ರಾಜ್ಯ ಸರ್ಕಾರದ(State Govt) ಮನವಿಗೆ ಸ್ಪಂದಿಸಿ, ಬೆಂಬಲ ಬೆಲೆ ಯೋಜನೆಯಲ್ಲಿ ಹೆಸರುಕಾಳು(Moong dal) ಮತ್ತು ಸೂರ್ಯಕಾಂತಿ(Sunflower) ಖರೀದಿಗೆ ಕೇಂದ್ರ ಸರ್ಕಾರ(Central Govt) ಸಮ್ಮತಿಸಿದೆ ಎಂದು ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ(MLA Shivananda Patil) ತಿಳಿಸಿದ್ದಾರೆ. ಮಾರುಕಟ್ಟೆಯಲ್ಲಿ ಹೆಸರುಕಾಳು ಮತ್ತು ಸೂರ್ಯಕಾಂತಿ ಧಾರಣಿ ಕುಸಿದ ಕಾರಣ ಬೆಂಬಲ ಬೆಲೆ(Support Price) ಯೋಜನೆಯಲ್ಲಿ ಖರೀದಿಗೆ ಅನುಮತಿ ನೀಡುವಂತೆ ರಾಜ್ಯ ಸರ್ಕಾರ ಕೇಂದ್ರಕ್ಕೆ ಪ್ರಸ್ತಾವನೆ ಸಲ್ಲಿಸಿತ್ತು. 22,215 ಮೆಟ್ರಿಕ್ ಟನ್ ಹೆಸರುಕಾಳು ಹಾಗೂ 13,210 ಮೆಟ್ರಿಕ್ ಟನ್ ಸೂರ್ಯಕಾಂತಿ ಖರೀದಿಗೆ ಕೇಂದ್ರ ಸರ್ಕಾರ ಸಮ್ಮತಿಸಿದೆ. ಬೆಂಬಲ ಬೆಲೆ ಯೋಜನೆಯಲ್ಲಿ ಎಫ್ ಎ ಕ್ಯೂ ಗುಣಮಟ್ಟದ ಹೆಸರುಕಾಳಿಗೆ ಪ್ರತಿ ಕ್ವಿಂಟಲ್ 8.682 ರೂ. ಹಾಗೂ ಸೂರ್ಯಕಾಂತಿಗೆ 7,280 ರೂ. ಬೆಲೆ ನಿಗದಿಪಡಿಸಲಾಗಿದೆ.
ಕೇಂದ್ರ ಸರ್ಕಾರ ರಾಜ್ಯದ ಪ್ರಸ್ತಾವನೆಗೆ ಸಮ್ಮತಿಸಿರುವುದರಿಂದ ಖರೀದಿ ಏಜನ್ಸಿ ನೇಮಕ ಮಾಡಿ ಆದೇಶ ಹೊರಡಿಸಲು ರಾಜ್ಯ ಸರ್ಕಾರ ಕ್ರಮ ಕೈಗೊಂಡಿದೆ. ಹೀಗಾಗಿ ಧಾರಣಿ ಕುಸಿದಿದೆ ಎಂದು ರೈತರು ಆತಂಕ ಪಡುವ ಅಗತ್ಯವಿಲ್ಲ. ಖರೀದಿ ಕೇಂದ್ರಗಳನ್ನು ಆರಂಭಿಸುತ್ತಿದ್ದಂತೆ ನೋಂದಣಿ ಮಾಡಿಸಿಕೊಂಡು ಬೆಂಬಲ ಬೆಲೆಯಲ್ಲಿ ಮಾರಾಟ ಮಾಡಬಹುದು ಎಂದು ಸಚಿವರು ತಿಳಿಸಿದ್ದಾರೆ.
ಹೆಸರುಕಾಳು ಮತ್ತು ಸೂರ್ಯಕಾಂತಿ ಬೆಳೆಯುವ ಪ್ರಮುಖ ಜಿಲ್ಲೆಗಳ ಜಿಲ್ಲಾಧಿಕಾರಿಗಳು ಟಾಸ್ಕ್ ಪೋರ್ಸ್ ಸಭೆ ನಡೆಸಿ ಅಗತ್ಯ ಇರುವ ಕಡೆ ಖರೀದಿ ಕೇಂದ್ರಗಳನ್ನು ಗುರುತಿಸಿ ನೋಂದಣಿ ಆರಂಭಿಸಲಿದ್ದಾರೆ. ನಂತರ ಖರೀದಿ ಪ್ರಕ್ರಿಯೆ ಪ್ರಾರಂಭವಾಗಲಿದೆ. ವಿಳಂಬ ಮಾಡದೆ ಟಾಸ್ಕ್ ಫೋರ್ಸ್ ಸಭೆ ನಡೆಸಲು ಜಿಲ್ಲಾಧಿಕಾರಿಗಳಿಗೆ ಈಗಾಗಲೇ ನಿರ್ದೇಶನ ನೀಡಲಾಗಿದೆ. ರೈತರ ಹಿತದೃಷ್ಟಿಯಿಂದ ತ್ವರಿತವಾಗಿ ನೋಂದಣಿ ಹಾಗೂ ಖರೀದಿ ಪ್ರಕ್ರಿಯೆ ಆರಂಭಿಸಲು ಸರ್ಕಾರ ಕ್ರಮ ಕೈಗೊಳ್ಳಲಿದೆ ಎಂದು ಸಚಿವ ಶಿವಾನಂದ ಪಾಟೀಲ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹೆಚ್ಚಿನ ಭಾಗಗಳಲ್ಲಿ ಸಂಜೆ, ರಾತ್ರಿ ಮೋಡದ ವಾತಾವರಣದ ಮುನ್ಸೂಚೆನೆ ಇದ್ದು, ಘಟ್ಟದ ಕೆಳಗಿನ…
ಕೊಡಗು ಜಿಲ್ಲೆಯ ಕಕ್ಕಬೆಯ ಕುಂಜಿಲ ಪ್ರದೇಶದಲ್ಲಿ ಮಳೆಯಾಗಿದೆ.
ಅಧಿಕ ತಾಪಮಾನದೊಂದಿಗೆ ಮೋಡದ ವಾತಾವರಣದ ಮುನ್ಸೂಚನೆ ಇದೆ. ಸಂಜೆ, ರಾತ್ರಿಯ ವೇಳೆ ಘಟ್ಟದ…
ಕಾಲ್ತುಳಿತ ಪ್ರಕರಣಗಳಲ್ಲಿ ಸಾಮಾನ್ಯವಾಗಿ ಅಮಾಯಕರೇ ಸಾಯುತ್ತಾರೆ. ಅವರಿಗೆ ಯಾರು ಎಲ್ಲಿಂದ ಯಾಕೆ ತಳ್ಳುತ್ತಿದ್ದಾರೆಂದೇ…
ಅಡಿಕೆಯ ಮೈಟ್ ಬಗ್ಗೆ ಸಿಪಿಸಿಆರ್ಐ ನಿರ್ದೇಶಕರು ಮಾಹಿತಿ ಪ್ರಕಟಿಸಿದ್ದಾರೆ. ಈ ಬಾರಿ ಕೆಲವು…
ಈ ಬಾರಿ ಫೆಬ್ರವರಿ ತಿಂಗಳಲ್ಲಿ 34 ಡಿಗ್ರಿ ಉಷ್ಣಾಂಶ ದಾಖಲಾಗಿದೆ ಎಂದು ಹವಾಮಾನ…