Advertisement
MIRROR FOCUS

ದ್ವಿತೀಯ ಪಿಯುಸಿ 2ನೇ ಪರೀಕ್ಷೆ ಫಲಿತಾಂಶ ನಂತರವೇ CET ಫಲಿತಾಂಶ | ಕರ್ನಾಟಕ ಪರೀಕ್ಷಾ ಪ್ರಾಧಿಕಾರ

Share

ದ್ವಿತೀಯ ಪಿಯುಸಿಯ ಎರಡನೇ ಪರೀಕ್ಷೆ ಮತ್ತು ಕೃಷಿ ಪ್ರಾಯೋಗಿಕ ಪರೀಕ್ಷೆಗಳ ಫಲಿತಾಂಶ ಘೋಷಣೆಯಾದ ನಂತರವೇ ಸಾಮಾನ್ಯ ಪ್ರವೇಶ ಪರೀಕ್ಷೆಯ (CET-24) ಫಲಿತಾಂಶವನ್ನು ಪ್ರಕಟಿಸಲಾಗುತ್ತದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ(KEA) ಕಾರ್ಯನಿರ್ವಾಹಕ ನಿರ್ದೇಶಕ ಎಚ್.ಪ್ರಸನ್ನ ಸ್ಪಷ್ಟಪಡಿಸಿದ್ದಾರೆ.

ದ್ವಿತೀಯ ಪಿಯುಸಿಯ ವಿಜ್ಞಾನ ವಿಷಯಗಳಲ್ಲಿ ವಿದ್ಯಾರ್ಥಿಗಳು ಪಡೆದ 50%ರಷ್ಟು ಅಂಕಗಳನ್ನು ಸೇರಿಸಿಯೇ ಸಿಇಟಿ ರಾಂಕ್‌ (Rank) ಪಟ್ಟಿಯನ್ನು ಪ್ರಕಟಿಸಬೇಕಾಗುತ್ತದೆ. ಇದು ಮೊದಲಿನಿಂದಲೂ ಪಾಲಿಸುತ್ತಿರುವ ನಿಯಮ ಎಂದು ಅವರು ಪತ್ರಿಕಾ ಹೇಳಿಕೆಯಲ್ಲಿ ಸ್ಪಷ್ಟಪಡಿಸಿದ್ದಾರೆ.

ಪ್ರಸಕ್ತ ಸಾಲಿನಲ್ಲಿ ದ್ವಿತೀಯ ಪಿಯುಸಿಗೆ ಮೂರು ಪರೀಕ್ಷೆ ಗಳನ್ನು ನಡೆಸಲಾಗುತ್ತಿದ್ದು, ಮೊದಲ ಎರಡು ಪರೀಕ್ಷೆಗಳ ಪೈಕಿ ಯಾವುದರಲ್ಲಿ ಹೆಚ್ಚು ಅಂಕ ಬಂದಿದೆಯೊ ಅವುಗಳನ್ನೇ CET ರಾಂಕ್ ಗೆ (Rank) ಪರಿಗಣಿಸಬೇಕಾಗುತ್ತದೆ. ಹೀಗಾಗಿ ಎರಡನೇ ಪರೀಕ್ಷೆಯ ಫಲಿತಾಂಶಕ್ಕಾಗಿ ಕೆಇಎ ಕಾಯುವುದು ಅನಿವಾರ್ಯವಾಗಿದೆ ಎಂದು ಅವರು ವಿವರಿಸಿದ್ದಾರೆ. ಬಿಎಸ್‌ಸಿ ಕೃಷಿ ಪದವಿಗೆ ಪ್ರವೇಶ ನೀಡಲು ಕೃಷಿ ವಿಶ್ವವಿದ್ಯಾಲಯ ಕೃಷಿ ಪ್ರಾಯೋಗಿಕ ಪರೀಕ್ಷೆಯನ್ನು ಮೇ 25ಕ್ಕೆ ನಿಗದಿ ಮಾಡಿದ್ದು, ಅದರ ಫಲಿತಾಂಶ ಕೂಡ ಬರಬೇಕಾಗುತ್ತದೆ. ಇದು ಸಿಇಟಿ ರಾಂಕ್ ಗೂ (Rank) ಬೇಕಾಗುತ್ತದೆ ಎಂದು ಅವರು ತಿಳಿಸಿದರು.

  • ಅಂತರ್ಜಾಲ ಮಾಹಿತಿ
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹವಾಮಾನ ವರದಿ | 29-07-2026 | ಆ.2 ರಿಂದ ಮಳೆಯ ಸ್ಥಿತಿ ಏನಾಗಬಹುದು..?

ಕರಾವಳಿ, ಮಲೆನಾಡು ಹಾಗೂ ಉತ್ತರ ಒಳನಾಡಿನಲ್ಲಿ ಇನ್ನೂ ಬಿಟ್ಟುಬಿಟ್ಟು ಮಳೆ ಮುಂದುವರಿಯಲಿದೆ. ಆದರೆ…

15 hours ago

ಆಸ್ಪತ್ರೆಗಳಲ್ಲಿ ಬಳಕೆಯಾಗದ ಔಷಧ ಮರುಬಳಕೆ – ಹಣವೂ ಉಳಿಯುತ್ತದೆ, ಪರಿಸರವೂ ಕಾಪಾಡುತ್ತದೆ..!

ಆಸ್ಪತ್ರೆಗಳಲ್ಲಿ ಬಳಕೆಯಾಗದೆ ಉಳಿಯುವ ಔಷಧಗಳನ್ನು ಸುರಕ್ಷಿತವಾಗಿ ಮರುಬಳಕೆ ಮಾಡಿದರೆ ಆರೋಗ್ಯ ಕ್ಷೇತ್ರದ ವೆಚ್ಚ…

23 hours ago

ಮಲೆನಾಡಿನಿಂದ ಬಯಲುನಾಡಿನತ್ತ ಅಡಿಕೆ ಬೆಳೆ ವಿಸ್ತರಣೆ : ರಾಣೆಬೆನ್ನೂರಿನಲ್ಲಿ ಹೆಚ್ಚಿದ ರೈತರ ಆಸಕ್ತಿ

ಹಾವೇರಿ ಜಿಲ್ಲೆಯ ರಾಣೆಬೆನ್ನೂರು ಭಾಗದಲ್ಲಿ ಅಡಿಕೆ ಬೆಳೆ ವೇಗವಾಗಿ ವಿಸ್ತರಿಸುತ್ತಿದ್ದು, ಉತ್ತಮ ಆದಾಯದ…

23 hours ago

ಕೊಂಬೆಯಲ್ಲ, ಕಾಂಡದಲ್ಲೇ ಗೊಂಚಲು ಗೊಂಚಲಾಗಿ ಹಣ್ಣು! ಪಶ್ಚಿಮ ಘಟ್ಟದ ಅಪರೂಪದ ‘ಕೋಳಿಜುಟ್ಟು’ ಹಣ್ಣಿನ ಕಥೆ

ಪಶ್ಚಿಮ ಘಟ್ಟದ ಅಪರೂಪದ ಕೋಳಿಜುಟ್ಟು ಕಾಡು ಹಣ್ಣು ಇದೀಗ ರೈತರ ತೋಟಗಳಲ್ಲೂ ಫಲ…

1 day ago

ಕಾಡು ಹಣ್ಣು…. ಕೋಳಿ ಜುಟ್ಟು ಹಣ್ಣು…!

ಪಶ್ಚಿಮ ಘಟ್ಟದ ಅಪರೂಪದ ಕೋಳಿಜುಟ್ಟು ಹಣ್ಣು ಕಾಂಡದ ಮೇಲೆಯೇ ಗೊಂಚಲು ಗೊಂಚಲಾಗಿ ಬೆಳೆಯುವ…

1 day ago

ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ; ಒಡಿಶಾದಲ್ಲಿ ಭಾರಿ ಮಳೆ, ಹಲವು ಜಿಲ್ಲೆಗಳಲ್ಲಿ ರೆಡ್ ಅಲರ್ಟ್

ಬಂಗಾಳ ಕೊಲ್ಲಿಯ ವಾಯುಭಾರ ಕುಸಿತದ ಪರಿಣಾಮ ಒಡಿಶಾದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ…

2 days ago