Advertisement
MIRROR FOCUS

ದ್ವಿತೀಯ ಪಿಯುಸಿ 2ನೇ ಪರೀಕ್ಷೆ ಫಲಿತಾಂಶ ನಂತರವೇ CET ಫಲಿತಾಂಶ | ಕರ್ನಾಟಕ ಪರೀಕ್ಷಾ ಪ್ರಾಧಿಕಾರ

Share

ದ್ವಿತೀಯ ಪಿಯುಸಿಯ ಎರಡನೇ ಪರೀಕ್ಷೆ ಮತ್ತು ಕೃಷಿ ಪ್ರಾಯೋಗಿಕ ಪರೀಕ್ಷೆಗಳ ಫಲಿತಾಂಶ ಘೋಷಣೆಯಾದ ನಂತರವೇ ಸಾಮಾನ್ಯ ಪ್ರವೇಶ ಪರೀಕ್ಷೆಯ (CET-24) ಫಲಿತಾಂಶವನ್ನು ಪ್ರಕಟಿಸಲಾಗುತ್ತದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ(KEA) ಕಾರ್ಯನಿರ್ವಾಹಕ ನಿರ್ದೇಶಕ ಎಚ್.ಪ್ರಸನ್ನ ಸ್ಪಷ್ಟಪಡಿಸಿದ್ದಾರೆ.

ದ್ವಿತೀಯ ಪಿಯುಸಿಯ ವಿಜ್ಞಾನ ವಿಷಯಗಳಲ್ಲಿ ವಿದ್ಯಾರ್ಥಿಗಳು ಪಡೆದ 50%ರಷ್ಟು ಅಂಕಗಳನ್ನು ಸೇರಿಸಿಯೇ ಸಿಇಟಿ ರಾಂಕ್‌ (Rank) ಪಟ್ಟಿಯನ್ನು ಪ್ರಕಟಿಸಬೇಕಾಗುತ್ತದೆ. ಇದು ಮೊದಲಿನಿಂದಲೂ ಪಾಲಿಸುತ್ತಿರುವ ನಿಯಮ ಎಂದು ಅವರು ಪತ್ರಿಕಾ ಹೇಳಿಕೆಯಲ್ಲಿ ಸ್ಪಷ್ಟಪಡಿಸಿದ್ದಾರೆ.

ಪ್ರಸಕ್ತ ಸಾಲಿನಲ್ಲಿ ದ್ವಿತೀಯ ಪಿಯುಸಿಗೆ ಮೂರು ಪರೀಕ್ಷೆ ಗಳನ್ನು ನಡೆಸಲಾಗುತ್ತಿದ್ದು, ಮೊದಲ ಎರಡು ಪರೀಕ್ಷೆಗಳ ಪೈಕಿ ಯಾವುದರಲ್ಲಿ ಹೆಚ್ಚು ಅಂಕ ಬಂದಿದೆಯೊ ಅವುಗಳನ್ನೇ CET ರಾಂಕ್ ಗೆ (Rank) ಪರಿಗಣಿಸಬೇಕಾಗುತ್ತದೆ. ಹೀಗಾಗಿ ಎರಡನೇ ಪರೀಕ್ಷೆಯ ಫಲಿತಾಂಶಕ್ಕಾಗಿ ಕೆಇಎ ಕಾಯುವುದು ಅನಿವಾರ್ಯವಾಗಿದೆ ಎಂದು ಅವರು ವಿವರಿಸಿದ್ದಾರೆ. ಬಿಎಸ್‌ಸಿ ಕೃಷಿ ಪದವಿಗೆ ಪ್ರವೇಶ ನೀಡಲು ಕೃಷಿ ವಿಶ್ವವಿದ್ಯಾಲಯ ಕೃಷಿ ಪ್ರಾಯೋಗಿಕ ಪರೀಕ್ಷೆಯನ್ನು ಮೇ 25ಕ್ಕೆ ನಿಗದಿ ಮಾಡಿದ್ದು, ಅದರ ಫಲಿತಾಂಶ ಕೂಡ ಬರಬೇಕಾಗುತ್ತದೆ. ಇದು ಸಿಇಟಿ ರಾಂಕ್ ಗೂ (Rank) ಬೇಕಾಗುತ್ತದೆ ಎಂದು ಅವರು ತಿಳಿಸಿದರು.

  • ಅಂತರ್ಜಾಲ ಮಾಹಿತಿ
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹವಾಮಾನ ವರದಿ | 08-09-2026 | ಕರಾವಳಿಯಲ್ಲಿ ಮೋಡ ಹೆಚ್ಚಳ – ಸೆ.12ರ ಬಳಿಕ ಬಂಗಾಳಕೊಲ್ಲಿ ಬದಲಾವಣೆ?

ಕರಾವಳಿಯಲ್ಲಿ ಮೋಡದ ವಾತಾವರಣ ಹೆಚ್ಚಾಗಿದ್ದು, ಮಧ್ಯಾಹ್ನದ ನಂತರ ತೀರ ಮತ್ತು ಘಟ್ಟದ ಕೆಳಭಾಗಗಳಲ್ಲಿ…

13 minutes ago

‘ಅರ್ಧ ಎಕರೆ ಸಾಕು… ಹಳ್ಳಿಯಲ್ಲೇ ಜೀವನ ಮಾಡಬಹುದು’ ಈ ಮಾತಿನ ಹಿಂದೆ ಇರುವ ದೊಡ್ಡ ಪ್ರಶ್ನೆ ಏನು..?

“ಅರ್ಧ ಎಕರೆ ಇದ್ದರೂ ಕುಟುಂಬ ಜೀವನ ಮಾಡಬಹುದು” ಎನ್ನುವ ರೈತನ ಮಾತು, ಭೂಮಿ…

6 hours ago

ಭಾರತದ ಆಹಾರ ನಾಳೆ ಬೆಳೆಯೋರು ಯಾರು? ರೈತರ ವಯಸ್ಸು ಹೆಚ್ಚುತ್ತಿದೆ, ಯುವಕರು ಕೃಷಿಯಿಂದ ದೂರವಾಗುತ್ತಿದ್ದಾರೆ..!

ಭಾರತ ಯುವ ದೇಶವಾಗಿದ್ದರೂ ಕೃಷಿಕರ ಸರಾಸರಿ ವಯಸ್ಸು 50–55 ವರ್ಷವಾಗಿದ್ದು, ಗ್ರಾಮೀಣ ಯುವಕರಲ್ಲಿ…

18 hours ago

ಹಸು ಕರು ಹಾಕಿದ ಬಳಿಕದ “ಪ್ಲಾಸೆಂಟಾ” ದಿಂದ ತಯಾರಿಸಬಹುದೇ ನೈಸರ್ಗಿಕ ದ್ರಾವಣ?

ಹಸು ಕರು ಹಾಕಿದ ಬಳಿಕ ಸಿಗುವ ಪ್ಲಾಸೆಂಟಾ ಅಥವಾ ‘ಮಾಸ’ವನ್ನು ತ್ಯಾಜ್ಯವಾಗಿ ಬಿಸಾಡದೆ,…

19 hours ago

ಹವಾಮಾನ ವರದಿ | 07-09-2026 | ಕರ್ನಾಟಕದಲ್ಲಿ ಮುಂದಿನ ಮಳೆಯ ಚಿತ್ರಣ ಹೇಗಿದೆ..?

ಸೆ.8 ರಿಂದ 10ರವರೆಗೆ ಕರಾವಳಿಯಲ್ಲಿ ಮೋಡ ಹೆಚ್ಚಾಗಿ ಅಲ್ಲಲ್ಲಿ ತುಂತುರು ಅಥವಾ ಸಾಮಾನ್ಯ…

1 day ago

ಹೆಬ್ರಿಯ ಗೋಡಂಬಿ ತ್ಯಾಜ್ಯದಿಂದ ಹಡಗುಗಳಿಗೆ ಇಂಧನ..!

ಉಡುಪಿ ಜಿಲ್ಲೆಯ ಹೆಬ್ರಿ ಸಮೀಪ ಗೋಡಂಬಿ ಸಂಸ್ಕರಣಾ ತ್ಯಾಜ್ಯದಿಂದ ಜೈವಿಕ ಇಂಧನ ಮತ್ತು…

1 day ago