ತಾತ್ಕಾಲಿಕವಾಗಿ ಸ್ಥಗಿತಗೊಂಡ ಕೇಂದ್ರ ಸರ್ಕಾರದ ಭಾರತ್‌ ರೈಸ್‌ ಮಾರಾಟ | ಭತ್ತದ ಉತ್ಪಾದನೆ ಕುಂಠಿತ | ಹೊಸ ನೀತಿ ಜಾರಿಗೆ ತರಲು ಚಿಂತನೆ

July 4, 2024
1:18 PM

ಭತ್ತ ಬೆಳೆಯುವವರ(Paddy crop) ಸಂಖ್ಯೆ ಕಡಿಮೆಯಾಗಿದೆ. ಅಕ್ಕಿ ರೇಟ್‌(Rice rate) ಗಗನಕ್ಕೇರಿದೆ. ಹೀಗೆ ಮುಂದುವರೆದರೆ ಅಕ್ಕಿ ಕೊಂಡುಕೊಳ್ಳಲು ಬಹಳ ದುಸ್ತರ ಎದುರಾಗೋದ್ರಲ್ಲಿ ಅನುಮಾನವೇ ಬೇಡ. ಬಡವರಿಗೆ(Poor) ಹಾಗೂ ಮಧ್ಯಮ ವರ್ಗದ(Middle class) ಜನರಿಗೆ ಈಗಾಗಲೇ ಅಕ್ಕಿ ಕೊಳ್ಳಲು ಬಹಳ ಕಷ್ಟವಾಗುತ್ತಿದೆ. ಈ ನಿಟ್ಟಿನಲ್ಲಿ ಕೇಂದ್ರ ಸರ್ಕಾರ(Central govt)  ಮಹತ್ವಾಕಾಂಕ್ಷಿಯ ಭಾರತ್‌ ರೈಸ್‌ (Bharat Rice) ಮಾರಾಟವನ್ನು  ಆರಂಭಿಸಿತ್ತು. ಇದರಿಂದ ಬಹಳ ಜನರಿಗೆ ಅನುಕೂಲವಾಗುತ್ತಿತ್ತು. ಆದರೆ ಜುಲೈ ತಿಂಗಳಿನಿಂದ ತಾತ್ಕಾಲಿಕವಾಗಿ ಈ ಯೋಜನೆಯನ್ನು ಸ್ಥಗಿತ ಮಾಡಲಾಗಿದೆ. ದೇಶದ ಎಲ್ಲಾ ಜನರಿಗೆ ಕಡಿಮೆ ಬೆಲೆಯಲ್ಲಿ ಅಕ್ಕಿ ವಿತರಿಸಲು ಕೇಂದ್ರ ಸರ್ಕಾರ ಫೆಬ್ರವರಿಯಲ್ಲಿ ಭಾರತ್‌ ರೈಸ್‌ ಅಕ್ಕಿಯನ್ನು ಬಿಡುಗಡೆ ಮಾಡಿತ್ತು. ಲೋಕಸಭಾ ಚುನಾವಣೆ (Lok Sabha Election) ಸಂದರ್ಭದಲ್ಲಿ ಈ ಅಕ್ಕಿ ಮತದಾರರನ್ನು ಸೆಳೆದಿತ್ತು.

Advertisement
Advertisement

ಈ ಯೋಜನೆಯ ಅಡಿ 29 ರೂ.ಗೆ 1 ಕೆಜಿ ಅಕ್ಕಿ, 27.50 ರೂ.ಗೆ 1 ಕೆಜಿ ಗೋಧಿ ಹಿಟ್ಟು, 60 ರೂ.ಗೆ 1 ಕೆಜಿ ಕಡಲೆ ಬೆಳೆ ಮಾರಾಟ ಮಾಡಲಾಗುತ್ತಿತ್ತು. ಜನ ಸಂದಣಿ ಹೆಚ್ಚಿನ ಜಾಗಗಳಲ್ಲಿ ಮೊಬೈಲ್‌ ವ್ಯಾನ್‌ ಮೂಲಕ ಅಕ್ಕಿ, ಬೆಳೆಗಳನ್ನು ಗ್ರಾಹಕರಿಗೆ ನೀಡಲಾಗುತ್ತಿತ್ತು. ಜೂನ್ 10 ರವರೆಗೆ ಕೇಂದ್ರ ಸರ್ಕಾರ ಆದೇಶದ ಅನ್ವಯ ದಾಸ್ತಾನುಗಳು ಮಾರಾಟವಾದ ನಂತರ ಪೂರೈಕೆಯನ್ನು ಸ್ಥಗಿತ ಮಾಡಲಾಗಿದೆ.

