ವಿವೇಕಾನಂದ ಕಾಲೇಜಿನ ಪ್ರಾಧ್ಯಾಪಕ ಡಾ.ಎಚ್.ಜಿ ಶ್ರೀಧರ ಅವರಿಗೆ ಚಡಗ ಕಾದಂಬರಿ ಪ್ರಶಸ್ತಿ |

October 26, 2022
12:23 PM

ಪುತ್ತೂರು ವಿವೇಕಾನಂದ ಪದವಿ ಕಾಲೇಜಿನ ಕನ್ನಡ ವಿಭಾಗದ ಮುಖ್ಯಸ್ಥ, ಕಾಲೇಜಿನ ಪರೀಕ್ಷಾಂಗ ಕುಲಸಚಿವ ಡಾ.ಎಚ್.ಜಿ ಶ್ರೀಧರ ಮುಂಡಿಗೆಹಳ್ಳ ಅವರ ‘ಪ್ರಸ್ಥಾನ’ ಎನ್ನುವ ಕಾದಂಬರಿಗೆ ಈ ಬಾರಿಯ” ಚಡಗ ಕಾದಂಬರಿ ಪ್ರಶಸ್ತಿ ” ಲಭಿಸಿದೆ.

Advertisement
ಕೋಟೇಶ್ವರದ ಎನ್.ಆರ್.ಎ.ಎಂ ಎಚ್ ಪ್ರಕಾಶನ ಮತ್ತು ಸ್ಥಿತಿಗತಿ ತ್ರೈಮಾಸಿಕ ಪತ್ರಿಕೆಯ ಆಶ್ರಯದಲ್ಲಿ ಕನ್ನಡದ ಹೆಸರಾಂತ ಕಾದಂಬರಿಕಾರ, ಸಂಘಟಕ ಪಾಂಡೇಶ್ವರ ಸೂರ್ಯನಾರಾಯಣ ಚಡಗ ಇವರ ನೆನಪಿನಲ್ಲಿ ನೀಡಲಾಗುವ ಹದಿಮೂರನೆಯ ವರ್ಷದ ‘ಚಡಗ ಕಾದಂಬರಿಪ್ರಶಸ್ತಿ’ಗೆ ಪ್ರಸ್ತುತ ಪುತ್ತೂರಿನ ವಿವೇಕಾನಂದ ಪದವಿ ಕಾಲೇಜಿನ ಕನ್ನಡ ವಿಭಾಗದ ಮುಖ್ಯಸ್ಥ ಡಾ.ಎಚ್.ಜಿ.ಶ್ರೀಧರ ಮುಂಡಿಗೆಹಳ್ಳ ಇವರ “ಪ್ರಸ್ಥಾನ” ಕಾದಂಬರಿಯು ಆಯ್ಕೆಯಾಗಿದೆ.ಪ್ರಶಸ್ತಿ ಪತ್ರ, ಸ್ಮರಣಿಕೆ ಮತ್ತು ಹತ್ತು ಸಾವಿರ ನಗದು ಬಹುಮಾನವನ್ನು ಪ್ರಶಸ್ತಿಯು ಒಳಗೊಂಡಿರುತ್ತದೆ.

ಡಾ.ಎಚ್.ಜಿ.ಶ್ರೀಧರ ಮುಂಡಿಗೆಹಳ್ಳ ಮೂಲತಃ ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಮುಂಡಿಗೆಹಳ್ಳದವರಾಗಿದ್ದು ಪುತ್ತೂರಿನ ವಿವೇಕಾನಂದ ಕಾಲೇಜಿನಲ್ಲಿ ಸುಮಾರು ಮೂವತ್ತು ವರ್ಷಗಳಿಂದ ಪ್ರಾಧ್ಯಾಪನ ವೃತ್ತಿಯಲ್ಲಿ ತೊಡಗಿಸಿಕೊಂಡಿದ್ದು ಸಾಹಿತ್ಯ ಕ್ಷೇತ್ರದಲ್ಲಿಅಪಾರ ಸೇವೆಯನ್ನುಗೈದಿದ್ದಾರೆ. ಹಲವಾರು ನಾಟಕ,ವಿಮರ್ಶೆ,ಸಂಶೋಧನಾ ಕೃತಿಗಳನ್ನು ರಚಿಸಿರುವ ಇವರಿಗೆ ‘ಮಲ್ಲೇಪುರಂ ಪ್ರಶಸ್ತಿ’, ‘ಸಹೃದಯ ಪ್ರಾಧ್ಯಾಪಕ ಪ್ರಶಸ್ತಿಯೂ ಲಭಿಸಿದೆ. ಈ ಸಾಲಿನ ಹೆಸರಾಂತ ಚಡಗ ಕಾದಂಬರಿ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.

 

Advertisement
Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

ರಾಜ್ಯದಲ್ಲಿ ಬಿಸಿಲು ಬಿಸಿ ತೀವ್ರ : ಮೈಸೂರಿನಲ್ಲಿ ಸನ್ ಸ್ಟ್ರೋಕ್ ವಾರ್ಡ್ ಆರಂಭಿಸಿದ ಆಸ್ಪತ್ರೆ
April 23, 2026
3:10 PM
by: ಮಿರರ್‌ ಡೆಸ್ಕ್
ರೈತರು ಇಂಧನದಾತರಾಗಬೇಕು – ಭೂಮಿ ಉಳಿಸಿ ಸಮ್ಮೇಳನದಲ್ಲಿ ಸಂದೇಶ
April 23, 2026
2:48 PM
by: ಮಿರರ್‌ ಡೆಸ್ಕ್
ರೈತರ ಆದಾಯ ಹೆಚ್ಚಿಸಲು ಸಮಗ್ರ ಕೃಷಿ ಮಾದರಿ ಅಗತ್ಯ
April 23, 2026
2:41 PM
by: ಮಿರರ್‌ ಡೆಸ್ಕ್
ಹವಾಮಾನ ವರದಿ | 23-04-2026 | ಏಪ್ರಿಲ್ 25 ರಿಂದ ಮಳೆಯ ಸಾಧ್ಯತೆ ಹೆಚ್ಚು
April 23, 2026
2:32 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror