MIRROR FOCUS

ಬೆಂಬಲ ಬೆಲೆಯಲ್ಲಿ ಹೆಸರುಕಾಳು, ಸೂರ್ಯಕಾಂತಿ ಖರೀದಿಗೆ ಕೇಂದ್ರ ಸರ್ಕಾರ ಸಮ್ಮತಿ: ಸಚಿವ ಶಿವಾನಂದ ಪಾಟೀಲ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ರಾಜ್ಯ ಸರ್ಕಾರದ(State Govt) ಮನವಿಗೆ ಸ್ಪಂದಿಸಿ, ಬೆಂಬಲ ಬೆಲೆ ಯೋಜನೆಯಲ್ಲಿ ಹೆಸರುಕಾಳು(Moong dal) ಮತ್ತು ಸೂರ್ಯಕಾಂತಿ(Sunflower) ಖರೀದಿಗೆ ಕೇಂದ್ರ ಸರ್ಕಾರ(Central Govt) ಸಮ್ಮತಿಸಿದೆ ಎಂದು ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ(MLA Shivananda Patil) ತಿಳಿಸಿದ್ದಾರೆ. ಮಾರುಕಟ್ಟೆಯಲ್ಲಿ ಹೆಸರುಕಾಳು ಮತ್ತು ಸೂರ್ಯಕಾಂತಿ ಧಾರಣಿ ಕುಸಿದ ಕಾರಣ ಬೆಂಬಲ ಬೆಲೆ(Support Price) ಯೋಜನೆಯಲ್ಲಿ ಖರೀದಿಗೆ ಅನುಮತಿ ನೀಡುವಂತೆ ರಾಜ್ಯ ಸರ್ಕಾರ ಕೇಂದ್ರಕ್ಕೆ ಪ್ರಸ್ತಾವನೆ ಸಲ್ಲಿಸಿತ್ತು. 22,215 ಮೆಟ್ರಿಕ್ ಟನ್ ಹೆಸರುಕಾಳು ಹಾಗೂ 13,210 ಮೆಟ್ರಿಕ್ ಟನ್ ಸೂರ್ಯಕಾಂತಿ ಖರೀದಿಗೆ ಕೇಂದ್ರ ಸರ್ಕಾರ ಸಮ್ಮತಿಸಿದೆ. ಬೆಂಬಲ ಬೆಲೆ ಯೋಜನೆಯಲ್ಲಿ ಎಫ್ ಎ ಕ್ಯೂ ಗುಣಮಟ್ಟದ ಹೆಸರುಕಾಳಿಗೆ ಪ್ರತಿ ಕ್ವಿಂಟಲ್ 8.682 ರೂ. ಹಾಗೂ ಸೂರ್ಯಕಾಂತಿಗೆ 7,280 ರೂ. ಬೆಲೆ ನಿಗದಿಪಡಿಸಲಾಗಿದೆ.

Advertisement

ಕೇಂದ್ರ ಸರ್ಕಾರ ರಾಜ್ಯದ ಪ್ರಸ್ತಾವನೆಗೆ ಸಮ್ಮತಿಸಿರುವುದರಿಂದ ಖರೀದಿ ಏಜನ್ಸಿ ನೇಮಕ ಮಾಡಿ ಆದೇಶ ಹೊರಡಿಸಲು ರಾಜ್ಯ ಸರ್ಕಾರ ಕ್ರಮ ಕೈಗೊಂಡಿದೆ. ಹೀಗಾಗಿ ಧಾರಣಿ ಕುಸಿದಿದೆ ಎಂದು ರೈತರು ಆತಂಕ ಪಡುವ ಅಗತ್ಯವಿಲ್ಲ. ಖರೀದಿ ಕೇಂದ್ರಗಳನ್ನು ಆರಂಭಿಸುತ್ತಿದ್ದಂತೆ ನೋಂದಣಿ ಮಾಡಿಸಿಕೊಂಡು ಬೆಂಬಲ ಬೆಲೆಯಲ್ಲಿ ಮಾರಾಟ ಮಾಡಬಹುದು ಎಂದು ಸಚಿವರು ತಿಳಿಸಿದ್ದಾರೆ.

ಹೆಸರುಕಾಳು ಮತ್ತು ಸೂರ್ಯಕಾಂತಿ ಬೆಳೆಯುವ ಪ್ರಮುಖ ಜಿಲ್ಲೆಗಳ ಜಿಲ್ಲಾಧಿಕಾರಿಗಳು ಟಾಸ್ಕ್ ಪೋರ್ಸ್ ಸಭೆ ನಡೆಸಿ ಅಗತ್ಯ ಇರುವ ಕಡೆ ಖರೀದಿ ಕೇಂದ್ರಗಳನ್ನು ಗುರುತಿಸಿ ನೋಂದಣಿ ಆರಂಭಿಸಲಿದ್ದಾರೆ. ನಂತರ ಖರೀದಿ ಪ್ರಕ್ರಿಯೆ ಪ್ರಾರಂಭವಾಗಲಿದೆ. ವಿಳಂಬ ಮಾಡದೆ ಟಾಸ್ಕ್ ಫೋರ್ಸ್ ಸಭೆ ನಡೆಸಲು ಜಿಲ್ಲಾಧಿಕಾರಿಗಳಿಗೆ ಈಗಾಗಲೇ ನಿರ್ದೇಶನ ನೀಡಲಾಗಿದೆ. ರೈತರ ಹಿತದೃಷ್ಟಿಯಿಂದ ತ್ವರಿತವಾಗಿ ನೋಂದಣಿ ಹಾಗೂ ಖರೀದಿ ಪ್ರಕ್ರಿಯೆ ಆರಂಭಿಸಲು ಸರ್ಕಾರ ಕ್ರಮ ಕೈಗೊಳ್ಳಲಿದೆ ಎಂದು ಸಚಿವ ಶಿವಾನಂದ ಪಾಟೀಲ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಚಿಕ್ಕಬಳ್ಳಾಪುರ ಜಿಲ್ಲೆ ಜಂಗಮಕೋಟೆ ಬಳಿ ಕೈಗಾರಿಕಾ ಪ್ರದೇಶ ನಿರ್ಮಾಣಕ್ಕಾಗಿ 2863 ಎಕರೆ ಭೂಮಿ

ಚಿಕ್ಕಬಳ್ಳಾಪುರ ಜಿಲ್ಲೆ ಶಿಡ್ಲಘಟ್ಟ ತಾಲ್ಲೂಕಿನ ಜಂಗಮಕೋಟೆ ಬಳಿ ಕೈಗಾರಿಕಾ ಪ್ರದೇಶ ನಿರ್ಮಾಣಕ್ಕಾಗಿ ೨…

4 hours ago

ಹೊಸರುಚಿ | ಹಲಸಿನ ಕಾಯಿ ಪೂರಿ

ಹಲಸಿನ ಕಾಯಿ ಪೂರಿಗೆ ಬೇಕಾಗುವ ಸಾಮಗ್ರಿಗಳು: ಹಲಸಿನ ಕಾಯಿ 1/2 ಕಪ್, ಗೋಧಿ ಹುಡಿ.1…

5 hours ago

ಪಡಿತರ ಚೀಟಿದಾರರ ಇ-ಕೆವೈಸಿ ಮರುಸಂಗ್ರಹಿಸುವ ಕೊನೆಯ ಅವಕಾಶ

ಸರಕಾರದ ಸೂಚನೆಯಂತೆ ನ್ಯಾಯಬೆಲೆ ಅಂಗಡಿಗಳಲ್ಲಿ ಇ- ಕೆವೈಸಿ ಮಾಡಲಾದ ಪಡಿತರ ಚೀಟಿ ಫಲಾನುಭವಿಗಳನ್ನು…

16 hours ago

ರಬ್ಬರ್ ತೋಟಗಳ ಮಾಹಿತಿ ಸಂಗ್ರಹ | ರಬ್ಬರ್ ತೋಟಗಳ ಜಿಯೋ-ಮ್ಯಾಪಿಂಗ್

ನೈಸರ್ಗಿಕ ರಬ್ಬರ್ ಮತ್ತು ಅದರ ಉತ್ಪನ್ನಗಳು ಅರಣ್ಯನಾಶ ಮುಕ್ತ ನಿಯಮಗಳಿಗಾಗಿ ಯುರೋಪಿಯನ್ ಒಕ್ಕೂಟ…

16 hours ago

ಹವಾಮಾನ ವರದಿ | 25-04-2025 | ಅಲ್ಲಲ್ಲಿ ಗುಡುಗು ಸಹಿತ ಸಾಮಾನ್ಯ ಮಳೆ |

ಮುನ್ಸೂಚನೆಯಂತೆ ಮೇ 1 ರಿಂದ ದಕ್ಷಿಣ ಒಳನಾಡಿನ ಅಲ್ಲಲ್ಲಿ ಮಳೆ ಆರಂಭವಾಗುವ ಸಾಧ್ಯತೆಗಳಿವೆ.

23 hours ago

ಒತ್ತುವರಿಯಾಗಿರುವ  ಕೆರೆಗಳನ್ನು ಮುಲಾಜಿಲ್ಲದೆ ತೆರವುಗೊಳಿಸಲು ಮುಖ್ಯಮಂತ್ರಿ ಸೂಚನೆ

ಖಾಸಗಿಯವರಿಂದ ಒತ್ತುವರಿಯಾಗಿರುವ  ಪ್ರದೇಶವನ್ನು ಯಾವುದೇ ಮುಲಾಜಿಲ್ಲದೆ ತೆರವುಗೊಳಿಸಲು ಮುಖ್ಯಮಂತ್ರಿಗಳು ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಮುಖ್ಯಮಂತ್ರಿ…

1 day ago