Advertisement

ಕಳೆದ ವರ್ಷ ಮಳೆಯಾಗದ ಕಾರಣ ಭತ್ತದ ಉತ್ಪಾದನೆ ಕುಂಠಿತಗೊಂಡಿದೆ. ದೇಶಾದ್ಯಂತ ಈ ಯೋಜನೆ ಜಾರಿಯಲ್ಲಿರುವ ಕಾರಣ ಪೂರೈಕೆ ಮಾಡುವುದು ಕಷ್ಟವಾಗುತ್ತಿದೆ. ಭಾರತ್‌ ಅಕ್ಕಿ ವಿತರಣೆ ಸಂಬಂಧ ಕೇಂದ್ರ ಸರ್ಕಾರ ಹೊಸ ನೀತಿ ಜಾರಿಗೆ ತರಲು ಚಿಂತನೆ ಮಾಡಿದೆ ಎನ್ನಲಾಗುತ್ತಿದೆ. ಈ ಕಾರಣಕ್ಕೆ ತಾತ್ಕಾಲಿಕವಾಗಿ ಭಾರತ್‌ ರೈಸ್‌ ಮಾರಾಟವನ್ನು ಸ್ಥಗಿತಗೊಳಿಸಲಾಗಿದೆ ಎಂಬ ಮಾತುಗಳು ಕೇಳಿ ಬಂದಿದೆ.

ಮೆಚ್ಚುಗೆ ವ್ಯಕ್ತವಾಗಿತ್ತು: ಬಿಪಿಎಲ್‌ ಕಾರ್ಡ್‌ ಇರುವವರಿಗೆ ಕೇಂದ್ರ ಸರ್ಕಾರ ಉಚಿತವಾಗಿ ಪ್ರತಿ ವ್ಯಕ್ತಿಗೆ ಐದು ಕೆ.ಜಿ. ಅಕ್ಕಿಯನ್ನು ಈಗಾಗಲೇ ನೀಡುತ್ತಿದೆ. ಎಪಿಎಲ್‌ ಪಡಿತರ ಚೀಟಿ ಹೊಂದಿದವರಿಗೆ ಕೆ.ಜಿ.ಗೆ 15 ರೂ.ನಂತೆ 10 ಕೆ.ಜಿ. ಅಕ್ಕಿ ವಿತರಿಸಲಾಗುತ್ತದೆ. ಈ ಎರಡೂ ಬಗೆಯ ಪಡಿತರ ಚೀಟಿ ಇಲ್ಲದ ಲಕ್ಷಾಂತರ ಕುಟುಂಬಗಳಿಗೆ ನೆರವಾಗುವ ಉದ್ದೇಶದಿಂದ ಕೇಂದ್ರ ಸರ್ಕಾರ ಕಡಿಮೆ ಬೆಲೆಗೆ ಈ ಭಾರತ್‌ ಬ್ರ್ಯಾಂಡ್‌ನ ಅಡಿಯಲ್ಲಿ ಅಕ್ಕಿ, ಬೆಳೆಗಳನ್ನು ಮಾರಾಟ ಮಾಡುತ್ತಿತ್ತು. ಕಡಿಮೆ ಬೆಲೆಗೆ ಗುಣಮಟ್ಟದ ಅಕ್ಕಿ, ಬೆಳೆ ಸಿಕ್ಕಿದ್ದಕ್ಕೆ ಗ್ರಾಹಕರು ಮೆಚ್ಚುಗೆ ವ್ಯಕ್ತಪಡಿಸಿದ್ದರು.

Advertisement
  • ಅಂತರ್ಜಾಲ ಮಾಹಿತಿ

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಡ್ರಾಗನ್‌ ಫ್ರುಟ್‌ ಬೆಳೆದು ಮಾರುಕಟ್ಟೆ ಕಂಡುಕೊಂಡ ಕೃಷಿಕ | ಸಣ್ಣ ರೈತರು ಮಾರುಕಟ್ಟೆಗೆ ಚಿಂತಿಸಬೇಕಿಲ್ಲ…!
July 6, 2024
9:37 PM
by: ಮಹೇಶ್ ಪುಚ್ಚಪ್ಪಾಡಿ
ಮಳೆ ಹಿನ್ನೆಲೆಯಲ್ಲಿ ಗಿರಿಶಿಖರಗಳ ಟ್ರೆಕ್ಕಿಂಗ್ ನಿಷೇಧ | ನೀರಿಗೆ ಇಳಿಯದಂತೆ ಜಿಲ್ಲಾಧಿಕಾರಿ ಆದೇಶ |
July 6, 2024
8:18 PM
by: ದ ರೂರಲ್ ಮಿರರ್.ಕಾಂ
ಕುಸಿಯುತ್ತಿರುವ ಸೇತುವೆಗಳು ಮತ್ತು ಕಬ್ಬಿಣ ಹಾಗು ಸಿಮೆಂಟಿನ ಜಾಹೀರಾತುಗಳು…!
July 6, 2024
1:07 PM
by: ವಿವೇಕಾನಂದ ಎಚ್‌ ಕೆ
ನಿಮಗಿದು ಗೊತ್ತೇ…? | RO ಹಾಗೂ ಬಾಟಲಿ ನೀರುಗಳನ್ನು ತ್ಯಜಿಸಿ ಮನೆಯಲ್ಲಿ ಸಜೀವಗೊಳಿಸಿದ ನೀರನ್ನು ಬಳಸಿ
July 6, 2024
12:33 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror