ತಾತ್ಕಾಲಿಕವಾಗಿ ಸ್ಥಗಿತಗೊಂಡ ಕೇಂದ್ರ ಸರ್ಕಾರದ ಭಾರತ್‌ ರೈಸ್‌ ಮಾರಾಟ | ಭತ್ತದ ಉತ್ಪಾದನೆ ಕುಂಠಿತ | ಹೊಸ ನೀತಿ ಜಾರಿಗೆ ತರಲು ಚಿಂತನೆ

July 4, 2024
1:18 PM

ಭತ್ತ ಬೆಳೆಯುವವರ(Paddy crop) ಸಂಖ್ಯೆ ಕಡಿಮೆಯಾಗಿದೆ. ಅಕ್ಕಿ ರೇಟ್‌(Rice rate) ಗಗನಕ್ಕೇರಿದೆ. ಹೀಗೆ ಮುಂದುವರೆದರೆ ಅಕ್ಕಿ ಕೊಂಡುಕೊಳ್ಳಲು ಬಹಳ ದುಸ್ತರ ಎದುರಾಗೋದ್ರಲ್ಲಿ ಅನುಮಾನವೇ ಬೇಡ. ಬಡವರಿಗೆ(Poor) ಹಾಗೂ ಮಧ್ಯಮ ವರ್ಗದ(Middle class) ಜನರಿಗೆ ಈಗಾಗಲೇ ಅಕ್ಕಿ ಕೊಳ್ಳಲು ಬಹಳ ಕಷ್ಟವಾಗುತ್ತಿದೆ. ಈ ನಿಟ್ಟಿನಲ್ಲಿ ಕೇಂದ್ರ ಸರ್ಕಾರ(Central govt)  ಮಹತ್ವಾಕಾಂಕ್ಷಿಯ ಭಾರತ್‌ ರೈಸ್‌ (Bharat Rice) ಮಾರಾಟವನ್ನು  ಆರಂಭಿಸಿತ್ತು. ಇದರಿಂದ ಬಹಳ ಜನರಿಗೆ ಅನುಕೂಲವಾಗುತ್ತಿತ್ತು. ಆದರೆ ಜುಲೈ ತಿಂಗಳಿನಿಂದ ತಾತ್ಕಾಲಿಕವಾಗಿ ಈ ಯೋಜನೆಯನ್ನು ಸ್ಥಗಿತ ಮಾಡಲಾಗಿದೆ. ದೇಶದ ಎಲ್ಲಾ ಜನರಿಗೆ ಕಡಿಮೆ ಬೆಲೆಯಲ್ಲಿ ಅಕ್ಕಿ ವಿತರಿಸಲು ಕೇಂದ್ರ ಸರ್ಕಾರ ಫೆಬ್ರವರಿಯಲ್ಲಿ ಭಾರತ್‌ ರೈಸ್‌ ಅಕ್ಕಿಯನ್ನು ಬಿಡುಗಡೆ ಮಾಡಿತ್ತು. ಲೋಕಸಭಾ ಚುನಾವಣೆ (Lok Sabha Election) ಸಂದರ್ಭದಲ್ಲಿ ಈ ಅಕ್ಕಿ ಮತದಾರರನ್ನು ಸೆಳೆದಿತ್ತು.

Advertisement

ಈ ಯೋಜನೆಯ ಅಡಿ 29 ರೂ.ಗೆ 1 ಕೆಜಿ ಅಕ್ಕಿ, 27.50 ರೂ.ಗೆ 1 ಕೆಜಿ ಗೋಧಿ ಹಿಟ್ಟು, 60 ರೂ.ಗೆ 1 ಕೆಜಿ ಕಡಲೆ ಬೆಳೆ ಮಾರಾಟ ಮಾಡಲಾಗುತ್ತಿತ್ತು. ಜನ ಸಂದಣಿ ಹೆಚ್ಚಿನ ಜಾಗಗಳಲ್ಲಿ ಮೊಬೈಲ್‌ ವ್ಯಾನ್‌ ಮೂಲಕ ಅಕ್ಕಿ, ಬೆಳೆಗಳನ್ನು ಗ್ರಾಹಕರಿಗೆ ನೀಡಲಾಗುತ್ತಿತ್ತು. ಜೂನ್ 10 ರವರೆಗೆ ಕೇಂದ್ರ ಸರ್ಕಾರ ಆದೇಶದ ಅನ್ವಯ ದಾಸ್ತಾನುಗಳು ಮಾರಾಟವಾದ ನಂತರ ಪೂರೈಕೆಯನ್ನು ಸ್ಥಗಿತ ಮಾಡಲಾಗಿದೆ.

ಕಳೆದ ವರ್ಷ ಮಳೆಯಾಗದ ಕಾರಣ ಭತ್ತದ ಉತ್ಪಾದನೆ ಕುಂಠಿತಗೊಂಡಿದೆ. ದೇಶಾದ್ಯಂತ ಈ ಯೋಜನೆ ಜಾರಿಯಲ್ಲಿರುವ ಕಾರಣ ಪೂರೈಕೆ ಮಾಡುವುದು ಕಷ್ಟವಾಗುತ್ತಿದೆ. ಭಾರತ್‌ ಅಕ್ಕಿ ವಿತರಣೆ ಸಂಬಂಧ ಕೇಂದ್ರ ಸರ್ಕಾರ ಹೊಸ ನೀತಿ ಜಾರಿಗೆ ತರಲು ಚಿಂತನೆ ಮಾಡಿದೆ ಎನ್ನಲಾಗುತ್ತಿದೆ. ಈ ಕಾರಣಕ್ಕೆ ತಾತ್ಕಾಲಿಕವಾಗಿ ಭಾರತ್‌ ರೈಸ್‌ ಮಾರಾಟವನ್ನು ಸ್ಥಗಿತಗೊಳಿಸಲಾಗಿದೆ ಎಂಬ ಮಾತುಗಳು ಕೇಳಿ ಬಂದಿದೆ.

ಮೆಚ್ಚುಗೆ ವ್ಯಕ್ತವಾಗಿತ್ತು: ಬಿಪಿಎಲ್‌ ಕಾರ್ಡ್‌ ಇರುವವರಿಗೆ ಕೇಂದ್ರ ಸರ್ಕಾರ ಉಚಿತವಾಗಿ ಪ್ರತಿ ವ್ಯಕ್ತಿಗೆ ಐದು ಕೆ.ಜಿ. ಅಕ್ಕಿಯನ್ನು ಈಗಾಗಲೇ ನೀಡುತ್ತಿದೆ. ಎಪಿಎಲ್‌ ಪಡಿತರ ಚೀಟಿ ಹೊಂದಿದವರಿಗೆ ಕೆ.ಜಿ.ಗೆ 15 ರೂ.ನಂತೆ 10 ಕೆ.ಜಿ. ಅಕ್ಕಿ ವಿತರಿಸಲಾಗುತ್ತದೆ. ಈ ಎರಡೂ ಬಗೆಯ ಪಡಿತರ ಚೀಟಿ ಇಲ್ಲದ ಲಕ್ಷಾಂತರ ಕುಟುಂಬಗಳಿಗೆ ನೆರವಾಗುವ ಉದ್ದೇಶದಿಂದ ಕೇಂದ್ರ ಸರ್ಕಾರ ಕಡಿಮೆ ಬೆಲೆಗೆ ಈ ಭಾರತ್‌ ಬ್ರ್ಯಾಂಡ್‌ನ ಅಡಿಯಲ್ಲಿ ಅಕ್ಕಿ, ಬೆಳೆಗಳನ್ನು ಮಾರಾಟ ಮಾಡುತ್ತಿತ್ತು. ಕಡಿಮೆ ಬೆಲೆಗೆ ಗುಣಮಟ್ಟದ ಅಕ್ಕಿ, ಬೆಳೆ ಸಿಕ್ಕಿದ್ದಕ್ಕೆ ಗ್ರಾಹಕರು ಮೆಚ್ಚುಗೆ ವ್ಯಕ್ತಪಡಿಸಿದ್ದರು.

  • ಅಂತರ್ಜಾಲ ಮಾಹಿತಿ
Advertisement
Advertisement
Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಕೊಕೋ ಕಹಿ | ಬೇಡಿಕೆ ಇದ್ದರೂ ಬೆಲೆ ಇಳಿಕೆ.. ರೈತರು ಸಂಕಷ್ಟದಲ್ಲಿ
January 22, 2026
7:33 AM
by: ದ ರೂರಲ್ ಮಿರರ್.ಕಾಂ
ಅಡಿಕೆ ಮಾರುಕಟ್ಟೆಯ ಗುಟ್ಟು : ಏನಿದು Push & Pull ತಂತ್ರ
January 22, 2026
7:05 AM
by: ಅರುಣ್‌ ಕುಮಾರ್ ಕಾಂಚೋಡು
ಮಹಿಳಾ ರೈತರ ಸಬಲೀಕರಣಕ್ಕೆ ಗೋದ್ರೆಜ್–ಮಹಾರಾಷ್ಟ್ರ ಸರ್ಕಾರದ ಮಹತ್ವದ ಒಪ್ಪಂದ
January 22, 2026
6:55 AM
by: ಮಿರರ್‌ ಡೆಸ್ಕ್
ಬೆಳೆ ಸಂರಕ್ಷಣೆಯಲ್ಲಿ ಹೊಸ ತಂತ್ರಜ್ಞಾನ | ಕೃಷಿಯಲ್ಲಿ ಯಾಕೆ ಹೊಸ ಔಷಧಿಗಳು ಬರುತ್ತಿಲ್ಲ…?
January 22, 2026
6:42 AM
by: ಮಿರರ್‌ ಡೆಸ್ಕ್

You cannot copy content of this page - Copyright -The Rural Mirror