ಭತ್ತ ಬೆಳೆಯುವವರ(Paddy crop) ಸಂಖ್ಯೆ ಕಡಿಮೆಯಾಗಿದೆ. ಅಕ್ಕಿ ರೇಟ್(Rice rate) ಗಗನಕ್ಕೇರಿದೆ. ಹೀಗೆ ಮುಂದುವರೆದರೆ ಅಕ್ಕಿ ಕೊಂಡುಕೊಳ್ಳಲು ಬಹಳ ದುಸ್ತರ ಎದುರಾಗೋದ್ರಲ್ಲಿ ಅನುಮಾನವೇ ಬೇಡ. ಬಡವರಿಗೆ(Poor) ಹಾಗೂ ಮಧ್ಯಮ ವರ್ಗದ(Middle class) ಜನರಿಗೆ ಈಗಾಗಲೇ ಅಕ್ಕಿ ಕೊಳ್ಳಲು ಬಹಳ ಕಷ್ಟವಾಗುತ್ತಿದೆ. ಈ ನಿಟ್ಟಿನಲ್ಲಿ ಕೇಂದ್ರ ಸರ್ಕಾರ(Central govt) ಮಹತ್ವಾಕಾಂಕ್ಷಿಯ ಭಾರತ್ ರೈಸ್ (Bharat Rice) ಮಾರಾಟವನ್ನು ಆರಂಭಿಸಿತ್ತು. ಇದರಿಂದ ಬಹಳ ಜನರಿಗೆ ಅನುಕೂಲವಾಗುತ್ತಿತ್ತು. ಆದರೆ ಜುಲೈ ತಿಂಗಳಿನಿಂದ ತಾತ್ಕಾಲಿಕವಾಗಿ ಈ ಯೋಜನೆಯನ್ನು ಸ್ಥಗಿತ ಮಾಡಲಾಗಿದೆ. ದೇಶದ ಎಲ್ಲಾ ಜನರಿಗೆ ಕಡಿಮೆ ಬೆಲೆಯಲ್ಲಿ ಅಕ್ಕಿ ವಿತರಿಸಲು ಕೇಂದ್ರ ಸರ್ಕಾರ ಫೆಬ್ರವರಿಯಲ್ಲಿ ಭಾರತ್ ರೈಸ್ ಅಕ್ಕಿಯನ್ನು ಬಿಡುಗಡೆ ಮಾಡಿತ್ತು. ಲೋಕಸಭಾ ಚುನಾವಣೆ (Lok Sabha Election) ಸಂದರ್ಭದಲ್ಲಿ ಈ ಅಕ್ಕಿ ಮತದಾರರನ್ನು ಸೆಳೆದಿತ್ತು.
ಈ ಯೋಜನೆಯ ಅಡಿ 29 ರೂ.ಗೆ 1 ಕೆಜಿ ಅಕ್ಕಿ, 27.50 ರೂ.ಗೆ 1 ಕೆಜಿ ಗೋಧಿ ಹಿಟ್ಟು, 60 ರೂ.ಗೆ 1 ಕೆಜಿ ಕಡಲೆ ಬೆಳೆ ಮಾರಾಟ ಮಾಡಲಾಗುತ್ತಿತ್ತು. ಜನ ಸಂದಣಿ ಹೆಚ್ಚಿನ ಜಾಗಗಳಲ್ಲಿ ಮೊಬೈಲ್ ವ್ಯಾನ್ ಮೂಲಕ ಅಕ್ಕಿ, ಬೆಳೆಗಳನ್ನು ಗ್ರಾಹಕರಿಗೆ ನೀಡಲಾಗುತ್ತಿತ್ತು. ಜೂನ್ 10 ರವರೆಗೆ ಕೇಂದ್ರ ಸರ್ಕಾರ ಆದೇಶದ ಅನ್ವಯ ದಾಸ್ತಾನುಗಳು ಮಾರಾಟವಾದ ನಂತರ ಪೂರೈಕೆಯನ್ನು ಸ್ಥಗಿತ ಮಾಡಲಾಗಿದೆ.
ಕಳೆದ ವರ್ಷ ಮಳೆಯಾಗದ ಕಾರಣ ಭತ್ತದ ಉತ್ಪಾದನೆ ಕುಂಠಿತಗೊಂಡಿದೆ. ದೇಶಾದ್ಯಂತ ಈ ಯೋಜನೆ ಜಾರಿಯಲ್ಲಿರುವ ಕಾರಣ ಪೂರೈಕೆ ಮಾಡುವುದು ಕಷ್ಟವಾಗುತ್ತಿದೆ. ಭಾರತ್ ಅಕ್ಕಿ ವಿತರಣೆ ಸಂಬಂಧ ಕೇಂದ್ರ ಸರ್ಕಾರ ಹೊಸ ನೀತಿ ಜಾರಿಗೆ ತರಲು ಚಿಂತನೆ ಮಾಡಿದೆ ಎನ್ನಲಾಗುತ್ತಿದೆ. ಈ ಕಾರಣಕ್ಕೆ ತಾತ್ಕಾಲಿಕವಾಗಿ ಭಾರತ್ ರೈಸ್ ಮಾರಾಟವನ್ನು ಸ್ಥಗಿತಗೊಳಿಸಲಾಗಿದೆ ಎಂಬ ಮಾತುಗಳು ಕೇಳಿ ಬಂದಿದೆ.
ಮೆಚ್ಚುಗೆ ವ್ಯಕ್ತವಾಗಿತ್ತು: ಬಿಪಿಎಲ್ ಕಾರ್ಡ್ ಇರುವವರಿಗೆ ಕೇಂದ್ರ ಸರ್ಕಾರ ಉಚಿತವಾಗಿ ಪ್ರತಿ ವ್ಯಕ್ತಿಗೆ ಐದು ಕೆ.ಜಿ. ಅಕ್ಕಿಯನ್ನು ಈಗಾಗಲೇ ನೀಡುತ್ತಿದೆ. ಎಪಿಎಲ್ ಪಡಿತರ ಚೀಟಿ ಹೊಂದಿದವರಿಗೆ ಕೆ.ಜಿ.ಗೆ 15 ರೂ.ನಂತೆ 10 ಕೆ.ಜಿ. ಅಕ್ಕಿ ವಿತರಿಸಲಾಗುತ್ತದೆ. ಈ ಎರಡೂ ಬಗೆಯ ಪಡಿತರ ಚೀಟಿ ಇಲ್ಲದ ಲಕ್ಷಾಂತರ ಕುಟುಂಬಗಳಿಗೆ ನೆರವಾಗುವ ಉದ್ದೇಶದಿಂದ ಕೇಂದ್ರ ಸರ್ಕಾರ ಕಡಿಮೆ ಬೆಲೆಗೆ ಈ ಭಾರತ್ ಬ್ರ್ಯಾಂಡ್ನ ಅಡಿಯಲ್ಲಿ ಅಕ್ಕಿ, ಬೆಳೆಗಳನ್ನು ಮಾರಾಟ ಮಾಡುತ್ತಿತ್ತು. ಕಡಿಮೆ ಬೆಲೆಗೆ ಗುಣಮಟ್ಟದ ಅಕ್ಕಿ, ಬೆಳೆ ಸಿಕ್ಕಿದ್ದಕ್ಕೆ ಗ್ರಾಹಕರು ಮೆಚ್ಚುಗೆ ವ್ಯಕ್ತಪಡಿಸಿದ್ದರು.
ಕರಾವಳಿ ಮತ್ತು ಮಲೆನಾಡಿನ ಅಡಿಕೆ ತೋಟಗಳಲ್ಲಿ ಕಾಣಿಸಿಕೊಳ್ಳುತ್ತಿರುವ ಎಲೆಚುಕ್ಕೆ, ಹಳದಿ ಎಲೆ ಹಾಗೂ…
ಕರ್ನಾಟಕದಲ್ಲಿ ಮುಂಗಾರು ಮತ್ತೆ ಚುರುಕಾಗಿದ್ದು, ಕರಾವಳಿ ಮತ್ತು ಮಲೆನಾಡಿನಲ್ಲಿ ಆಗಸ್ಟ್ 25ರವರೆಗೆ ಮಳೆ…
ಅಳಿವಿನಂಚಿನಲ್ಲಿದ್ದ ಕೇರಳದ ಪೆರಿಯಾರ್ ಕುಳ್ಳನ್ ಹಸುವಿಗೆ ಭಾರತೀಯ ಕೃಷಿ ಸಂಶೋಧನಾ ಮಂಡಳಿಯ ರಾಷ್ಟ್ರೀಯ…
ರಾಜ್ಯದ ಗ್ರಾಮೀಣ ಪ್ರದೇಶಗಳಲ್ಲಿ ಪರಿಸರ ಸ್ನೇಹಿ ಗಣಪತಿ ಮೂರ್ತಿಗಳನ್ನೇ ಪ್ರತಿಷ್ಠಾಪಿಸಿ ಗಣೇಶೋತ್ಸವ ಆಚರಿಸುವಂತೆ…
ಪಶ್ಚಿಮ ಘಟ್ಟ ಸಂರಕ್ಷಣೆಯ ಹೆಸರಿನಲ್ಲಿ ಕೃಷಿಕರ ಜೀವನೋಪಾಯಕ್ಕೆ ನಿರ್ಬಂಧ ಹೇರಬಾರದು, ಕಸ್ತೂರಿ ರಂಗನ್…
ಸೆಪ್ಟೆಂಬರ್ 5–10ರ ನಂತರ ದೇಶದ ಹಲವು ಭಾಗಗಳಲ್ಲಿ ಮುಂಗಾರು ಮಳೆ ಗಣನೀಯವಾಗಿ ಕಡಿಮೆಯಾಗುವ…