Advertisement
MIRROR FOCUS

ಬೆಂಬಲ ಬೆಲೆಯಲ್ಲಿ ಹೆಸರುಕಾಳು, ಸೂರ್ಯಕಾಂತಿ ಖರೀದಿಗೆ ಕೇಂದ್ರ ಸರ್ಕಾರ ಸಮ್ಮತಿ: ಸಚಿವ ಶಿವಾನಂದ ಪಾಟೀಲ

Share

ರಾಜ್ಯ ಸರ್ಕಾರದ(State Govt) ಮನವಿಗೆ ಸ್ಪಂದಿಸಿ, ಬೆಂಬಲ ಬೆಲೆ ಯೋಜನೆಯಲ್ಲಿ ಹೆಸರುಕಾಳು(Moong dal) ಮತ್ತು ಸೂರ್ಯಕಾಂತಿ(Sunflower) ಖರೀದಿಗೆ ಕೇಂದ್ರ ಸರ್ಕಾರ(Central Govt) ಸಮ್ಮತಿಸಿದೆ ಎಂದು ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ(MLA Shivananda Patil) ತಿಳಿಸಿದ್ದಾರೆ. ಮಾರುಕಟ್ಟೆಯಲ್ಲಿ ಹೆಸರುಕಾಳು ಮತ್ತು ಸೂರ್ಯಕಾಂತಿ ಧಾರಣಿ ಕುಸಿದ ಕಾರಣ ಬೆಂಬಲ ಬೆಲೆ(Support Price) ಯೋಜನೆಯಲ್ಲಿ ಖರೀದಿಗೆ ಅನುಮತಿ ನೀಡುವಂತೆ ರಾಜ್ಯ ಸರ್ಕಾರ ಕೇಂದ್ರಕ್ಕೆ ಪ್ರಸ್ತಾವನೆ ಸಲ್ಲಿಸಿತ್ತು. 22,215 ಮೆಟ್ರಿಕ್ ಟನ್ ಹೆಸರುಕಾಳು ಹಾಗೂ 13,210 ಮೆಟ್ರಿಕ್ ಟನ್ ಸೂರ್ಯಕಾಂತಿ ಖರೀದಿಗೆ ಕೇಂದ್ರ ಸರ್ಕಾರ ಸಮ್ಮತಿಸಿದೆ. ಬೆಂಬಲ ಬೆಲೆ ಯೋಜನೆಯಲ್ಲಿ ಎಫ್ ಎ ಕ್ಯೂ ಗುಣಮಟ್ಟದ ಹೆಸರುಕಾಳಿಗೆ ಪ್ರತಿ ಕ್ವಿಂಟಲ್ 8.682 ರೂ. ಹಾಗೂ ಸೂರ್ಯಕಾಂತಿಗೆ 7,280 ರೂ. ಬೆಲೆ ನಿಗದಿಪಡಿಸಲಾಗಿದೆ.

ಕೇಂದ್ರ ಸರ್ಕಾರ ರಾಜ್ಯದ ಪ್ರಸ್ತಾವನೆಗೆ ಸಮ್ಮತಿಸಿರುವುದರಿಂದ ಖರೀದಿ ಏಜನ್ಸಿ ನೇಮಕ ಮಾಡಿ ಆದೇಶ ಹೊರಡಿಸಲು ರಾಜ್ಯ ಸರ್ಕಾರ ಕ್ರಮ ಕೈಗೊಂಡಿದೆ. ಹೀಗಾಗಿ ಧಾರಣಿ ಕುಸಿದಿದೆ ಎಂದು ರೈತರು ಆತಂಕ ಪಡುವ ಅಗತ್ಯವಿಲ್ಲ. ಖರೀದಿ ಕೇಂದ್ರಗಳನ್ನು ಆರಂಭಿಸುತ್ತಿದ್ದಂತೆ ನೋಂದಣಿ ಮಾಡಿಸಿಕೊಂಡು ಬೆಂಬಲ ಬೆಲೆಯಲ್ಲಿ ಮಾರಾಟ ಮಾಡಬಹುದು ಎಂದು ಸಚಿವರು ತಿಳಿಸಿದ್ದಾರೆ.

