ರಾಜ್ಯ ಕೃಷಿ ಇಲಾಖೆಯು ಸಿರಿಧಾನ್ಯ – ಸಾವಯವ- ಅಂತರಾಷ್ಟ್ರೀಯ ವಾಣಿಜ್ಯ ಮೇಳ 2023ದ ರೋಡ್ ಶೋ ಮತ್ತು ರಾಜ್ಯದ ಸಾವಯವ ಹಾಗೂ ಸಿರಿಧಾನ್ಯಗಳಿಗೆ ಮಾರುಕಟ್ಟೆ, ಸಂಪರ್ಕ ಕಲ್ಪಿಸುವ ಹಾಗೂ ಗ್ರಾಹಕರಲ್ಲಿ ಅರಿವು ಮೂಡಿಸುವ ಮುಖ್ಯ ಉದ್ದೇಶಗಳೊಂದಿಗೆ ಬೆಂಗಳೂರಿನ ಅರಮನೆ ಆವರಣದ ತ್ರಿಪುರವಾಸಿನಿಯಲ್ಲಿ ಜ.20 ರಿಂದ 22ರವರೆಗೆ ಸಿರಿಧಾನ್ಯ ಮತ್ತು ಸಾವಯವ -2023” ಅಂತರಾಷ್ಟ್ರೀಯ ವಾಣಿಜ್ಯ ಮೇಳವನ್ನು ಹಮ್ಮಿಕೊಂಡಿದೆ.
ಕಾರ್ಯಕ್ರಮದ ಪೂರ್ವಭಾವಿಯಾಗಿ ಮೇಳಕ್ಕೆ, ವ್ಯಾಪಕ ಪ್ರಚಾರ ನೀಡುವ ಉದ್ದೇಶದಿಂದ ಜ.5 ರಂದು ಬೆಂಗಳೂರಿನ ವಸಂತನಗರದ ಶಾಂಗ್ರಿಲಾ ಹೋಟೆಲ್ನಲ್ಲಿ ಕೃಷಿ ಸಚಿವರಾದ ಬಿ.ಸಿ.ಪಾಟೀಲ್ ಅವರು ರೋಡ್ ಶೋ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ.
ಕಾರ್ಯಕ್ರಮದಲ್ಲಿ ಕೃಷಿ ಇಲಾಖೆಯ ಹಿರಿಯ ಅಧಿಕಾರಿಗಳು, ಕೃಷಿ ಉತ್ಪನ್ನಗಳ ರಫ್ತುದಾರರು, ಮಾರುಕಟ್ಟೆದಾರರು, ಸಂಸ್ಕರಣೆದಾರರು ಹಾಗೂ ಸಾವಯವ ಮತ್ತು ಸಿರಿಧಾನ್ಯಗಳ ಇತರೆ ಪಾಲುದಾರರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.
ಮೇಳದ ವೆಬ್ಸೈಟ್ ಮತ್ತು ವೀಡಿಯೊವನ್ನು ಕಾರ್ಯಕ್ರಮದಲ್ಲಿ ಅನಾವರಣಗೊಳಿಸಲಾಗುವುದು ಎಂದು ಕೃಷಿ ಇಲಾಖೆಯ ನಿರ್ದೇಶಕರು ತಿಳಿಸಿದ್ದಾರೆ.
ಕರಾವಳಿ ಕರ್ನಾಟಕದಲ್ಲಿ ಮುಂದಿನ 10 ದಿನಗಳವರೆಗೂ ಮೋಡ–ಮಳೆಯ ವಾತಾವರಣ ಮುಂದುವರಿಯುವ ಸಾಧ್ಯತೆ ಇದೆ.…
ಜೂನ್ನಲ್ಲಿ ಶೇ.29ರಷ್ಟು ಮಳೆ ಕೊರತೆ ಎದುರಿಸಿದ್ದ ಬೆಳಗಾವಿ ಜಿಲ್ಲೆಯಲ್ಲಿ ಜುಲೈನಲ್ಲಿ ಉತ್ತಮ ಮಳೆಯಾಗಿದ್ದು,…
ಕೇಂದ್ರ ಸರ್ಕಾರದಿಂದ ಉಚಿತ ಎಲೆಕ್ಟ್ರಿಕ್ ಸ್ಟೌ ವಿತರಣೆ ಎಂಬ ಹೆಸರಿನಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ…
ಸರ್ಕಾರಿ ಶಾಲೆಗಳಲ್ಲಿ ಬಾಕಿ ಇರುವ ಮಕ್ಕಳಿಗೆ ಆಗಸ್ಟ್ 28ರೊಳಗೆ ಶೂ ಮತ್ತು ಸಾಕ್ಸ್…
ರಾಜ್ಯಾದ್ಯಂತ ಪಿಜಿ, ಹಾಸ್ಟೆಲ್, ಕ್ಯಾಟರಿಂಗ್ ಹಾಗೂ ಹೋಟೆಲ್ಗಳಲ್ಲಿ ಆಹಾರ ಸುರಕ್ಷತಾ ತಪಾಸಣೆ ಮುಂದುವರಿಯಲಿದೆ…
ಉತ್ತರ ಪ್ರದೇಶದಲ್ಲಿ ಸುಮಾರು 10 ಸಾವಿರ ‘ಗೋ ಮಿತ್ರ’ರಿಗೆ ತರಬೇತಿ ನೀಡಿ ಗೋ…