ಬೆಂಬಲ ಬೆಲೆಯಲ್ಲಿ ಹೆಸರುಕಾಳು, ಸೂರ್ಯಕಾಂತಿ ಖರೀದಿಗೆ ಕೇಂದ್ರ ಸರ್ಕಾರ ಸಮ್ಮತಿ: ಸಚಿವ ಶಿವಾನಂದ ಪಾಟೀಲ

August 24, 2024
2:21 PM

ರಾಜ್ಯ ಸರ್ಕಾರದ(State Govt) ಮನವಿಗೆ ಸ್ಪಂದಿಸಿ, ಬೆಂಬಲ ಬೆಲೆ ಯೋಜನೆಯಲ್ಲಿ ಹೆಸರುಕಾಳು(Moong dal) ಮತ್ತು ಸೂರ್ಯಕಾಂತಿ(Sunflower) ಖರೀದಿಗೆ ಕೇಂದ್ರ ಸರ್ಕಾರ(Central Govt) ಸಮ್ಮತಿಸಿದೆ ಎಂದು ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ(MLA Shivananda Patil) ತಿಳಿಸಿದ್ದಾರೆ. ಮಾರುಕಟ್ಟೆಯಲ್ಲಿ ಹೆಸರುಕಾಳು ಮತ್ತು ಸೂರ್ಯಕಾಂತಿ ಧಾರಣಿ ಕುಸಿದ ಕಾರಣ ಬೆಂಬಲ ಬೆಲೆ(Support Price) ಯೋಜನೆಯಲ್ಲಿ ಖರೀದಿಗೆ ಅನುಮತಿ ನೀಡುವಂತೆ ರಾಜ್ಯ ಸರ್ಕಾರ ಕೇಂದ್ರಕ್ಕೆ ಪ್ರಸ್ತಾವನೆ ಸಲ್ಲಿಸಿತ್ತು. 22,215 ಮೆಟ್ರಿಕ್ ಟನ್ ಹೆಸರುಕಾಳು ಹಾಗೂ 13,210 ಮೆಟ್ರಿಕ್ ಟನ್ ಸೂರ್ಯಕಾಂತಿ ಖರೀದಿಗೆ ಕೇಂದ್ರ ಸರ್ಕಾರ ಸಮ್ಮತಿಸಿದೆ. ಬೆಂಬಲ ಬೆಲೆ ಯೋಜನೆಯಲ್ಲಿ ಎಫ್ ಎ ಕ್ಯೂ ಗುಣಮಟ್ಟದ ಹೆಸರುಕಾಳಿಗೆ ಪ್ರತಿ ಕ್ವಿಂಟಲ್ 8.682 ರೂ. ಹಾಗೂ ಸೂರ್ಯಕಾಂತಿಗೆ 7,280 ರೂ. ಬೆಲೆ ನಿಗದಿಪಡಿಸಲಾಗಿದೆ.

ಕೇಂದ್ರ ಸರ್ಕಾರ ರಾಜ್ಯದ ಪ್ರಸ್ತಾವನೆಗೆ ಸಮ್ಮತಿಸಿರುವುದರಿಂದ ಖರೀದಿ ಏಜನ್ಸಿ ನೇಮಕ ಮಾಡಿ ಆದೇಶ ಹೊರಡಿಸಲು ರಾಜ್ಯ ಸರ್ಕಾರ ಕ್ರಮ ಕೈಗೊಂಡಿದೆ. ಹೀಗಾಗಿ ಧಾರಣಿ ಕುಸಿದಿದೆ ಎಂದು ರೈತರು ಆತಂಕ ಪಡುವ ಅಗತ್ಯವಿಲ್ಲ. ಖರೀದಿ ಕೇಂದ್ರಗಳನ್ನು ಆರಂಭಿಸುತ್ತಿದ್ದಂತೆ ನೋಂದಣಿ ಮಾಡಿಸಿಕೊಂಡು ಬೆಂಬಲ ಬೆಲೆಯಲ್ಲಿ ಮಾರಾಟ ಮಾಡಬಹುದು ಎಂದು ಸಚಿವರು ತಿಳಿಸಿದ್ದಾರೆ.

ಹೆಸರುಕಾಳು ಮತ್ತು ಸೂರ್ಯಕಾಂತಿ ಬೆಳೆಯುವ ಪ್ರಮುಖ ಜಿಲ್ಲೆಗಳ ಜಿಲ್ಲಾಧಿಕಾರಿಗಳು ಟಾಸ್ಕ್ ಪೋರ್ಸ್ ಸಭೆ ನಡೆಸಿ ಅಗತ್ಯ ಇರುವ ಕಡೆ ಖರೀದಿ ಕೇಂದ್ರಗಳನ್ನು ಗುರುತಿಸಿ ನೋಂದಣಿ ಆರಂಭಿಸಲಿದ್ದಾರೆ. ನಂತರ ಖರೀದಿ ಪ್ರಕ್ರಿಯೆ ಪ್ರಾರಂಭವಾಗಲಿದೆ. ವಿಳಂಬ ಮಾಡದೆ ಟಾಸ್ಕ್ ಫೋರ್ಸ್ ಸಭೆ ನಡೆಸಲು ಜಿಲ್ಲಾಧಿಕಾರಿಗಳಿಗೆ ಈಗಾಗಲೇ ನಿರ್ದೇಶನ ನೀಡಲಾಗಿದೆ. ರೈತರ ಹಿತದೃಷ್ಟಿಯಿಂದ ತ್ವರಿತವಾಗಿ ನೋಂದಣಿ ಹಾಗೂ ಖರೀದಿ ಪ್ರಕ್ರಿಯೆ ಆರಂಭಿಸಲು ಸರ್ಕಾರ ಕ್ರಮ ಕೈಗೊಳ್ಳಲಿದೆ ಎಂದು ಸಚಿವ ಶಿವಾನಂದ ಪಾಟೀಲ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಇನ್ಸ್ಪೈರ್ ಅವಾರ್ಡ್ ಗೆ ಅಜ್ಜಾವರ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳು ಆಯ್ಕೆ
March 23, 2026
10:18 PM
by: ದ ರೂರಲ್ ಮಿರರ್.ಕಾಂ
ನೆಮ್ಮದಿಗಾಗಿ ಬದುಕಿ; ಹಣ-ಅಧಿಕಾರಕ್ಕಾಗಿ ಅಲ್ಲ
March 23, 2026
9:12 PM
by: ದ ರೂರಲ್ ಮಿರರ್.ಕಾಂ
ಅಡಿಕೆ ಆಮದು ಎಂಬ ‘ಮಾಯಾಜಾಲ’: ನಡೆಯುತ್ತಿದೆಯೇ ಬೆಳೆಗಾರರ ಮೇಲೆ ಸೈಕಲಾಜಿಕಲ್ ಅಟ್ಯಾಕ್…!?
March 23, 2026
8:55 PM
by: ಅರುಣ್‌ ಕುಮಾರ್ ಕಾಂಚೋಡು
ಮಂಗಳೂರು ಅಡಿಕೆ ಮಾರುಕಟ್ಟೆ | ಐದು ವರ್ಷದ ಧಾರಣೆ ಹೇಳುವ ಏರುಪೇರುಗಳ ಕಥೆ..!
March 23, 2026
7:25 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror