Advertisement
MIRROR FOCUS

ಬೆಂಬಲ ಬೆಲೆಯಲ್ಲಿ ಹೆಸರುಕಾಳು, ಸೂರ್ಯಕಾಂತಿ ಖರೀದಿಗೆ ಕೇಂದ್ರ ಸರ್ಕಾರ ಸಮ್ಮತಿ: ಸಚಿವ ಶಿವಾನಂದ ಪಾಟೀಲ

Share

ರಾಜ್ಯ ಸರ್ಕಾರದ(State Govt) ಮನವಿಗೆ ಸ್ಪಂದಿಸಿ, ಬೆಂಬಲ ಬೆಲೆ ಯೋಜನೆಯಲ್ಲಿ ಹೆಸರುಕಾಳು(Moong dal) ಮತ್ತು ಸೂರ್ಯಕಾಂತಿ(Sunflower) ಖರೀದಿಗೆ ಕೇಂದ್ರ ಸರ್ಕಾರ(Central Govt) ಸಮ್ಮತಿಸಿದೆ ಎಂದು ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ(MLA Shivananda Patil) ತಿಳಿಸಿದ್ದಾರೆ. ಮಾರುಕಟ್ಟೆಯಲ್ಲಿ ಹೆಸರುಕಾಳು ಮತ್ತು ಸೂರ್ಯಕಾಂತಿ ಧಾರಣಿ ಕುಸಿದ ಕಾರಣ ಬೆಂಬಲ ಬೆಲೆ(Support Price) ಯೋಜನೆಯಲ್ಲಿ ಖರೀದಿಗೆ ಅನುಮತಿ ನೀಡುವಂತೆ ರಾಜ್ಯ ಸರ್ಕಾರ ಕೇಂದ್ರಕ್ಕೆ ಪ್ರಸ್ತಾವನೆ ಸಲ್ಲಿಸಿತ್ತು. 22,215 ಮೆಟ್ರಿಕ್ ಟನ್ ಹೆಸರುಕಾಳು ಹಾಗೂ 13,210 ಮೆಟ್ರಿಕ್ ಟನ್ ಸೂರ್ಯಕಾಂತಿ ಖರೀದಿಗೆ ಕೇಂದ್ರ ಸರ್ಕಾರ ಸಮ್ಮತಿಸಿದೆ. ಬೆಂಬಲ ಬೆಲೆ ಯೋಜನೆಯಲ್ಲಿ ಎಫ್ ಎ ಕ್ಯೂ ಗುಣಮಟ್ಟದ ಹೆಸರುಕಾಳಿಗೆ ಪ್ರತಿ ಕ್ವಿಂಟಲ್ 8.682 ರೂ. ಹಾಗೂ ಸೂರ್ಯಕಾಂತಿಗೆ 7,280 ರೂ. ಬೆಲೆ ನಿಗದಿಪಡಿಸಲಾಗಿದೆ.

ಕೇಂದ್ರ ಸರ್ಕಾರ ರಾಜ್ಯದ ಪ್ರಸ್ತಾವನೆಗೆ ಸಮ್ಮತಿಸಿರುವುದರಿಂದ ಖರೀದಿ ಏಜನ್ಸಿ ನೇಮಕ ಮಾಡಿ ಆದೇಶ ಹೊರಡಿಸಲು ರಾಜ್ಯ ಸರ್ಕಾರ ಕ್ರಮ ಕೈಗೊಂಡಿದೆ. ಹೀಗಾಗಿ ಧಾರಣಿ ಕುಸಿದಿದೆ ಎಂದು ರೈತರು ಆತಂಕ ಪಡುವ ಅಗತ್ಯವಿಲ್ಲ. ಖರೀದಿ ಕೇಂದ್ರಗಳನ್ನು ಆರಂಭಿಸುತ್ತಿದ್ದಂತೆ ನೋಂದಣಿ ಮಾಡಿಸಿಕೊಂಡು ಬೆಂಬಲ ಬೆಲೆಯಲ್ಲಿ ಮಾರಾಟ ಮಾಡಬಹುದು ಎಂದು ಸಚಿವರು ತಿಳಿಸಿದ್ದಾರೆ.

ಹೆಸರುಕಾಳು ಮತ್ತು ಸೂರ್ಯಕಾಂತಿ ಬೆಳೆಯುವ ಪ್ರಮುಖ ಜಿಲ್ಲೆಗಳ ಜಿಲ್ಲಾಧಿಕಾರಿಗಳು ಟಾಸ್ಕ್ ಪೋರ್ಸ್ ಸಭೆ ನಡೆಸಿ ಅಗತ್ಯ ಇರುವ ಕಡೆ ಖರೀದಿ ಕೇಂದ್ರಗಳನ್ನು ಗುರುತಿಸಿ ನೋಂದಣಿ ಆರಂಭಿಸಲಿದ್ದಾರೆ. ನಂತರ ಖರೀದಿ ಪ್ರಕ್ರಿಯೆ ಪ್ರಾರಂಭವಾಗಲಿದೆ. ವಿಳಂಬ ಮಾಡದೆ ಟಾಸ್ಕ್ ಫೋರ್ಸ್ ಸಭೆ ನಡೆಸಲು ಜಿಲ್ಲಾಧಿಕಾರಿಗಳಿಗೆ ಈಗಾಗಲೇ ನಿರ್ದೇಶನ ನೀಡಲಾಗಿದೆ. ರೈತರ ಹಿತದೃಷ್ಟಿಯಿಂದ ತ್ವರಿತವಾಗಿ ನೋಂದಣಿ ಹಾಗೂ ಖರೀದಿ ಪ್ರಕ್ರಿಯೆ ಆರಂಭಿಸಲು ಸರ್ಕಾರ ಕ್ರಮ ಕೈಗೊಳ್ಳಲಿದೆ ಎಂದು ಸಚಿವ ಶಿವಾನಂದ ಪಾಟೀಲ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಬೇಸಿಗೆಯಲ್ಲಿ ನಿಮ್ಮ ಕಿಡ್ನಿಯನ್ನು ಕಾಪಾಡಿ..! ಮೂತ್ರಪಿಂಡದ ಕಲ್ಲು ಸಮಸ್ಯೆ ಏಕೆ ಹೆಚ್ಚುತ್ತಿದೆ?

ಬೇಸಿಗೆಯಲ್ಲಿ ದೇಹದಲ್ಲಿ ನೀರಿನಾಂಶ ಕಡಿಮೆಯಾಗುವುದರಿಂದ ಕಿಡ್ನಿ ಸ್ಟೋನ್ ಸಮಸ್ಯೆ ಹೆಚ್ಚಾಗುವ ಸಾಧ್ಯತೆ ಇದೆ.…

1 day ago

ಮಳೆಗಾಲ ಆರಂಭ- ಜೂನ್‌ 1ರಿಂದ ರಸ್ತೆ, ಗುಡ್ಡ, ಮಣ್ಣು ಅಗೆತ ಕಾಮಗಾರಿಗೆ ನಿರ್ಬಂಧ – ನಗರಪಾಲಿಕೆ ಎಚ್ಚರಿಕೆ

ಮಂಗಳೂರು ನಗರದಲ್ಲಿ ಮಳೆಗಾಲದ ಹಿನ್ನೆಲೆ ಜೂನ್‌ 1ರಿಂದ ಸೆಪ್ಟೆಂಬರ್‌ 30ರವರೆಗೆ ರಸ್ತೆ, ಗುಡ್ಡ…

1 day ago

ಅಸ್ಸಾಂನಲ್ಲಿ ಭಾರೀ ಅಕ್ರಮ ಅಡಿಕೆ ವಶ : ಡಿಆರ್‌ಐ ದಾಳಿ, 60 ಸಾವಿರ ಕೆಜಿ ವಿದೇಶಿ ಅಡಿಕೆ ಜಪ್ತಿ

ಈಶಾನ್ಯ ಭಾರತದಲ್ಲಿ ಡಿಆರ್‌ಐ ನಡೆಸಿದ ದಾಳಿಯಲ್ಲಿ ಸುಮಾರು 60 ಸಾವಿರ ಕೆಜಿ ಅಕ್ರಮ…

2 days ago

“ಒಂದು ದಿನ ಅಡಿಕೆ ಮಾರುಕಟ್ಟೆಗೆ ‘ಏಲಿಯನ್ಸ್’ ಬಂದರೆ?” ರೈತನ ಭವಿಷ್ಯದ ಬಗ್ಗೆ ಎಚ್ಚರಿಸುವ ಕಲ್ಪಿತ ಕಥೆ

ಅಡಿಕೆ ಮಾರುಕಟ್ಟೆಗೆ ದೊಡ್ಡ ಕಾರ್ಪೊರೇಟ್ ಸಂಸ್ಥೆಗಳು ಬಂದರೆ ರೈತರಿಗೆ ಆರಂಭದಲ್ಲಿ ಲಾಭದ ಅನುಭವ…

3 days ago

“ಕಾಕ್ರೋಚ್‌ ಜನತಾ ಪಾರ್ಟಿ”ಗೆ ಹೊಸ ಎದುರಾಳಿ..! ವೈರಲ್‌ ಆಗುತ್ತಿದೆ “ನ್ಯಾಷನಲ್‌ ಪ್ಯಾರಾಸಿಟಿಕ್‌ ಫ್ರಂಟ್‌”

“ಕಾಕ್‌ರೋಚ್‌ ಜನತಾ ಪಾರ್ಟಿ” ಬಳಿಕ ಇದೀಗ “ನ್ಯಾಷನಲ್‌ ಪ್ಯಾರಾಸಿಟಿಕ್‌ ಫ್ರಂಟ್‌” ಎಂಬ ಹೊಸ…

3 days ago