Advertisement
MIRROR FOCUS

ಉಚಿತ ವಿದ್ಯುತ್‌ ನೀಡುವ ಸರ್ಕಾರಗಳಿಗೆ ಕೇಂದ್ರ ಸರ್ಕಾರದಿಂದ ಎಚ್ಚರಿಕೆ | ಸಾಲದ ಸುಳಿಗೆ ಸಿಲುಕಲಿವೆ ರಾಜ್ಯಗಳು| ಕೇಂದ್ರ ಇಂಧನ ಸಚಿವ

Share

ಸಾಲ ಮಾಡಿ ಜನರಿಗೆ ಉಚಿತ ವಿದ್ಯುತ್‌ (Free Electricity) ನೀಡುವ ರಾಜ್ಯಗಳು ಸಾಲದ ಸುಳಿಗೆ ಸಿಲುಕಲಿವೆ ಎಂದು ಕೇಂದ್ರ ಸರ್ಕಾರ(Central Govt) ಎಚ್ಚರಿಕೆ ನೀಡಿದೆ.

Advertisement
Advertisement
ಈ ಕುರಿತು ಸಂದರ್ಶನವೊಂದರಲ್ಲಿ ಮಾತನಾಡಿರುವ ಕೇಂದ್ರ ಇಂಧನ ಸಚಿವ ಆ‌ರ್.ಕೆ. ಸಿಂಗ್ (RK Singh), ಪಂಜಾಬ್‌ನಂತಹ ರಾಜ್ಯಗಳು ಸಾಲದ ಹಣದಲ್ಲಿ ವಿದ್ಯುತ್ ಖರೀದಿಸಿ ಜನರಿಗೆ ಉಚಿತವಾಗಿ ನೀಡುತ್ತಿವೆ. ರಾಜ್ಯ ಸರ್ಕಾರದ ಬಳಿಯೇ ಸಾಕಷ್ಟು ಹಣವಿದ್ದರೆ ಇಂತಹ ಜನಪ್ರಿಯ ಯೋಜನೆಗಳನ್ನು ಜಾರಿಗೊಳಿಸುವುದು ಸರಿ. ಆದರೆ, ಸಾಲ ಮಾಡಿ ವಿದ್ಯುತ್ ನೀಡಿದರೆ ಅದಕ್ಕೆ ಸರ್ಕಾರಗಳು ಬೆಲೆ ತೆರಬೇಕಾಗುತ್ತದೆ. ಏಕೆಂದರೆ ವಿದ್ಯುತ್ ತಯಾರಿಸಲು ಖರ್ಚು ತಗಲುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ.

ಬೇರೆಲ್ಲಾ ಉತ್ಪನ್ನಗಳಂತೆ ವಿದ್ಯುತ್ ತಯಾರಿಸಲು ಕೂಡ ಹಣ ಬೇಕು. 2022 ರಲ್ಲಿ ಪಂಜಾಬ್‌ನಲ್ಲಿ ಆಮ್ ಆದ್ಮಿ ಪಕ್ಷ (AAP) ಸರ್ಕಾರವು ಅಧಿಕಾರಕ್ಕೆ ಬಂದ ನಂತರ ಪ್ರತಿ ಮನೆಗೆ 300 ಯೂನಿಟ್‌ಗಳವರೆಗೆ ಉಚಿತ ವಿದ್ಯುತ್ ಸೇರಿದಂತೆ ಹಲವಾರು ಜನಪರ ಕ್ರಮಗಳನ್ನು ಕೈಗೊಂಡಿದೆ. ಇದರಿಂದ ಪಂಜಾಬ್‌ನ ಎಎಪಿ ಸರ್ಕಾರದ (Punjab Government) ಈಗಾಗಲೇ 2 ವರ್ಷಗಳಲ್ಲಿ 47,000 ಕೋಟಿ ರೂಪಾಯಿಗಳಷ್ಟು ಸಾಲ ಪಡೆದುಕೊಂಡಿದೆ. ಜನರಿಗೆ ಯಾವುದೇ ರಾಜ್ಯ ಸರ್ಕಾರ ವಿದ್ಯುತ್ತನ್ನು ಉಚಿತವಾಗಿ ನೀಡುತ್ತದೆಯಾದರೆ ಅಷ್ಟು ಹಣ ರಾಜ್ಯ ಸರ್ಕಾರದ ಬಳಿಯೇ ಇರಬೇಕು. ಸಾಲ ಮಾಡಿ ಹಣ ತಂದು ಜನರಿಗೆ ಉಚಿತ ವಿದ್ಯುತ್‌ ನೀಡಿದರೆ ಖಂಡಿತ ಸಾಲದ ಸುಳಿಯಲ್ಲಿ ಸಿಲುಕಬೇಕಾಗುತ್ತದೆ ಎಂದು ಹೇಳಿದ್ದಾರೆ.

Advertisement

ವಿದ್ಯುತ್ ಉಚಿತವಾಗಿ ಸಿಗೋದಿಲ್ಲ ಎಂದು ನಾನು ರಾಜ್ಯಗಳಿಗೆ ಹೇಳುತ್ತಲೇ ಬಂದಿದ್ದೇನೆ. ಆದರೂ ಅವು ವಿದ್ಯುತ್ತನ್ನು ಉಚಿತವಾಗಿ ನೀಡುತ್ತವೆಯಾದರೆ ಅದಕ್ಕೆ ಬೆಲೆ ತೆರಬೇಕಾಗುತ್ತದೆ. ಈಗಾಗಲೇ ಸಾಲದಲ್ಲಿರುವ ರಾಜ್ಯಗಳು ಉಚಿತ ವಿದ್ಯುತ್‌ನಂತಹ ಜನಪ್ರಿಯ ಯೋಜನೆಗಳಿಗಾಗಿ ಇನ್ನಷ್ಟು ಸಾಲ ಮಾಡುತ್ತಿವೆ. ಹೀಗೆ ಸಾಲದ ಸುಳಿಗೆ ರಾಜ್ಯವನ್ನು ಸಿಲುಕಿಸಬಾರದು. ಉಚಿತಗಳಿಂದಾಗಿಯೇ ಅನೇಕ ರಾಜ್ಯ ಸರ್ಕಾರಗಳು ಸಾಲದ ಸುಳಿಯಲ್ಲಿ ಸಿಲುಕುತ್ತಿವೆ ಎಂದೂ ಅಭಿಪ್ರಾಯಪಟ್ಟಿದ್ದಾರೆ.

  • ಅಂತರ್ಜಾಲ ಮಾಹಿತಿ

Union Energy Minister RK Singh issued a stern warning to states indulging in the practice of providing free electricity to citizens, citing concerns over escalating debt. Singh highlighted the case of Punjab, which procures electricity through loans to distribute it at no cost to the populace. He emphasized that while such schemes may be popular, they come with a hefty financial burden that could push states further into indebtedness.

Advertisement
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಸುಸ್ಥಿರ ಕೃಷಿ ತರಬೇತಿ ಕಾರ್ಯಗಾರ | ಯುವ ಕೃಷಿಕರಿಗೆ ಕೃಷಿ ಬಗ್ಗೆ ಮಾಹಿತಿ

ಮೂರು ದಿನಗಳ 'ಸುಸ್ಥಿರ ಕೃಷಿ ತರಬೇತಿ'(Sustainable Agriculture Training) ಕಾರ್ಯಾಗಾರ ಮೇ.28 ರಿಂದ…

16 hours ago

ಕೆರೆಯಲ್ಲಿ ಸಾಕಿದ್ದ ಮೀನುಗಳ ಮಾರಣಹೋಮ | ಬೃಹತ್‌ ಗಾತ್ರ ಮೀನು ಸಾವು | ಅಪಾರ ನಷ್ಟ |

ದಾವಣಗೆರೆ(Davanagere) ತಾಲೂಕಿನ ಬೇತೂರು ಗ್ರಾಮದಲ್ಲಿರುವ  ಕೆರೆಯಲ್ಲಿ(Lake) ಮೀನುಗಳ(Fish) ಮಾರಣಹೋಮವಾಗಿದೆ(Dead). ಈ ಕೆರೆಯಲ್ಲಿ 3…

16 hours ago

ಮೇ 31ಕ್ಕೆ ದೇಶದಲ್ಲಿ ಮುಂಗಾರು ಪ್ರವೇಶ ಸಾಧ್ಯತೆ | ಜೂನ್ ಮೊದಲ ವಾರದಲ್ಲಿ ರಾಜ್ಯಕ್ಕೆ ಮುಂಗಾರು ಮಳೆ |

ಮೇ 31ರಿಂದ ದೇಶದಲ್ಲಿ ಮುಂಗಾರು ಮಳೆ ಆರಂಭವಾಗುವ ನಿರೀಕ್ಷೆಯಿದೆ ಎಂದು ಹವಾಮಾನ ಇಲಾಖೆ…

17 hours ago

ಭಾರತ ಚಂದ್ರನಂಗಳದಲ್ಲಿದೆ | ನಮ್ಮ ಮಕ್ಕಳು ಚರಂಡಿಯಲ್ಲಿ ಬಿದ್ದು ಸಾಯುತ್ತಿದ್ದಾರೆ | ಪಾಕ್ ಸಂಸದ ಪಾಕ್‌ ಆಡಳಿತ ವಿರುದ್ಧ ಕಿಡಿ

ಭಾರತ (India) ಚಂದ್ರನನ್ನು(Moon) ತಲುಪಿದೆ. ಆದರೆ ನಮ್ಮ ಮಕ್ಕಳು(Children) ಇಲ್ಲಿ ಚರಂಡಿಯಲ್ಲಿ ಬಿದ್ದು…

17 hours ago

ಎರಡನೇ ವರ್ಷದ ಆನೆ ಗಣತಿಗೆ ದಕ್ಷಿಣ ಭಾರತದ 4 ರಾಜ್ಯಗಳು ಸಜ್ಜು | ಆನೆಗಳ ಸಂಖ್ಯೆ ಹೆಚ್ಚಳವಾಗಿದೆಯೇ..?

ಕರ್ನಾಟಕ(Karnataka), ತಮಿಳುನಾಡು(Tamilnadu), ಆಂಧ್ರಪ್ರದೇಶ(Andra Pradesh) ಮತ್ತು ಕೇರಳ(Kerala) ಒಳಗೊಂಡ ದಕ್ಷಿಣ ಭಾರತದ ನಾಲ್ಕು…

20 hours ago

Karnataka Weather |16-05-2024 | ಹಲವು ಕಡೆ ಗುಡುಗು ಸಹಿತ ಮಳೆ ನಿರೀಕ್ಷೆ | ಮೇ 17 ರಿಂದ ಉತ್ತಮ ಮಳೆ ಸಾಧ್ಯತೆ |

ಮೇ 17 ರಿಂದ ದಕ್ಷಿಣ ಒಳನಾಡು, ಮಲೆನಾಡು ಭಾಗಗಳಲ್ಲಿ ಉತ್ತಮ ಮಳೆಯ ಮುನ್ಸೂಚೆನೆ…

20 hours ago