋದು ಸಂಕಷ್ಟ ಎದುರಾಗಿದೆ. ಈರುಳ್ಳಿ ದರ ಕುಸಿತ ಗ್ರಾಹಕರಿಗೆ ಖುಷಿಯಾಗಿದ್ದರೆ ರೈತರಿಗೆ ಕಣ್ಣೀರು ತರಿಸ್ತಿದೆ. ಆದರೆ ಮಾರುಕಟ್ಟೆಯಲ್ಲಿ ಇಬ್ಬರ ಹಿತವೂ ಮುಖ್ಯ ಅನ್ನೋದು ಸತ್ಯ.

– ಅಂತರ್ಜಾಲ ಮಾಹಿತಿ

Onion prices have fallen, while the consumers are happy, the farmers are in tears. The rice farmers who had suffered because they could not sow without rain, now it is as if the wound has been drawn again.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹವಾಮಾನ ವರದಿ | 03-06-2026 | ಕರಾವಳಿಯಲ್ಲಿ ಮುಂಗಾರು ಚುರುಕು – ಜೂನ್ 8 ರಿಂದ ರಾಜ್ಯಾದ್ಯಂತ ಮಳೆಯ ಅಬ್ಬರ ಸಾಧ್ಯತೆ

ಕರ್ನಾಟಕದಲ್ಲಿ ಮುಂಗಾರು ಚಟುವಟಿಕೆ ಚುರುಕುಗೊಳ್ಳುತ್ತಿದ್ದು, ಕರಾವಳಿ ಜಿಲ್ಲೆಗಳಲ್ಲಿ ಉತ್ತಮ ಮಳೆಯ ಆರಂಭವಾಗಿದೆ. ಜೂನ್…

15 hours ago

ಕೇರಳಕ್ಕೆ ನೈಋತ್ಯ ಮಾನ್ಸೂನ್ ಪ್ರವೇಶ ಸಾಧ್ಯತೆ – ಕರಾವಳಿ, ಉತ್ತರ ಒಳನಾಡಿನಲ್ಲಿ ಭಾರೀ ಮಳೆ ಎಚ್ಚರಿಕೆ

ಗುರುವಾರದ ವೇಳೆಗೆ ಕೇರಳಕ್ಕೆ ನೈಋತ್ಯ ಮಾನ್ಸೂನ್ ಪ್ರವೇಶಿಸುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ…

22 hours ago

ಮಿಜೋರಾಂನಲ್ಲಿ ಅಡಿಕೆ ಕಳ್ಳಸಾಗಣೆ ವಿರುದ್ಧ ಕಠಿಣ ಕ್ರಮ | ₹24 ಕೋಟಿ ಮೌಲ್ಯದ ಅಡಿಕೆ ವಶ, 468 ಪ್ರಕರಣ ದಾಖಲು, 292 ಮಂದಿ ಬಂಧನ

ಮ್ಯಾನ್ಮಾರ್‌ನಿಂದ ಅಕ್ರಮವಾಗಿ ಸಾಗಾಟವಾಗುತ್ತಿದ್ದ ₹24 ಕೋಟಿ ಮೌಲ್ಯದ ಅಡಿಕೆಯನ್ನು ಮಿಜೋರಾಂ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.…

22 hours ago

ಮಳೆ ಆರಂಭವಾಗುತ್ತಿದ್ದಂತೆಯೇ ಗಿಡಗಳ ನಾಟಿಗೆ ಸಿದ್ಧತೆ – ಅಡಿಕೆ ಗಿಡಗಳಿಗೆ ಬೇಡಿಕೆ ಹೆಚ್ಚಾಗುತ್ತಿದೆ…!

ರಾಜ್ಯಾದ್ಯಂತ ಅಡಿಕೆ ಗಿಡಗಳಿಗೆ ಭಾರೀ ಬೇಡಿಕೆ ವ್ಯಕ್ತವಾಗಿದ್ದು,ಕೆಲವು ಕಡೆ ಸಸಿಯ ಬೆಲೆ ₹100ಕ್ಕೆ…

1 day ago

ಕೇಂದ್ರ ಸರ್ಕಾರದ ಸೌಲಭ್ಯಗಳಿಗೆ ‘ಕೇಂದ್ರ ರೈತ ಐಡಿ’ ಕಡ್ಡಾಯ – ಮಂಗಳೂರು ತಾಲೂಕಿನ 14,520 ರೈತರು ಇನ್ನೂ ನೋಂದಣಿ ಬಾಕಿ

ಕೇಂದ್ರ ಸರ್ಕಾರದ ವಿವಿಧ ಕೃಷಿ ಸೌಲಭ್ಯಗಳನ್ನು ಪಡೆಯಲು ‘ಕೇಂದ್ರ ರೈತ ಐಡಿ’ ಕಡ್ಡಾಯವಾಗುತ್ತಿದೆ.…

1 day ago

ಮಂಗಳೂರು ಚಾಲಿ ಅಡಿಕೆ ಮಾರುಕಟ್ಟೆಯಲ್ಲಿ ಧಾರಣೆ ಏರಿಕೆ | ಮತ್ತೆ ಚೇತರಿಕೆಯ ಸಂಕೇತ ನೀಡಿದ ಅಡಿಕೆ ಧಾರಣೆ

ಮಂಗಳೂರು ಚಾಲಿ ಅಡಿಕೆ ಮಾರುಕಟ್ಟೆಯಲ್ಲಿ ಕೆಜಿಗೆ ₹5 ಏರಿಕೆ ದಾಖಲಾಗಿದ್ದು, ಹೊಸ ಅಡಿಕೆ…

2 days ago