ವಿವೇಕಾನಂದ ಕಾಲೇಜಿನ ಪ್ರಾಧ್ಯಾಪಕ ಡಾ.ಎಚ್.ಜಿ ಶ್ರೀಧರ ಅವರಿಗೆ ಚಡಗ ಕಾದಂಬರಿ ಪ್ರಶಸ್ತಿ |

October 26, 2022
12:23 PM

ಪುತ್ತೂರು ವಿವೇಕಾನಂದ ಪದವಿ ಕಾಲೇಜಿನ ಕನ್ನಡ ವಿಭಾಗದ ಮುಖ್ಯಸ್ಥ, ಕಾಲೇಜಿನ ಪರೀಕ್ಷಾಂಗ ಕುಲಸಚಿವ ಡಾ.ಎಚ್.ಜಿ ಶ್ರೀಧರ ಮುಂಡಿಗೆಹಳ್ಳ ಅವರ ‘ಪ್ರಸ್ಥಾನ’ ಎನ್ನುವ ಕಾದಂಬರಿಗೆ ಈ ಬಾರಿಯ” ಚಡಗ ಕಾದಂಬರಿ ಪ್ರಶಸ್ತಿ ” ಲಭಿಸಿದೆ.

ಕೋಟೇಶ್ವರದ ಎನ್.ಆರ್.ಎ.ಎಂ ಎಚ್ ಪ್ರಕಾಶನ ಮತ್ತು ಸ್ಥಿತಿಗತಿ ತ್ರೈಮಾಸಿಕ ಪತ್ರಿಕೆಯ ಆಶ್ರಯದಲ್ಲಿ ಕನ್ನಡದ ಹೆಸರಾಂತ ಕಾದಂಬರಿಕಾರ, ಸಂಘಟಕ ಪಾಂಡೇಶ್ವರ ಸೂರ್ಯನಾರಾಯಣ ಚಡಗ ಇವರ ನೆನಪಿನಲ್ಲಿ ನೀಡಲಾಗುವ ಹದಿಮೂರನೆಯ ವರ್ಷದ ‘ಚಡಗ ಕಾದಂಬರಿಪ್ರಶಸ್ತಿ’ಗೆ ಪ್ರಸ್ತುತ ಪುತ್ತೂರಿನ ವಿವೇಕಾನಂದ ಪದವಿ ಕಾಲೇಜಿನ ಕನ್ನಡ ವಿಭಾಗದ ಮುಖ್ಯಸ್ಥ ಡಾ.ಎಚ್.ಜಿ.ಶ್ರೀಧರ ಮುಂಡಿಗೆಹಳ್ಳ ಇವರ “ಪ್ರಸ್ಥಾನ” ಕಾದಂಬರಿಯು ಆಯ್ಕೆಯಾಗಿದೆ.ಪ್ರಶಸ್ತಿ ಪತ್ರ, ಸ್ಮರಣಿಕೆ ಮತ್ತು ಹತ್ತು ಸಾವಿರ ನಗದು ಬಹುಮಾನವನ್ನು ಪ್ರಶಸ್ತಿಯು ಒಳಗೊಂಡಿರುತ್ತದೆ.

ಡಾ.ಎಚ್.ಜಿ.ಶ್ರೀಧರ ಮುಂಡಿಗೆಹಳ್ಳ ಮೂಲತಃ ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಮುಂಡಿಗೆಹಳ್ಳದವರಾಗಿದ್ದು ಪುತ್ತೂರಿನ ವಿವೇಕಾನಂದ ಕಾಲೇಜಿನಲ್ಲಿ ಸುಮಾರು ಮೂವತ್ತು ವರ್ಷಗಳಿಂದ ಪ್ರಾಧ್ಯಾಪನ ವೃತ್ತಿಯಲ್ಲಿ ತೊಡಗಿಸಿಕೊಂಡಿದ್ದು ಸಾಹಿತ್ಯ ಕ್ಷೇತ್ರದಲ್ಲಿಅಪಾರ ಸೇವೆಯನ್ನುಗೈದಿದ್ದಾರೆ. ಹಲವಾರು ನಾಟಕ,ವಿಮರ್ಶೆ,ಸಂಶೋಧನಾ ಕೃತಿಗಳನ್ನು ರಚಿಸಿರುವ ಇವರಿಗೆ ‘ಮಲ್ಲೇಪುರಂ ಪ್ರಶಸ್ತಿ’, ‘ಸಹೃದಯ ಪ್ರಾಧ್ಯಾಪಕ ಪ್ರಶಸ್ತಿಯೂ ಲಭಿಸಿದೆ. ಈ ಸಾಲಿನ ಹೆಸರಾಂತ ಚಡಗ ಕಾದಂಬರಿ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

ದೇಶೀಯ ಗ್ರಾಹಕರಿಗೆ ಇಂಧನ ಕೊರತೆ ಇಲ್ಲ: CNG – PNG ಪೂರೈಕೆ ನಿರಂತರ – ಸಚಿವ ಹರ್ದೀಪ್ ಸಿಂಗ್ ಪುರಿ
March 12, 2026
7:20 AM
by: ಮಿರರ್‌ ಡೆಸ್ಕ್
ಪೆಟ್ರೋಲಿಯಂಗೆ ಪರ್ಯಾಯದತ್ತ : ಕೃಷಿ ಸಂಪನ್ಮೂಲಗಳಿಂದ ಬಯೋ ಉತ್ಪನ್ನಗಳತ್ತ ಆದ್ಯತೆ
March 12, 2026
7:16 AM
by: ಮಿರರ್‌ ಡೆಸ್ಕ್
ಗೋವಾದಲ್ಲಿ ಹಲಸು ಉತ್ಪಾದನೆ ಕುಸಿತ ಇಲ್ಲ | ಉತ್ತಮ ದರಕ್ಕಾಗಿ ಓಪನ್‌ ಮಾರ್ಕೆಟ್‌ಗೆ ರೈತರ ಒಲವು
March 12, 2026
7:11 AM
by: ಮಿರರ್‌ ಡೆಸ್ಕ್
ರಾಜ್ಯದಲ್ಲಿ ಅಡುಗೆ ಅನಿಲ ಕೊರತೆ ಇಲ್ಲ | ಪ್ರತಿ 25 ದಿನಕ್ಕೊಂದು ಸಿಲಿಂಡರ್‌ ಪೂರೈಕೆ – ಸಚಿವ ಮುನಿಯಪ್ಪ ಭರವಸೆ
March 12, 2026
7:08 AM
by: ಮಿರರ್‌ ಡೆಸ್ಕ್

You cannot copy content of this page - Copyright -The Rural Mirror