ರಾಜ್ಯದ ರೈತರಿಗೆ ಕೇಂದ್ರ ಸರ್ಕಾರದಿಂದ ಗಣೇಶ ಹಬ್ಬದ ಗಿಫ್ಟ್ | ರಾಜ್ಯದಲ್ಲಿ ಉದ್ದು, ಸೋಯಾಬಿನ್‌ಗೂ ಬೆಂಬಲ ಬೆಲೆ ಖರೀದಿ ಕೇಂದ್ರ

August 30, 2024
10:27 AM
  •  ಹೆಸರು, ಸೂರ್ಯಕಾಂತಿ ಜತೆಗೆ ಇದೀಗ ಉದ್ದು, ಸೋಯಾಬಿನ್ ಖರೀದಿಗೂ ಕೇಂದ್ರ ಅನುಮತಿ
  • 19,760 MT ಉದ್ದು ಹಾಗೂ 1,03,315 MT ಸೋಯಾಬಿನ್ ಖರೀದಿಗೆ ಸೂಚನೆ

ರಾಜ್ಯದಲ್ಲಿ ಮತ್ತೆರೆಡು ಬೆಳೆಗಳನ್ನು ಬೆಂಬಲ ಬೆಲೆಯಲ್ಲಿ(Support Price) ಖರೀದಿಸಲು ಕೇಂದ್ರ ಸರ್ಕಾರ(Central govt) ಅನುಮತಿ ನೀಡಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ(MP Prahalad Joshi) ತಿಳಿಸಿದ್ದಾರೆ. ರಾಜ್ಯದಲ್ಲಿ ಹೆಸರು, ಸೂರ್ಯಕಾಂತಿ ಜತೆಗೆ ಈಗ ಉದ್ದು(Uddu) ಮತ್ತು ಸೋಯಾಬಿನ್(Soybean) ಅನ್ನೂ ಬೆಂಬಲ ಬೆಲೆಯಲ್ಲಿ ಖರೀದಿಸುವಂತೆ ರಾಜ್ಯ ಸರ್ಕಾರಕ್ಕೆ ಕೇಂದ್ರ ನಿರ್ದೇಶಿಸಿದೆ ಎಂದು ಹೇಳಿದ್ದಾರೆ.

ನಾಲ್ಕೈದು ದಿನಗಳ ಹಿಂದಷ್ಟೇ ಹೆಸರು ಮತ್ತು ಸೂರ್ಯಕಾಂತಿ ಬೆಳೆಯನ್ನು ಬೆಂಬಲ ಬೆಲೆಯಲ್ಲಿ ಖರೀದಿಸಲು ಅನುಮತಿ ನೀಡಿದ್ದ ಕೇಂದ್ರ ಸರ್ಕಾರ, ಇದೀಗ ಉದ್ದು ಮತ್ತು ಸೋಯಾಬಿನ್ ಅನ್ನೂ ಬೆಂಬಲ ಬೆಲೆಯಲ್ಲಿ ಖರೀದಿಸಲು ಅನುಮೋದನೆ ನೀಡಿದೆ. ಈ ಮೂಲಕ ರಾಜ್ಯದ ರೈತರಿಗೆ ಗಣೇಶ ಹಬ್ಬದ ಗಿಫ್ಟ್ ನೀಡಿದೆ ಎಂದಿದ್ದಾರೆ ಸಚಿವ ಜೋಶಿ. “ಹೆಸರು ಮತ್ತು ಸೂರ್ಯಕಾಂತಿ”ಗೆ ಬೆಂಬಲ ಬೆಲೆ ಘೋಷಿಸಿ ರಾಜ್ಯದಲ್ಲಿ ಖರೀದಿ ಕೇಂದ್ರ ತೆರೆಯುತ್ತಿದ್ದಂತೆಯೇ ಕೇಂದ್ರ ಕೃಷಿ ಸಚಿವಾಲಯ ಇದೀಗ “ಉದ್ದು ಮತ್ತು ಸೋಯಾಬೀನ್” ಗೂ ಬೆಂಬಲ ಬೆಲೆ ಖರೀದಿ ಕೇಂದ್ರ ತೆರೆಯಲು ರಾಜ್ಯ ಸರ್ಕಾರಕ್ಕೆ ಅನುಮತಿ ನೀಡಿದೆ.

