Advertisement
Opinion

ವೈದಿಕ ಭಾರತೀಯ ಅತ್ಯಮೂಲ್ಯ ಆರೋಗ್ಯ ಸಲಹೆಗಳು ಹಾಗೂ ಶಾಸ್ತ್ರೋಕ್ತ ಸಂಪ್ರದಾಯಗಳು..! |

Share

ಕೆಲವು ವೈದಿಕ (ಶಾಸ್ತ್ರೋಕ್ತ ) ಭಾರತೀಯ ಅತ್ಯಮೂಲ್ಯ ಆರೋಗ್ಯ ಸಲಹೆಗಳು ಮತ್ತು ಸಂಸ್ಕೃತದಲ್ಲಿನ ಉಲ್ಲೇಖಗಳು…

1 ಅಜೀರಣೀ ಭೋಜನಂ ವಿಷಮ್ : ಮೊದಲು ತಿಂದ ಆಹಾರ ಜೀರ್ಣವಾಗದೇ ಇರುವಾಗ, ಮತ್ತೇ ಆಹಾರ ತಿಂದಲ್ಲಿ, ಅದು ವಿಷದಂತೆ ಪರಿಣಾಮ ಬೀರುತ್ತದೆ.
2 ಅರ್ಧೋಗಹರಿ ನಿದ್ರಾ : ಸರಿಯಾದ ನಿದ್ರೆ ಅರ್ಧದಷ್ಟು ರೋಗಗಳನ್ನು ಗುಣಪಡಿಸುತ್ತದೆ.
3. ಮುದ್ಗಧಾಲಿ ಗಾಧವ್ಯಾಲಿ : ಎಲ್ಲಾ ದ್ವಿದಳ ಧಾನ್ಯಗಳಲ್ಲಿ, ಹೆಸರು ಬೇಳೆ ಉತ್ತಮವಾಗಿದೆ. ಇದು ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ.
4. ಬಗ್ನಾಸ್ತಿ ಸಂಧಾನಕರೋ ರಸೋನಹ : ಬೆಳ್ಳುಳ್ಳಿ ಮುರಿದ ಮೂಳೆಗಳನ್ನು ಸಹ ಸೇರಿಸುತ್ತದೆ...
5 ಅತಿ ಸರ್ವತ್ರ ವರ್ಜಯೇತ್ : ಅತಿಯಾಗಿ ಸೇವಿಸುವ ಆಹಾರ ಯಾವುದಾದರೂ ಸರಿ, ಅದು ರುಚಿಯಾಗಿದ್ದರೂ, ಆರೋಗ್ಯಕ್ಕೆ ಒಳ್ಳೆಯದಲ್ಲ. ಮಿತವಾಗಿರಲಿ...
6. ನಾಸ್ತಿಮೂಲಂ ಅನೌಷಧಂ : ಯಾವುದೇ ಔಷಧೀಯ ಗುಣ ಹಾಗೂ ಪ್ರಯೋಜನವಿಲ್ಲದ ತರಕಾರಿ ಇಲ್ಲ...

7 ನಾ ವೈದ್ಯಃ ಪ್ರಭುರಾಯುಷ : ಯಾವ ವೈದ್ಯರೂ ನಮ್ಮ ದೀರ್ಘಾಯುಷ್ಯದ ಅಧಿಪತಿ ಆಗೋದಿಲ್ಲ. ವೈದ್ಯರಿಗೆ ಕೆಲವು ಮಿತಿಗಳಿವೆ...
8. ಚಿಂತಾ ವ್ಯಾಧಿ ಪ್ರಕಾಶಯ : ಚಿಂತೆ ಅನಾರೋಗ್ಯವನ್ನು ಉಲ್ಬಣಗೊಳಿಸುತ್ತದೆ...
9. ವ್ಯಾಯಮಾಶ್ಚ ಸನೈಹಿ ಸನೈಹಿ : ಯಾವುದೇ ವ್ಯಾಯಾಮವನ್ನು ನಿಧಾನವಾಗಿ ಮಾಡಿ. ವೇಗದ ವ್ಯಾಯಾಮ ಯಾವಾಗಿದ್ದರೂ ಒಳ್ಳೆಯದಲ್ಲ...
10. ಅಜಾವತ್ ಚರ್ವಣಂ ಕುರ್ಯಾತ್ : ನಿಮ್ಮ ಆಹಾರವನ್ನು ಮೇಕೆಯಂತೆ ಅಗಿಯಿರಿ, ಆತುರದಿಂದ ಆಹಾರವನ್ನು ನುಂಗಬೇಡಿ. ಲಾಲಾರಸ ಜೀರ್ಣಕ್ರಿಯೆಯಲ್ಲಿ ಮೊದಲು ಸಹಾಯ ಮಾಡುತ್ತದೆ.
11. ಸ್ನಾನ ನಾಮ ಮನಃಪ್ರಸಾದನಕಾರಂ ದುಃಸ್ವಪ್ನ ವಿಧವಾಸನಮ್ : ಸ್ನಾನವು ಖಿನ್ನತೆಯನ್ನು ತೆಗೆದುಹಾಕುತ್ತದೆ. ಇದು ಕೆಟ್ಟ ಕನಸುಗಳನ್ನು ದೂರ ಮಾಡುತ್ತದೆ...
12. ನ ಸ್ನಾನಮ್ ಆಚರೇತ್ ಭುಕ್ತ್ವಾ : ಆಹಾರದ ನಂತರ ಎಂದಿಗೂ ಸ್ನಾನ ಮಾಡಬೇಡಿ...

13. ನಾಸ್ತಿ ಮೇಘಸಮಂ ತೋಯಮ್ : ಮಳೆ ನೀರಿನಷ್ಟು ಶುದ್ಧತೆಯಲ್ಲಿ ಯಾವುದೂ ಸಮವಿಲ್ಲ...
14 ಅಜೀರ್ಣೆ ಭೇಷಜಂ ವಾರಿ : ಅಜೀರ್ಣವನ್ನು ಸರಳ ನೀರು ಕುಡಿಯುವ ಮೂಲಕ ಪರಿಹರಿಸಬಹುದು...
15. ಸರ್ವತ್ರ ನೂತನಂ ಷಷ್ಠಂ ಸೇವಕನ್ನೇ ಪುರಥನಮ್ : ಎಲ್ಲವೂ ತಾಜಾ ಇರುವಂತೆ ಯಾವಾಗಲೂ ಬಯಸುತ್ತವೆ.
ಹಳೆ ಅನ್ನ ಮತ್ತು ಹಳೆಯ ಸೇವಕರನ್ನು ಹೊಸದಾಗಿಸಬೇಕು. (ಸೇವಕನ ವಿಷಯದಲ್ಲಿ ಇಲ್ಲಿ ನಿಜವಾಗಿಯೂ ಅರ್ಥವೇನೆಂದರೆ: ಅವನ ಕರ್ತವ್ಯಗಳನ್ನು ಬದಲಾಯಿಸಿ ಮತ್ತು ಕೊನೆಗೊಳಿಸಬೇಡಿ.)
16. ನಿತ್ಯಂ ಸರ್ವಾ ರಸಾಭ್ಯಾಸಃ : ಎಲ್ಲಾ ರುಚಿಯನ್ನು ಹೊಂದಿರುವ ಸಂಪೂರ್ಣ ಆಹಾರವನ್ನು ತೆಗೆದುಕೊಳ್ಳಿ, ಉಪ್ಪು, ಸಿಹಿ, ಕಹಿ, ಹುಳಿ, ಖಾರ ಮತ್ತು ಒಗರು)...
17. ಜಾತಾರಂ ಪೂರಯೇಧಾರ್ಧಂ ಅಣ್ಣಾಹಿ : ನಿಮ್ಮ ಹೊಟ್ಟೆಯ ಅರ್ಧಭಾಗವನ್ನು ಘನ ಆಹಾರದಿಂದ ತುಂಬಿಸಿ, ಕಾಲು ಭಾಗದಷ್ಟು ನೀರನ್ನು ತುಂಬಿಸಿ ಮತ್ತು ಉಳಿದನ್ನು ಖಾಲಿ ಬಿಡಿ...
18 ಭುಕ್ತ್ವೋಪ ವಿಶಾಥಸ್ಥಾಂದ್ರಾ : ಆಹಾರ ತೆಗೆದುಕೊಂಡ ನಂತರ ಎಂದಿಗೂ ಸುಮ್ಮನೆ ಕುಳಿತುಕೊಳ್ಳಬೇಡಿ. ಅರ್ಧ ಗಂಟೆಯ ನಂತರ ಕನಿಷ್ಠ ಹದಿನೈದು ‌ನಿಮಿಷ ನಡೆಯಿರಿ.
19. ಕ್ಷುತ್ ಸಾಧೂತಂ ಜನಯತಿ : ಹಸಿವು ಆಹಾರದ ರುಚಿಯನ್ನು ಹೆಚ್ಚಿಸುತ್ತದೆ.
ಬೇರೆ ರೀತಿಯಲ್ಲಿ ಹೇಳುವುದಾದರೆ, ಹಸಿವಾದಾಗ ಮಾತ್ರ ತಿನ್ನಿರಿ...
20. ಚಿಂತಾ ಜರಾಣಾಂ ಮನುಷ್ಯನಮ್ : ಚಿಂತೆ ವೃದ್ಧಾಪ್ಯವನ್ನು ಬೇಗ ತರುತ್ತದೆ...
21. ಸತಂ ವಿಹಾಯ ಭೋಕ್ತವ್ಯಮ್ : ಆಹಾರಕ್ಕೆ ಸಮಯ ಬಂದಾಗ, ನೂರು ಉದ್ಯೋಗಗಳಿದ್ದರೂ ಸಹ ಬದಿಗಿಡಿ... ಊಟ ಮಾಡಿ.
22. ಸರ್ವ ಧರ್ಮೇಷು ಮಧ್ಯಮಾಮ್ : ಯಾವಾಗಲೂ ಮಧ್ಯ ಮಾರ್ಗವನ್ನು ಆರಿಸಿ. ಯಾವುದರಲ್ಲೂ ಅತಿರೇಕಕ್ಕೆ ಹೋಗುವುದನ್ನು ತಪ್ಪಿಸಿ....

(ಡಿಜಿಟಲ್‌ ಕಡತದಿಂದ)
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಕೃಷಿ ಮಾರುಕಟ್ಟೆ ವರದಿ | ಅಡಿಕೆ ಮಾರುಕಟ್ಟೆಯಲ್ಲಿ ಮಿಶ್ರ ಫಲ…!

ಕರ್ನಾಟಕದ ಪ್ರಮುಖ ಮಾರುಕಟ್ಟೆಗಳಲ್ಲಿ ಅಡಿಕೆ ಏರಿಳಿತ ಕಂಡುಬಂದಿದೆ. ಮಲೆನಾಡು ಮಾರುಕಟ್ಟೆಗಳಲ್ಲಿ ಸ್ವಲ್ಪ ಏರಿಕೆ…

45 minutes ago

ನೈಸರ್ಗಿಕ ಕೃಷಿಯಿಂದ ರೈತರ ಆದಾಯ ಹೆಚ್ಚಳ

ಅಸ್ಸಾಂನಲ್ಲಿ ಐಸಿಎಆರ್–ಐಎಆರ್‌ಐ ಸಂಸ್ಥೆ “ನೈಸರ್ಗಿಕ ಕೃಷಿ” ವಿಷಯದಡಿ ಕಿಸಾನ್ ಮೇಳ 2026 ಆಯೋಜಿಸಿತು.…

2 hours ago

ಭಾರತದಲ್ಲಿ ಮಳೆಗಾಲದ ತೀವ್ರತೆ ಹೆಚ್ಚಳ | ತಾಪಮಾನ ಏರಿಕೆಯಿಂದ ‘ಸೂಪರ್ ಚಾರ್ಜ್’ ಆಗುತ್ತಿರುವ ಮಾರುತ

ಜಾಗತಿಕ ತಾಪಮಾನ ಏರಿಕೆಯಿಂದ ಭಾರತದಲ್ಲಿ ಮಾರುತ ಮಳೆಯ ತೀವ್ರತೆ ಹೆಚ್ಚುತ್ತಿರುವುದು ಹೊಸ ಅಧ್ಯಯನದಲ್ಲಿ…

5 hours ago

ಮ್ಯಾನ್ಮಾರ್ ಅಡಿಕೆ ಕಳ್ಳಸಾಗಣೆ ವಿರುದ್ಧ ಮಿಜೋರಾಂ ಸರ್ಕಾರದ ಕಠಿಣ ಕ್ರಮ : 468 ಪ್ರಕರಣ ದಾಖಲು

ಮ್ಯಾನ್ಮಾರ್‌ನಿಂದ ಅಕ್ರಮ ಅಡಿಕೆ ಕಳ್ಳಸಾಗಣೆ ವಿರುದ್ಧ ಮಿಜೋರಾಂ ಸರ್ಕಾರ ಜಾರಿ ಕ್ರಮವನ್ನು ಬಿಗುಗೊಳಿಸಿದೆ.…

14 hours ago

ಸುಸ್ಥಿರ ಕೃಷಿ ಮತ್ತು ‘ತ್ಯಾಜ್ಯದಿಂದ ಸಂಪತ್ತು’ ಮಾದರಿಗೆ ಐಸಿಎಆರ್ ಸಭೆಯಲ್ಲಿ ಒತ್ತು

ಕೊಲ್ಕತ್ತಾದಲ್ಲಿ ನಡೆದ ಸಭೆಯಲ್ಲಿ ಸೆಣಬು ವಲಯ ಸುಧಾರಣೆ, ಸುಸ್ಥಿರ ಕೃಷಿ ಹಾಗೂ ಮೀನುಗಾರಿಕೆ…

15 hours ago

ಹೋಳಿ ಹಬ್ಬ: ಪ್ರಾಣಿ-ಪಕ್ಷಿಗಳಿಗೆ ಹಾನಿಯಾಗದಂತೆ ಆಚರಿಸಿ – ಮಂಡಳಿ ಮನವಿ

ಹೋಳಿ ಹಬ್ಬದ ಸಂದರ್ಭದಲ್ಲಿ ಪ್ರಾಣಿ ಮತ್ತು ಪಕ್ಷಿಗಳಿಗೆ ಹಾನಿಯಾಗದಂತೆ ಆಚರಿಸಲು ಭಾರತೀಯ ಪ್ರಾಣಿ…

15 hours ago