Advertisement
MIRROR FOCUS

ರಾಜ್ಯದ ರೈತರಿಗೆ ಕೇಂದ್ರ ಸರ್ಕಾರದಿಂದ ಗಣೇಶ ಹಬ್ಬದ ಗಿಫ್ಟ್ | ರಾಜ್ಯದಲ್ಲಿ ಉದ್ದು, ಸೋಯಾಬಿನ್‌ಗೂ ಬೆಂಬಲ ಬೆಲೆ ಖರೀದಿ ಕೇಂದ್ರ

Share
  • ಹೆಸರು, ಸೂರ್ಯಕಾಂತಿ ಜತೆಗೆ ಇದೀಗ ಉದ್ದು, ಸೋಯಾಬಿನ್ ಖರೀದಿಗೂ ಕೇಂದ್ರ ಅನುಮತಿ
  • 19,760 MT ಉದ್ದು ಹಾಗೂ 1,03,315 MT ಸೋಯಾಬಿನ್ ಖರೀದಿಗೆ ಸೂಚನೆ

ರಾಜ್ಯದಲ್ಲಿ ಮತ್ತೆರೆಡು ಬೆಳೆಗಳನ್ನು ಬೆಂಬಲ ಬೆಲೆಯಲ್ಲಿ(Support Price) ಖರೀದಿಸಲು ಕೇಂದ್ರ ಸರ್ಕಾರ(Central govt) ಅನುಮತಿ ನೀಡಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ(MP Prahalad Joshi) ತಿಳಿಸಿದ್ದಾರೆ. ರಾಜ್ಯದಲ್ಲಿ ಹೆಸರು, ಸೂರ್ಯಕಾಂತಿ ಜತೆಗೆ ಈಗ ಉದ್ದು(Uddu) ಮತ್ತು ಸೋಯಾಬಿನ್(Soybean) ಅನ್ನೂ ಬೆಂಬಲ ಬೆಲೆಯಲ್ಲಿ ಖರೀದಿಸುವಂತೆ ರಾಜ್ಯ ಸರ್ಕಾರಕ್ಕೆ ಕೇಂದ್ರ ನಿರ್ದೇಶಿಸಿದೆ ಎಂದು ಹೇಳಿದ್ದಾರೆ.

ನಾಲ್ಕೈದು ದಿನಗಳ ಹಿಂದಷ್ಟೇ ಹೆಸರು ಮತ್ತು ಸೂರ್ಯಕಾಂತಿ ಬೆಳೆಯನ್ನು ಬೆಂಬಲ ಬೆಲೆಯಲ್ಲಿ ಖರೀದಿಸಲು ಅನುಮತಿ ನೀಡಿದ್ದ ಕೇಂದ್ರ ಸರ್ಕಾರ, ಇದೀಗ ಉದ್ದು ಮತ್ತು ಸೋಯಾಬಿನ್ ಅನ್ನೂ ಬೆಂಬಲ ಬೆಲೆಯಲ್ಲಿ ಖರೀದಿಸಲು ಅನುಮೋದನೆ ನೀಡಿದೆ. ಈ ಮೂಲಕ ರಾಜ್ಯದ ರೈತರಿಗೆ ಗಣೇಶ ಹಬ್ಬದ ಗಿಫ್ಟ್ ನೀಡಿದೆ ಎಂದಿದ್ದಾರೆ ಸಚಿವ ಜೋಶಿ. “ಹೆಸರು ಮತ್ತು ಸೂರ್ಯಕಾಂತಿ”ಗೆ ಬೆಂಬಲ ಬೆಲೆ ಘೋಷಿಸಿ ರಾಜ್ಯದಲ್ಲಿ ಖರೀದಿ ಕೇಂದ್ರ ತೆರೆಯುತ್ತಿದ್ದಂತೆಯೇ ಕೇಂದ್ರ ಕೃಷಿ ಸಚಿವಾಲಯ ಇದೀಗ “ಉದ್ದು ಮತ್ತು ಸೋಯಾಬೀನ್” ಗೂ ಬೆಂಬಲ ಬೆಲೆ ಖರೀದಿ ಕೇಂದ್ರ ತೆರೆಯಲು ರಾಜ್ಯ ಸರ್ಕಾರಕ್ಕೆ ಅನುಮತಿ ನೀಡಿದೆ.

ಕರ್ನಾಟಕದಲ್ಲಿ 2024-25 ರ ಮುಂಗಾರು ಹಂಗಾಮಿನಲ್ಲಿ ಬೆಂಬಲ ಬೆಲೆ ಯೋಜನೆಯಡಿ 19,760 ಮೆಟ್ರಿಕ್ ಟನ್ ಉದ್ದು ಹಾಗೂ 1,03,315 ಮೆಟ್ರಿಕ್ ಟನ್ ಸೋಯಾಬಿನ್ ಖರೀದಿಗೆ ಕೇಂದ್ರ ಸರ್ಕಾರ ಅಸ್ತು ಎಂದಿದೆ. ಮುಕ್ತ ಮಾರುಕಟ್ಟೆಯಲ್ಲಿ ಈ ಬೆಳೆಗಳಿಗೆ ಬೆಲೆ ಕಡಿಮೆ ಇರುವುದರಿಂದ msp ಅಡಿಯಲ್ಲಿ ಖರೀದಿಸಿ ರೈತರಿಗೆ ಅನುಕೂಲ ಕಲ್ಪಿಸುವ ಉದ್ದೇಶದಿಂದ ಕೇಂದ್ರ ಸರ್ಕಾರ ಈ ಕ್ರಮ ಕೈಗೊಂಡಿದೆ ಎಂದು ಸಚಿವ ಜೋಶಿ ತಿಳಿಸಿದ್ದಾರೆ.

ರಾಜ್ಯದಲ್ಲಿ 90 ದಿನಗಳ ಅವಧಿಗೆ ಖರೀದಿ ಕೇಂದ್ರ ತೆರೆದು ಬೆಂಬಲ ಬೆಲೆ ಯೋಜನೆಯಡಿ ಉದ್ದು ಮತ್ತು ಸೋಯಾಬೀನ್ ಖರೀದಿಸುವಂತೆ ಕೇಂದ್ರ ಕೃಷಿ ಸಚಿವಾಲಯ ರಾಜ್ಯ ಸರ್ಕಾರಕ್ಕೆ ನಿನ್ನೆಯೇ (ಆ.29)ಆದೇಶ ಹೊರಡಿಸಿದೆ ಎಂದು ಪ್ರಲ್ಹಾದ ಜೋಶಿ ಮಾಹಿತಿ ನೀಡಿದ್ದಾರೆ. ಉದ್ದಿನ ಕಾಳು 7400 ರು. ಮತ್ತು ಸೋಯಾಬಿನ್ ಗೆ 4892 ರು. ಬೆಂಬಲ ಬೆಲೆಯನ್ನು ಕೇಂದ್ರ ಸರ್ಕಾರ ನಿಗದಿಪಡಿಸಿದೆ. ಕಳೆದ ವರ್ಷ 6950 ರು. ಇದ್ದ ಉದ್ದಿನ ಬೆಂಬಲ ಬೆಲೆ ಪ್ರಸಕ್ತ ಮುಂಗಾರು ಹಂಗಾಮಿನಲ್ಲಿ 450 ರು. ಹೆಚ್ಚಳ ಕಂಡಿದೆ. 4600 ದರವಿದ್ದ ಸೋಯಾಬಿನ್ ಬೆಂಬಲ ಬೆಲೆ ಈಗ 292 ರು. ಹೆಚ್ಚಳವಾಗಿದೆ.

ತಕ್ಷಣ ಖರೀದಿ ಕೇಂದ್ರ ತೆರೆಯಲು ಒತ್ತಾಯ: ರಾಜ್ಯ ಸರ್ಕಾರ ತಕ್ಷಣವೇ ರಾಜ್ಯದ್ಯಂತ ಬೆಂಬಲ ಬೆಲೆ ಖರೀದಿ ಕೇಂದ್ರಗಳನ್ನು ಆರಂಭಿಸಿ ಹೆಸರು, ಸೂರ್ಯಕಾಂತಿ ಜತೆಗೆ ಉದ್ದು ಮತ್ತು ಸೋಯಾಬಿನ್ ಖರೀದಿ ಪ್ರಕ್ರಿಯೆಗೆ ಚಾಲನೆ ನೀಡಬೇಕೆಂದು ಸಚಿವ ಪ್ರಲ್ಹಾದ ಜೋಶಿ ರಾಜ್ಯ ಸರ್ಕಾರವನ್ನು ಒತ್ತಾಯಿಸಿದ್ದಾರೆ.

ರಾಜ್ಯದ ರೈತರ ಸಂಕಷ್ಟಕ್ಕೆ ಪ್ರಧಾನಿ ಸ್ಪಂದನೆ: ರಾಜ್ಯದ ರೈತರ ಸಮಸ್ಯೆಗೆ ಪ್ರಧಾನಿ ನರೇಂದ್ರ ಮೋದಿ ಮತ್ತು ಕೃಷಿ ಸಚಿವ ಶಿವರಾಜಸಿಂಗ್ ಚವ್ಹಾಣ ನಿರಂತರ ಸ್ಪಂದಿಸುತ್ತಲೇ ಬಂದಿದ್ದಾರೆ. ಇದೀಗ ನಾಲ್ಕು ಬೆಳೆಗಳಿಗೆ ಬೆಂಬಲ ಬೆಳೆ ಖರೀದಿ ಕೇಂದ್ರ ತೆರೆಯಲು ಅನುಮತಿ ನೀಡಿದ್ದಾರೆಂದು ಸಚಿವ ಪ್ರಲ್ಹಾದ ಜೋಶಿ ಧನ್ಯವಾದ ಹೇಳಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಭಾರೀ ಮಳೆ ಹಿನ್ನೆಲೆ – ದಕ್ಷಿಣ ಕನ್ನಡದಲ್ಲಿ ಇಂದು ಶಾಲೆ, ಪಿಯು ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಡಳಿತ ಆದೇಶ

ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆ ಜುಲೈ 23ರಂದು ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ…

13 hours ago

ಹವಾಮಾನ ವರದಿ | 22.07.2026 | ಉತ್ತರ ಕನ್ನಡ, ಉಡುಪಿಯಲ್ಲಿ ಉತ್ತಮ ಮಳೆಯ ಸಾಧ್ಯತೆ; ರಾಜ್ಯದಲ್ಲಿ ಮಳೆ ಚಟುವಟಿಕೆ ಮುಂದುವರಿಕೆ

23.07.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ ಕರಾವಳಿ: ಕಾಸರಗೋಡು, ದಕ್ಷಿಣ…

1 day ago

ಆಮದು ಕಳಪೆ ಅಡಿಕೆ ಮಿಶ್ರಣದ ಎಚ್ಚರಿಕೆ- ಬೆಳೆಗಾರರಿಗೆ ಕ್ಯಾಂಪ್ಕೊ ಮನವಿ

ಆಮದುಗೊಂಡ ಕಳಪೆ ಅಡಿಕೆಯನ್ನು ದೇಶೀಯ ಅಡಿಕೆಯೊಂದಿಗೆ ಮಿಶ್ರಣ ಮಾಡಲಾಗುತ್ತಿದೆ ಎಂಬ ವರದಿಗಳ ಹಿನ್ನೆಲೆಯಲ್ಲಿ…

2 days ago

ಹವಾಮಾನ ವರದಿ | 21-07-2026 | ಕರಾವಳಿ-ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಕೆ, ಭಾರೀ ಮಳೆ ಸಾಧ್ಯತೆ ಕಡಿಮೆ

ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಬಿಟ್ಟು ಬಿಟ್ಟು ಸಾಧಾರಣ ಮಳೆ…

2 days ago

ಅಡಿಕೆ ರೋಗ ಸಂಕಷ್ಟಕ್ಕೆ ಸಂಸತ್ತಿನಲ್ಲಿ ಧ್ವನಿ : ನಿಯಮ 377ರಡಿ ಕ್ಯಾ. ಬ್ರಿಜೇಶ್ ಚೌಟ ಒತ್ತಾಯ

ಅಡಿಕೆ ತೋಟಗಳಲ್ಲಿ ಹೆಚ್ಚುತ್ತಿರುವ ಎಲೆ ಚುಕ್ಕೆ, ಹಳದಿ ಎಲೆ ಮತ್ತು ಕೊಳೆ ರೋಗಗಳಿಗೆ…

3 days ago

ದೇಶಾದ್ಯಂತ ಮುಂಗಾರು ಅಬ್ಬರ : ಹಲವು ರಾಜ್ಯಗಳಿಗೆ ಭಾರೀ ಮಳೆ ಎಚ್ಚರಿಕೆ, ಹಿಮಾಲಯ ತಪ್ಪಲಿನಲ್ಲಿ ರೆಡ್ ಅಲರ್ಟ್

ದೇಶಾದ್ಯಂತ ಮುಂಗಾರು ಮತ್ತಷ್ಟು ತೀವ್ರಗೊಂಡಿದ್ದು, ಉತ್ತರ ಭಾರತದ ಹಲವು ಭಾಗಗಳಿಗೆ ರೆಡ್ ಅಲರ್ಟ್…

3 days ago