Advertisement

ಕರ್ನಾಟಕದಲ್ಲಿ 2024-25 ರ ಮುಂಗಾರು ಹಂಗಾಮಿನಲ್ಲಿ ಬೆಂಬಲ ಬೆಲೆ ಯೋಜನೆಯಡಿ 19,760 ಮೆಟ್ರಿಕ್ ಟನ್ ಉದ್ದು ಹಾಗೂ 1,03,315 ಮೆಟ್ರಿಕ್ ಟನ್ ಸೋಯಾಬಿನ್ ಖರೀದಿಗೆ ಕೇಂದ್ರ ಸರ್ಕಾರ ಅಸ್ತು ಎಂದಿದೆ. ಮುಕ್ತ ಮಾರುಕಟ್ಟೆಯಲ್ಲಿ ಈ ಬೆಳೆಗಳಿಗೆ ಬೆಲೆ ಕಡಿಮೆ ಇರುವುದರಿಂದ msp ಅಡಿಯಲ್ಲಿ ಖರೀದಿಸಿ ರೈತರಿಗೆ ಅನುಕೂಲ ಕಲ್ಪಿಸುವ ಉದ್ದೇಶದಿಂದ ಕೇಂದ್ರ ಸರ್ಕಾರ ಈ ಕ್ರಮ ಕೈಗೊಂಡಿದೆ ಎಂದು ಸಚಿವ ಜೋಶಿ ತಿಳಿಸಿದ್ದಾರೆ.

ರಾಜ್ಯದಲ್ಲಿ 90 ದಿನಗಳ ಅವಧಿಗೆ ಖರೀದಿ ಕೇಂದ್ರ ತೆರೆದು ಬೆಂಬಲ ಬೆಲೆ ಯೋಜನೆಯಡಿ ಉದ್ದು ಮತ್ತು ಸೋಯಾಬೀನ್ ಖರೀದಿಸುವಂತೆ ಕೇಂದ್ರ ಕೃಷಿ ಸಚಿವಾಲಯ ರಾಜ್ಯ ಸರ್ಕಾರಕ್ಕೆ ನಿನ್ನೆಯೇ (ಆ.29)ಆದೇಶ ಹೊರಡಿಸಿದೆ ಎಂದು ಪ್ರಲ್ಹಾದ ಜೋಶಿ ಮಾಹಿತಿ ನೀಡಿದ್ದಾರೆ. ಉದ್ದಿನ ಕಾಳು 7400 ರು. ಮತ್ತು ಸೋಯಾಬಿನ್ ಗೆ 4892 ರು. ಬೆಂಬಲ ಬೆಲೆಯನ್ನು ಕೇಂದ್ರ ಸರ್ಕಾರ ನಿಗದಿಪಡಿಸಿದೆ. ಕಳೆದ ವರ್ಷ 6950 ರು. ಇದ್ದ ಉದ್ದಿನ ಬೆಂಬಲ ಬೆಲೆ ಪ್ರಸಕ್ತ ಮುಂಗಾರು ಹಂಗಾಮಿನಲ್ಲಿ 450 ರು. ಹೆಚ್ಚಳ ಕಂಡಿದೆ. 4600 ದರವಿದ್ದ ಸೋಯಾಬಿನ್ ಬೆಂಬಲ ಬೆಲೆ ಈಗ 292 ರು. ಹೆಚ್ಚಳವಾಗಿದೆ.

Advertisement

ತಕ್ಷಣ ಖರೀದಿ ಕೇಂದ್ರ ತೆರೆಯಲು ಒತ್ತಾಯ: ರಾಜ್ಯ ಸರ್ಕಾರ ತಕ್ಷಣವೇ ರಾಜ್ಯದ್ಯಂತ ಬೆಂಬಲ ಬೆಲೆ ಖರೀದಿ ಕೇಂದ್ರಗಳನ್ನು ಆರಂಭಿಸಿ ಹೆಸರು, ಸೂರ್ಯಕಾಂತಿ ಜತೆಗೆ ಉದ್ದು ಮತ್ತು ಸೋಯಾಬಿನ್ ಖರೀದಿ ಪ್ರಕ್ರಿಯೆಗೆ ಚಾಲನೆ ನೀಡಬೇಕೆಂದು ಸಚಿವ ಪ್ರಲ್ಹಾದ ಜೋಶಿ ರಾಜ್ಯ ಸರ್ಕಾರವನ್ನು ಒತ್ತಾಯಿಸಿದ್ದಾರೆ.

ರಾಜ್ಯದ ರೈತರ ಸಂಕಷ್ಟಕ್ಕೆ ಪ್ರಧಾನಿ ಸ್ಪಂದನೆ: ರಾಜ್ಯದ ರೈತರ ಸಮಸ್ಯೆಗೆ ಪ್ರಧಾನಿ ನರೇಂದ್ರ ಮೋದಿ ಮತ್ತು ಕೃಷಿ ಸಚಿವ ಶಿವರಾಜಸಿಂಗ್ ಚವ್ಹಾಣ ನಿರಂತರ ಸ್ಪಂದಿಸುತ್ತಲೇ ಬಂದಿದ್ದಾರೆ. ಇದೀಗ ನಾಲ್ಕು ಬೆಳೆಗಳಿಗೆ ಬೆಂಬಲ ಬೆಳೆ ಖರೀದಿ ಕೇಂದ್ರ ತೆರೆಯಲು ಅನುಮತಿ ನೀಡಿದ್ದಾರೆಂದು ಸಚಿವ ಪ್ರಲ್ಹಾದ ಜೋಶಿ ಧನ್ಯವಾದ ಹೇಳಿದ್ದಾರೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಹವಾಮಾನ ವರದಿ | 03-07-2026 | ಕರ್ನಾಟಕದಲ್ಲಿ ಜುಲೈ 10ರವರೆಗೆ ಮಳೆ ಮುಂದುವರಿಕೆ; ಕರಾವಳಿ-ಮಲೆನಾಡಿನ ಅಡಿಕೆ, ಕಾಫಿ ಬೆಳೆಗಾರರಿಗೆ ಜುಲೈ 11ರಿಂದ ಔಷಧಿ ಸಿಂಪಡಿಸಲು ಅವಕಾಶ!
July 3, 2026
11:38 AM
by: ಸಾಯಿಶೇಖರ್ ಕರಿಕಳ
ಪೆಟ್ರೋಲ್-ಡೀಸೆಲ್ ದರ ಇಳಿಕೆಯಾಗುತ್ತಾ? ಕೇಂದ್ರ ಸಚಿವರ ಸುಳಿವಿನಿಂದ ವಾಹನ ಸವಾರರಿಗೆ ಹೊಸ ನಿರೀಕ್ಷೆ
July 2, 2026
10:25 PM
by: ದ ರೂರಲ್ ಮಿರರ್.ಕಾಂ
ನಿರಂತರ ಮಳೆ ಹಿನ್ನೆಲೆ ಜುಲೈ 3ರಂದು ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಶಾಲೆ-ಕಾಲೇಜುಗಳಿಗೆ ರಜೆ
July 2, 2026
9:59 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 02.07.2026 | ಕರ್ನಾಟಕದಲ್ಲಿ ಇನ್ನೂ ಕೆಲವು ದಿನ ಸಾಧಾರಣ ಮಳೆ: ಕರಾವಳಿಯಲ್ಲಿ ಜುಲೈ 5ರಿಂದ ಮಳೆ ಹೆಚ್ಚಳ ಸಾಧ್ಯತೆ, ಅಡಿಕೆ ತೋಟಗಳಿಗೆ ಔಷಧಿ ಸಿಂಪಡಿಸಲು 12ರ ಬಳಿಕ ಅವಕಾಶ
July 2, 2026
3:43 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror