Advertisement
ರಾಷ್ಟ್ರೀಯ

ದೇಶದಾದ್ಯಂತ ಪಿ ಎಫ್‌ ಐ ನಿಷೇಧ ಮಾಡಿದ ಕೇಂದ್ರ ಸರ್ಕಾರ | ಮುಂದಿನ 5 ವರ್ಷಗಳಿಗೆ ನಿಷೇಧ |

Share

ಕೇಂದ್ರ ಸರ್ಕಾರವು ಸೆ. 28 ರಂದು ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (PFI) ಮತ್ತು ಅದರ  ಅಂಗಸಂಸ್ಥೆಗಳನ್ನು  ಕಾನೂನುಬಾಹಿರ ಸಂಘ ಎಂದು  ಮುಂದಿನ  5 ವರ್ಷಗಳ ಅವಧಿಗೆ ತಕ್ಷಣದಿಂದ ನಿಷೇಧ ಜಾರಿ ಮಾಡಿ ಅಧಿಸೂಚನೆ ಹೊರಡಿಸಿದೆ.

ಕೇಂದ್ರ ಗೃಹಸಚಿವಾಲಯದಿಂದ ಹೊರಡಿಸಲಾದ ಅಧಿಸೂಚನೆಯಲ್ಲಿ, ಜಾಗತಿಕ ಉಗ್ರ ಸಂಘಟನೆಗಳ ಜೊತೆ ಸಂಬಂಧ ಹಿನ್ನೆಲೆಯಲ್ಲಿ  ಕಾನೂನುಬಾಹಿರ ಚಟುವಟಿಕೆಗಳ (ತಡೆಗಟ್ಟುವಿಕೆ) ಕಾಯಿದೆ, 1967 (1967 ರ 37) ಸೆಕ್ಷನ್ 3 ರ ಉಪ-ವಿಭಾಗ (1) ರ ಮೂಲಕ  ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ನಿಷೇಧ ಮಾಡಿದೆ ಎಂದು ತಿಳಿಸಲಾಗಿದೆ. ಪಿಎಫ್‌ಐ ಜೊತೆಗೆ  ನ್ಯಾಷನಲ್ ಕಾನ್ಫೆಡರೇಷನ್ ಆಫ್ ಹ್ಯೂಮನ್ ರೈಟ್ಸ್ ಆರ್ಗನೈಸೇಷನ್, ನ್ಯಾಷನಲ್ ವುಮೆನ್ಸ್ ಫ್ರಂಟ್ ಕೂಡ ಕಾನೂನುಬಾಹಿರ ಸಂಸ್ಥೆ, ಜ್ಯೂನಿಯರ್ ಫ್ರಂಟ್, ಎಂಪವರ್ ಇಂಡಿಯಾ ಫೌಂಡೇಷನ್ ಬ್ಯಾನ್, ರಿಹಾಬ್ ಫೌಂಡೇಷನ್, ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ, ಆಲ್ ಇಂಡಿಯಾ ಇಮಾಮ್ ಕೌನ್ಸಿಲ್ ಬ್ಯಾನ್ ಮಾಡಲಾಗಿದೆ.

ಪಿಎಫ್‌ಐ ಮತ್ತು ಅದರ ಅಂಗಸಂಸ್ಥೆಗಳು ಅಥವಾ ಅವುಗಳ ವಿವಿಧ ರಂಗಗಳು ಕಾನೂನುಬಾಹಿರ ಚಟುವಟಿಕೆಗಳಲ್ಲಿ ತೊಡಗಿವೆ, ಇದು ದೇಶದ ಸಮಗ್ರತೆ, ಸಾರ್ವಭೌಮತೆ ಮತ್ತು ಭದ್ರತೆಗೆ ಹಾನಿಕರವಾಗಿದೆ ಮತ್ತು ಸಾರ್ವಜನಿಕ ಶಾಂತಿ ಮತ್ತು ದೇಶದ ಕೋಮು ಸೌಹಾರ್ದತೆಗೆ ಭಂಗ ತರುವ ಮತ್ತು ಉಗ್ರವಾದವನ್ನು ಬೆಂಬಲಿಸುವ ಸಾಮರ್ಥ್ಯವನ್ನು ಹೊಂದಿದೆ ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.  ಇಸ್ಲಾಮಿಕ್ ಸ್ಟೇಟ್ ಆಫ್ ಇರಾಕ್ ಮತ್ತು ಸಿರಿಯಾ (ISIS) ನಂತಹ ಜಾಗತಿಕ ಭಯೋತ್ಪಾದಕ ಗುಂಪುಗಳೊಂದಿಗೆ  ಅಂತರರಾಷ್ಟ್ರೀಯ ಸಂಪರ್ಕಗಳ ಹಲವಾರು ಉದಾಹರಣೆಗಳು ಸಿಕ್ಕಿವೆ. ಪಿಎಫ್‌ಐ ಮತ್ತು ಅದರ  ಅಂಗಸಂಸ್ಥೆಗಳು  ದೇಶದಲ್ಲಿ ಅಭದ್ರತೆಯ ಭಾವನೆಯನ್ನು ಉತ್ತೇಜಿಸುವ ಮೂಲಕ ಒಂದು ಸಮುದಾಯದ ಮೂಲಭೂತೀಕರಣವನ್ನು ಹೆಚ್ಚಿಸಲು ರಹಸ್ಯವಾಗಿ ಕೆಲಸ ಮಾಡುತ್ತಿವೆ, ಕೆಲವು ಪಿಎಫ್‌ಐ ಕಾರ್ಯಕರ್ತರು ಅಂತರರಾಷ್ಟ್ರೀಯ ಭಯೋತ್ಪಾದಕ ಸಂಘಟನೆಗಳಿಗೆ ಸೇರಿದ್ದಾರೆ ಎಂಬ ಅಂಶ  ಸಾಬೀತಾಗಿದೆ ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 15-03-2026 | ಬಿಸಿಲಿನ ಮಧ್ಯೆ ಮಳೆ ಅಬ್ಬರ – ರಾಜ್ಯದ ಹಲವೆಡೆ ಸಂಜೆ ಗುಡುಗು ಮಳೆ ಸಾಧ್ಯತೆ

ರಾಜ್ಯದ ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ ಸಂಜೆ–ರಾತ್ರಿ ಗುಡುಗು ಸಹಿತ ಮಳೆಯ ಮುನ್ಸೂಚನೆ…

46 minutes ago

ಹವಾಮಾನ ಚಕ್ರಗಳೇ ಬದಲಾಗುತ್ತಿವೆ | ಲಾ ನೀನಾ ಪರಿಣಾಮ ಕಡಿಮೆ, ಉಷ್ಣ ಅಲೆಗಳ ಭೀತಿ ಹೆಚ್ಚಳ

ಹವಾಮಾನ ಬದಲಾವಣೆಯಿಂದ ಲಾ ನೀನಾದ ತಂಪು ಪರಿಣಾಮ ದುರ್ಬಲವಾಗಿ ಭಾರತದಲ್ಲಿ ಬೇಸಿಗೆ ಮುಂಚಿತವಾಗಿ…

2 hours ago

ಹೊಸರುಚಿ | ಹಲಸಿನ ಹಣ್ಣಿನಿಂದ ಇಷ್ಟು ರುಚಿ ಸಿಗುತ್ತದಾ…? ಈ ಕಸ್ಟರ್ಡ್ ಮಿಸ್ ಮಾಡ್ಬೇಡಿ…!

ಹಲಸಿನ ಹಣ್ಣಿನಿಂದ ಸುಲಭವಾಗಿ ತಯಾರಿಸಬಹುದಾದ ಕಸ್ಟರ್ಡ್ ಬೇಸಿಗೆಯಲ್ಲಿ ಉತ್ತಮ ಡೆಸರ್ಟ್ ಆಯ್ಕೆಯಾಗಿದೆ. ಕಡಿಮೆ…

18 hours ago

ಹವಾಮಾನ ವರದಿ | 14-03-2026 | ಇಂದು ಕರಾವಳಿ ಜಿಲ್ಲೆಯಲ್ಲಿ ಮಳೆ ಸಾಧ್ಯತೆ – ರಾಜ್ಯದ ಹಲವೆಡೆ ಗುಡುಗು ಮಳೆ ಮುನ್ಸೂಚನೆ

ರಾಜ್ಯದ ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಸಂಜೆ ಹಾಗೂ ರಾತ್ರಿ ವೇಳೆಯಲ್ಲಿ ಗುಡುಗು…

23 hours ago

ಮಲೇಷ್ಯಾದಲ್ಲಿ ರಬ್ಬರ್ ಉತ್ಪಾದನೆ ಇಳಿಕೆ – ಭಾರತೀಯ ರೈತರಿಗೆ ಏನು ಸಂದೇಶ?

ಮಲೇಷ್ಯಾದಲ್ಲಿ ರಬ್ಬರ್ ಉತ್ಪಾದನೆ ಇಳಿಕೆ ಭಾರತೀಯ ರೈತರಿಗೆ ಬೆಲೆ ಬೆಂಬಲದ ಸೂಚನೆ ನೀಡುತ್ತಿದೆ.…

1 day ago

ಕಾಡಾನೆ ದಾಳಿಗೆ ಕಾಫಿ ತೋಟದ ಮಾಲೀಕ ಬಲಿ; ಅರಣ್ಯ ಇಲಾಖೆ ವಿರುದ್ಧ ಗ್ರಾಮಸ್ಥರ ಆಕ್ರೋಶ

ಕೊಡಗಿನಲ್ಲಿ ಕಾಡಾನೆ ದಾಳಿಗೆ ಕಾಫಿ ತೋಟದ ಮಾಲೀಕ ಗಣಪತಿ ಮೃತಪಟ್ಟಿದ್ದಾರೆ. ಕಾಡಾನೆ ಹಾವಳಿ…

1 day ago