Advertisement
ಸುದ್ದಿಗಳು

ವಿವೇಕಾನಂದ ಕಾಲೇಜಿನ ಪ್ರಾಧ್ಯಾಪಕ ಡಾ.ಎಚ್.ಜಿ ಶ್ರೀಧರ ಅವರಿಗೆ ಚಡಗ ಕಾದಂಬರಿ ಪ್ರಶಸ್ತಿ |

Share

ಪುತ್ತೂರು ವಿವೇಕಾನಂದ ಪದವಿ ಕಾಲೇಜಿನ ಕನ್ನಡ ವಿಭಾಗದ ಮುಖ್ಯಸ್ಥ, ಕಾಲೇಜಿನ ಪರೀಕ್ಷಾಂಗ ಕುಲಸಚಿವ ಡಾ.ಎಚ್.ಜಿ ಶ್ರೀಧರ ಮುಂಡಿಗೆಹಳ್ಳ ಅವರ ‘ಪ್ರಸ್ಥಾನ’ ಎನ್ನುವ ಕಾದಂಬರಿಗೆ ಈ ಬಾರಿಯ” ಚಡಗ ಕಾದಂಬರಿ ಪ್ರಶಸ್ತಿ ” ಲಭಿಸಿದೆ.

Advertisement
Advertisement
ಕೋಟೇಶ್ವರದ ಎನ್.ಆರ್.ಎ.ಎಂ ಎಚ್ ಪ್ರಕಾಶನ ಮತ್ತು ಸ್ಥಿತಿಗತಿ ತ್ರೈಮಾಸಿಕ ಪತ್ರಿಕೆಯ ಆಶ್ರಯದಲ್ಲಿ ಕನ್ನಡದ ಹೆಸರಾಂತ ಕಾದಂಬರಿಕಾರ, ಸಂಘಟಕ ಪಾಂಡೇಶ್ವರ ಸೂರ್ಯನಾರಾಯಣ ಚಡಗ ಇವರ ನೆನಪಿನಲ್ಲಿ ನೀಡಲಾಗುವ ಹದಿಮೂರನೆಯ ವರ್ಷದ ‘ಚಡಗ ಕಾದಂಬರಿಪ್ರಶಸ್ತಿ’ಗೆ ಪ್ರಸ್ತುತ ಪುತ್ತೂರಿನ ವಿವೇಕಾನಂದ ಪದವಿ ಕಾಲೇಜಿನ ಕನ್ನಡ ವಿಭಾಗದ ಮುಖ್ಯಸ್ಥ ಡಾ.ಎಚ್.ಜಿ.ಶ್ರೀಧರ ಮುಂಡಿಗೆಹಳ್ಳ ಇವರ “ಪ್ರಸ್ಥಾನ” ಕಾದಂಬರಿಯು ಆಯ್ಕೆಯಾಗಿದೆ.ಪ್ರಶಸ್ತಿ ಪತ್ರ, ಸ್ಮರಣಿಕೆ ಮತ್ತು ಹತ್ತು ಸಾವಿರ ನಗದು ಬಹುಮಾನವನ್ನು ಪ್ರಶಸ್ತಿಯು ಒಳಗೊಂಡಿರುತ್ತದೆ.
ಡಾ.ಎಚ್.ಜಿ.ಶ್ರೀಧರ ಮುಂಡಿಗೆಹಳ್ಳ ಮೂಲತಃ ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಮುಂಡಿಗೆಹಳ್ಳದವರಾಗಿದ್ದು ಪುತ್ತೂರಿನ ವಿವೇಕಾನಂದ ಕಾಲೇಜಿನಲ್ಲಿ ಸುಮಾರು ಮೂವತ್ತು ವರ್ಷಗಳಿಂದ ಪ್ರಾಧ್ಯಾಪನ ವೃತ್ತಿಯಲ್ಲಿ ತೊಡಗಿಸಿಕೊಂಡಿದ್ದು ಸಾಹಿತ್ಯ ಕ್ಷೇತ್ರದಲ್ಲಿಅಪಾರ ಸೇವೆಯನ್ನುಗೈದಿದ್ದಾರೆ. ಹಲವಾರು ನಾಟಕ,ವಿಮರ್ಶೆ,ಸಂಶೋಧನಾ ಕೃತಿಗಳನ್ನು ರಚಿಸಿರುವ ಇವರಿಗೆ ‘ಮಲ್ಲೇಪುರಂ ಪ್ರಶಸ್ತಿ’, ‘ಸಹೃದಯ ಪ್ರಾಧ್ಯಾಪಕ ಪ್ರಶಸ್ತಿಯೂ ಲಭಿಸಿದೆ. ಈ ಸಾಲಿನ ಹೆಸರಾಂತ ಚಡಗ ಕಾದಂಬರಿ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಅಡಿಕೆ ಬಳಕೆಯ ನಿಯಂತ್ರಣಕ್ಕೆ ‘MPOWER’ ನೀತಿ ಅಗತ್ಯ : ವಿಶ್ವ ಆರೋಗ್ಯ ಸಂಸ್ಥೆ

ದಕ್ಷಿಣ ಏಷ್ಯಾ ರಾಷ್ಟ್ರಗಳಲ್ಲಿ ಅಡಿಕೆ ಬಳಕೆಯಿಂದ ಹೆಚ್ಚುತ್ತಿರುವ ಬಾಯಿ ಕ್ಯಾನ್ಸರ್ ಸೇರಿದಂತೆ ಮಾರಣಾಂತಿಕ…

15 minutes ago

ಅರೆಕಾನಟ್ ಚಾಲೆಂಜ್ : ಅಡಿಕೆ ನಿಯಂತ್ರಣ ಕುರಿತು WHO ಉತ್ಸುಕತೆ – ಕ್ಲಿನಿಕಲ್ ಪರೀಕ್ಷೆಗಳ ಅಗತ್ಯಕ್ಕೆ ತಜ್ಞರ ಒತ್ತಾಯ

ಅರೆಕಾನಟ್ ಚಾಲೆಂಜ್ : ಟರ್ನಿಂಗ್ ಪಾಲಿಸಿ ಇನ್ಟು ಇಂಪ್ಯಾಕ್ಟ್ ಇನ್ ದ ಸೌತ್…

29 minutes ago

AI, ಡ್ರೋನ್ ಮತ್ತು ಸ್ವಯಂಚಾಲಿತ ಯಂತ್ರಗಳು | ಕಾರ್ಮಿಕ ಕೊರತೆಯ ನಡುವೆ ಕೃಷಿಗೆ ರೋಬೋಟ್ ಪರಿಹಾರ

ಸಣ್ಣ ರೈತರ ಕೃಷಿಯಲ್ಲಿ ಕಾರ್ಮಿಕ ಕೊರತೆ, ವೆಚ್ಚ ಏರಿಕೆ ಸಮಸ್ಯೆ ನಿವಾರಣೆಗೆ ರೋಬೋಟಿಕ್ಸ್,…

10 hours ago

“ಕ್ಯಾನ್ಸರ್ ಮ್ಯಾಪಿಂಗ್” – ರೋಗ ತಡೆಯುವ ಮೊದಲ ಹೆಜ್ಜೆ

ಕ್ಯಾನ್ಸರ್ ವಿರುದ್ಧ ಹೋರಾಟ ಎಂದರೆ ಕೇವಲ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡುವುದು ಮಾತ್ರವಲ್ಲ. ರೋಗ…

10 hours ago

ರಾಜ್ಯದಲ್ಲಿ 3 ವರ್ಷದಲ್ಲಿ 432 ಮಂದಿ ಅಕ್ರಮ ವಿದೇಶಿ ವಲಸಿಗರು ಪತ್ತೆ | ಬೆಂಗಳೂರು ನಗರದಲ್ಲೇ 328 ಪ್ರಕರಣ

ರಾಜ್ಯದಲ್ಲಿ ಅಕ್ರಮ ವಲಸಿಗರು ಹಾಗೂ ಬಾಂಗ್ಲಾ ಅಕ್ರಮ ವಲಸಿಗರ ಬಗ್ಗೆ ಮಾಹಿತಿಯನ್ನು ವಿಧಾನಪರಿಷತ್‌…

11 hours ago

ಮಾಯಾಮೃಗ ಮಾಯಾಮೃಗ….

ಪ್ರಯತ್ನ, ಪರಿಶ್ರಮ, ಛಲ ಇದ್ದರೂ ಸೋಲು ಬೆನ್ನತ್ತಿದರೆ ಕಾರಣವೇನು? ಹಿರಿಯರ ಪಾಪದ ಫಲ,…

11 hours ago