ದ್ವಿತೀಯ ಪಿಯುಸಿಯ ಎರಡನೇ ಪರೀಕ್ಷೆ ಮತ್ತು ಕೃಷಿ ಪ್ರಾಯೋಗಿಕ ಪರೀಕ್ಷೆಗಳ ಫಲಿತಾಂಶ ಘೋಷಣೆಯಾದ ನಂತರವೇ ಸಾಮಾನ್ಯ ಪ್ರವೇಶ ಪರೀಕ್ಷೆಯ (CET-24) ಫಲಿತಾಂಶವನ್ನು ಪ್ರಕಟಿಸಲಾಗುತ್ತದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ(KEA) ಕಾರ್ಯನಿರ್ವಾಹಕ ನಿರ್ದೇಶಕ ಎಚ್.ಪ್ರಸನ್ನ ಸ್ಪಷ್ಟಪಡಿಸಿದ್ದಾರೆ.
ಪ್ರಸಕ್ತ ಸಾಲಿನಲ್ಲಿ ದ್ವಿತೀಯ ಪಿಯುಸಿಗೆ ಮೂರು ಪರೀಕ್ಷೆ ಗಳನ್ನು ನಡೆಸಲಾಗುತ್ತಿದ್ದು, ಮೊದಲ ಎರಡು ಪರೀಕ್ಷೆಗಳ ಪೈಕಿ ಯಾವುದರಲ್ಲಿ ಹೆಚ್ಚು ಅಂಕ ಬಂದಿದೆಯೊ ಅವುಗಳನ್ನೇ CET ರಾಂಕ್ ಗೆ (Rank) ಪರಿಗಣಿಸಬೇಕಾಗುತ್ತದೆ. ಹೀಗಾಗಿ ಎರಡನೇ ಪರೀಕ್ಷೆಯ ಫಲಿತಾಂಶಕ್ಕಾಗಿ ಕೆಇಎ ಕಾಯುವುದು ಅನಿವಾರ್ಯವಾಗಿದೆ ಎಂದು ಅವರು ವಿವರಿಸಿದ್ದಾರೆ. ಬಿಎಸ್ಸಿ ಕೃಷಿ ಪದವಿಗೆ ಪ್ರವೇಶ ನೀಡಲು ಕೃಷಿ ವಿಶ್ವವಿದ್ಯಾಲಯ ಕೃಷಿ ಪ್ರಾಯೋಗಿಕ ಪರೀಕ್ಷೆಯನ್ನು ಮೇ 25ಕ್ಕೆ ನಿಗದಿ ಮಾಡಿದ್ದು, ಅದರ ಫಲಿತಾಂಶ ಕೂಡ ಬರಬೇಕಾಗುತ್ತದೆ. ಇದು ಸಿಇಟಿ ರಾಂಕ್ ಗೂ (Rank) ಬೇಕಾಗುತ್ತದೆ ಎಂದು ಅವರು ತಿಳಿಸಿದರು.
26.03.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ರಾಜ್ಯದ ವಿವಿಧ…
ರಾಜ್ಯದ ಹಲವು ಭಾಗಗಳಲ್ಲಿ ಸಂಜೆ ಗುಡುಗು ಸಹಿತ ಮಳೆಯ ಸಾಧ್ಯತೆ ಮುಂದುವರಿದಿದೆ. ಮಾರ್ಚ್…
ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಸರ್ಕಾರ ಕ್ರಮ ಕೈಗೊಂಡಿದೆ. ಮಾನವ–ಆನೆ…
ಅಜ್ಜಾವರ ಸರ್ಕಾರಿ ಪ್ರೌಢಶಾಲೆಯ ಇಬ್ಬರು ವಿದ್ಯಾರ್ಥಿಗಳು INSPIRE Award ಗೆ ಆಯ್ಕೆಯಾಗಿದ್ದಾರೆ. ವೈಜ್ಞಾನಿಕ…
ನೆಮ್ಮದಿಗಾಗಿ ಬದುಕಬೇಕು, ಹಣ-ಅಧಿಕಾರಕ್ಕಾಗಿ ಅಲ್ಲ ಎಂದು ರಾಮಚಂದ್ರಾಪುರ ಶ್ರೀಗಳು ಕರೆ ನೀಡಿದರು. ಸಂನ್ಯಾಸ…
ಅಡಿಕೆ ದರ ಇಳಿಕೆಗೆ ಆಮದುಗಿಂತ ಅಡಿಕೆ ಕೊಯ್ಲು ಕಾಲದ ಸರಬರಾಜು ಒತ್ತಡ ಮತ್ತು…