ರಾಜ್ಯ ಕೃಷಿ ಇಲಾಖೆಯು ಸಿರಿಧಾನ್ಯ – ಸಾವಯವ- ಅಂತರಾಷ್ಟ್ರೀಯ ವಾಣಿಜ್ಯ ಮೇಳ 2023ದ ರೋಡ್ ಶೋ ಮತ್ತು ರಾಜ್ಯದ ಸಾವಯವ ಹಾಗೂ ಸಿರಿಧಾನ್ಯಗಳಿಗೆ ಮಾರುಕಟ್ಟೆ, ಸಂಪರ್ಕ ಕಲ್ಪಿಸುವ ಹಾಗೂ ಗ್ರಾಹಕರಲ್ಲಿ ಅರಿವು ಮೂಡಿಸುವ ಮುಖ್ಯ ಉದ್ದೇಶಗಳೊಂದಿಗೆ ಬೆಂಗಳೂರಿನ ಅರಮನೆ ಆವರಣದ ತ್ರಿಪುರವಾಸಿನಿಯಲ್ಲಿ ಜ.20 ರಿಂದ 22ರವರೆಗೆ ಸಿರಿಧಾನ್ಯ ಮತ್ತು ಸಾವಯವ -2023” ಅಂತರಾಷ್ಟ್ರೀಯ ವಾಣಿಜ್ಯ ಮೇಳವನ್ನು ಹಮ್ಮಿಕೊಂಡಿದೆ.
ಕಾರ್ಯಕ್ರಮದ ಪೂರ್ವಭಾವಿಯಾಗಿ ಮೇಳಕ್ಕೆ, ವ್ಯಾಪಕ ಪ್ರಚಾರ ನೀಡುವ ಉದ್ದೇಶದಿಂದ ಜ.5 ರಂದು ಬೆಂಗಳೂರಿನ ವಸಂತನಗರದ ಶಾಂಗ್ರಿಲಾ ಹೋಟೆಲ್ನಲ್ಲಿ ಕೃಷಿ ಸಚಿವರಾದ ಬಿ.ಸಿ.ಪಾಟೀಲ್ ಅವರು ರೋಡ್ ಶೋ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ.
ಕಾರ್ಯಕ್ರಮದಲ್ಲಿ ಕೃಷಿ ಇಲಾಖೆಯ ಹಿರಿಯ ಅಧಿಕಾರಿಗಳು, ಕೃಷಿ ಉತ್ಪನ್ನಗಳ ರಫ್ತುದಾರರು, ಮಾರುಕಟ್ಟೆದಾರರು, ಸಂಸ್ಕರಣೆದಾರರು ಹಾಗೂ ಸಾವಯವ ಮತ್ತು ಸಿರಿಧಾನ್ಯಗಳ ಇತರೆ ಪಾಲುದಾರರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.
ಮೇಳದ ವೆಬ್ಸೈಟ್ ಮತ್ತು ವೀಡಿಯೊವನ್ನು ಕಾರ್ಯಕ್ರಮದಲ್ಲಿ ಅನಾವರಣಗೊಳಿಸಲಾಗುವುದು ಎಂದು ಕೃಷಿ ಇಲಾಖೆಯ ನಿರ್ದೇಶಕರು ತಿಳಿಸಿದ್ದಾರೆ.
ಮಿಜೋರಾಂದ ಚಾಂಫೈ ಜಿಲ್ಲೆಯಲ್ಲಿ ₹54.88 ಲಕ್ಷ ಮೌಲ್ಯದ 98 ಚೀಲ ಅಡಿಕೆ ವಶಪಡಿಸಲಾಗಿದೆ.…
ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಏಪ್ರಿಲ್ 19ರಿಂದ ಮಳೆ ಆರಂಭವಾಗುವ ಲಕ್ಷಣಗಳು ಗೋಚರಿಸುತ್ತಿವೆ.…
ಗ್ರಾಮ ಮತ್ತು ನಗರ ಜೀವನ ಪರಸ್ಪರ ವಿರುದ್ಧವಲ್ಲ, ಪೂರಕ ಶಕ್ತಿಗಳು. ಸಮತೋಲನವೇ ಸಮೃದ್ಧ…
ದೇಶದಲ್ಲಿ ಹವಾಮಾನ ತೀವ್ರ ಬದಲಾವಣೆ ಕಂಡುಬರುತ್ತಿದ್ದು, 13 ರಾಜ್ಯಗಳಲ್ಲಿ ಮಳೆ ಮತ್ತು ಗಾಳಿ…
ಅಂಜನಾದ್ರಿ ಬೆಟ್ಟ ಏರಲು ಮಧ್ಯಾಹ್ನ 11ರಿಂದ ಸಂಜೆ 4ರವರೆಗೆ ನಿರ್ಬಂಧ ವಿಧಿಸಲಾಗಿದೆ. ಬಿಸಿಲಿನ…
ರಾಜ್ಯದಲ್ಲಿ ಉಷ್ಣಾಂಶ ಏರಿಕೆ ಮುಂದುವರಿದಿದ್ದು, ಕಲಬುರಗಿಯಲ್ಲಿ 43.2°C ದಾಖಲಾಗಿದೆ. ಮುಂದಿನ ದಿನಗಳಲ್ಲಿ ಕರಾವಳಿಯಲ್ಲಿ…