ಹೆಸರುಕಾಳು ಮತ್ತು ಸೂರ್ಯಕಾಂತಿ ಬೆಳೆಯುವ ಪ್ರಮುಖ ಜಿಲ್ಲೆಗಳ ಜಿಲ್ಲಾಧಿಕಾರಿಗಳು ಟಾಸ್ಕ್ ಪೋರ್ಸ್ ಸಭೆ ನಡೆಸಿ ಅಗತ್ಯ ಇರುವ ಕಡೆ ಖರೀದಿ ಕೇಂದ್ರಗಳನ್ನು ಗುರುತಿಸಿ ನೋಂದಣಿ ಆರಂಭಿಸಲಿದ್ದಾರೆ. ನಂತರ ಖರೀದಿ ಪ್ರಕ್ರಿಯೆ ಪ್ರಾರಂಭವಾಗಲಿದೆ. ವಿಳಂಬ ಮಾಡದೆ ಟಾಸ್ಕ್ ಫೋರ್ಸ್ ಸಭೆ ನಡೆಸಲು ಜಿಲ್ಲಾಧಿಕಾರಿಗಳಿಗೆ ಈಗಾಗಲೇ ನಿರ್ದೇಶನ ನೀಡಲಾಗಿದೆ. ರೈತರ ಹಿತದೃಷ್ಟಿಯಿಂದ ತ್ವರಿತವಾಗಿ ನೋಂದಣಿ ಹಾಗೂ ಖರೀದಿ ಪ್ರಕ್ರಿಯೆ ಆರಂಭಿಸಲು ಸರ್ಕಾರ ಕ್ರಮ ಕೈಗೊಳ್ಳಲಿದೆ ಎಂದು ಸಚಿವ ಶಿವಾನಂದ ಪಾಟೀಲ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಕೃಷಿ ಸಂಕಷ್ಟ ಎಂದರೆ ರೈತನ ಸಾಲ ಮಾತ್ರವಲ್ಲ – ಕೃಷಿ ಕಾರ್ಮಿಕರ ರಕ್ಷಣೆಯೂ ಅಗತ್ಯ

2024ರಲ್ಲಿ ಭಾರತದಲ್ಲಿ ರೈತರು ಮತ್ತು ಕೃಷಿ ಕಾರ್ಮಿಕರು ಸೇರಿ 10,546 ಮಂದಿ ಆತ್ಮಹತ್ಯೆಯಿಂದ…

2 hours ago

ಹಂತ ಹಂತವಾಗಿ 16 ಸಾವಿರ ಶಿಕ್ಷಕರ ನೇಮಕ – ಅನುದಾನಿತ ಶಾಲೆಗಳಿಗೂ 6 ಸಾವಿರ ಹುದ್ದೆ – ಸಚಿವ ಮಧು ಬಂಗಾರಪ್ಪ

ಕರ್ನಾಟಕದಲ್ಲಿ ಈಗಾಗಲೇ 13,500 ಶಿಕ್ಷಕರ ನೇಮಕಾತಿ ನಡೆದಿದ್ದು, ಶಿಕ್ಷಣ ಇಲಾಖೆಯಲ್ಲಿ ಇನ್ನೂ 16…

2 hours ago

ಹವಾಮಾನ ವರದಿ | 03-09-2026 | ಕರಾವಳಿ–ಮಲೆನಾಡಿನಲ್ಲಿ ಮತ್ತೆ ಮಳೆಯ ಸಾಧ್ಯತೆ…?

ಕರ್ನಾಟಕದ ಹಲವು ಭಾಗಗಳಲ್ಲಿ ಸೆ.5ರಿಂದ ಕೆಲವು ದಿನ ಮಳೆಯ ತೀವ್ರತೆ ಕಡಿಮೆಯಾಗುವ ಲಕ್ಷಣಗಳಿವೆ.…

20 hours ago

ಹಿಮಾಲಯದಲ್ಲಿ ಹಿಮ ಕರಗಿದರೆ ಅದರ ಪರಿಣಾಮ ಎಲ್ಲಿಗೆ ತಲುಪುತ್ತದೆ? – ಹಿಮಾಲಯದ ದುರಂತದ ಬಳಿಕ ನೇಪಾಳದ ಪ್ರಧಾನಿ ಎಚ್ಚರಿಕೆ

ಹಿಮನದಿ ಕುಸಿತದಿಂದ ಸಂಭವಿಸಿದ ಭೀಕರ ಪ್ರವಾಹದ ಬಳಿಕ ನೇಪಾಳ ಪ್ರಧಾನಿ ಬಾಲೆಂದ್ರ ಶಾ…

1 day ago

ನಾವು ತಿನ್ನುವ ಆಹಾರದಲ್ಲಿ ಕೀಟನಾಶಕ – ಕರ್ನಾಟಕದಲ್ಲಿ 9,176 ಮಾದರಿಗಳಲ್ಲಿ 334 ಮಿತಿ ಮೀರಿವೆ – ದೇಶದ ಅಂಕಿ ಏನು ಹೇಳುತ್ತದೆ?

2023ರಿಂದ 2026ರವರೆಗೆ ದೇಶದ 23 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಪರೀಕ್ಷಿಸಿದ 70,652…

1 day ago

ಒಂದೇ ತೆಂಗಿನ ಮರದಿಂದ ₹10,000 ಆದಾಯ? ಮೌಲ್ಯವರ್ಧನೆಗೆ ಹೊಸ ದಾರಿ ತೋರಿದ ವಿಶ್ವ ತೆಂಗು ದಿನ

ಕಾಸರಗೋಡಿನ ICAR-CPCRIನಲ್ಲಿ ವಿಶ್ವ ತೆಂಗು ದಿನ–2026 ಆಚರಿಸಿ, ಹವಾಮಾನ ಅನಿಶ್ಚಿತತೆಯ ನಡುವೆ ತೆಂಗು…

2 days ago